tag:blogger.com,1999:blog-270092322009-07-18T15:06:23.158+05:30:ಮೌನಗಾಳ:ಕಾಲಾತೀತದಲ್ಲಿ ಗಾಳ ಹಾಕಿ ಮೌನವಾಗಿ ಕುಳಿತಿದ್ದೇನೆ. ಸಿಕ್ಕಷ್ಟು, ಹಿಡಿದಷ್ಟು: ಈ ಬ್ಲಾಗೆಂಬ ಬುಟ್ಟಿಗೆ...ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.comBlogger120125tag:blogger.com,1999:blog-27009232.post-19677777827588627912009-07-13T16:55:00.004+05:302009-07-13T17:13:49.805+05:30ಪ್ರಣತಿಯಿಂದ ಗಮಕ ಸುಧಾ ಧಾರೆ"ಶ್ರೀ<span style="font-size:78%;">ssss</span> ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು ಮುಂದುವರೆಸುತ್ತಿದ್ದರು:<br /><br />"...ವಿಮಲ ರಾಜೀವ ಪೀಠನ ಪಿತನೆ ಜಗಕತಿ<br />ಪಾವನನೆ ಸನಕಾದಿ ಸಜ್ಜನ ನಿಕರ ಧಾತಾರ<br />ರಾವಣಾಸುರ ಮಥನ ಶ್ರವಣ ಸು<br />ಧಾ ವಿನೂತನ ಕಥನ ಕಾರಣ<br />ಕಾವುದಾನತ ಜಗವ ಗದುಗಿನ ವೀರನಾರಯಣ|<br /><br />-ಎಂಬಲ್ಲಿಗೆ ಒಂದು ಕೆಮ್ಮು, ರಾಯರ ಪಕ್ಕ ವ್ಯಾಖ್ಯಾನಕ್ಕೆಂದು ಕೂತಿರುತ್ತಿದ್ದ ಸಾಗರದ ಮಧ್ಯಸ್ತರಿಂದ!<br /><br />ಅದು ನಮ್ಮೂರಿನ ದೇವಸ್ಥಾನದ ಪ್ರಾಂಗಣ. ನಮ್ಮೂರಿನದು ಶ್ರೀಕೃಷ್ಣನ ದೇವಸ್ಥಾನವಾದ್ದರಿಂದ, ಪ್ರತಿವರ್ಷದ ಕೃಷ್ಣ ಜನ್ಮಾಷ್ಟಮಿ ಅದ್ದೂರಿಯಾಗಿ ನಡೆಯುತ್ತಿತ್ತು. ಅಷ್ಟಮಿಯ ಮರುದಿನ, ಕೃಷ್ಣ ಜಯಂತಿಯಂದು ಸಂಜೆ, ಏನಾದರೂ ಒಂದು ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತಿತ್ತು. ಸಾಮಾನ್ಯವಾಗಿ ಅದು 'ಗಮಕ ವಾಚನ ಮತ್ತು ವ್ಯಾಖ್ಯಾನ' ಕಾರ್ಯಕ್ರಮವೇ ಆಗಿರುತ್ತಿತ್ತು. ರಾಷ್ಟ್ರಪ್ರಶಸ್ತಿ ವಿಜೇತ ಗಮಕಿ ಹೊಸಬಾಳೆ ಸೀತಾರಾಮರಾಯರಿಂದ ಗಮಕ ವಾಚನ ಮತ್ತು ಸಾಗರದ ನೀ.ನಾ. ಮಧ್ಯಸ್ತರಿಂದ ಅದರ ವ್ಯಾಖ್ಯಾನ. ನಮ್ಮ ಮತ್ತು ಅಕ್ಕಪಕ್ಕದ ಗ್ರಾಮಸ್ಥರನ್ನೊಳಗೊಂಡ ಸುಮಾರು ನೂರು ಪ್ರೇಕ್ಷಕರು ಆ ಕಾರ್ಯಕ್ರಮದಲ್ಲಿ ಇರುತ್ತಿದ್ದರು. ಚಿಕ್ಕ ಮಕ್ಕಳಾಗಿದ್ದ ನಾವು, ಕುಮಾರವ್ಯಾಸನ 'ಕರ್ಣಾಟ ಭಾರತ ಕಥಾಮಂಜರಿ'ಯ ಅನೇಕ ಭಾಗಗಳನ್ನು ಕೇಳಿದ್ದು ಹಾಗೆ.<br /><br />ಆಮೇಲೆ ಒಂದೆರಡು ವರ್ಷ, ಕೆರೆಕೊಪ್ಪದ ನರಹರಿ ಶರ್ಮರ ವಾಚನ ಮತ್ತು ನಿಸರಾಣಿ ರಾಮಚಂದ್ರರ ವ್ಯಾಖ್ಯಾನದಲ್ಲಿ ಗಮಕ ಕಾರ್ಯಕ್ರಮ ನಡೆಯಿತು. ಈ ಹೊಸ-ಯುವ ಜೋಡಿಯನ್ನು ಗ್ರಾಮಸ್ಥರು ಮೆಚ್ಚಿಕೊಂಡರಾದರೂ, ಎಷ್ಟೋ ವರ್ಷಗಳಿಂದ ಗಮಕ ಕಾರ್ಯಕ್ರಮವನ್ನೇ ಕೇಳೀ ಕೇಳಿ ಬೇಸರ ಬಂದಿತ್ತು. ಹೀಗಾಗಿ, ಗಮಕದ ಬದಲು ಈಗ ಕೆಲ ವರ್ಷಗಳಿಂದ ಬೇರೆ ಏನಾದರೂ ಸಾಂಸ್ಕೃತಿಕ ಕಾರ್ಯಕ್ರಮ ನಮ್ಮೂರಿನ ದೇವಸ್ಥಾನದಲ್ಲಿ ನಡೆಯುತ್ತಿದೆ.<br /><br />* * *<br /><br />ನಾನು ಹೋಗುತ್ತಿದ್ದ ನಿಸರಾಣಿ ಹೈಸ್ಕೂಲಿನಲ್ಲಿ, ಪಠ್ಯೇತರ ಚಟುವಟಿಕೆಗಳಿಗೆ ಸಾಕಷ್ಟು ಮಹತ್ವ ಕೊಡುತ್ತಿದ್ದರು. ಅಂದರೆ, ಮಕ್ಕಳಲ್ಲಿರುವ ಬೇರೆ ಬೇರೆ ಪ್ರತಿಭೆಗಳನ್ನು ಹೊರತೆಗೆಯಲು ಅನೇಕ ಕಾರ್ಯಕ್ರಮಗಳು - ಸ್ಪರ್ಧೆಗಳು ಅಲ್ಲಿ ನಡೆಯುತ್ತಿದ್ದವು. ಅದರಲ್ಲಿ ಗಮಕ ತರಗತಿಯೂ ಒಂದು. 'ಗಮಕ ಕಲಾ ಪರಿಷತ್'ನ ಆಶ್ರಯದಲ್ಲಿ, ಆಸಕ್ತ ವಿದ್ಯಾರ್ಥಿಗಳಿಗೆ ಸುಮಾರು ಎರಡು ತಿಂಗಳುಗಳ ಗಮಕ ತರಗತಿ ಮತ್ತು ಕೊನೆಯಲ್ಲೊಂದು ಪರೀಕ್ಷೆ ಇರುತ್ತಿತ್ತು. ನರಹರಿ ಶರ್ಮರೇ ತರಗತಿ ತೆಗೆದುಕೊಳ್ಳುತ್ತಿದ್ದುದು. ನಾನೂ ಸೇರಿದ್ದೆ. ಹೇಳಿಕೊಳ್ಳಬಹುದಾದ ಒಂದು ಖುಶಿಯ ವಿಷಯ ಎಂದರೆ, ಆ ವರ್ಷದ ಗಮಕ ಪರೀಕ್ಷೆಯಲ್ಲಿ ನಾನೇ ಶಾಲೆಗೆ ಪ್ರಥಮ ಸ್ಥಾನದಲ್ಲಿ ಪಾಸಾಗಿದ್ದೆ! ಅದಾದಮೇಲೆ, ಎಸ್ಸೆಸ್ಸೆನ್ ಮೇಡಂ ಕ್ಲಾಸಿನಲ್ಲಿ ನನ್ನ ಕಾಲೆಳೆಯ ಬೇಕೆಂದೆನಿಸಿದಾಗಲೆಲ್ಲ 'ಸುಶ್ರುತ, ಒಂದು ಭಾವಗೀತೆ ಹಾಡೋ' ಅಂತಲೋ ಚಿತ್ರಗೀತೆ ಹಾಡೋ ಅಂತಲೋ ಜನಪದ ಗೀತೆ ಹಾಡೋ ಅಂತಲೋ ಹೇಳುತ್ತಿದ್ದರು. ಅದು ಹೇಗೋ ಗಮಕದಲ್ಲೊಂದು ಬಾಯ್ಕಳೆದು ಹಾಡಿ ಸರ್ಟಿಫಿಕೇಟು ಗಿಟ್ಟಿಸಿದ್ದು ಬಿಟ್ಟರೆ, ಈ ಭಾವಗೀತೆಯನ್ನಾಗಲೀ ಚಿತ್ರಗೀತೆಯನ್ನಾಗಲೀ ಜನಪದ ಗೀತೆಯನ್ನಾಗಲೀ ನಾನು ಬಾತ್‌ರೂಮು ಮತ್ತು ಏಕಾಂತದಲ್ಲಿ ಬಿಟ್ಟು ಬೇರೆಲ್ಲೂ ಹಾಡಿದ್ದೇ ಇಲ್ಲ. ಒಟ್ಟಿನಲ್ಲಿ ಎಸ್ಸೆಸ್ಸೆನ್ ಮೇಡಂರ ತಮಾಷೆಯಿಂದಾಗಿ ಕ್ಲಾಸು ಕಿಸಕಿಸ ನಗೆಯಲ್ಲಿ ಮುಳುಗುತ್ತಿತ್ತು.<br /><br />* * *<br /><br />ಈಗ ಇವೆಲ್ಲ ನೆನಪಾದದ್ದು ಪ್ರಣತಿಯಿಂದ ನಾವು ಆಯೋಜಿಸಿರುವ 'ಗಮಕ ಸುಧಾ ಧಾರೆ' ಕಾರ್ಯಕ್ರಮಕ್ಕೆ ನಿಮ್ಮನ್ನು ಆಹ್ವಾನಿಸುವ ವಿಷಯ ಬಂದಾಗ. ಹೌದು, ಬರುವ ಶನಿವಾರ- ಜುಲೈ 18ರ ಸಂಜೆ 5 ಗಂಟೆಗೆ, ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ, ರಸಋಷಿ ಕುವೆಂಪು ನೆನಪಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇತ್ತೀಚೆಗೆ ವಿರಳವಾಗುತ್ತಿರುವ ಈ ಕಲೆಯನ್ನು ಮತ್ತೆ ಪ್ರಚುರಪಡಿಸುವುದು ಪ್ರಣತಿಯ ಧ್ಯೇಯಗಳಲ್ಲೊಂದಾದ 'ಸಂಸ್ಕೃತಿ'ಯ ಕೆಲಸ. ಪ್ರಣತಿಗೆ ಇದು ಹೆಮ್ಮೆಯ ನಾಲ್ಕನೇ ಕಾರ್ಯಕ್ರಮ.<br /><br />ಈ ಕಾರ್ಯಕ್ರಮಕ್ಕೆ ನೀವೆಲ್ಲ ಬರಲೇಬೇಕು ಅಂತ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ.<br /><br /><br /><div style="text-align: center;"><a onblur="try {parent.deselectBloggerImageGracefully();} catch(e) {}" href="http://3.bp.blogspot.com/_c2gCy0eVwAM/SlsbEYosHeI/AAAAAAAAE9o/HCkreeLWjwA/s1600-h/inv_gamaka_005.jpg"><img style="cursor: pointer; width: 378px; height: 400px;" src="http://3.bp.blogspot.com/_c2gCy0eVwAM/SlsbEYosHeI/AAAAAAAAE9o/HCkreeLWjwA/s400/inv_gamaka_005.jpg" alt="" id="BLOGGER_PHOTO_ID_5357905943833877986" border="0" /></a><br /><br /></div><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-1967777782758862791?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com6tag:blogger.com,1999:blog-27009232.post-55270940802093587762009-07-07T13:53:00.001+05:302009-07-07T13:56:20.272+05:30ಬೆಟ್ಟದಿಂದ ಬಂದ ಪತ್ರಡಿಯರ್ ಫ್ರೆಂಡ್,<br /><br />ಮತ್ಯಾವುದೋ ಪರ್ವತದ ಮೇಲಿದ್ದೇನೆ. ‘ಎಲ್ಲಿ? ಯಾವೂರು?’ ಅಂತೆಲ್ಲ ಹೇಳುವುದಿಲ್ಲ. ಕನಿಷ್ಟ, ಪರ್ವತದ ಶೃಂಗದಲ್ಲಿದ್ದಾಗಲಾದರೂ ಊರು-ಕೇರಿ-ಹೆಸರುಗಳನ್ನು ಮರೆಯಬೇಕು ಅಂತ ನನಗನ್ನಿಸೊತ್ತೆ. ಇಲ್ಲಿ ಈ ಕ್ಷಣದಲ್ಲಿ ನನಗೆ ಎಲ್ಲ ಪರ್ವತಗಳ ನೆತ್ತಿಯೂ ಒಂದೇ ಅನ್ನಿಸುತ್ತಿದೆ. ಊರು, ಕೇರಿ, ಹೆಸರುಗಳನ್ನೆಲ್ಲ ಒಂದೊಂದಾಗಿ ಕಳಚಿಕೊಳ್ಳುತ್ತ ಏರುತ್ತ ಏರುತ್ತ ತುತ್ತ ತುದಿಗೆ ಬಂದು ನಿಂತಿರುವ ಈ ಕ್ಷಣದಲ್ಲಿ ಕೈ ಚಾಚಿದರೆ ಆಕಾಶ, ಬಗ್ಗಿ ನೋಡಿದರೆ ಪ್ರಪಾತ, ಸುತ್ತೆಲ್ಲ ಶೂನ್ಯ ಎಂಬಂತಿರುವ ಈ ಜಾಗಕ್ಕೆ ಹೆಸರಾದರೂ ಯಾಕೆ ಬೇಕು ಹೇಳು?<br /><br />ನನಗೂ ಗೊತ್ತಿಲ್ಲ ಸ್ಪಷ್ಟವಾಗಿ: ಏಕೆ ಹೀಗೆ ಚಾರಣಗಳಿಗೆ ಬರುತ್ತೇವೆ ನಾವು ಅಂತ. ಜಗದ ಜನವೆಲ್ಲ ತಮ್ತಮ್ಮ ಅಭಿವೃದ್ಧಿ ಕಾರ್ಯಗಳಲ್ಲಿ ತತ್ಪರರಾಗಿರುವಾಗ ನಾವು ಹೀಗೆ ದುಡ್ಡು ಖರ್ಚು ಮಾಡಿಕೊಂಡು, ಸಮಯ ವ್ಯಯಿಸಿ, ಸುಸ್ತು ಮಾಡಿಕೊಳ್ಳುತ್ತಾ ಬೆಟ್ಟ ಏರುವ ದರ್ದಾದರೂ ಏನಿರಬಹುದು? ಅಮ್ಮನಂತೂ ಯಾವಾಗಲೂ ಬೈಯುತ್ತಾಳೆ. ಅವಳಿಗೆ ತಿಳಿಸಿ ಹೇಳಲಿಕ್ಕಂತೂ ಇನ್ನೂ ನನಗೆ ಆಗಿಲ್ಲ. ಆದರೂ, ಸಾವನದುರ್ಗದ ಮೇಲಿನ ಮೌನ ನಂದಿಯ ಪಕ್ಕ ನಿಂತು ನೋಡಿದ ಮಳೆ, ದೇವರಾಯನದುರ್ಗದಲ್ಲಿ ಕಳೆದ ಕಾವಳದ ರಾತ್ರಿ, ಸಿದ್ದರ ಬೆಟ್ಟದ ನಿಗೂಢ ಗುಹೆಗಳು, ಕುಮಾರ ಪರ್ವತದಿಂದ ಕಂಡ ಅಮೋಘ ದೃಶ್ಯ, ದೇವಕಾರಿನ ಜಲಪಾತದ ಸೆಳೆತ, ಕೋಟೆಬೆಟ್ಟದ ಮೇಲೆ ಬೀಳುತ್ತಿದ್ದ ಹಿಮ -ಊಹುಂ, ಅವು ಮತ್ತೆಲ್ಲೂ - ಮತ್ತಿನ್ನೆಲ್ಲೂ ಸಿಗೊಲ್ಲ ಬಿಡು.<br /><br /><a onblur="try {parent.deselectBloggerImageGracefully();} catch(e) {}" href="http://4.bp.blogspot.com/_c2gCy0eVwAM/SlMGgFsGQhI/AAAAAAAAE74/9vZbhTY4F5U/s1600-h/Picture+141.jpg"><img style="margin: 0pt 10px 10px 0pt; float: left; cursor: pointer; width: 235px; height: 193px;" src="http://4.bp.blogspot.com/_c2gCy0eVwAM/SlMGgFsGQhI/AAAAAAAAE74/9vZbhTY4F5U/s320/Picture+141.jpg" alt="" id="BLOGGER_PHOTO_ID_5355631530226369042" border="0" /></a>ಹಾಗೇ ಈ ಪರ್ವತದ ಶೃಂಗದಿಂದ ಕಾಣುತ್ತಿರುವ ದೃಶ್ಯ. ಇಲ್ಲಿಂದ ನೋಡುವಾಗ ಅದು ಜ್ವಾಲಾಮುಖಿಯಿಂದ ಉಕ್ಕಿ ಹರಿಯುತ್ತಿರುವ ಲಾವಾದಂತೆ ಕಾಣಿಸುತ್ತಿದೆ. ನನ್ನ ಕೆಮೆರಾದಿಂದ ಅದರ ಫೋಟೋ ತೆಗೆಯುತ್ತಿದ್ದ ಚಿನ್ಮಯ ಇನ್ನು ಸ್ವಲ್ಪ ಹೊತ್ತಿನಲ್ಲಿ ಅದು ಆಸ್ಟ್ರೇಲಿಯಾ ಮ್ಯಾಪಿನಂತೆ ಕಾಣಬಹುದು ಎಂದು ಹೇಳಿದ. ಆಸ್ಟ್ರೇಲಿಯಾ ಏನು, ಹೀಗೇ ಇನ್ನೂ ಸ್ವಲ್ಪ ಕೆಳಗಿಳಿದರೆ ಭಾರತದ ದಕ್ಷಿಣದಂಚಿನಂತೆಯೂ ಕಾಣಿಸಬಹುದು ಎನ್ನಿಸಿತು ನನಗೆ. ನಮ್ಮ ಬಟ್ಟೆ-ಆಹಾರವನ್ನೆಲ್ಲ ಸ್ವಲ್ಪ ಕೆಳಗೆ-ತಪ್ಪಲಿನಂತಹ ಜಾಗದಲ್ಲಿಟ್ಟು ಮೇಲೆ ಶೃಂಗಕ್ಕೆ ಬಂದಿದ್ದೇವೆ ನಾವು. ಶೃಂಗಕ್ಕೆ ಹತ್ತಿರದಲ್ಲೇ ಇರುವ ಮೋಡಗಳು ಕೆಳಗಿಳಿಯುತ್ತಿರುವ ಕತ್ತಲೆಯ ಪರಾಗಗಳನ್ನು ಮಧ್ಯದಲ್ಲೇ ತಡೆದು ಚಳಿಯನ್ನು ಜತೆ ಮಾಡಿ ಕಳುಹಿಸುತ್ತಿವೆ. ಆ ಪರಾಗಗಳು ನಮ್ಮ ಮೈಗೆ ತಾಕಿದ್ದೇ ತಡ, ರೋಮಗಳೆಲ್ಲ ಕುಸುಮದಂತೆ ಅರಳಿ ಎದ್ದು ನಿಂತಿವೆ.<br /><br />“ಶೃಂಗದಲ್ಲಿದ್ದಾಗ ಕತ್ತಲಾದದ್ದು ಗೊತ್ತಾಗುವುದಿಲ್ಲ. ಕೆಳಗಿಳಿಯುವಾಗ ಕಷ್ಟ” ಎಂದ ಪ್ರವೀಣ. ಹೌದೆನಿಸಿತು ನನಗೆ. ಈಗಷ್ಟೇ ಮುಳುಗಿದ್ದ ಸೂರ್ಯ ಇಲ್ಲಿ. ನಮನ್ನೆಲ್ಲ ಕತ್ತಲೆಯಲ್ಲಿ ಬಿಟ್ಟು ಇಲ್ಲಿ ಹೀಗೆ ಪಶ್ಚಿಮದ ದಿಗಂತದಲ್ಲಿ ಕಣ್ಮರೆಯಾಗಿ, ಅಲ್ಲಿ ಬೇರ‍್ಯಾವುದೋ ದೇಶದ ಜನರಿಗೆ ಬೆಳಗು ಮಾಡಿ ಅಲ್ಲಿಯ ಬೆಡಗಿಯರನ್ನು ಮನೆಯಿಂದ ಹೊರ ಕರೆಸಿ ಅವರ ಸೌಂದರ್ಯವನ್ನು ಕಣ್ಮಿಟುಕಿಸದೇ ಸಂಜೆಯವರೆಗೂ ನೋಡಿಕೊಂಡು, ನಾಳೆ ಬೆಳಗಾಗುತ್ತಿದ್ದಂತೆ ಏನೂ ಆಗಿಯೇ ಇಲ್ಲವೇನೋ ಎಂಬಂತೆ ಮುಗ್ಧ ಸೋಗಿನಲ್ಲಿ ಇಲ್ಲಿ ಮತ್ತೆ ಹಾಜರಾಗುವ ಈ ಸೂರ್ಯನನ್ನು ಕಂಡಾಗಲೆಲ್ಲ ನನಗೆ ಅಸೂಯೆ. ಇರಬಹುದು ಅಂವ ದೊಡ್ಡವ. ಇರಬಹುದು ಅಂವ ಬೆಳಕಿನ ಅಧಿಪತಿ. ಇರಬಹುದು ಆತ ಜಗದೊಡೆಯ. ಆದರೆ ಆತ ಸಾಚಾ ಅಂತೂ ಅಲ್ಲ. ಒಮ್ಮೆ ಆತ ಮುಳುಗುತ್ತಿದ್ದಾಗ ಅವನ ಹಿಂದೆಯೇ ಹೋಗಿ ಅವನ ಮೋಸವನ್ನೆಲ್ಲ ಸಾಬೀತು ಮಾಡಿ ಬರಬೇಕು ಅಂತಿದೆ ನನಗೆ. ಆದರೆ ಆತ ಬುದ್ಧಿವಂತ: ಬೆಳ್ಳಿ ಚಂದಿರನನ್ನೂ ಕೋಟಿತಾರೆಗಳನ್ನೂ ನನ್ನ ಕಾವಲಿಗಿಟ್ಟೇ ಹೋಗುತ್ತಾನೆ ಪ್ರತಿದಿನ. ಇವುಗಳಿಂದ ತಪ್ಪಿಸಿಕೊಳ್ಳುವುದಿದೆಯೇ?<br /><br />ಆಗಲೇ ಬೀಳತೊಡಗಿದ್ದ ಇಬ್ಬನಿಯಿಂದಾಗಿ ನೆಲ ಜಾರುತ್ತಿದೆ. “ತಪ್ಪಿ ಒಣಗಿದ ಹುಲ್ಲಿನ ಮೇಲೇನಾದರೂ ಕಾಲಿಟ್ಟರೆ ಸೀದಾ ಕೆಳಗೇ” -ಗೆಳೆಯರು ಎಚ್ಚರಿಸುತ್ತಿದ್ದಾರೆ. ಬಲು ಹುಷಾರಿನಿಂದ ಇಳಿಯುತ್ತಿದ್ದೇನೆ. ತಪ್ಪಲಿಗೆ ಮುಟ್ಟುವಷ್ಟರಲ್ಲಿ ಕತ್ತಲೆ ಪೂರ್ತಿ ಆವರಿಸಿದೆ. ಚಳಿ ತೀಕ್ಷ್ಣವಾಗುತ್ತಿದೆ. ಸರಸರನೆ ನಮ್ಮ ಜಾಕೀಟುಗಳನ್ನು ಧರಿಸಿ, ಬ್ಯಾಗುಗಳಲ್ಲಿದ್ದ ಪೆನ್‌ಟಾರ್ಚುಗಳನ್ನು ಹೊರತೆಗೆದು, ಕ್ಯಾಂಪ್‌ಫೈರ್ ಮಾಡಲಿಕ್ಕೆ ಕಟ್ಟಿಗೆ ಒಟ್ಟುಗೂಡಿಸಲಿಕ್ಕೆ ಹೊರಡುತ್ತೇವೆ ನಾವು. ನಾವು ಪಕ್ಕದ ಹಳ್ಳಿಯಿಂದ ಕರೆದುಕೊಂಡು ಬಂದಿದ್ದ ಗೈಡುಗಳು ಇನ್ನೊಂದು ತಾಸಿನೊಳಗೆ ಬರುತ್ತೇವೆ ಎಂದು ಹೇಳಿ ಎತ್ತಲೋ ಮಾಯವಾಗಿಬಿಟ್ಟಿದ್ದಾರೆ. ಅವರಾದರೂ ಇದ್ದಿದ್ದರೆ ಕಟ್ಟಿಗೆ ತರಲಿಕ್ಕೆ ಸ್ವಲ್ಪ ಸಹಾಯ ಮಾಡುತ್ತಿದ್ದರು. “ರಾತ್ರಿಯಿಡೀ ಉರೀಬೇಕು ಅಂದ್ರೆ ದೊಡ್ಡ ದೊಡ್ಡ ಕುಂಟೆಯೇ ಬೇಕು. ಈ ಸಣ್ಣ ಜಿಗ್ಗು-ಪುಡಿ ಕಟ್ಟಿಗೆಯೆಲ್ಲಾ ಹತ್ತು ನಿಮಿಷದಲ್ಲಿ ಉರಿದು ಹೋಗ್ತವೆ” ವಿನು ಹೇಳುತ್ತಿದ್ದಾನೆ. ಹೌದು, ದೊಡ್ಡ ದಿಮ್ಮಿಗಳೇ ಬೇಕು. ಇಲ್ಲಿ ಒಣಗಿದ ಮರಗಳೇನೋ ಬಹಳ ಇವೆ, ಆದರೆ ಇವನ್ನೆಲ್ಲಾ ಈ ಕತ್ತಲಿನಲ್ಲಿ ಕಡಿದು ಹೊತ್ತು ಅಲ್ಲಿಗೆ ಸಾಗಿಸುವುದೇ ತಲೆನೋವು.<br /><br />ಚಳಿ ಈ ರಾತ್ರಿ ನಮಗೊಂದು ಗತಿ ಕಾಣಿಸಲಿಕ್ಕೆ ಸಂಚು ಹೂಡಿದಂತಿದೆ. ಹೊತ್ತಿಕೊಂಡ ಸಣ್ಣ ಬೆಂಕಿಯ ಬೆಳಕು ಎಲ್ಲರ ಮುಖಕ್ಕೂ ಕೆಂಪಿನ ಬಣ್ಣ ಬಳಿಯುತ್ತಿದೆ. ರವ್ಯಾ ಏನೋ ಡೈಲಾಗು ಹೊಡೆಯುತ್ತಿದ್ದಾನೆ: “ಇಷ್ಟು ದೊಡ್ಡ ಬೆಂಕಿ ಆದ್ರೂ ಶಾಖ ದೇಹದ ಎಲ್ಲಾ ಭಾಗಕ್ಕೂ ಮುಟ್ತಾನೇ ಇಲ್ಲ ಮಾರಾಯಾ..!” ಎಲ್ಲರೂ ನಗುತ್ತಿದ್ದೇವೆ. ಈ ಚಳಿಯಲ್ಲಿ ನಗೆಯ ದನಿಯೂ ಬೇರೆ ತರಹ ಕೇಳಿಸುತ್ತದೆ. ಅಥವಾ ಅದೊಂಥರಾ ಭ್ರಮೆಯಿರಬಹುದು. ಈಗ ನಮ್ಮ ಗೈಡುಗಳು ದೌಡಾಯಿಸಿದ್ದಾರೆ. ಇಬ್ಬರ ಕೈಯಲ್ಲೂ ಎರಡೆರಡು ಬಾಟಲಿಗಳು. ಬಿಳೀ ಬಣ್ಣದ ಸಾರಾಯಿ. ರಾತ್ರಿ ನಾವು ಮಲಗಿದ್ದಾಗ ಇವರು ನಿದ್ರಿಸದೇ ಬೆಂಕಿಗೆ ಕೊಳ್ಳಿ ಮುಂದೂಡುತ್ತಾ ಬೆಳಗಿನವರೆಗೂ ಕುಡಿಯುತ್ತಲೇ ಇರುತ್ತಾರಂತೆ. ಅಷ್ಟೆಲ್ಲಾ ಕುಡಿದರೂ ಇವರಿಗೆ ನಿದ್ರೆ ಬರುವುದಿಲ್ಲವಾ ಅಂತ ನನಗೆ ಆಶ್ಚರ್ಯ. ಬಹುಶಃ ನಾವು ಎದ್ದಮೇಲೆ ಇವರು ಮಲಗಬಹುದು ಅಂತ ಎಲ್ಲರೂ ತಮಾಷೆ ಮಾಡಿಕೊಂಡೆವು.<br /><br />ತಂದಿದ್ದ ಚಪಾತಿಯನ್ನು ಹಂಚಿಕೊಂಡು ತಿಂದೆವು. ಸ್ವಲ್ಪ ಹೊತ್ತು ಹರಟೆಯೂ ಮುಗಿಯಿತು. ಇನ್ನೇನು ಕೆಲಸ? ಸ್ಲೀಪಿಂಗ್ ಬ್ಯಾಗಿನೊಳಗೆ ತೂರಿಕೊಂಡು ಮಲಗಿ ನಿದ್ರೆ ಹೋಗುವುದು ಅಷ್ಟೇ. ಜಾಕೇಟಿನ ಸಮೇತ ಸ್ಲೀಪಿಂಗ್ ಬ್ಯಾಗಿನೊಳಗೆ ತೂರಿ ಮಲಗಿಕೊಂಡಿದ್ದೇನೆ. ಮುಖದ ಜಾಗದಷ್ಟನ್ನೇ ಜಿಪ್ ತೆರೆದು ಉಸಿರಾಡಲಿಕ್ಕೆ ಅನುಕೂಲ ಮಾಡಿಕೊಂಡಿದ್ದೇನೆ. ಗುಡ್‌ನೈಟುಗಳ ವಿನಿಮಯವೂ ಮುಗಿದು ಈಗ ಬರೀ ಬೆಂಕಿಯ ಚಟಪಟ ಸದ್ದು. ಇನ್ನು ನಿದ್ರೆ ಬರುವವರೆಗೂ ಚುಕ್ಕೆಗಳನ್ನು ಎಣಿಸಬಹುದು. ರಂಗೋಲಿಯ ಎಳೆಯಂತೆ ಕಂಡು ಮಾಯವಾಗುವ ಉಲ್ಕಾಪಾತವನ್ನು ಬೆರಗಿಲೆ ನೋಡಬಹುದು.<br /><br />ಈಗ ಈ ಚುಕ್ಕೆರಾಶಿಯ ಮುನ್ನೆಲೆಯಲ್ಲಿ ನಾವು ಸಂಜೆ ನೋಡಿದ್ದ ಜ್ವಾಲಾಮುಖಿಯ ಚಿತ್ರ ಮೂಡುತ್ತಿದೆ. ಆಕಾಶಕ್ಕೇ ಬೆಂಕಿ ಬಿದ್ದಂತೆ ಭಾಸ. ಕಪ್ಪು ಪರದೆ ಹರಿದು ಇನ್ನೇನು ನಮ್ಮ ಮೈಮೇಲೇ ಬೀಳಬಹುದು ಎಂಬಂತೆ ಭ್ರಮೆ. ಭಯವಾಗಿ ಬೆಚ್ಚಿ ಕಣ್ಮಿಟುಕಿಸಿದೆ. ಚಿತ್ರ ಮಾಯವಾಯಿತು. ಸ್ವಲ್ಪ ಹೊತ್ತು ಗಟ್ಟಿಯಾಗಿ ಕಣ್ಮುಚ್ಚಿಕೊಂಡಿದ್ದೆ. ಈಗ ಚುಕ್ಕೆಗಳೂ ಇಲ್ಲದ ಕಣ್ಣೊಳಗಿನ ಕತ್ತಲೆಯ ಕಡುಕಪ್ಪು ಪರದೆಯ ಮೇಲೆ ಸಂಜೆ ನೋಡಿದ್ದ ವಿಹಂಗಮ ಸೂರ್ಯಾಸ್ತದ ದೃಶ್ಯ ಮೂಡುತ್ತಿದೆ. ಸೂರ್ಯ ನನ್ನ ಅಕ್ಷಿಪಟಲದ ಮೇಲ್ತುದಿಯಿಂದ ಕೆಳಕೆಳಗೆ ಇಷ್ಟಿಷ್ಟೇ ಇಳಿಯುತ್ತಿದ್ದಾನೆ. ಹಾಗೇ ಇಳಿದಿಳಿದು ಪೂರ್ತಿಯಾಗಿ ಅಸ್ತಂಗತನಾಗಿ ಕಣ್ಣಗುಡ್ಡೆಯನ್ನೊಮ್ಮೆ ಹಿಂದಿನಿಂದ ಬಳಸಿ ಸ್ವಲ್ಪವೇ ಹೊತ್ತಿನಲ್ಲಿ ಮತ್ತೆ ಮುಂದೆ ಮೂಡಿ ಬರುತ್ತಿದ್ದಾನೆ. ನಾನು ಬೆಳಗೇ ಆದಂತೆನಿಸಿ ಫಕ್ಕನೆ ಎದ್ದು ಕುಳಿತೆ. ಕಣ್ಬಿಟ್ಟರೆ ಸೂರ್ಯ ಮಾಯವಾಗಿ ಎದುರಿಗೆ ಉರಿಯುತ್ತಿರುವ ಚಳಿಬೆಂಕಿ. ಅದರ ಪಕ್ಕ ಕುಳಿತು, ಈ ಜಗದ ಪರಿವೆಯೇ ಇಲ್ಲದಂತೆ ಬಾಟಲಿಯನ್ನು ಬಾಯಿಗಿಟ್ಟು ಸಂಪೂರ್ಣ ಮೇಲಕ್ಕೆತ್ತಿ ಅಕ್ಷರಶಃ ನಕ್ಷತ್ರಗಳನ್ನೆಣೆಸುತ್ತಿದ್ದಾರೆ ನಮ್ಮ ಗೈಡುಗಳು. ನಾನು ದಿಗ್ಗನೆ ಎದ್ದು ಕೂತದ್ದು ನೋಡಿ ಇನ್ನೂ ನಿದ್ದೆ ಬಂದಿರದ ನಿಧಿ “ಏನಾಯ್ತೋ ದೋಸ್ತಾ?” ಎಂದು ಕೇಳುತ್ತಿದ್ದಾನೆ. ಏನಿಲ್ಲ ಅಂತಂದು ನಾನು ಮತ್ತೆ ಮಲಗಿಕೊಳ್ಳುತ್ತಿದ್ದೇನೆ. ಈಗ ಹಟ ತೊಟ್ಟು, ಚುಕ್ಕಿಪರದೆ ಮೇಲೆ ಮೊದಲು ಬೆಟ್ಟ ಮೂಡಿ ಆ ನಂತರ ಅದರ ಮೇಲೆ ಲಾವಾ ಇಳಿಯುತ್ತಿರುವಂತೆ ಕಲ್ಪಿಸಿಕೊಳ್ಳಬೇಕು. ನನ್ನ ಕಲ್ಪನೆಯಂತೆಯೇ ಚಿತ್ರ ಆವಿರ್ಭವಿಸುತ್ತಿದೆ..<br /><br />ನಾವು ಶೃಂಗದಲ್ಲಿದ್ದಾಗ ನೋಡಿದ್ದು ಪಕ್ಕದ ಚಿಕ್ಕ ಬೆಟ್ಟದ ಮೇಲೆ ಉರಿಯುತ್ತಿದ್ದ ಕಾಡಿನ ಬೆಂಕಿಯ ಚಿತ್ರ. ಮಧ್ಯದಿಂದೆಲ್ಲೋ ಹೊತ್ತಿಕೊಂಡು, ಒಣಗಿದ ಹುಲ್ಲನ್ನು ತನ್ನ ಸುತ್ತಲಿಂದಲೂ ಆವರಿಸುತ್ತಾ ಕೆಳಗಿಳಿಯುತ್ತಿದ್ದ ಅದು, ದೂರದಿಂದ ನಮಗೆ ಲಾವಾದ ಹಾಗೆಯೇ ಕಾಣುತ್ತಿತ್ತು. ಬಹುಶಃ ಯಾರೋ ಹಳ್ಳಿಗರು ಸೇದಿ ಎಸೆದ ಬೀಡಿಯಿಂದ ಹೊತ್ತಿದ್ದೋ ಅಥವಾ ಯಾರೋ ಬೇಕೆಂದೇ ಹಚ್ಚಿ ಹೋದದ್ದೋ ಇರಬೇಕು. ಹುಲ್ಲು ಒಣಗಿರುವ ಈ ಶಿಶಿರದ ಕಾಲದಲ್ಲಿ ಜನ ಹೀಗೆ ಬೇಕೆಂದೇ ಬೆಂಕಿ ಹಾಕುವುದುಂಟು. ಆಗ ಒಣಹುಲ್ಲೆಲ್ಲ ಉರಿದುಹೋಗಿ, ಬರುವ ಮಳೆಗಾಲದಲ್ಲಿ ಹೊಸ ಹುಲ್ಲು ಪುಷ್ಕಳವಾಗಿ ಮೊಳೆತು ಚಿಗುರಿ ಬೆಳೆಯುವುದಕ್ಕೆ ಅನುಕೂಲವಾಗುತ್ತದೆ. ಮುಂದಿನ ವರ್ಷ ದನಕರುಗಳಿಗೆ ಒಳ್ಳೆಯ ಮೇವು ದೊರೆಯುತ್ತದೆ.<br /><br />ನಮ್ಮ ಮನೆಯ ಹುಲ್ಲಿನ ಹಿತ್ತಿಲಿಗೆ ಪ್ರತಿವರ್ಷ ಅಪ್ಪ ಮಳೆಗಾಲ ಹಿಡಿಯುವುದಕ್ಕೂ ಮುನ್ನ ಒಮ್ಮೆ ಹೀಗೇ ಬೆಂಕಿ ಹಾಕಿ ಸುಡುತ್ತಿದ್ದುದು ನೆನಪಾಗುತ್ತಿದೆ... ಬೆಂಕಿ ಹಾಕಿದಾಗ, ಅದು ಅಲ್ಲಲ್ಲಿದ್ದ ಗೇರುಗಿಡಗಳ ಬಳಿ ಹೋಗದಂತೆ, ಹಿತ್ತಿಲ ಬೇಲಿಗೆ ಹೊತ್ತಿಕೊಳ್ಳದಂತೆ ಮತ್ತು ಪಕ್ಕದ ಮನೆಯ ಹಿತ್ತಿಲಿಗೆ ಹಾಯದಂತೆ, ಹಸಿರು ಸೊಪ್ಪಿನ ಚಂಡೆ ಹಿಡಿದು ಸಂರಕ್ಷಿಸುವ ಕೆಲಸ ನನ್ನದಾಗಿತ್ತು. ಸಿಕ್ಕಿರುವ ಈ ಜವಾಬ್ದಾರಿಯಿಂದಾಗಿ ನನಗೆ ಖುಶಿಯೋ ಖುಶಿ. ಬೆಂಕಿ ಮೈಗೆ ತಾಗೀತು, ಹುಷಾರು ಅಂತ ಅಮ್ಮ ಮನೆಯಿಂದ ನೂರು ಸಲ ಹೇಳಿ ಕಳುಹಿಸಿರುತ್ತಿದ್ದಳು. ಅಪ್ಪನೂ ಕೂಗಿ ಕೂಗಿ ಎಚ್ಚರಿಸುತ್ತಿದ್ದ. ನಾನು ಮಾತ್ರ ಆವೇಶ ಬಂದವನಂತೆ ಹಸಿರು ಚಂಡೆಯನ್ನು ಹಿಡಿದು ಬೆಂಕಿಯ ಹಿಂದೆಯೇ ಓಡುತ್ತಾ ಬಡಿದು ಬಡಿದು ನಂದಿಸುತ್ತಿದ್ದೆ.<br /><br />ಕೆಲವೊಮ್ಮೆ, ಇಂತಹ ಬಿರುಬೇಸಗೆ ಕಾಲದ ರಾತ್ರಿಯಲ್ಲಿ, ಇದ್ದಕ್ಕಿದ್ದಂತೆ ನಮ್ಮ ತೋಟದ ಮೇಲಣ ಕಾಡಿಗೆ ಬೆಂಕಿ ಹೊತ್ತಿಕೊಂಡುಬಿಡುತ್ತಿತ್ತು. ಆ ಕಾಡಿನ ಬೆಂಕಿಯನ್ನು ನಾವು ‘ಗುಡ್ಡೆ ಗರಕು’ ಅಂತ ಕರೆಯುತ್ತಿದ್ದೆವು. ಆಗ ಮೈಲುಗಳವರೆಗೂ ತೇಲಿಬರುತ್ತಿದ್ದ ಆ ಒಣಗಿದ ಹುಲ್ಲು-ಸೊಪ್ಪುಗಳು ಸುಟ್ಟ ವಾಸನೆಗೆ ಊರವರೆಲ್ಲ ಎಚ್ಚೆತ್ತುಕೊಳ್ಳುತ್ತಿದ್ದರು. ಸ್ವಲ್ಪ ಹೊತ್ತಿನಲ್ಲೇ “ಹೋಯ್, ಸೊಪ್ಪಿನ್ ಬೆಟ್ಟಕ್ಕೆ ಬೆಂಕಿ ಬಿದ್ದಿದು. ನೋಡಿ ಅಲ್ಲಿ, ಆಚೆ ದಿಂಬದಲ್ಲಿ ಹೆಂಗೆ ಕೆಂಪಗೆ ಕಾಣ್ತಾ ಇದ್ದು.. ಎಲ್ಲಾ ನೀರು ತಗಂಡು ಹೊರಡಿ” ಎಂದು ಊರವರೆಲ್ಲ ಕೂಗುತ್ತ-ಕಿರುಚಾಡುತ್ತಾ, ಗುಡ್ಡದ ಕಡೆ ಓಡುತ್ತಿದ್ದರು. ನಾವೂ ಕೊಡಪಾನದ ತುಂಬ ನೀರು ಹಿಡಿದು, ಕೈಗೊಂದು ಕತ್ತಿ ತೆಗೆದುಕೊಂಡು ಓಡುತ್ತಿದ್ದೆವು. ಬೆಂಕಿ ಬೆಟ್ಟದಿಂದ ಕೆಳಗಿಳಿದು ನಮ್ಮ ಅಡಕೆ ತೋಟಗಳ ಬಳಿ ಬರುವುದರೊಳಗೆ ಆರಿಸಬೇಕಿರುತ್ತಿತ್ತು. ಜೋರಾಗಿ ಗಾಳಿಯೇನಾದರೂ ಬೀಸುತ್ತಿದ್ದರೆ ಬೆಂಕಿ ಅತಿ ವೇಗವಾಗಿ ಹಬ್ಬುತ್ತಿತ್ತು. ಕತ್ತಲೆಯಲ್ಲಿನ ಬೆಂಕಿಯ ಜತೆಗಿನ ಹೋರಾಟದ ಆ ನೋಟ ಭೀಷಣವಾಗಿರುತ್ತಿತ್ತು.<br /><br />ನನಗೆ ನಿದ್ರೆ ಬರುತ್ತಿರುವುದರಿಂದಲೋ ಏನೋ, ಆಕಾಶಪರದೆಯ ಮೇಲೆ ಮೂಡಿದ್ದ ಬೆಟ್ಟದ ಬೆಂಕಿ, ಬೀಳುತ್ತಿರುವ ಭಾರೀ ಇಬ್ಬನಿಗೆ ಆರಿ ತಣ್ಣಗಾಗುತ್ತಿದೆ. ಈಗ ಬರೀ ನಕ್ಷತ್ರಗಳಿಗೆ ಹೊತ್ತಿಕೊಂಡಿರುವ ಬೆಂಕಿ ಉಳಿದಿದ್ದು, ಅವೆಲ್ಲ ಕೆಂಪಕೆಂಪಗೆ ಹೊಳೆಯುತ್ತಿವೆ. ಯಾವಾಗ ಆರುತ್ತವೋ ಅವು, ನೋಡಿ ನೋಡಿ ನನ್ನ ಕಣ್ಣು ಉರಿಯುತ್ತಿದೆ. ಇನ್ನೇನು ಸ್ವಲ್ಪ ಹೊತ್ತಿನಲ್ಲೇ ಬೀಳಲಿರುವ- ನನ್ನ ಕಣ್ಣಿಗೇ ಬೆಂಕಿ ಹೊತ್ತಿ ಧಗಧಗಿಸುತ್ತಿರುವ ಕನಸಿಗಾಗಿ -ನಾನೀಗ ನಿದ್ರೆ ಮಾಡಲೇಬೇಕಿದೆ.<br /><br />ಎಷ್ಟೋ ಸಮಯ ಕಳೆದಿರಬಹುದು. ಎಷ್ಟೆಂದರೆ, ಚಾರಣದ ಸುಸ್ತೆಲ್ಲ ಕಳೆದು ಹೋಗುವಷ್ಟು ಸಮಯ. ಮೈಮರೆತು ನಿದ್ರೆ ಮಾಡಿಬಿಟ್ಟಿದ್ದೇನೆ. “ದೋಸ್ತಾ, ದೋಸ್ತಾ” ಪಕ್ಕದ ಗೆಳೆಯ ತಟ್ಟಿ ಎಬ್ಬಿಸುತ್ತಿದ್ದಾನೆ. ಕಣ್ಬಿಡುತ್ತಿದ್ದೇನೆ. ಎದುರಿನ ಆಕಾಶದ ಬಣ್ಣವೇ ಬದಲಾಗಿದೆ ಈಗ. ಯಾರೋ ಕಲೆಗಾರ ಮೂಡಣ ದಿಕ್ಕಿಗೆ ನೇತುಬಿಟ್ಟಿರುವ ಕೆಂಪು-ಹಳದಿ ಬಣ್ಣಗಳ ಜವನಿಕೆಯಲ್ಲಿ ಮೂಡಿ ಬರುತ್ತಿದ್ದಾನೆ ಅಂವ: ಖದೀಮ ಸೂರ್ಯ. ಶುದ್ಧ ಗುಂಡಗಿದ್ದಾನೆ. ಪರದೇಶದ ಚೆಂದುಳ್ಳಿ ಚೆಲುವೆಯರ ಸಂಗಡ ಚೆಲ್ಲಾಟವಾಡಿ ಬಂದವ ಬೆಳ್ಳಗೆ ಪ್ರಕಾಶಮಾನವಾಗಿ ಪ್ರಜ್ವಲಿಸುತ್ತಿದ್ದಾನೆ. ಪಕ್ಕದ ಬೆಟ್ಟವನ್ನು ನೋಡಿದರೆ ಅಲ್ಲಿ ಬೆಂಕಿಯಿಲ್ಲ. ಎದುರಿಗೆ ನಾವು ಮಾಡಿದ್ದ ಕ್ಯಾಂಪ್‌ಫೈರ್ ಇಲ್ಲ. ಮೇಲೆ ಕೆಂಪಗೆ ಉರಿಯುತ್ತಿದ್ದ ತಾರೆಗಳಿಲ್ಲ. ನನ್ನ ಕಣ್ಣಲ್ಲೀಗ ಉರಿಯಿಲ್ಲ. ನಾನು ನಿದ್ರಿಸಿದ್ದಾಗ ಎಲ್ಲವನ್ನೂ ನುಂಗಿಬಿಟ್ಟನೇ ಈ ಜಾದೂಗಾರ? ಇಂತಹ ಸೂರ್ಯೋದಯವನ್ನು ಕಣ್ಣಾರೆ ಕಾಣದೆ ಯಾವ ಕುವೆಂಪು ತಾನೇ ಬರೆದಾರು ಹಾಗೆ ನಾಯಿಗುತ್ತಿ ಮತ್ತು ತಿಮ್ಮಿ ಕಂಡ ದೃಶ್ಯದ ವರ್ಣನೆಯನ್ನು ‘ಮಲೆಗಳಲ್ಲಿ ಮದುಮಗಳು’ ಎಂಬ ಕಾದಂಬರಿಯಲ್ಲಿ? ಅಥವಾ ಕಾಣದೆಯೂ ಬರೆಯಬಲ್ಲವರಾಗಿದ್ದರು ಎಂತಲೇ ಅವರು ರಸ‌ಋಷಿಯೇ?<br /><br />“ಬಿಸಿಲು ಏರುವುದರೊಳಗೆ ಕೆಳಗಿಳಿದುಕೊಳ್ಳಬೇಕು. ಅದಿಲ್ಲದಿದ್ದರೆ ಆಗುವುದೇ ಇಲ್ಲ ಆಮೇಲೆ” ಪ್ರವೀಣ ಹೆದರಿಸಿದ. ಬೆಳಗಿನ ತಿಂಡಿಗೆಂದೇ ತಂದಿದ್ದ ಕುಟ್ಟವಲಕ್ಕಿಯನ್ನು ತಿಂದು ನಾವು ನೀರು ಕುಡಿದೆವು. ಇನ್ನೂ ಸಾರಾಯಿಯ ಅಮೃತಲೋಕದಲ್ಲಿ ತೇಲುತ್ತ ನಿದ್ದೆ ಹೊಡೆಯುತ್ತಿದ್ದ ಗೈಡುಗಳು ಮೈ ಮುರಿಯುತ್ತಾ ಎದ್ದರು. ಸ್ಲೀಪಿಂಗ್ ಬ್ಯಾಗುಗಳನ್ನು ಮಡಿಸಿ, ದೊಡ್ಡ ಬ್ಯಾಗುಗಳನ್ನು ಹೆಗಲಿಗೇರಿಸಿ ನಾವು ಅವರೋಹಣಕ್ಕಣಿಯಾದೆವು.<br /><br />ಕ್ಯಾಂಪ್‌ಫೈರು ಸೃಷ್ಟಿಸಿದ್ದ ಬೂದಿಯ ಗುಡ್ಡೆಯನ್ನೊಮ್ಮೆ ಕಣ್ತುಂಬ ನೋಡಿ, ಸುಟ್ಟು ಕಪ್ಪಗಾಗಿದ್ದ ಪಕ್ಕದ ಬೆಟ್ಟದ ಮೇಲ್ಮೈಯನ್ನೊಮ್ಮೆ ಕಡೆಗಣ್ಣಿನಿಂದ ನಿರುಕಿಸಿ, ತಾರೆಗಳಿಲ್ಲದ ಆಕಾಶದ ದಿಗಂತದೆಡೆಗೆ ನಡೆಯುವವನಂತೆ, ಬೆಟ್ಟದ ಇಳಿಜಾರಿನಲ್ಲಿ ಹೆಜ್ಜೆ ಎತ್ತಿಡುತ್ತಿದ್ದೇನೆ. ಬೆಂಕಿಯುಂಡೆಯಂತಾಗುತ್ತಿರುವ ಪಾಪಿ ಸೂರ್ಯ ಹಿಂದಿನಿಂದ ಗಹಗಹಿಸಿ ನಗುತ್ತಿದ್ದಾನೆ. ಇನ್ನೇನು, ಮೂರ್ನಾಲ್ಕು ತಾಸುಗಳಲ್ಲಿ ನಾವು ಕೆಳಗಿರುತ್ತೇವೆ. ಮತ್ತೆ ನಮ್ಮ ಊರು, ಕೇರಿ, ಹೆಸರು, ಮರೆತುಹೋಗಿದ್ದ ಅದೆಷ್ಟೋ ಕೊಸರುಗಳು. ಆದರೂ ಇಷ್ಟು ಹೊತ್ತಾದರೂ ಇವನ್ನೆಲ್ಲ ಮರೆತಿದ್ದೆನಲ್ಲ ಮಾರಾಯ, ಚಾರಣದ ಹಾದಿಗೊಂದು ನಮಸ್ಕಾರ!<br /><br />ಮತ್ತೆ ಹೇಗಿದ್ದೀ? ಯಾವಾಗ ಸಿಗುತ್ತೀ? ಪತ್ರ ಬರೆ. ಸಧ್ಯಕ್ಕೆ, ಟಾಟಾ...<br /><br />(೨೬ನೇ ಜನವರಿ ೨೦೦೯)<br /><br /><span style="font-style: italic;">ಗಯ್ಸ್, ಲಾಸ್ಟ್ ಟ್ರೆಕ್ ಹೋಗ್ಬಂದು ಆರ್ ತಿಂಗ್ಳ ಮೇಲಾತು. ಎಂತ ಮಾಡ್ತಾ ಇದ್ದಿ? ವೈನಾಟ್ ಅ ಮಾನ್ಸೂನ್ ಟ್ರೆಕ್? ;)</span><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-5527094080209358776?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com18tag:blogger.com,1999:blog-27009232.post-18108886952628750082009-06-30T10:56:00.004+05:302009-06-30T11:07:12.934+05:30ಬಾರದ ಮಳೆಯ ದಿನದಲ್ಲಿ ನನ್ನದೊಂದಿಷ್ಟು ಬಡಬಡಿಕೆಮೌಸ್ ಅಲ್ಲಾಡಿಸಿದರೆ ಸಾಕು, ಇದೆಲ್ಲ ತನ್ನದೇ ಎಂಬಂತೆ ಕಂಪ್ಯೂಟರ್ ಸ್ಕ್ರೀನಿನ ತುಂಬ ಓಡಾಡುವ ಈ ಬಿಳೀ ಹೊಟ್ಟೆಯ ಕಪ್ಪು ಅಲಗುಗಳ ಪುಟ್ಟ ಬಾಣವನ್ನು ಸ್ಕ್ರೀನಿನ ಕೆಳಾಗಡೆ ಬಲಮೂಲೆಗೆ ಒಯ್ದು ಒಂದು ಕ್ಷಣ ಬಿಟ್ಟರೆ ಪುಟ್ಟ ಅಸಿಸ್ಟೆಂಟ್ ಬಾಕ್ಸೊಂದು ಮೂಡಿ Tuesday, June 30, 2009 ಎಂದು ತೋರಿಸುತ್ತಿದೆ ಮುದ್ದಾಗಿ. ಅಂದರೆ ಜುಲೈ ತಿಂಗಳು ಬರಲಿಕ್ಕೆ ಇನ್ನು ಕೇವಲ ಒಂದು ದಿವಸ ಬಾಕಿ.<br /><br />ನಾನು ಕಳೆದ ತಿಂಗಳ 26ನೇ ತಾರೀಖಿನ ಬೆಳಗ್ಗೆ ಎದ್ದು ಮುಂಬಾಗಿಲು ತೆರೆದಾಗ 'ಈ ವರ್ಷ ಮಳೆ ಜಾಸ್ತಿ. ಮೇ 28ರಿಂದಲೇ ಮಾನ್ಸೂನ್ ಶುರುವಾಗಲಿದೆ. ಆಗಲೇ ಕೇರಳಕ್ಕೆ ಬಂದಿದೆ' ಅಂತೆಲ್ಲ ದೊಡ್ಡಕ್ಷರಗಳಲ್ಲಿ ಬರೆದುಕೊಂಡಿದ್ದ ನ್ಯೂಸ್‍ಪೇಪರು ಬಾಗಿಲಲ್ಲಿ ಬಿದ್ದಿತ್ತು. ನನಗೆ ಖುಶಿಯಾಯಿತು. ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿ ಆಗುತ್ತದೆ ಎಂದರೆ ಯಾರಿಗೆ ತಾನೆ ಸಂತಸವಾಗುವುದಿಲ್ಲ? ನಾನು ತಕ್ಷಣವೇ ಮನೆಗೆ ಫೋನ್ ಮಾಡಿ ಅಪ್ಪನ ಬಳಿ 'ಅಮ್ಮನ ಹತ್ರ ಸೌತೆ ಬೀಜ ಎಲ್ಲ ರೆಡಿ ಮಾಡಿ ಇಟ್ಕಳಕ್ಕೆ ಹೇಳು, ಇನ್ನು ಎರಡು ದಿನದಲ್ಲಿ ಮಳೆಗಾಲ ಶುರು ಆಗ್ತಡ. ಹವಾಮಾನ ತಜ್ಞರು ಹೇಳಿಕೆ ಕೊಟ್ಟಿದ ಪೇಪರಲ್ಲಿ. ಕಟ್ಟಿಗೆ ಎಲ್ಲಾ ಸೇರುವೆ ಆಯ್ದಾ ಹೆಂಗೆ? ಹಿತ್ಲಿನ ಬೇಲಿ ಗಟ್ಟಿ ಮಾಡ್ಸಿ ಆತಾ?' ಅಂತೆಲ್ಲ ಕೇಳಿದೆ. ಬೆಳಬೆಳಗ್ಗೆ ಫೋನ್ ಮಾಡಿ ಮನೆಯ ಬಗ್ಗೆ ಕಾಳಜಿ ತೋರಿಸುತ್ತಿರುವ ಮಗನ ಬಗ್ಗೆ ಅಭಿಮಾನ ಬಂದು ಅಪ್ಪ 'ಮಗನೇ, ನಮಗೂ ಗೊತ್ತಾಯ್ದು ವಿಷಯ. ಟಿವಿ9 ಬ್ರೇಕಿಂಗ್ ನ್ಯೂಸಲ್ಲಿ ನಿನ್ನೇನೆ ತೋರ್ಸಿದ್ದ. ನೀನೇನು ತಲೆಬಿಸಿ ಮಾಡ್‍ಕ್ಯಳಡ. ನಾವು ಮಳೆಗಾಲಕ್ಕೆ ರೆಡಿ ಆಯಿದ್ಯ' ಎಂದ. ನಾನು ರೂಮಿನಲ್ಲಿ ಟಿವಿ ಇಟ್ಟುಕೊಂಡಿಲ್ಲವಾದ್ದರಿಂದ ಟಿವಿ9ಅಲ್ಲಿ ನಿನ್ನೆಯೇ ತೋರಿಸಿರುವುದು ನನಗೆ ಗೊತ್ತಿರಲಿಲ್ಲ. ಅಪ್ಪ ನನಗಿಂತ ಫಾಸ್ಟ್ ಆಗಿರುವುದು ಗೊತ್ತಾಗಿ ಬೆಪ್ಪಾದೆ. ಮುಂದುವರೆದಿರುವ ತಂತ್ರಜ್ಞಾನ, ಶ್ರೀಘ್ರ ಮತ್ತು ವೇಗದ ಮಾಹಿತಿ ಸಂವಹನ, ಮುಂಬರುವ ಮಳೆಯನ್ನು ಇಂದೇ-ಈಗಲೇ ಹೇಳುವ ವಿಜ್ಞಾನಿಗಳ ಚಾಕಚಕ್ಯತೆ ಎಲ್ಲವೂ ಆ ಬೆಳಗಿನ ಜಾವದಲ್ಲಿ ನನಗೆ ಆಪ್ಯಾಯಮಾನವಾಗಿ ಕಂಡಿತು.<br /><br />ಹವಾಮಾನ ತಜ್ಞರು ಹೇಳಿದಂತೆ ಅಂದು ಸಂಜೆಯೇ ಬೆಂಗಳೂರಿಗೆ ಮೋಡಗಳ ಆಗಮನವಾಯಿತು. ರಾತ್ರಿ ಹೊತ್ತಿಗೆ ಅವೆಲ್ಲಾ ಧಡಬಡಾಂತ ಗುಡುಗು-ಸಿಡಿಲುಗಳಾಗಿ ಶಬ್ದ ಮಾಡುತ್ತಾ ಧೋ ಮಳೆ ಸುರಿಸತೊಡಗಿದವು. ಬೆಂಗಳೂರಿನ ರಸ್ತೆಗಳ ಮೇಲೆ ಬಿದ್ದ ಮಳೆನೀರು, ಪಕ್ಕಕ್ಕೆ ಹರಿದು ಇಂಗೋಣವೆಂದರೆ ಬರೀ ಕಾಂಕ್ರೀಟು-ಚಪ್ಪಡಿ ಹಾಸಿಕೊಂಡ ಫುಟ್‌ಪಾತೇ ಇದ್ದು ಎಲ್ಲೂ ಮಣ್ಣುನೆಲ ಕಾಣದೆ, ಹಾಗೇ ಟಾರ್ ರಸ್ತೆಯ ಮೇಲೆ ಸುಮಾರು ಹೊತ್ತು ಹರಿದು, ತಗ್ಗಿದ್ದಲ್ಲೆಲ್ಲ ನಿಂತು ಯೋಚಿಸಿತು. ಕೊನೆಗೆ ಬೇರೆ ದಾರಿ ಕಾಣದೆ, ಮೋರಿಗೆ ಹಾರಿ ಕೊಳಚೆ ನೀರಿನೊಂದಿಗೆ ಬೆರೆತು ಸಾಗರಮುಖಿಯಾಗುವುದೇ ತನಗುಳಿದಿರುವ ಮಾರ್ಗ ಎಂದದು ತೀರ್ಮಾನಿಸಿತು. ಪುಣ್ಯಕ್ಕೆ ಅದಕ್ಕೆ ಸುಮಾರೆಲ್ಲ ತೆರೆದ ಪಾಟ್‌ಹೋಲುಗಳು ಸಿಕ್ಕಿದ್ದರಿಂದ, ಬೇಗ ಬೇಗನೆ ಮೋರಿ ಸೇರಲಿಕ್ಕೆ ಅನುಕೂಲವಾಯಿತು. ಮೋರಿ ಸೇರುವ ರಭಸದಲ್ಲಿ ಅದು ಮನುಷ್ಯರನ್ನೂ, ಪ್ರಾಣಿಗಳನ್ನೂ, ಸಾಮಾನು-ಸರಂಜಾಮುಗಳನ್ನೂ ಜತೆಗೆ ಸೇರಿಸಿಕೊಂಡಿತು.<br /><br />ಆಮೇಲೆ ಅಪ್ಪ ಫೋನ್ ಮಾಡಿದಾಗ 'ಬೆಂಗಳೂರಲ್ಲಿ ಭಾರೀ ಮಳೆಯಂತೆ. ಟಿವಿ9ಅಲ್ಲಿ ತೋರಿಸ್ತಿದ್ದ. ಒಬ್ಬ ಹುಡುಗ ಕೊಚ್ಚಿಕೊಂಡು ಹೋಯ್‍ದ್ನಡ. ನೀನು ಓಡಾಡಕ್ಕರೆ ಹುಷಾರಿ' ಅಂತೆಲ್ಲ ಎಚ್ಚರಿಸಿದ. ಬೆಂಗಳೂರಿನಲ್ಲಿ ಹುಷಾರಾಗಿರಬೇಕು ಎಂಬುದು ನನಗೂ ಗೊತ್ತಿತ್ತು. ನಿನ್ನೆಯಷ್ಟೇ ನನ್ನ ಫ್ರೆಂಡು ಅಲ್ಲೆಲ್ಲೋ ಬೈಕು ನಿಲ್ಲಿಸಿದ್ದಾಗ ಮರದ ಕೊಂಬೆ ಮುರಿದುಕೊಂಡು ಬಿದ್ದು, ಪಾಪ ಬೈಕಿನ ಮುಂಭಾಗ ಫಡ್ಚ ಆಗಿ ಹೋಗಿತ್ತಂತೆ. 'ಈಗಷ್ಟೇ ಗ್ಯಾರೇಜಲ್ಲಿ ಬಿಟ್ಟು ಬಂದೆ ಮಾರಾಯಾ. ಐದಾರು ಸಾವಿರ ಖರ್ಚು ಇದೆ ಅಂದ್ರು. ಇನ್ಷೂರೆನ್ಸ್ ಕ್ಲೇಮ್ ಮಾಡ್ಲಿಕ್ಕೆ ಆಗತ್ತಾ ನೋಡ್ಬೇಕು' ಅಂತ ಹೇಳ್ತಿದ್ದ. ನಾವು ಎಷ್ಟೇ ಹುಷಾರಾಗಿದ್ದರೂ ಹೀಗೆಲ್ಲ ತಲೆ ಮೇಲೆ ಮುರಕೊಂಡು ಬೀಳುವ ಕೊಂಬೆಗಳಿಂದ ತಪ್ಪಿಸಿಕೊಳ್ಳಲಿಕ್ಕೆ ಆಗುತ್ತಾ? ಮೇಲೆ ನೋಡುತ್ತ ನಡೆದರೆ ಚರಂಡಿಗೆ ಬೀಳ್ತೀವಿ ಅಥವಾ ಯಾವುದಾದರೂ ಆಂಟಿಗೆ ಡಿಕ್ಕಿ ಹೊಡೆದು ಕಪಾಳಮೋಕ್ಷಕ್ಕೆ ಗುರಿಯಾಗುತ್ತೀವಿ. ಇದನ್ನೆಲ್ಲ ಹೇಳಿದರೆ ಅಪ್ಪ ಇನ್ನಷ್ಟು ಗಾಭರಿಯಾದಾನು ಅಂತ ಸುಮ್ಮನಾದೆ. ಬೆಳೆದ ಮಗ ಯಾರೋ ಅಪರಿಚಿತ ಹೆಂಗಸಿಂದ ಸಾರ್ವಜನಿಕರ ಎದುರು ಕೆನ್ನೆ ಏಟು ತಿನ್ನುವುದನ್ನು ಯಾವ ತಂದೆಯೂ ಸಹಿಸಿಕೊಳ್ಳಲಾರ.<br /><br />ನಾಲ್ಕಾರು ದಿನ ಹೊಡೆದ ಮಳೆ ಆಮೇಲೆ ವಾಪಸು ಹೋಗಿಬಿಟ್ಟಿತು. ಕೊನೆಗೆ ಗೊತ್ತಾಯಿತು, ಅದು ಬಂದಿದ್ದು ಮುಂಗಾರೇ ಅಲ್ಲ; ಕಳೆದ ವರ್ಷದ ಹಳೇಮೋಡಗಳ ಪೆಂಡಿಂಗ್ ಮಳೆ ಅಥವಾ ಅಲ್ಲೆಲ್ಲೋ ಸಾಗರದಲ್ಲೆದ್ದ ಚಂಡಮಾರುತದ ಪರಿಣಾಮ ಅಂತ. ಕಾರ್ಪೋರೇಶನ್ ಕೆಲಸಗಾರರು ಮೂರ್ನಾಲ್ಕು ದಿನ ಕೊಳಚೆಯನ್ನು ಶೋಧಿಸಿದರೂ ಕೊಚ್ಚಿ ಹೋಗಿದ್ದ ಹುಡುಗನ ಶವ ಸಿಗಲಿಲ್ಲ. ಆಮೇಲೆ ಬಂದ ದೇಶದ ಸೈನಿಕರಿಗೂ ಅಪಜಯವಾಯಿತು. ಅಪ್ಪ ಫೋನಿನಲ್ಲೂ, ಪತ್ರಕರ್ತರು ಪೇಪರಿನಲ್ಲೂ ನನಗೆ ಆಗಾಗ ಈ ಮಾಹಿತಿಗಳನ್ನು ಕೊಡುತ್ತಿದ್ದರು. ಅಂದು ಬೆಳಗ್ಗೆ ನನ್ನ ಕಲೀಗು 'ಸೆಕ್ಯೂರಿಟೀನೇ ಇಲ್ಲ ಕಣಯ್ಯಾ ಈ ಬೆಂಗಳೂರಲ್ಲಿ. ನೋಡು, ಇಷ್ಟೆಲ್ಲ ಅವ್ಯವಸ್ಥೆ ಆಗ್ತಿದೆ ಇಲ್ಲಿ. ಆದ್ರೆ ಸರ್ಕಾರ ಸ್ವಲ್ಪಾನಾದ್ರೂ ಸೀರಿಯಸ್ಸಾಗಿದೆಯಾ ಅಂತ? ಅವರವರಲ್ಲೇ ಕಿತ್ತಾಟ ಮಾಡಿಕೊಳ್ತಾ ಹೆಂಗೆ ನಾಚಿಕೆ ಇಲ್ಲದವರ ಥರ ಇದಾರೆ' ಅಂತ, ಟೈಮ್ಸಾಫಿಂಡಿಯಾದ ಪೇಜುಗಳನ್ನು ತಿರುಗಿಸುತ್ತಾ ಕೆಂಪು ಮುಖ ಮಾಡಿಕೊಂಡು ಉಗಿದ. ವರ್ಲ್ಡ್‌ಕಪ್ಪಿನಿಂದ ಹೊರಬಂದ ಭಾರತದ ಆಟಗಾರರೊಂದಿಗೇ ಮುಖ್ಯ ಪೇಪರಿನ ಪುಟಗಳೂ ಮುಗಿದು, ಕೊನೆಗೆ ಬ್ಯಾಂಗಲೂರ್ ಟೈಮ್ಸ್‌ನಲ್ಲಿನ ಒಂದಷ್ಟು ಚಿತ್ರಗಳನ್ನು ನೋಡಿದ ಮೇಲೆ ಅವನ ಮುಖ ಸ್ವಲ್ಪ ಪ್ರಶಾಂತವಾದಂತೆ ಕಂಡಿತು.<br /><br />ಈ ಮಧ್ಯೆ, ರೈತರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ವಿದ್ಯುತ್ ಕೊರತೆ ಆಗುವುದಿಲ್ಲ, ಮಳೆ ಇನ್ನೇನು ಶುರುವಾಗಲಿದೆ, ಈ ವರ್ಷ ಜಾಸ್ತಿಯೇ ಆಗಲಿರುವುದಾಗಿ ಹವಾಮಾನ ತಜ್ಞರು ಧೃಡಪಡಿಸಿರುವುದಾಗಿ ಇಂಧನ ಸಚಿವರು ಹೇಳಿಕೆ ಕೊಟ್ಟರು ಅಂತ ಗೊತ್ತಾಯಿತು. ಇಂಧನ ಸಚಿವರೇ ಹೇಳಿದ ಮೇಲೆ ಎಲ್ಲಾ ಸರಿಯಾಗುತ್ತೆ ಬಿಡು ಅಂತ ನಾನೂ ಸಮಾಧಾನ ಮಾಡಿಕೊಂಡೆ. ಅಪ್ಪ ಫೋನ್ ಮಾಡಿ ಊರ ಕಡೆ ಏನೇನೋ ಗಲಾಟಿಗಳೆಲ್ಲ ಆಗುತ್ತಿದೆ ಅಂತ ಹೇಳಿದ. ಊರಿನ ಮಹಿಳಾ ಮಂಡಳಿಗೆ ಸರ್ಕಾರದಿಂದ ಸ್ಯಾಂಕ್ಷನ್ ಆಗಿದ್ದ ಹಣವನ್ನು ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಂದಿದ್ದು ಗೊತ್ತಾಗಿದೆಯಂತಲೂ, ಆತ ಕಾಂಗ್ರೆಸ್ ಪರ ಕಾರ್ಯಕರ್ತನಾದ್ದರಿಂದ, ಜನರೆಲ್ಲ ಸಭೆ ಸೇರಿ, ಸಧ್ಯದ ಬಿಜೆಪಿ ಸರ್ಕಾರದ ಸಹಾಯ ಪಡೆದು ಆತನಿಗೊಂದು ಗತಿ ಕಾಣಿಸಲಿಕ್ಕೆ ತೀರ್ಮಾನಿಸಿದ್ದಾರೆ ಅಂತ ಅಪ್ಪ ಹೇಳಿದ. 'ಇಲ್ಲಿನ ಪೇಪರ್ರಲ್ಲೆಲ್ಲಾ ಬರ್ತಾ ಇದೆ, ಟಿವಿ9ಅಲ್ಲೂ ಬಂದ್ರೂ ಬರಬಹುದು, ನೋಡು' ಅಂದ. ಛೇ, ಈ ನೆಪದಲ್ಲಾದರೂ ಟಿವಿಯಲ್ಲಿ ನಮ್ಮೂರನ್ನೆಲ್ಲ ನೋಡುವ ಅವಕಾಶ ಸಿಗುತ್ತಿತ್ತು, ನನ್ನ ರೂಮಿನಲ್ಲೂ ಟಿವಿ ಇರಬೇಕಿತ್ತು ಅಂತ ಅಲವತ್ತುಕೊಂಡೆ. ಕೊನೆಗೆ ಅಪ್ಪನೇ ದನಿ ತಗ್ಗಿಸಿ 'ಈ ಜನಕ್ಕೆ ಬೇರೆ ಕೆಲಸ ಇಲ್ಲೆ. ಅದಕ್ಕೇ ಸುಮ್ನೆ ಏನಾದ್ರೂ ತಕರಾರು ಎತ್ತತಾ ಇದ್ದ. ಮಳೇನಾದ್ರೂ ಶುರು ಆಗಿದ್ರೆ ಎಲ್ರೂ ಗದ್ದೆ-ತೋಟ ಅಂತ ಹೋಗಿ ಬ್ಯುಸಿ ಆಗ್ತಿದ್ದ' ಅಂದ. ನನಗೆ ಅದೂ ಸರಿ ಎನ್ನಿಸಿತು.<br /><br />ನನ್ನ ರೂಂಮೇಟು ಅದ್ಯಾವುದೋ ವೆಬ್‌ಸೈಟು ಓಪನ್ ಮಾಡಿಕೊಂಡು 'ನೋಡು, ಇದರಲ್ಲಿ ವೆದರ್ ಫೋರ್‌ಕಾಸ್ಟ್ ತೋರಿಸ್ತಾರೆ. ಆಲ್‌ಮೋಸ್ಟ್ ಅಕ್ಯುರೇಟಾಗಿರತ್ತೆ' ಅಂತ ಹೇಳಿದ. ನಾನೂ ನೋಡಿದೆ. ವಿಶ್ವದ ಭೂಪಟದಂತಿದ್ದ ಚಿತ್ರದ ಮೇಲ್ಮೈಯಲ್ಲಿ ತೆರೆಗಳಂತೆ ಬೆಳ್ಳಬೆಳ್ಳಗೆ ಅಲ್ಲಲ್ಲಿ ಕಾಣುತ್ತಿತ್ತು. 'ಇವು ಮೋಡಗಳು. ನೋಡು, ಹೇಗೆ ನಿಧಾನಕ್ಕೆ ಮೂವ್ ಆಗ್ತಿವೆ ಅಂತ.. ಈಗ ಇಂಡಿಯಾದ ಹತ್ರಾನೇ ಬಂದಿದೆ ಅಲ್ವಾ? ಇನ್ನೇನು ನಾಲ್ಕು ದಿವಸದಲ್ಲಿ ಶುರು ಆಗಿಬಿಡತ್ತೆ ಮಾನ್ಸೂನು' ಅಂದ ರೂಂಮೇಟು. ನನಗೆ ಮತ್ತೆ ಖುಶಿಯಾಯಿತು. ಬಾನಲ್ಲಿ ಓಡೋ ಮೇಘದ ಚಲನೆಯನ್ನೂ ತೋರಿಸುವ ವಿಜ್ಞಾನಿಗಳ ಜಾಣ್ಮೆಯ ಬಗ್ಗೆ ಮನಸ್ಸಿನಲ್ಲಿಯೇ ಶ್ಲಾಘಿಸಿದೆ.<br /><br />ಆದರೆ ಈಗ ಎರಡ್ಮೂರು ದಿನಗಳ ಪೇಪರಿನಲ್ಲಿನ ದೊಡ್ಡಕ್ಷರಗಳು ಬೇರೇನೋ ಹೇಳುತ್ತಿವೆ. 'ಬರ'-ವಂತೆ! ಬರಮಾಡಿಕೊಳ್ಳಲಿಕ್ಕೆ ದೇಶದ ಜನತೆ ತಯಾರಾಗಬೇಕು ಅಂತೆಲ್ಲ ಹೇಳಿಕೆ ಕೊಟ್ಟಿದ್ದಾರೆ ಮಂತ್ರಿಗಳು. ಮಳೆಗಾಲ ಬರುತ್ತದೆ ಎಂದಾದರೆ ತಯಾರಿ ಬೇಕು, ಬರಕ್ಕೆ ಏನು ತಯಾರಿ ಮಾಡಿಕೊಳ್ಳುವುದು? ಕಡಿಮೆ ನೀರು ಕುಡಿಯಬೇಕೇ, ದಿನವೂ ಸ್ನಾನ ಮಾಡುವುದನ್ನು ಬಿಡಬೇಕೇ, ಟಿಶ್ಯೂ ಪೇಪರ್ ಬಳಸಬೇಕೇ? ಅರ್ಥವೇ ಆಗದೇ ಕಕ್ಕಾಬಿಕ್ಕಿಯಾಗುತ್ತೇನೆ ನಾನು. ವಿದ್ಯುತ್ತಂತೂ ಇಲ್ಲವೇ ಇಲ್ಲವಂತೆ. ಇನ್ನು ಹನ್ನೊಂದು ದಿನಗಳಲ್ಲಿ ಜಲಾಶಯಗಳೆಲ್ಲ ಖಾಲಿಯಾಗುತ್ತವೆಯಂತೆ. ಆಮೇಲೆ ಎಲ್ಲೆಲ್ಲೂ ಕತ್ತಲೆ ಆವರಿಸುತ್ತದಂತೆ. ಪೇಪರ್ರೋದಿ 'ವಾರೆವ್ಹಾ!' ಎಂದೆ ನಾನು.<br /><br />ಕೆಲ ವರ್ಷಗಳ ಹಿಂದೆ ಹೀಗೇ ಮಳೆ ಶುರುವಾಗದೇ ಇದ್ದಾಗ ನಾವೆಲ್ಲಾ ನಮ್ಮ ಸೀಮೆಯ ದೇವರಿಗೆ ಪರ್ಜನ್ಯ ಮಾಡಿದ್ದೆವು. ನೂರಾರು ಜನ ಸೇರಿ, ಹತ್ತಿರದಲ್ಲಿದ್ದ ಕೆರೆಯಿಂದ ಕೊಡಪಾನಗಳಲ್ಲಿ ನೀರನ್ನು ತುಂಬಿ ತುಂಬಿ ಒಬ್ಬರಿಂದ ಒಬ್ಬರಿಗೆ ಹಸ್ತಾಂತರಿಸುತ್ತ ಗರ್ಭಗುಡಿಯ ತುಂಬ ನೀರು ತುಂಬಿ ದೇವರನ್ನು ಮುಳುಗಿಸಿಬಿಟ್ಟಿದ್ದೆವು! ಹಾಗೆ ಮುಳುಗಿಸುತ್ತಿದ್ದಂತೆಯೇ ಮಳೆಹನಿಗಳು ಬೀಳತೊಡಗಿ ಜನಗಳೆಲ್ಲ ಹರ್ಷೋದ್ಘಾರ ಮಾಡಿದ್ದೆವು. ಕೋಡನಕಟ್ಟೆಯ ಸಿದ್ಧಿವಿನಾಯಕನ ಮಹಿಮೆಗೆ ಬೆರಗಾಗಿದ್ದೆವು. ಈಗಲೂ ಹಾಗೇ ಮಾಡೋಣವಾ ಅಂದರೆ ಹಿರೇಭಟ್ಟರು ಹೇಳುತ್ತಿದ್ದಾರೆ, 'ಈಗ ಮಾಡಿದ್ರೆ ಏನೂ ಉಪಯೋಗ ಇಲ್ಲೆ.. ಜನಗಳಲ್ಲಿ ಭಕ್ತಿ, ಶ್ರದ್ಧೆಯೇ ಇಲ್ಲೆ. ಪರ್ಜನ್ಯ ಮಾಡೋಣ ಅಂದ್ರೆ ಕೊಡಪಾನದಲ್ಲಿ ಯಾಕೆ ನೀರು ಒಯ್ಯಬೇಕು, ಡೈರೆಕ್ಟಾಗಿ ಒಂದು ಪೈಪ್ ಎಳೆದು ಪಂಪ್‌ಸೆಟ್ಟಲ್ಲಿ ಎತ್ತಿ ಸೀದಾ ದೇವರ ನೆತ್ತಿ ಮೇಲೇ ನೀರು ಬೀಳಹಂಗೆ ಮಾಡ್ಲಕ್ಕಲಾ ಅಂತ ಹೇಳ್ತಾರೆ ಈಗಿನ್ ಹುಡುಗ್ರು..! ದೇಶದ ತುಂಬ ಅನಾಚಾರ. ಹಿಂಗಾದ್ರೆ ಮಳೆಯೂ ಇಲ್ಲೆ ಬೆಳೆಯೂ ಇಲ್ಲೆ.' ನನಗೆ ಹತಾಶೆಯಾಗುತ್ತದೆ.<br /><br />ಮಂತ್ರಿಗಳೆಲ್ಲ ರೆಸಾರ್ಟಿನಲ್ಲಿ ಕುಳಿತು ಇದಕ್ಕೆ ಪರಿಹಾರವೇನು ಅಂತ ಮಂಥನ ಮಾಡುತ್ತಿದ್ದಾರೆ. ನ್ಯೂಸ್‌ಪೇಪರ್ರು, ಟಿವಿ9 ಎಲ್ಲಾ ಕಡೆ ಬರಲಿರುವ ಬರದ ಬಗ್ಗೆ ಚರ್ಚೆ. ನಾನೂ ಇಲ್ಲೇ ಕೂತು ಯೋಚಿಸುತ್ತಿದ್ದೇನೆ: ಕಪ್ಪೆಗಳಿಗೆ ಮದುವೆ ಮಾಡಿಸಿದರೆ ಹೇಗೆ ಅಂತ. ಆದರೆ ಕಲ್ಲುಬಂಡೆಗಳ ಸಂದಿಯೊಳಗೆಲ್ಲೋ ಅಡಗಿ ಕುಳಿತುಕೊಂಡಿರುವ ಅವನ್ನು ಹುಡುಕುವುದೇ ಕಷ್ಟದ ಕೆಲಸ. ಮಳೆ ಬಂದಮೇಲೆಯೇ ಅವು ಹೊರಗೆ ಬರುವುದು. ಇಲ್ಯಾರೋ ಹೇಳುತ್ತಿದ್ದಾರೆ, 'ಅದು ಕಪ್ಪೆ ಅಲ್ಲ; ಕತ್ತೆ. ಕತ್ತೆಗಳಿಗೆ ಮದುವೆ ಮಾಡಿಸಿದರೆ ಮಳೆ ಆಗುತ್ತೆ' ಅಂತ. ಹಾಗಾದರೆ ಕೆಲಸ ಸುಲಭ. ಬೆಂಗಳೂರಿನಲ್ಲಿ ಕತ್ತೆಗಳಿಗೇನು ಬರವಿಲ್ಲ. 'ಆಫೀಸಿನಲ್ಲಿ ಕುಳಿತು ಕೆಲಸ ಮಾಡುವುದಕ್ಕಿಂತ ದೇಶಕ್ಕೆ ಒಳಿತಾಗುವಂಥದ್ದೇನಾದರೂ ಮಾಡುವುದು ಒಳ್ಳೆಯದು, ಕತ್ತೆ ಹುಡುಕಲಿಕ್ಕೆ ಹೋಗೋಣ ಬನ್ನಿ' ಅಂತ ನನ್ನ ಕಲೀಗುಗಳಿಗೆ ಹೇಳಿದರೆ, 'ನೀನೀಗ ಮಾಡ್ತಿರೋದು ಕತ್ತೆ ಕಾಯೋ ಕೆಲಸವೇ ಅಲ್ಲವೇನೋ' ಅಂತ ಅವರೆಲ್ಲಾ ಬಿದ್ದೂ ಬಿದ್ದು ನಗುತ್ತಿದ್ದಾರೆ. ನಾನು ಹ್ಯಾಪ ಮೋರೆ ಹಾಕಿಕೊಂಡು ಕುಳಿತಿದ್ದೇನೆ.<br /><br />ಹೊರಗೆ ನೋಡಿದರೆ ಕಣ್ಣು ಕುಕ್ಕುವ ಬಿಸಿಲು. ನನ್ನೊಳಗೆ ಶುಷ್ಕ ಕತ್ತಲೆ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-1810888695262875008?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com16tag:blogger.com,1999:blog-27009232.post-35989246819403781782009-06-22T13:43:00.005+05:302009-06-23T12:18:00.226+05:30ಒಂದು ಸ್ನೇಹ; ಒಂದು ಮೋಹಅಲ್ಲೇ, ಮಂಟಪದ ಪಕ್ಕದಲ್ಲೇ ನಿಂತಿದ್ದೆ ನಾನು. ಯಾರೋ ಅಕ್ಷತೆಯ ಕಾಳುಗಳನ್ನು ಹಂಚಿ ಹೋದರು. ಮೊಳಗತೊಡಗಿದ ಗಟ್ಟಿಮೇಳದಲ್ಲಿ ಪುರೋಹಿತರ ‘ಮಾಂಗಲ್ಯಂ ತಂತು ನಾನೇನಾ..’ ಮುಳುಗುತ್ತಿದ್ದಹಾಗೇ ನಾನು ಅಕ್ಷತೆಯನ್ನು ಅವರತ್ತ ತೂರಿದೆ. ಪಟಪಟನೆ ಸದ್ದಾಯಿತು. ತಗ್ಗಿಸಿದ ಮೊಗದಲ್ಲಿನ ಅವಳ ಮುಗುಳ್ನಗೆಯನ್ನು ಕದ್ದು ನೋಡುತ್ತಾ ಅವನು ತಾಳಿ ಕಟ್ಟಿದ. ನನ್ನ ಅತ್ಯಾಪ್ತ ಗೆಳತಿ ಭಾವನಾ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಳು.<br /><br />ಹಂಚಿದ ಸಿಹಿಯನ್ನು ಬಾಯಿಗಿಟ್ಟುಕೊಳ್ಳುತ್ತಾ ನಾನು ಕಲ್ಯಾಣ ಮಂಟಪದ ಸಭಾಂಗಣದ ಸಾಲು ಖುರ್ಚಿಗಳೆಡೆ ನಡೆದೆ. ಇದೇನು ಸೆಖೆ! ಹಹ್! ಬಾಗಿಲ ಬಳಿ ಪಾನಕ ಇಟ್ಟಿರಬೇಕು, ಕುಡಿಯಬೇಕೆಂದುಕೊಂಡೆ. ನಾನು ಪಾನಕ ತೆಗೆದುಕೊಳ್ಳುತ್ತಿರಬೇಕಾದರೆ ಯಾರೋ ಹೆಗಲಿನ ಮೇಲೆ ಕೈ ಹಾಕಿದಂತಾಗಿ ತಿರುಗಿ ನೋಡಿದರೆ ಚಂದ್ರು! ಚಂದ್ರು ಅಂದ್ರೆ ಚಂದ್ರಶೇಖರ, ನನ್ನ ಎಕ್ಸ್-ಕಲೀಗು. "ಅರೆ ವ್ಹಾ, ಈಗ ಬರ್ತಿದಿಯೇನೋ ದೇವ್ರೂ?" ಎನ್ನುತ್ತಾ ಅವನಿಗೊಂದು ಪಾನಕದ ಗ್ಲಾಸ್ ಕೊಟ್ಟು, ಇಬ್ಬರೂ ದೂರದ ಖುರ್ಚಿಯೊಂದರೆಡೆಗೆ ಹೋಗಿ ಕುಳಿತೆವು. ಮಂಟಪದಲ್ಲಿದ್ದ ಭಾವನಾ ಚಂದ್ರುವನ್ನು ನೋಡಿ ಮುಗುಳ್ನಕ್ಕಳು. ಚಂದ್ರು ಕೈ ಮಾಡಿದ.<br /><br />"ಇದು ಹೇಗಯ್ಯಾ ಆಯ್ತು? ಆದ್ರೂ ನೀನು ಹೇಗೋ ಇಷ್ಟೊಂದು ಖುಶಿಯಿಂದ ಇದೀಯಾ? ನಾನೇನೋ ನೀನು ಮದುವೆಗೆ ಬರೋದೇ ಇಲ್ಲ ಅಂದ್ಕೊಂಡಿದ್ದೆ.. ರೂಮಲ್ಲಿ ಒಬ್ನೇ ದೇವದಾಸ್ ಥರ ಕುಡೀತಾ ಕೂತಿರೋ ಚಿತ್ರಾನಾ ಕಲ್ಪಿಸಿಕೊಂಡು ಬಂದಿದ್ದೆ" ಸಣ್ಣ ದನಿಯಲ್ಲಿ ಹೇಳಿದ ಚಂದ್ರು. ಚಂದ್ರುವಿನಿಂದ ನಿರೀಕ್ಷಿಸದ ಪ್ರತಿಕ್ರಿಯೆಯೇನು ಅಲ್ಲ ಇದು.. ಚಂದ್ರುವೇನು, ಬಹುಶಃ ನನ್ನ ಸ್ನೇಹಿತರೆಲ್ಲರನ್ನೂ ಕಾಡ್ತಿರೋ ಪ್ರಶ್ನೇನೂ ಹೌದು: "ಭಾವನಾ ಮತ್ತು ಅಂಶು ಲವರ‍್ಸ್ ಆಗಿರ್ಲಿಲ್ವಾ? ಅಷ್ಟೊಂದು ಕ್ಲೋಸ್ ಇದ್ರು ಮತ್ತೆ? ಯಾವಾಗ ನೋಡಿದ್ರೂ ಒಟ್ಟೊಟ್ಟಿಗೆ ಇರ್ತಿದ್ರು.. ಈಗ ಭಾವನಾ ಯಾರನ್ನೋ ಮದುವೆ ಆಗ್ತಿದಾಳೆ.. ಮತ್ತೆ ಅಂಶು ತಮ್ಮ ಮನೆಯದೇ ಮದುವೆಯೇನೋ ಅನ್ನೋ ಹಾಗೆ ಸಂಭ್ರಮದಿಂದ ಓಡಾಡ್ತಿದಾನೆ.. ಇದು ಹ್ಯಾಗೆ ಸಾಧ್ಯ?"<br /><br />ಹೇಳಬೇಕು ಎಲ್ಲರಿಗೂ ಒಂದು ತಂಪು ಸಂಜೆಯಲ್ಲಿ ಕೂರಿಸಿಕೊಂಡು: ಭಾವನಾ ಎಂಬ ನನ್ನ ಪ್ರೀತಿಯ ಗೆಳತಿಯ ಬಗ್ಗೆ. ಭಾವನಾ ಎಂಬ ಪ್ರವಾದಿಯ ಬಗ್ಗೆ. ನನ್ನ ಭಾವಕೋಶದ ಶಕ್ತಿಯ ಬಗ್ಗೆ. ನನ್ನನ್ನು ಇಲ್ಲಿಯವರೆಗೆ ಕರೆತಂದ ಮಾಯಾಯುಕ್ತಿಯ ಬಗ್ಗೆ. ಧೃತಿಯ ಮತ್ತೊಂದಾವೃತಿಯ ಬಗ್ಗೆ. ಭಾವನಾ ಮತ್ತು ಅಂಶು ಪ್ರೇಮಿಗಳಾಗಿರಲಿಲ್ಲ. ಅವರು ಅಪ್ಪಟ ಸ್ನೇಹಿತರಾಗಿದ್ದರು. ಸ್ನೇಹವೆಂಬ ಶಬ್ದದ ಅರ್ಥವನ್ನು ಹೊಸ ಬಣ್ಣಗಳಲ್ಲಿ ಬರೆದಿದ್ದರು ಅಂತ.<br /><br />ಕವಿಸಮಯ ಜಾರಿಗೆ ಬಂದ ಯಾವುದೋ ಕವಿ ‘ಕಾರಿರುಳ ಖಿನ್ನತೆಯಲ್ಲಿ ಬೆಳುದಿಂಗಳಿಳಿದಂತೆ, ಮುಂಗಾರು ಮೂಡಿದಂತೆ, ತಂಗಾಳಿ ತೀಡಿದಂತೆ...’ ಎಂದೆಲ್ಲ ಬರೆಯುತ್ತಿದ್ದ ಘಳಿಗೆಯಲ್ಲೇ ಇತ್ತ ನನ್ನ ಸ್ನೇಹಕ್ಷೇತ್ರದಲ್ಲಿ ಕಾಲಿಟ್ಟವಳು ಭಾವನಾ. ಇಂಟರ್‌ವ್ಯೂಗೆಂದು ನನ್ನ ಸರದಿಗಾಗಿ ಕಾಯುತ್ತ ಕೂತಿದ್ದ ಆ ರಿಸೆಪ್ಷನ್ ಹಾಲಿನ ಏಸಿಯ ಗಾಳಿಯ ಮೌನವನ್ನು ಒಮ್ಮೆಲೇ ಕಲಕುವಂತೆ "ನೀವೂ ಮಲ್ಲೇಶ್ವರಮ್ಮಾ?" ಅಂತ ಕೇಳಿದ್ದಳು. "ಹೂಂ, ನಿಮಗೆ ಹೇಗೆ ಗೊತ್ತಾಯ್ತು?" ಅವಳ ಮುಖವನ್ನು ನೇರವಾಗಿ ನೋಡದೇ ಕೇಳಿದೆ. "ನಿಮ್ಮ ಕೈಯಲ್ಲಿರೋ ರೆಸ್ಯೂಮ್‌ನಿಂದ ಗೊತ್ತಾಯ್ತು" ಉತ್ತರಿಸಿದಳು. ನನಗಿಂತ ಮೊದಲು ಅವಳಿಗೆ ಕರೆ ಬಂತು. ನನ್ನೆದುರಿಂದ ಎದ್ದು ಹೋಗುವಾಗ ಕಂಡ ಅವಳ ರೆಸ್ಯೂಮಿನಿಂದ ಹೆಸರು ಭಾವನಾ ಅಂತ ಗೊತ್ತಾಯ್ತು. ಹತ್ತು ನಿಮಿಷದ ನಂತರ ಹೊರಬಂದ ಭಾವನಾ, ಹೆದರಿಕೆಯಿಂದ ಚಡಪಡಿಸುತ್ತಾ ಕೂತಿದ್ದ ನನ್ನ ಬಳಿ ಬಂದು ಸಣ್ಣ ದನಿಯಲ್ಲಿ "ಏನೂ ನರ್ವಸ್ ಆಗ್ಬೇಡಿ.. ಇಂಟರ್‌ವ್ಯೂವರ್ ಇಸ್ ಟೂ ಕೂಲ್. ಸ್ವಲ್ಪಾನೂ ಟೆನ್ಷನ್ ಮಾಡಿಕೊಳ್ಳದೇ ಅಟೆಂಡ್ ಮಾಡಿ. ಆಲ್ ದಿ ಬೆಸ್ಟ್!" ಅಂದು ನಗೆಹೂವಿನೊಂದಿಗೆ ಹೊರಟು ಹೋಗಿದ್ದಳು.<br /><br />ಆಮೇಲೆ ಆ ಕಂಪನಿಯಲ್ಲಿ ಇಬ್ಬರಿಗೂ ಕೆಲಸ ಸಿಕ್ಕಿದ್ದು, ಕೆಲಸದ ಮೊದಲ ದಿನ ರಿಸೆಪ್ಷನ್‌ನಲ್ಲಿ ಮತ್ತೆ ಸಿಕ್ಕಿದ್ದು, ತೀರಾ ಹಳೆಯ ಪರಿಚಿತರಂತೆ ಒಬ್ಬರಿಗೊಬ್ಬರು ಕೈ ಕುಲುಕಿ ಪರಸ್ಪರ ‘ಕಂಗ್ರಾಟ್ಸ್’ ಹೇಳಿಕೊಂಡಿದ್ದು ...ಆಹ್, ಎಲ್ಲಾ ನಮ್ಮ ಸ್ನೇಹದ ಡಾಕ್ಯುಮೆಂಟರಿಯ ಅಡಿಯಲ್ಲಿ ನೆನಪಾಗಿ ಬೆಚ್ಚಗಿವೆ. ಮಧ್ಯಾಹ್ನ ಒಟ್ಟಿಗೇ ಕಾಫಿ ಕುಡಿಯುವಾಗ ಹೇಳಿದ್ದೆ: "ನೀವವತ್ತು ಹಾಗೆ ಹುರಿದುಂಬಿಸಿ ಹೋಗಿರದಿದ್ದರೆ ನಾನು ಇಂಟರ್‌ವ್ಯೂನ ಅಷ್ಟೊಂದು ನಿರ್ಭಯವಾಗಿ ಫೇಸ್ ಮಾಡ್ಲಿಕ್ಕೆ ಆಗ್ತಾನೇ ಇರ್ಲಿಲ್ಲ, ಇಲ್ಲಿವತ್ತು ಹೀಗೆ ಮತ್ತೆ ಸಿಗ್ತಾನೂ ಇರ್ಲಿಲ್ಲ" -ಅಂತ.<br /><br />ಭಾವನಾ ಅತ್ಯಂತ ಚಟುವಟಿಕೆಯ, ಆತ್ಮವಿಶ್ವಾಸದ ಹುಡುಗಿ. ಆಕೆಯ ಚುರುಕು ನಡಿಗೆ, ಸೆಳೆಯುವ ಕಣ್ಣು, ಅಸ್ಖಲಿತ ಭಾಷೆ ಮತ್ತು ಯಾರೊಂದಿಗಾದರೂ ಅಷ್ಟು ಬೇಗನೆ ಬೆರೆಯುವ ರೀತಿ -ಎಲ್ಲಾ ಕೆಲವೇ ತಿಂಗಳಲ್ಲಿ ಕಂಪನಿಯ ಪ್ರಶಂಸೆಗೆ ಒಳಗಾದವು. ಹಾಗೆಯೇ ನನ್ನ ಸಂಕೋಚ, ಸೋಮಾರಿತನ, ಕೀಳರಿಮೆಯ ಸ್ವಭಾವ ಮತ್ತು ಹಳ್ಳಿಯಿಂದ ಬಂದ ಭಾಷೆಯ ದುರ್ಬಲತೆ -ಅಲ್ಲೇ ಉಳಿಯುವಂತೆ ಮಾಡಿದವು. ಭಾವನಾ ಸೀನಿಯರ್ ಆದಳು; ನಾನು ಹಿಂದೆಯೇ ಉಳಿದೆ.<br /><br />ಅದೊಮ್ಮೆ ನಾನು ಮಾಡಿದ ಪುಟ್ಟ ತಪ್ಪಿನಿಂದಾಗಿ ಅನಾಹುತವೊಂದು ಆಗುವುದಿತ್ತು. ಎಮ್.ಡಿ. ಕೆಂಡಾಮಂಡಲವಾಗಿದ್ದರು. ಆದರೆ ಭಾವನಾ ಅದರ ಸಂಪೂರ್ಣ ಹೊಣೆಗಾರಿಕೆ ಹೊತ್ತು, ಜಾಣ್ಮೆಯಿಂದ ನಿರ್ವಹಿಸಿ, ನನ್ನನ್ನು ಸಂಕಷ್ಟದಿಂದ ಪಾರು ಮಾಡಿದಳು. ನನಗೆ ಒಂದೇ ಪ್ರಶ್ನೆ: ಇದ್ಯಾಕೆ ಈ ಪರಿ ನನ್ನನ್ನು ಹಚ್ಚಿಕೊಳ್ಳುತ್ತಾಳೆ ಈ ಹುಡುಗಿ? ಭಾವನಾ ಮತ್ತು ನಾನು ಪ್ರತಿದಿನ ಒಟ್ಟಿಗೇ ಊಟ ಮಾಡುವುದು, ಕಂಪನಿಯ ಬಸ್ಸಿನಲ್ಲಿ ಓಡಾಡುವಾಗ ಒಟ್ಟಿಗೇ ಕೂರುವುದು, ಇಬ್ಬರ ಮನೆಯೂ ಇರುವುದು ಒಂದೇ ಏರಿಯಾದಲ್ಲಾದ್ದರಿಂದ ಭಾನುವಾರಗಳಲ್ಲಿ ಸಹ ಸಿಗುವುದು. ಅವಳ ನನ್ನನ್ನು ತನ್ನ ಮನೆಗೆ ಕರೆಯುತ್ತಾಳೆ. ಮನೆಯಲ್ಲೆಲ್ಲರಿಗೂ ‘ಮೈ ಕಲೀಗ್ ಅಂಡ್ ಬೆಸ್ಟ್ ಫ್ರೆಂಡ್’ ಅಂತ ಪರಿಚಯಿಸಿದ್ದಾಳೆ. ನನ್ನ ರೂಮಿಗೆ ಬರುತ್ತಾಳೆ. ಪ್ರಪಂಚದ ಎಲ್ಲ ವಿಷಯವನ್ನೂ ಮಾತಾಡುತ್ತಾಳೆ. ನನ್ನಂತಹ ಮೌನಿಯನ್ನೂ ಮಾತಾಡುವಂತೆ ಮಾಡುತ್ತಾಳೆ. ಒಳ್ಳೆಯ ಪುಸ್ತಕಗಳನ್ನು ರೆಫರ್ ಮಾಡುತ್ತಾಳೆ. ಎಲ್ಲಾ ತರಹದ ಎಸ್ಸೆಮ್ಮೆಸ್ಸುಗಳನ್ನೂ ಫಾರ್ವರ್ಡ್ ಮಾಡುತ್ತಾಳೆ. ನಾನು ಒಬ್ಬ ಹುಡುಗಿಯೊಂದಿಗೆ ಇಷ್ಟು ಸಲಿಗೆಯಿಂದ ಬೆರೆಯುತ್ತಿದ್ದುದು ಇದೇ ಮೊದಲು... ಕೇಳಿಕೊಳ್ಳುತ್ತೇನೆ ಮತ್ತೆ: ಇದು ಪ್ರೀತಿಯಾ? ಅವಳೊಂದಿಗೆ ಶಾಪಿಂಗ್-ಗೀಪಿಂಗ್ ಅಂತ ಹೋದಾಗ ಎದುರಾಗುವ ಚಂದ ಹುಡುಗಿಯರನ್ನು ನನಗೆ ತೋರಿಸಿ ಕಿಚಾಯಿಸುವುದು.. "ಒಂದು ಗರ್ಲ್‌ಫ್ರೆಂಡ್ ಮಾಡ್ಕೊಳೋ ಬೇಗ" ಅನ್ನೋದು... ಏನು ಇವೆಲ್ಲಾ? ಏಕಾಂತದ ಕ್ಷಣಗಳಲ್ಲಿ ಕಾಡುತ್ತದೆ ತುಮುಲ: ಒಬ್ಬ ಹುಡುಗನೊಂದಿಗೆ ಒಬ್ಬ ಹುಡುಗಿ ಇಷ್ಟೊಂದು ಕ್ಲೋಸ್ ಆಗಿ ಇರಬಹುದಾ? ಇದು ಕೇವಲ ಸ್ನೇಹವಾ? ಕಲೀಗುಗಳ ಮಧ್ಯೆಯಂತೂ ನಮ್ಮ ಒಡನಾಟ ದೊಡ್ಡ ಗಾಸಿಪ್ಪು. ಹಾಗಾದರೆ ಅವರು ಹೇಳುವಂತೆ ಇದು ಪ್ರೇಮವಾ?<br /><br />ಆದರೆ ಹಾಗಂದುಕೊಳ್ಳಲಿಕ್ಕೇ ನನಗೆ ಧೈರ್ಯವಾಗುತ್ತಿರಲಿಲ್ಲ.. ಬಹುಶಃ ಭಾವನಾಳ ಆ ಆತ್ಮವಿಶ್ವಾಸದ ಗಟ್ಟಿತನವೇ ನನಗೆ ಆಕೆಯನ್ನು ನನ್ನ ಪ್ರೇಯಸಿಯೆಂದು ಕಲ್ಪಿಸಿಕೊಳ್ಳಲಿಕ್ಕೆ ಹಿಂಜರಿಯುವಂತೆ ಮಾಡುತ್ತಿತ್ತು. ನನಗೆ ಭಾವನಾಳನ್ನು ಒಬ್ಬ ಫ್ರೆಂಡ್ ಅಂತ ಅಂದುಕೊಂಡರೇನೇ ಹೆಚ್ಚು ಹಿತವೆನಿಸುತ್ತಿತ್ತು. ನನ್ನ ದುಃಖಗಳನ್ನು ತನ್ನೊಂದಿಗೆ ಹಂಚಿಕೊಳ್ಳಬಲ್ಲವಳು, ನನ್ನ ಅಸಹಾಯಕತೆಯನ್ನು ಅರ್ಥ ಮಾಡಿಕೊಳ್ಳಬಲ್ಲವಳು, ನಾನು ಮೂಡಿನಲ್ಲಿಲ್ಲದಿದ್ದಾಗ ಹುರಿದೊಂಬಿಸಿ ನಗಿಸುವವಳು, ನನ್ನ ಸಣ್ಣ ಗೆಲುವುಗಳನ್ನು ತುಂಬು ಪ್ರೀತಿಯಿಂದ ಅಭಿನಂದಿಸುವವಳು ಮತ್ತು ನನ್ನಲ್ಲಿ ಹೊಸ ಕನಸುಗಳನ್ನು ಚಿಗುರಿಸಿ ಅವುಗಳನ್ನು ನನ್ನವಾಗಿಸಿಕೊಳ್ಳುವಂತೆ ಪ್ರೇರೇಪಿಸುವವಳು -ಇಂತಹ ಗೆಳತಿಯೊಬ್ಬಳು ನನಗೆ ಬೇಕಿದ್ದಳು. ಮತ್ತು ಭಾವನಾ ಅವೆಲ್ಲವೂ ಆಗಿದ್ದಳು. ನಾನೂ ಕಂಪನಿಯ ಕೆಲಸಗಳಲ್ಲಿ ಸಾಧನೆಗೈದಿದ್ದು, ನನಗೊಂದು ರೆಕಗ್ನಿಷನ್ ಸಿಗುವಂತಾದದ್ದು -ಎಲ್ಲಾ ಭಾವನಾಳ ಕೃಪೆಯಿಂದಲೇ. ಅದ್ಯಾವುದೋ ಮುಹೂರ್ತದಲ್ಲಿ ನಿರ್ಧರಿಸಿಬಿಟ್ಟಿದ್ದೆ: ನನಗೆ ಇದಕ್ಕಿಂತ ಹೆಚ್ಚಿನದೇನೂ ಬೇಡ ಭಾವನಾಳಿಂದ. ಇದನ್ನು ಯಾವುದೇ ಕಾರಣಕ್ಕೂ ನಾನು ಕಳೆದುಕೊಳ್ಳುವುದಿಲ್ಲ. ಇದು ಪ್ರೀತಿಯಾಗಿರಬೇಕಾದ ಅವಶ್ಯಕತೆಯೇ ಇಲ್ಲ. ಆಕೆ ನನ್ನ ಗೆಳತಿಯಾಗೇ ಇರಲಿ.<br /><br />ಪ್ರಾಜೆಕ್ಟೊಂದನ್ನು ಮುಗಿಸಲಿಕ್ಕಾಗಿ ಭಾವನಾ ಡೆಲ್ಲಿಗೆ ಹೋಗಬೇಕಾಗಿ ಬಂತು. ಆಕೆ ತನ್ನೊಬ್ಬಳಿಂದ ಡೆಡ್‌ಲೈನ್ ಒಳಗೆ ಇದನ್ನು ಮುಗಿಸಲು ಸಾಧ್ಯವೇ ಇಲ್ಲ ಅಂತ ನನ್ನನ್ನೂ ಜತೆಗೆ ಕರೆದೊಯ್ದಳು. ರೂಮ್ ಬುಕ್ ಮಾಡುವಾಗ ಒಂದೇ ರೂಮ್ ಸಾಕು ಎಂದಳು. ಐದು ದಿನಗಳ ಪ್ರಾಜೆಕ್ಟ್ ಮುಗಿಸಿ ವಾಪಸಾಗುವಾಗ ವಿಮಾನದ ಸೀಟಿಗೊರಗಿ ಮಾತಾಡಿದಳು ಭಾವನಾ:<br /><br />"ನಿಂಗೆ ಆಶ್ಚರ್ಯ ಅಲ್ವಾ ನಾನು ನಿಂಜೊತೆ ಯಾಕೆ ಇಷ್ಟೊಂದು ಕ್ಲೋಸಾಗಿ ಇರ್ತೀನಿ ಅಂತ? ಅದರ ಜೊತೆಗೇ ಮನಸ್ಸಿನಲ್ಲಿ ನೂರಾರು ಅನುಮಾನದ ಪ್ರಶ್ನೆಗಳು ಅಲ್ವಾ? ಬಾಯಿಬಿಟ್ಟು ಕೇಳಲಿಕ್ಕೆ ಸಾಧ್ಯವೇ ಇಲ್ಲದಷ್ಟು ಹಿಂಜರಿಕೆ ಅಲ್ವಾ? ಹೂಂ..?" ಮಾತು ಬೆಳೆಯುವ ಮುನ್ನವೇ ಹೇಳಿಬಿಟ್ಟೆ: "ನೀನು ‘ಮೈ ಆಟೋಗ್ರಾಫ್’ ಸಿನಿಮಾ ನೋಡಿದೀಯಾ ಭಾವನಾ? ಅದರಲ್ಲಿನ ಮೀನಾಳ ಪಾತ್ರ ನಂಗೆ ತುಂಬಾ ಇಷ್ಟ.. ಆಕೆ ಸುದೀಪ್‌ನನ್ನು ಕೇವಲ ಸ್ನೇಹದ ಬಲದಿಂದ ಬೆಳೆಸೋ ರೀತಿ, ಫೆಂಟಾಸ್ಟಿಕ್! ಅವಳ ಬಿಹೇವಿಯರ್, ಅವಳ ಮ್ಯಾನರಿಸಂ, ಅವಳ ವ್ಯಕ್ತಿತ್ವದ ಉನ್ನತಿ... ಓಹ್! ಯು ನೋ ವ್ಹಾಟ್? ನಂಗೆ ನಿನ್ನಲ್ಲಿ ಮೀನಾ ಕಾಣ್ತಾಳೆ.. ನೀನು ಕೇಳಿದ ಪ್ರಶ್ನೆಗಳೆಲ್ಲಾ ಸತ್ಯ. ಆದರೆ ನಂಗೆ ಅದ್ಯಾವುದಕ್ಕೂ ಉತ್ತರ ಬೇಡ. ನೀನು ಕೇವಲ ನನ್ನ ಗೆಳತಿಯಾಗಿದ್ದರೆ ಸಾಕು.. ಮೈ ಬೆಸ್ಟ್ ಫ್ರೆಂಡ್, ಲೈಕ್ ನೌ!"<br /><br />ಭಾವನಾಳಿಗಾದ ಖುಶಿಯನ್ನು ವ್ಯಕ್ತಪಡಿಸಲು ಅವಳ ಇಷ್ಟಗಲ ಅರಳಿದ ಮುಖಕ್ಕೂ ಸಾಧ್ಯವಾಗಲಿಲ್ಲ. "ಥ್ಯಾಂಕ್ಯೂ ಡಿಯರ್.. ಥ್ಯಾಂಕ್ಯೂ ವೆರಿ ಮಚ್! ನನ್ನ ಭಾರ ಕಡಿಮೆ ಮಾಡಿದೆ. ಜಗತ್ತು ಏನೇ ಆದ್ರೂ ನಾವಿಬ್ಬರೂ ಫ್ರೆಂಡ್ಸ್. ಮುಂದಿನ ತಿಂಗಳು ನನ್ನ ಮದುವೆ. ನಿನ್ನ ಬಳಿ ಹೇಳಿಕೊಳ್ಳದೇ ಮುಚ್ಚಿಟ್ಟಿದ್ದ ಸಂಗತಿ ಅಂದ್ರೆ ಇದೊಂದೇ, ಸಾರಿ.." ಅಂದು ಬ್ಯಾಗಿನಿಂದ ಇನ್ವಿಟೇಶನ್ ತೆಗೆದು ಕೊಟ್ಟಳು. ವಿಮಾನದ ಕಿಟಕಿಯಿಂದ ನೋಡಿದವನಿಗೆ ಮುಗಿಲು ಮುಗಿಯುವುದೇ ಇಲ್ಲವೇನೋ ಅನ್ನಿಸಿತು.<br /><br />* * *<br /><br />ಇಡೀ ಕಲ್ಯಾಣ ಮಂಟಪ ಸುತ್ತಾಡಿಕೊಂಡು ಬಂದ ಚಂದ್ರು ಯೋಚನಾಮಗ್ನನಾಗಿ ಕೂತಿದ್ದ ನನ್ನನ್ನು ತಟ್ಟಿ ಎಬ್ಬಿಸಿ ಕೇಳಿದ: "ಅಂತೂ ಈಗ ಶುರುವಾಯ್ತಾ ಡಿಪ್ರೆಶನ್ನು? ಎಲ್ಲಾ ಮುಗಿದ ಮೇಲೆ? ಆವಾಗ್ಲೇ ಒಂದು ಪ್ರಪೋಸ್ ಮಾಡೋ ಅಂದ್ರೆ ಕೇಳಲಿಲ್ಲ... ಇನ್ನು ಅವಳನ್ನೇ ಮನಸ್ಸಿನಲ್ಲಿಟ್ಟುಕೊಂಡು ಕೊರಗೀ ಕೊರಗೀ.. .." ಚಂದ್ರುವಿನ ಅಭಿನಯಕ್ಕೆ ನಕ್ಕೆ ನಾನು. ಇವರಿಗೆ ನಂಬಿಕೆ ಬರುವಂತೆ ತಿಳಿಸಿ ಹೇಳಲಿಕ್ಕಾದರೂ ಆಗುತ್ತಾ ಇದನ್ನೆಲ್ಲಾ? ಸಾಧ್ಯವೇ ಇಲ್ಲವೆನಿಸಿತು.. ಮಂಟಪದತ್ತ ನೋಡಿದೆ. ಗಂಡನೊಂದಿಗೆ ಇನ್ನೂ ಏನೇನೋ ಪೂಜೆ, ಹವನಗಳಲ್ಲಿ ಮುಳುಗಿದ್ದಳು ಭಾವನಾ. ಅವಳು ಸೆಖೆಯಲ್ಲಿ ಬೆವರುತ್ತಾ ಕಷ್ಟ ಪಡುತ್ತಿದ್ದುದನ್ನು ಕಂಡು ಈ ಬೇಸಿಗೆ ಕಾಲದಲ್ಲೇ ಯಾಕೆ ಎಲ್ಲರೂ ಮದುವೆಯಾಗುತ್ತಾರೋ ಅನ್ನಿಸಿತು.<br /><br />[<span style="font-style: italic;">ಪ್ರಕಟ: ಕನ್ನಡ ಪ್ರಭದ 'ಸಖಿ' ಪಾಕ್ಷಿಕ . ಟಾಪಿಕ್: Intimate friendship between a boy n girl</span>]<br /><br /><span style="font-weight: bold;">^^^^^^^^^^^^</span><br /><br />"..ಅವಳ ಸೌಂದರ್ಯಕ್ಕೆ ಆ ಅಪರಾತ್ರಿ ಕೂಡ ಬೆರಗಾದಂತಿತ್ತು. ಹಚ್ಚಿಟ್ಟ ದೀಪಕ್ಕೆ ಹಾಲು ಬೆರೆಸಿದಂಥ ಬಣ್ಣ. ತನಗಿರುವ ಶ್ರದ್ಧೆಯನ್ನೆಲ್ಲ ಬಳಸಿ ಅವಳ ರೂಪು ತಿದ್ದಿರಬೇಕು ಭಗವಂತ. ಅವಳ ಕಣ್ಣುಗಳಲ್ಲಿದ್ದುದು ಸಾತ್ವಿಕ ಚೆಲುವು. ನಕ್ಕರೆ ಅದೆಂಥದೋ ಸೌಮ್ಯ ಕಳೆ. ಒಂದು ಕೆನ್ನೆಯ ಮೇಲೆ ಮಾತ್ರ ಗುಳಿ ನೆಗ್ಗುತ್ತದೆ. ಮುಂದಲೆಯಲ್ಲಿ ಸುಳಿದಿರುಗಿದ ಮಿನ್ನಾಗರಗಳಂತಹ ದಟ್ಟ ಗುಂಗುರು ಕೂದಲು. ಅವಳ ಹುಬ್ಬುಗಳಲ್ಲಿ ಒಂದು ಕಾನ್ಫಿಡೆನ್ಸು ಸರಿದಾಡುತ್ತದೆ. ಕೆಳ ತುಟಿಗೆ ಮೆತ್ತಿಕೊಂಡಂತಿರುವ ಪುಟ್ಟ ಮಚ್ಚೆಯಲ್ಲಿ ಅದೆಂಥದೋ ಅಮಾಯಕತೆ..."<br /><br />ನಾನು ಮೊದಲ ವರುಷದ ಕಾಲೇಜು ಹುಡುಗನಾಗಿದ್ದಾಗ 'ಹಾಯ್ ಬೆಂಗಳೂರ್' ಪತ್ರಿಕೆಯಲ್ಲಿ ‘ಹೇಳಿ ಹೋಗು ಕಾರಣ’ ಧಾರಾವಾಹಿ ಬರುತ್ತಿತ್ತು. ಡಾಕ್ಟರಾಗಬೇಕೆಂದು ಬೀದಿಯಲ್ಲಿ ನಿಂತು ಕನಸು ಕಂಡ ಹುಡುಗಿ ಪ್ರಾರ್ಥನಾಳನ್ನು ಮಿಠಾಯಿ ಅಂಗಡಿ ಹುಡುಗ ಹಿಮವಂತ ಚನ್ನರಾಯಪಟ್ಟಣದಿಂದ ಶಿವಮೊಗ್ಗದವರೆಗೆ ನಡೆಸಿಕೊಂಡು ಬಂದಿದ್ದ. ಮನೆಯನ್ನು ತಿರಸ್ಕರಿಸಿ, ಹಿಮವಂತನೆಂಬ ಹುಡುಗನೆಡೆಗೆ ಅದ್ಯಾವುದೋ ನಂಬಿಕೆ ಇರಿಸಿ ಬರಿಗೈಯಲ್ಲಿ ಹೊರಟ ಅವಳ ಬಲಗಾಲ ಹೆಬ್ಬೆರಳಿಗೆ ಎಡವಿ ಗಾಯವಾಗಿತ್ತು. ಶಿವಮೂರ್ತಿ ಸರ್ಕಲ್ಲಿನ ಬಳಿಯ ಒಂದೇ ಕೋಣೆಯ ಹಿಮವಂತನ ಗೂಡಿನೊಳಗೆ ದಾಖಲಾದ ಹುಡುಗಿ ಬೆಳಗ್ಗೆ ಎದ್ದು, ಸ್ನಾನ ಮಾಡಿ ಬಂದು, ಪದ್ಮಾಸನ ಹಾಕಿ ಕುಳಿತು ‘ಯಾಕುಂದೇಂದು ತುಷಾರ ಹಾರ ಧವಳಾ..’ ಅಂತ ಪ್ರಾರ್ಥನೆ ಮಾಡುತ್ತಿದ್ದಳು. ಹಿಮವಂತನೆಡೆಗೆ ಅವಳಿಗೊಂದು ದೈವೀಕ ಪ್ರೀತಿಯಿತ್ತು. ಆರಾಧನೆಯಿತ್ತು. ನಿಷ್ಠೆಯಿತ್ತು.<br /><br />ಮತ್ತು ನನಗದು ಇಷ್ಟವಾಗಿತ್ತು! ಕಾಲೇಜಿನ ಹುಡುಗಿಯರಲ್ಲೆಲ್ಲಾ ಪ್ರಾರ್ಥನಾಳನ್ನು ಹುಡುಕುತ್ತಿದ್ದೆ. ಮನೆಗೆ ಬಂದು ಮತ್ತೆ ಪತ್ರಿಕೆ ತೆರೆದು ‘ಆ ಹುಡುಗಿ ಪ್ರಾರ್ಥನಾಳೊಂದಿಗೆ ಮ್ಯಾಚ್ ಆಗುತ್ತಾಳಾ?’ ಅಂತ ನೋಡುತ್ತಿದ್ದೆ. ಕಣ್ಣಲ್ಲಿ ಸಾತ್ವಿಕ ಚೆಲುವು, ನಗುವಿನಲ್ಲಿ ಸೌಮ್ಯ ಕಳೆ, ಒಂದೇ ಕೆನ್ನೆ ಮೇಲೆ ಗುಳಿ, ಹುಬ್ಬಿನಲ್ಲಿ ಕಾನ್ಫಿಡೆನ್ಸು, ಕೆಳತುಟಿ ಕೆಳಗಿನ ಮಚ್ಚೇಲಿ ಅಮಾಯಕತೆ! ಹಹ್! ಕೆನ್ನೆ ಮೇಲೆ ಗುಳಿ ಬೀಳೋ ಹುಡುಗಿಯರೇನೂ ಬಹಳ ಇದ್ದರು; ಆದರೆ ಈ ಮಚ್ಚೆ ಮಾತ್ರ ನಂಗೆ ಸಿಗಲೇ ಇಲ್ಲ! ಮತ್ತೆ ಇನ್ನುಳಿದ ಗುಣವಿಶೇಷಣಗಳನ್ನೆಲ್ಲಾ ಗುರುತಿಸುವುದು ಹೇಗೆಂದೇ ನನಗಾಗ ಗೊತ್ತಿರಲಿಲ್ಲ. ಹೀಗಾಗಿ, ನನ್ನ ಪ್ರಾರ್ಥನಾಳಂತಹ ಹುಡುಗಿಯ ಹುಡುಕಾಟ ಅವಿರತವಾಗಿಬಿಟ್ಟಿತು.<br /><br />ಆದರೆ, ಅಂತಹ-ಹಾಗಿದ್ದ ಪ್ರಾರ್ಥನಾ, ದಾವಣಗೆರೆಗೆ ಮೆಡಿಕಲ್ ಓದಲಿಕ್ಕೆಂದು ಹೋಗಿ, ಅವಳಿಗೆ ಹೊರ ಪ್ರಪಂಚದ ಪರಿಚಯ ಆಗಿ, ಮನಸು ಹಕ್ಕಿಯಾಗಿ, ದೇಬಶಿಶು ಎಂಬ ಬುದ್ಧಿವಂತ ಫ್ಲರ್ಟ್‌ನ ಮೋಹಕ್ಕೆ ಬೀಳುತ್ತಾಳೆ. ತನ್ನನ್ನೇ ಪ್ರಪಂಚವೆಂದು ಭಾವಿಸಿದ್ದ, ಕೇವಲ ತನಗಾಗಿಯೇ-ತನ್ನ ಕನಸುಗಳನ್ನು ಸಾಕಾರಗೊಳಿಸುವುದಕ್ಕಾಗಿಯೇ ದೂರದೂರಿನಲ್ಲಿ ಹಗಲೂ-ರಾತ್ರಿ ದುಡಿಯುತ್ತಿದ್ದ ಹಿಮವಂತನಿಗೆ ವ್ಯವಸ್ಥಿತವಾಗಿ ಮೋಸ ಮಾಡುವ ಸಂಚು ಹೂಡುತ್ತಾಳೆ. ದೇಬುವಿನ ರೂಪ, ಬುದ್ಧಿ, ಶ್ರೀಮಂತಿಕೆಗಳ ಮುಂದೆ ಹಿಮವಂತ ಏನೂ ಅಲ್ಲ ಅಂತ ಅನ್ನಿಸುತ್ತದೆ. ‘ಹಿಮವಂತ ದೇವರಂಥವನು, ನಿಜ. ಆದರೆ ದೇವರನ್ನು ಯಾರಾದರೂ ಪ್ರೀತಿಸಲಿಕ್ಕೆ-ಮದುವೆಯಾಗಲಿಕ್ಕೆ ಆಗುತ್ತದಾ?’ ಅಂತ ತನ್ನ ತೀರ್ಮಾನವನ್ನು ಸಮರ್ಥಿಸಿಕೊಳ್ಳುತ್ತಾಳೆ. ಕೊನೆಗೆ ಕಾದಂಬರಿ ಏನೇನೋ ಆಗಿ ಮುಗಿಯುತ್ತದೆ.<br /><br />ಈ ಮಧ್ಯೆ, ನನ್ನ ರಾತ್ರಿಯ ಕನಸುಗಳ ರ್ಯಾಂಪಿನ ಮೇಲೆ, ಕಾಲೇಜಿನ ಒಬ್ಬೊಬ್ಬ ಹುಡುಗಿಯೂ ತುಟಿ ಕೆಳಗೆ ಕಾಡಿಗೆಯಿಂದ ಕಪ್ಪು ಚುಕ್ಕಿ ಇಟ್ಟುಕೊಂಡು, ಮುಖಕ್ಕೆ ಫೇರೆಂಡ್ ಲವ್ಲೀ ಹಚ್ಚಿ ತಿಕ್ಕಿ ‘ಕಳೆ’, ‘ಸಾತ್ವಿಕ ಚೆಲುವು’ ಎಲ್ಲಾ ಹೆಚ್ಚಿಸಿಕೊಂದು, ಹುಬ್ಬಿನಲ್ಲಿ ಕಾನ್ಫಿಡೆನ್ಸಿನಂತಹದೇ ಏನನ್ನೋ ಕುಣಿಸುತ್ತಾ ಬಂದು ‘ಯಾಕುಂದೇಂದು..’ ಹೇಳಿ ಹೋಗುತ್ತಿದ್ದಳು. ಬಹುಶಃ ಆ ದಿನಗಳಲ್ಲಿ ನನ್ನನ್ನು ನಾನು ಹಿಮವಂತ ಅಂತ ಬಲವಾಗಿ ಕಲ್ಪಿಸಿಕೊಂಡಿದ್ದೆನಿರಬೇಕು! ಯಾವಾಗ ಪ್ರಾರ್ಥನಾ ಹಿಮವಂತನಿಗೆ ಮೋಸ ಮಾಡುವುದು ಖಚಿತ ಆಯಿತೋ, ಆ ಕನಸುಗಳೆಲ್ಲಾ ಸಡನ್ನಾಗಿ ಬಂದ್ ಆಗಿ ನಿದ್ರೆ ಖಾಲಿ ಹೊಡೆಯತೊಡಗಿತು.<br /><br />[<span style="font-style: italic;">ಪ್ರಕಟ: ವಿಜಯ ಕರ್ನಾಟಕ ಸಾಪ್ತಾಹಿಕ. ಟಾಪಿಕ್: Crush at a novel character.</span>]<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-3598924681940378178?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com14tag:blogger.com,1999:blog-27009232.post-76837283647119465302009-06-04T11:28:00.002+05:302009-06-04T11:33:31.974+05:30ನೀತಿಮೊಟ್ಟೆಯೊಡೆದು ಹೊರಬಂದರೂ<br />ಚಿಪ್ಪಿನೊಳಗೆ ತೂರಿಕೊಳ್ಳುವ ಸವಲತ್ತು<br />ಸುಸ್ತಾದರೆ, ನಾಚಿಕೆಯಾದರೆ,<br />ನಿದ್ರೆ ಬಂದರೆ ಅಥವಾ ಬಂದರೆ ಆಪತ್ತು.<br /><br />ಏಕೆ ಅರ್ಥವೇ ಆಗುವುದಿಲ್ಲ ನಿನಗೆ..?<br />ನನ್ನ ಕನಸುಗಳನ್ನು ನೀನೂ<br />ಕಾಣಬಲ್ಲೆಯಾದರೆ ಮಾತ್ರ<br />ನೀನು ನನ್ನವನು. ನಾವು ಒಂದು.<br /><br />ಇಷ್ಟಕ್ಕೂ ಮೊಲದೊಂದಿಗೆ ನನಗೀಗ<br />ಸ್ಪರ್ಧೆಯೇ ಇಲ್ಲ. ಗೆದ್ದಾಗಿದೆ ಎಂದೋ.<br />ಮೊಲಕ್ಕೂ ಈಗ ಬುದ್ಧಿ ಬಂದಿದೆ;<br />ಹಾಗೆಲ್ಲ ನಿದ್ದೆ ಮಾಡುವುದಿಲ್ಲ.<br /><br />ಇಬ್ಬರ ಭಾವವೂ ಒಂದಾಗಿದ್ದಾಗಷ್ಟೇ<br />ಸಂಯೋಜಿಸಬಲ್ಲೆ ನನ್ನ ಹಾಡಿಗೆ ನೀನು<br />ಸರಿ ಹೊಂದುವ ರಾಗ. ಎಲ್ಲೋ,<br />ಅಪರೂಪಕ್ಕೆ ಸಿಗುತ್ತದೆ ಇಂತಹ ಯೋಗ.<br /><br />ಆಕಾಶದಲ್ಲಿದ್ದಾಗ ನೀನು<br />ಜನ ನಕ್ಕರೆಂದು ಸಿಡುಕಿ<br />ಕೆಳಗುರುಳಿದರೆ ಬಿಟ್ಟು ಕಚ್ಚಿದ ಕೊಕ್ಕೆ-<br />ಪಾಪ, ತಪ್ಪು ಹೊತ್ತೊಯ್ದ ಹಕ್ಕಿಗಳದಲ್ಲ.<br /><br />ಎರಡು ಚಿಪ್ಪುಗಳನ್ನು ಒಂದಾಗಿಸಿದರೆ<br />ಅದೊಂದು ಗೋಲ. ಇರಬಹುದು ಒಳಗೆ ಸೆಖೆ.<br />ಸಹಿಸಬೇಕು ಮುತ್ತಾಗುವಾಗ ಹನಿ;<br />ಕಾಯಬೇಕು ಜೀವ ಬರುವವರೆಗೂ ಹೊರಗೆ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7683728364711946530?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com19tag:blogger.com,1999:blog-27009232.post-28779796087498658682009-05-29T12:45:00.002+05:302009-05-29T15:18:05.526+05:30ದೇವದಾಸನನ್ನ ಕನಸುಗಳ ಲಲಾಟದಲ್ಲಿ<br />ಹುಟ್ಟುವಾಗಲೇ ಸಾವಿನ ಷರಾ<br />ಬರೆದಿರುತ್ತದೆ.<br />ಸತ್ತಾಗ ಆಗುವ ಶೋಕಕ್ಕೆ<br />ಒಂದು ಸಿಗರೇಟು ಸಾಕು.<br />ಸುಟ್ಟು ಉಳಿಯುವ ಅದರ<br />ಚಿತೆಯ ಬೂದಿಗೆ ಕಣ್ಣೀರ ಹನಿಗಳು ಸೇರಿ<br />ಹೊಸ ಚಿಗುರು ಒಡೆಯುತ್ತದೆ.<br />ಬೂದಿಯಿಂದ ಅರಳಿದ ಬಳ್ಳಿ<br />ಬೂದುಗುಂಬಳವಾಗಿ ಬೀದಿಯ ಜನವೆಲ್ಲ<br />ಬಿದ್ದೂ ಬಿದ್ದು ನಗುತ್ತಿದ್ದರೆ, ಈ<br />ಕಾಯಿಯನ್ನೇ ನೆಚ್ಚಿ ಇನ್ನೂ ತಬ್ಬಿ ಕುಳಿತಿರುವ ನಾನು<br />ಮದಿರೆಯ ನಶೆಯ ಜತೆ ನಿಧನಿಧಾನವಾಗಿ ಬಾಡಿ<br />ಕುಂಬಳದೊಂದಿಗೇ ಕೊಳೆತು<br />ಇಲ್ಲವಾಗುತ್ತೇನೆ.<br /><br />ನನ್ನ ಹೃದಯದ ಒಳಗೆ<br />ಕನ್ನೆಯಾಗಿಯೆ ಇದ್ದ ಇನ್ನೆಷ್ಟೊ ಕನಸುಗಳು<br />ಕಮ್ಮಗರಳಿರೆ ಮೊಳಕೆ, ಅಣಿ-<br />ಬ್ರಹ್ಮಲಿಪಿ ಬರೆಯಲು ಅದೆಷ್ಟೊಂದು ಕೈಗಳು!<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-2877979608749865868?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com11tag:blogger.com,1999:blog-27009232.post-70111265680573449252009-05-20T21:33:00.002+05:302009-05-29T12:54:30.358+05:30ರಿಂಗ್‌ರೋಡುಎಲ್ಲ ರಸ್ತೆಗಳೂ ನಗರಿಯ<br />ಕಣ್ಣು ಮೂಗು ಎದೆ ಹೊಕ್ಕುಳು ತೊಡೆ<br />ಸಂದಿ ಗೊಂದಿಗಳನ್ನು ಹೊಕ್ಕು ಹಾದು<br />ಹೋಗುತ್ತಿದ್ದರೆ ಇದು ಮಾತ್ರ ಹೊರಗೇ<br />ಉಳಿದಿದೆ. ಇಡೀ ನಗರಿಯನ್ನೇ<br />ತನ್ನ ಬಾಹುಗಳಿಂದ ಬಳಸಿ ನಿಂತಿದೆ.<br /><br />ಇಲ್ಲಿ, ಇಲ್ಲಿಂದ ಹೊರಟರೆ ಇಲ್ಲಿಗೇ ಬರಬಹುದು..<br /><br />ದಾರಿ ತಪ್ಪಿಸುವವರೇ ಹೆಚ್ಚಿರುವ ಈ ಊರಿನಲ್ಲಿ<br />ತಪ್ಪು ದಾರಿ ಹಿಡಿದರೂ ಮರಳಿ ಅಲ್ಲಿಗೇ ತಂದು<br />ಬಿಡುವ ಪುಣ್ಯಾತ್ಮ ಈ ರಸ್ತೆ.<br /><br />ಮನೆಯಲ್ಲಿ ಅಮ್ಮ ಹೇಳಿ ಕಳುಹಿಸಿದ್ದಳು,<br />ಹಾಗೆ ಅಂತಹ ಒಳ್ಳೆಯವರ ಸಂಗ ಮಾಡು ಎಂದು..<br /><br />ಆದರೆ ನನಗೆ ಜಯನಗರದಿಂದ ರಾಜಾಜಿನಗರಕ್ಕೆ<br />ಹೋಗಬೇಕಿದೆ,<br />ರಿಂಗ್‌ರೋಡು ಹಿಡಿದರೆ ಪ್ರಯೋಜನವಿಲ್ಲ.<br />ಎಂಜಿ ರೋಡಿನಲ್ಲಿ ಹೋದವರ್ಯಾರೂ ಮಹಾತ್ಮರಾಗಿಲ್ಲ;<br />ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಅಡ್ಡಾಡಿದವರು ದೊರೆಗಳಾಗಿಲ್ಲ.<br /><br />ನಾಗರೀಕನಾಗ ಬಂದವನಿಗೆ ದಾರಿ ತಪ್ಪಿದರೂ ಚಿಂತಿಲ್ಲ;<br />ಹೊಸ ದಾರಿ ಸಿಕ್ಕಂತಾಗುತ್ತದೆ..<br />ಇದೇ-ಇಂಥದೇ ದಾರಿಯಲ್ಲಿ ಹೋಗಬೇಕೆನ್ನುವ ತಲೆಬಿಸಿಯೆಲ್ಲಾ<br />ಗುರಿಯಿದ್ದವನಿಗೆ.. ಅನಿಕೇತನನಿಗೆ ಯಾವ ದಾರಿಯಾದರೂ<br />ಆದೀತು: ರಿಂಗ್‌ರಸ್ತೆಯೊಂದನ್ನು ಬಿಟ್ಟು.<br /><br />ತೀರಾ ತಪ್ಪಿಯೇ ಹೋದರೆ ದಾರಿ, ಮೆಜೆಸ್ಟಿಕ್ಕಿಗೆ ಹೋದರಾಯಿತು:<br />ಅಲ್ಲಿಂದ ಬದುಕನ್ನೇ ಪುನರಾರಂಭಿಸಬಹುದು.<br />ಗುಟ್ಟು: ಮೆಜೆಸ್ಟಿಕ್ಕಿಗೆ ರಿಂಗ್‌ರೋಡ್ ಇಲ್ಲ!<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7011126568057344925?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com18tag:blogger.com,1999:blog-27009232.post-12654989175632871282009-05-06T14:58:00.002+05:302009-05-29T13:23:31.172+05:30ಗುಬ್ಬಚ್ಚಿ ಗೂಡಿನಲ್ಲಿ ಕದ್ದುಮುಚ್ಚಿ..<span style="color: rgb(0, 102, 0);">ಜಯಂತ್ ಬರೆದಿದ್ದರು ಒಮ್ಮೆ: "ನಗರಗಳಲ್ಲಿ ಊಳಿಗ ಮಾಡಿಕೊಂಡಿರುವ ಏಕಾಕಿ ಜೀವಿಗಳು ಹೆದರುವುದು ಯಾವುದಕ್ಕೆ? ಇದ್ದಕ್ಕಿದ್ದಂತೆ ಎದ್ದೇಳುವ ಕೋಮು ಗಲಭೆ, ಲಾಕೌಟ್, ಬಂದ್, ಕರ್ಫ್ಯೂಗಳಿಗೇ? ಊಹೂಂ, ಅದಕ್ಕೆಲ್ಲ ಅವರು ಹೆದರುವುದಿಲ್ಲ. ಹೋಟೆಲುಗಳೆಲ್ಲ ಮುಚ್ಚಿದ್ದರೆ ರಸ್ತೆಬದಿಯ ಶೇಂಗಾ ತಿಂದು ನೀರು ಕುಡಿದು ಬದುಕಿರಬಲ್ಲರು ಅವರು. ಊರಿನ ವಿಳಾಸದಿಂದ ಬರುವ ಹಠಾತ್ ಟೆಲಿಗ್ರಾಮುಗಳಿಗೆ? ಊಹುಂ, 'ತಂದೆ ತೀರಿಕೊಂಡಿದಾನೆ, ಹೊರಡು', 'ಅಮ್ಮನಿಗೆ ಸೀರಿಯಸ್, ಹೊರಡು' ಇಂತಹ ತಂತಿಗಳನ್ನು ಆತ ಊಹಿಸಿ ಊಹಿಸಿಯೇ ಗಟ್ಟಿಯಾಗಿಬಿಟ್ಟಿರುತ್ತಾನೆ. ರಸ್ತೆಯಲ್ಲೆದುರಾಗುವ ಆಕ್ಸಿಡೆಂಟ್‍ನಲ್ಲಿ ಸತ್ತ ಅನಾಥ ಶವಗಳನ್ನು ಕಂಡಾಗಲೇ? ಊಹುಂ, ನಿತ್ಯ ಕಾಣುವ ಇಂತಹ ದೃಶ್ಯಗಳನ್ನು ನೋಡೀ ನೋಡಿ ಆತ ತನ್ನ ಸಾವೂ ಇಂಥದ್ದರಲ್ಲೇ ಆಗೋದು ಅಂತ ಯಾವತ್ತೋ ಮನಸಿಗೆ ಹೇಳಿಕೊಂಡುಬಿಟ್ಟಿರುತ್ತಾನೆ. ಹೆದರುವುದಿಲ್ಲ.</span><br /><br /><span style="color: rgb(0, 102, 0);">ಹಾಗಾದರೆ ದೂರದೂರಿನಿಂದ ಬಂದು ನಗರದಲ್ಲಿ ಅಡ್ನಾಡಿ ಬದುಕು ಬಾಳಿಕೊಂಡಿರುವ ಈ ಮನುಷ್ಯ ಏನಕ್ಕೂ ಹೆದರುವುದೇ ಇಲ್ಲವೇ? ಇಲ್ಲ, ಆತ ಸಹ ಹೆದರುತ್ತಾನೆ. ಕೇವಲ ಒಂದೇ ವಿಷಯಕ್ಕೆ: ಕಾಯಿಲೆ ಬೀಳುವುದಕ್ಕೆ! ನಿಜ, ಕಾಯಿಲೆ ಬೀಳುವ ಕಲ್ಪನೆಗೆ ಸಹ ಆತ ಭಯದಿಂದ ಕಂಪಿಸಬಲ್ಲ. ಹೇಳುವವರಿಲ್ಲದ ಕೇಳುವವರಿಲ್ಲದ ಈ ಕುರೂಪಿ ನಗರಿಯಲ್ಲಿ ಕಾಯಿಲೆ ಬೀಳುವುದಕ್ಕಿಂತ ದೊಡ್ಡ ಯಾತನೆ ಮತ್ತೊಂದಿಲ್ಲ. ಇಡೀ ಜಗತ್ತೇ ತನ್ನನ್ನು ಬಿಟ್ಟು ಮುಂದೆ ಸಾಗಿದಂತೆನಿಸುತ್ತದೆ. ಯಾರಿಗೂ ಅವನ ಕೈ ಹಿಡಿದು ಆಸ್ಪತ್ರೆಗೆ ಕರೆದೊಯ್ಯುವ ದರ್ದಿಲ್ಲ. ಯಾರೂ ಅವನಿಗೆ ಗಂಜಿ ಬೇಯಿಸಿ ಹಾಕುವುದಿಲ್ಲ. ಯಾರೂ ಪಕ್ಕದಲ್ಲಿ ಕೂತು ಹಣೆಗೆ ಒದ್ದೆ ಬಟ್ಟೆ ಹಾಕಿ ತೆಗೆಯುವುದಿಲ್ಲ. ಕಾಯಿಲೆ ಬಿದ್ದ ಏಕಾಂಗಿ ಮನುಷ್ಯನಷ್ಟು ನತದೃಷ್ಟ ವ್ಯಕ್ತಿ ಶಹರದಲ್ಲಿ ಮತ್ಯಾರೂ ಇಲ್ಲ.."</span><br /><br /><span style="color: rgb(0, 102, 0);">ಮೊನ್ನೆ ಜ್ವರದ ಕಣ್ಣಲ್ಲಿ ಇದನ್ನು ಮತ್ತೆ ಓದುವಾಗ ಎಷ್ಟೊಂದು ಹೌದು ಹೌದು ಅನ್ನಿಸಿತು.. ಕಣ್ಣು ಸಹ ಬಿಡಲಾಗದಷ್ಟು ಜೋಂಪು. ಭಾರ ತಲೆ. ಮಂಪರು. ಎದ್ದು ಹೋಗಿ ಒಂದು ಲೋಟ ನೀರು ಕುಡಿಯೋಣವೆಂದರೆ ಇದೇನಿದು ಏಳಲಿಕ್ಕೇ ಆಗುತ್ತಿಲ್ಲ..? ಆಫೀಸಿಗೆ ಫೋನ್ ಮಾಡಿ ಬರಲಾಗುತ್ತಿಲ್ಲ ಎಂದರೆ "ನಿನ್ನೆ ಆರಾಮಾಗೇ ಇದ್ರಲ್ಲ, ಅದು ಹೇಗೆ ಇದ್ದಕ್ಕಿದ್ದಂಗೆ ಜ್ವರ ಬಂತು?" -ಸಂಶಯದ ಪ್ರಶ್ನೆ. ಹೌದು ಸಾರ್, ನಂಗೂ ಗೊತ್ತಿಲ್ಲ. ಆದರೆ ಜ್ವರ ಬಂದಿದೆ. ಸುಳ್ಳು ಹೇಳ್ತಿಲ್ಲ ಸಾರ್. ಬರಲಿಕ್ಕೆ ಆಗಲ್ಲ. ಲೀವ್ ಬೇಕು. ಅಯ್ಯೋ, ಯಾಕೆ ಅರ್ಥವೇ ಆಗ್ತಿಲ್ಲ ನಾನು ಹೇಳ್ತಿರೋದು? </span><br /><br /><span style="color: rgb(0, 102, 0);">ಛೇ, ಇವತ್ತೇ ಯಾಕೆ ಇಷ್ಟೊಂದು ಕ್ಲೈಂಟ್ ಕಾಲ್‌ಗಳು? ಯಾರು ಇವರಿಗೆಲ್ಲ ನನ್ನ ಮೊಬೈಲ್ ನಂಬರ್ ಕೊಟ್ಟಿದ್ದು? ಯಾವಾಗಲೂ ತಡವಾಗಿ ಹೋಗುವ ರೂಂಮೇಟ್ ಇವತ್ತೇ ಯಾಕೆ ಬೇಗ ಹೋದ ಆಫೀಸಿಗೆ? ಕಷ್ಟ ಪಟ್ಟು ಎದ್ದು ಹೋಗಿ ಎರಡು ಲೋಟ ನೀರು ಕುಡಿಯುತ್ತೇನೆ.. ಸ್ವಲ್ಪ ಚೈತನ್ಯ ಬಂದಂತೆನಿಸುತ್ತದೆ.. ಬೇಕರಿಗೆ ಹೋಗಿ ಬ್ರೆಡ್-ಜಾಮ್ ತಂದುಕೊಳ್ಳುತ್ತೇನೆ. ಹಸಿವೆನಿಸಿದರೂ ಎರಡು ಬ್ರೆಡ್ ಮೇಲೆ ತಿನ್ನಲಿಕ್ಕೇ ಆಗುತ್ತಿಲ್ಲವಲ್ಲ, ಏನಾಗಿದೆ ನನಗೆ? ಕಾಫಿ ಕುಡಿಯಬೇಕು. ಸ್ಟ್ರಾಂಗ್ ಕಾಫಿ. ಥೂ, ಕಹಿ ಕಹಿ. ಇಲ್ಲೇ ಇಟ್ಟಿದ್ದೆನಲ್ಲ ಕ್ರೋಸಿನ್ ಸ್ಟ್ರಿಪ್ಪು, ಎಲ್ಲಿ ಹೋಯ್ತು? ನುಂಗಿ ಬೆಚ್ಚಗೆ ಹೊದ್ದು ಮಲಗಿದರೆ ಮಧ್ಯಾಹ್ನದೊಳಗೆ ಎಲ್ಲಾ ವಾಸಿಯಾಗುತ್ತೆ.</span><br /><br /><span style="color: rgb(0, 102, 0);">ಎಷ್ಟೋ ಹೊತ್ತಿನ ಮೇಲೆ ಎಚ್ಚರಾಗೊತ್ತೆ.. ಎಲ್ಲಿದ್ದೇನೆ ನಾನು? ಏನಾಗಿದೆ ನನಗೆ? ಸಮಯವೆಷ್ಟು ಈಗ? ಆಂ, ನಾಲ್ಕೂವರೆಯೇ? ಆಗಲೇ ಸಂಜೆಯಾಯಿತಾ? ಮೈಯೇಕೆ ಹೀಗೆ ಸುಡುತ್ತಿದೆ ಇನ್ನೂ? ಥರ್ಮಾಮೀಟರ್ ಎಲ್ಲಿ? ಏನೂ, ನೂರಾಮೂರು ಡಿಗ್ರಿಯಾ? ಛೇಛೆ, ಕಣ್ಣೇ ಮಂಜಾಗಿರಬೇಕು ನನಗೆ..</span><br /><br /><span style="color: rgb(0, 102, 0);">ನಾಲ್ಕು ದಿವಸಗಳಾಗಿವೆ.. ಎರಡು ಬಾರಿ ಡಾಕ್ಟರ್ ಬಳಿ ಹೋಗಿ ಬಂದದ್ದಾಯ್ತು. ಇಂಜೆಕ್ಷನ್ ಬೇಡ, ಟ್ಯಾಬ್ಲೆಟ್ಸಲ್ಲೇ ಗುಣ ಆಗುತ್ತೆ, ವೈರಲ್ ಫೀವರ್ ಎಂದಿದ್ದರು ಡಾಕ್ಟರು. ಆದರೆ ಇದ್ಯಾಕೋ ನನಗೆ ಹುಷಾರಾಗುವ ಲಕ್ಷಣವೇ ಕಾಣುತ್ತಿಲ್ಲ.. ರೂಂಮೇಟು ಪಾಪ ಕಾದಾರಿದ ನೀರು ಕುಡಿ ಅಂತ ಕಾಯಿಸಿಟ್ಟು ಹೋಗಿದ್ದಾನೆ. ತಿಳಿಸಾರು, ಮೆತ್ತನೆ ಅನ್ನ ಮಾಡಿಕೊಟ್ಟಿದ್ದಾನೆ. ಗಂಜಿ ಬೇಕು ಎಂದರೆ ಕುಕ್ಕರನ್ನು ಐದು ಸಲ ಕೂಗಿಸಿದ್ದಾನೆ. ಮನೆಯಲ್ಲಿ ಒಬ್ಬನೇ ಭೂತದ ಥರ ಮಲಗಿಕೊಂಡಿದ್ದೇನೆ. ಯಾವುದಾದರೂ ಪುಸ್ತಕವನ್ನಾದರೂ ಓದೋಣವೆಂದರೆ ಅದನ್ನು ಹಿಡಿದುಕೊಳ್ಳಲೂ ತ್ರಾಣವಿಲ್ಲ. ಸ್ವಲ್ಪ ಓದುವಷ್ಟರಲ್ಲೇ ಸುಸ್ತು ಸುಸ್ತು. ಮನೆಗೆ ಇನ್ನೂ ಹೇಳಿಲ್ಲ. ಹೇಳಿದರೆ ಟೆನ್ಷನ್ ಮಾಡಿಕೊಳ್ಳುತ್ತಾರೆ. "ಈಗ್ಲೇ ಕಳುಸ್ತೀನಿ ಅಮ್ಮನ್ನ" ಅಂತಾನೆ ಅಪ್ಪ. ಬೇಡ, ಇನ್ನೂ ಒಂದೆರಡು ದಿನ ನೋಡೋಣ; ಹಾಗೇ ಆರಾಮಾಗಬಹುದು. ಒಂದಿಬ್ಬರು ಫ್ರೆಂಡ್ಸು ಬಂದು ನೋಡಿಕೊಂಡು ಹೋಗಿದ್ದಾರೆ. "ಗ್ಲುಕೋಸು, ಎಳನೀರು ಅಥ್ವಾ ಜ್ಯೂಸು ಕುಡೀತಿರು, ಅದಿಲ್ಲಾಂದ್ರೆ ಲಿಕ್ವಿಡ್ ಕಂಟೆಂಟ್ಸ್ ಇಲ್ದೇ ಡಿಹೈಡ್ರೇಷನ್ ಆಗುತ್ತೆ" ಎಂದಿದ್ದಾನೆ ಕಲೀಗು ಫೋನಿನಲ್ಲಿ. ಹೌದು, ವಿಪರೀತ ಬಾಯಾರಿಕೆ. ಹೀಟು. ಈ ಪರಿ ಡಜನ್‍ಗಟ್ಟಲೆ ಮಾತ್ರೆ ತಿಂದರೆ ಮತ್ತಿನ್ನೇನಾಗತ್ತೆ? </span><br /><br /><span style="color: rgb(0, 102, 0);">ಬಹುಶಃ ನನಗೆ ಜ್ವರ ಬಂದು ಏಳೆಂಟು ದಿನಗಳೇ ಆಗಿವೆ.. ಆಫೀಸಿಗೆ ಹೊರಟ ರೂಂಮೇಟು ಎಬ್ಬಿಸುತ್ತಿದ್ದಾನೆ: "ಏಯ್ ಏಳು.. ಏಳು ಸಾಕು.. ಇದ್ಯಾಕೋ ಟೈಫಾಯ್ಡಿಗೆ ಎಳೆಯೋ ಹಾಗಿದೆ. ಮೊದಲು ಹೋಗಿ ಬ್ಲಡ್ಡು, ಯೂರಿನ್ನು ಟೆಸ್ಟ್ ಮಾಡ್ಸೋಣ, ನಡಿ.." ಥೂ, ಈ ಆಟೋ ಯಾಕೆ ಹೀಗೆ ಕುಲುಕಾಡುತ್ತೆ? ಸಿರಿಂಜ್ ಚುಚ್ಚಿ ರಕ್ತವನ್ನು ಎಳೆದುಕೊಳ್ಳುತ್ತಿದ್ದಾರೆ ಸರ್ಜನ್.. ರಿಪೋರ್ಟು ಮಧ್ಯಾಹ್ನ ಸಿಗುತ್ತೆ ಅಂತಿದಾರೆ.. ಅಲ್ಲಿಯವರೆಗೆ ನಾನೇನು ಮಾಡಲಿ? ಇಲ್ಲೇ ಬೆಂಚಿನ ಮೇಲೆ ಮಲಗಿರಲಾ? "ಇದು ಪ್ಯಾರಾಟೈಫಾಯ್ಡ್. ತುಂಬಾನೇ ನಿಶ್ಯಕ್ತಿ ಆಗಿದೆ ನಿಮಗೆ. ಡ್ರಿಪ್ ಹಾಕ್ಬೇಕು. ಅಡ್ಮಿಟ್ ಆಗಿಬಿಡಿ ಈಗಲೇ" ಕನ್ನಡಕದ ಡಾಕ್ಟರು ಒಂದೇ ಸಮನೆ ಮಾತಾಡುತ್ತಿದ್ದಾರೆ. ಅಯ್ಯೋ ಬೇಡ ಡಾಕ್ಟ್ರೇ.. ಇಲ್ಲಿ ನಾನು ಅಡ್ಮಿಟ್ ಆಗಲ್ಲ.. ನನ್ನ ನೋಡ್ಕೊಳ್ಳೋರು ಯಾರೂ ಇಲ್ಲ.. ನಾನು ಊರಿಗೆ ಹೋಗ್ತೇನೆ.. ಬೇಕಾದ್ರೆ ಅಲ್ಲೇ ಯಾವುದಾದರೂ ಹಾಸ್ಪಿಟಲ್‍ಗೆ ಹೋಗ್ತೇನೆ.. ಊರಿಗೆ ಹೋದರೆ ಸಾಕು, ಅಮ್ಮನ ಕೈತುತ್ತೂಟ ಉಂಡರೆ ಎಲ್ಲ ಆರಾಮಾಗುತ್ತೆ.. ನನ್ನ ಬಿಟ್ಬಿಡಿ ಈಗ..</span><br /><br /><span style="color: rgb(0, 102, 0);">ಮನೆಗೆ ಫೋನ್ ಮಾಡಿ ಹೇಳ್ತಿದ್ದೇನೆ.. "ಯಾಕೆ ಇಷ್ಟೆಲ್ಲ ಆದ್ರೂ ಹೇಳ್ಲಿಲ್ಲ ನಮಗೆ? ನಾವೆಲ್ಲಾ ಇರೋದು ಏನಕ್ಕೆ? ಈಗ ಒಬ್ನೇ ಹ್ಯಾಗೆ ಬರ್ತೀಯಾ?" ಇಲ್ಲಮ್ಮಾ, ಸ್ಲೀಪರ್ ಕೋಚ್ ಬಸ್ಸು.. ಊರಿಗೆ ಹೋಗೋರು ಯಾರಾದ್ರೂ ಇದ್ದೇ ಇರ್ತಾರೆ.. ಅಪ್ಪಂಗೆ ಬಸ್‍ಸ್ಟಾಂಡ್ ಹತ್ರ ಬರ್ಲಿಕ್ಕೆ ಹೇಳು ಅಷ್ಟೇ.. ಏನು ಭಯ ಬೇಡ.. </span><br /><br /><span style="color: rgb(0, 102, 0);">ನಾನು ಹೋಗುವಷ್ಟರಲ್ಲೇ ನನಗೆ ಟೈಫಾಯ್ಡ್ ಆಗಿರುವುದು ಊರಿಗೆಲ್ಲ ಸುದ್ದಿಯಾಗಿಬಿಟ್ಟಿದೆ! ಎಲ್ಲರೂ ಕೇಳುವವರೇ: ಜ್ವರನಂತೆ? ಈಗ ಹೇಗಿದೆ? ತುಂಬಾ ಕೇರ್ ತಗೋಬೇಕು.. ಖಾರದ ಪದಾರ್ಥ ಸ್ವಲ್ಪಾನು ತಿನ್ಬೇಡ.. ಛೇ ಪಾಪ, ಒಂದು ವಾರದಲ್ಲಿ ಹೆಂಗೆ ತೆಳ್ಳಗಾಗಿ ಹೋಗಿದೀಯ ನೋಡು.. "ಮದ್ದಾಲೆ ಚಕ್ಕೆ ಕಷಾಯ ಮಾಡಿಕೊಡಿ ಅವಂಗೆ, ಎಂಥಾ ಜ್ವರ ಇದ್ರೂ ಎರಡೇ ದಿನದಲ್ಲಿ ಓಡಿಹೋಗುತ್ತೆ.. ನಮ್ಮನೆ ಸರೋಜಂಗೆ ಅದ್ರಲ್ಲೇ ಹುಶಾರಾಗಿದ್ದು" ಗಣಪತಿ ಭಟ್ಟರು ಸಲಹೆ ಕೊಡುತ್ತಿದ್ದಾರೆ. ಅಮ್ಮನಿಗಂತೂ ಉಪಚಾರ ಮಾಡಿದಷ್ಟೂ ಸಾಕಾಗ್ತಿಲ್ಲ.. ರವೆಗಂಜಿ ಮಾಡ್ಕೊಡ್ಲಾ? ಬಾರ್ಲಿ ನೀರು ಬತ್ತಿಸಿದ್ದಿದೆ ಕುಡೀತೀಯಾ? ಇವತ್ತು ಮಧ್ಯಾಹ್ನದ ಅಡುಗೆಗೆ ಏನು ಮಾಡ್ಲಿ? ಒಂದೆಲಗನ ತಂಬುಳಿ ಪರ್ವಾಗಿಲ್ವಾ? ಇಲ್ಲೇ ಹಾಲಲ್ಲಿ ಮಲ್ಕೋ.. ರೂಮಲ್ಲಿ ಸೆಖೆ ಅಂದ್ರೆ ಸೆಖೆ. </span><br /><br /><span style="color: rgb(0, 102, 0);">ಆ ಕಡೆ ಈ ಕಡೆ ಶತಪತ ಮಾಡುವ ಅಪ್ಪ. ಪಿಸುಗಣ್ಣೀರು ಹಾಕುವ ಅಜ್ಜ. ಬರೀ ಗಲಾಟಿ ಮಾಡುವ ಬೇಸಿಗೆ ರಜೆಗೆ ಬಂದಿರುವ ನೆಂಟರ ಮಕ್ಕಳು. ಒಂದೇ ಸಮನೆ ರಿಂಗಾಗುವ ಫೋನು. ಬೆಂಕಟವಳ್ಳಿಯಿಂದ ಮಾವನಂತೆ.. ನಾನು ಈಗ ಹೇಗಿದ್ದೀನಿ ಅಂತ ಕೇಳೋಕೆ ಮಾಡಿದ್ದಂತೆ. ಅತ್ತೆ ನಾಳೆ ಬರ್ತಿದ್ದಾಳಂತೆ. ನನ್ನ ನೋಡಿಕೊಂಡು ಹೋಗಲಿಕ್ಕೆ. ಛೇ! ನಂಗೇನು ಮಾರಣಾಂತಿಕ ಕಾಯಿಲೆ ಬಂದಿದೆಯೇನಪ್ಪಾ? ಜ್ವರ ಅಷ್ಟೇ. ಯಾಕೆ ಈ ಆಪ್ತೇಷ್ಟರಿಗೆ ಈ ಪರಿ ಕಾಳಜಿ? ಕನಸಿನಲ್ಲಿ ಯಾರೋ ಹೇಳುತ್ತಿದ್ದಾರೆ: ಅದು ಹಾಗಲ್ಲ, ನೀನು ಆರಾಮಾಗಿದ್ದಾಗ ಯಾರೂ ಬಾರದೇ ಇದ್ರೂ ನಡೆಯುತ್ತೆ, ಆದರೆ ತೊಂದರೇಲಿ ಇದ್ದಾಗ ಬಂದು ವಿಚಾರಿಸಿಕೊಂಡು ಹೋಗಬೇಕು.. ಅದೇ ನಿಯಮ.. ಸ್ನೇಹ, ಬಂಧುತ್ವ, ನೆರೆಹೊರೆ ಅಂದರೆ ಅದು.. ಕಷ್ಟದಲ್ಲಿದ್ದಾಗ ನೆರವಾಗೋದು. ನಗರಗಳಲ್ಲಿ ಅದೆಲ್ಲ ಇಲ್ಲ. ನೀನು ವಾರಗಟ್ಟಲೆ ಮಲಗಿದ್ರೂ ಅಕ್ಕಪಕ್ಕದ ಮನೆಯ ಒಬ್ಬರಾದ್ರೂ ಬಂದು ಕೇಳಿದ್ರಾ- ಯಾಕಪ್ಪಾ ಏನಾಗಿದೆ ಯಾಕೆ ಆಫೀಸಿಗೆ ಹೋಗ್ತಿಲ್ಲ ಅಂತ? ಅಲ್ಲಿ ಜನಗಳಿಗೆ ಮನುಷ್ಯತ್ವವನ್ನು ಪ್ರಕಟಿಸಲಿಕ್ಕೆ ಸಮಯವೂ ಇಲ್ಲ; ಪ್ರಜ್ಞೆಯೂ ಇಲ್ಲ.</span><br /><br /><span style="color: rgb(0, 102, 0);">"ಥೂ ಅಮ್ಮಾ, ಇದೇನಿದು ಕಿಚಿಪಿಚಿ ಕಿರುಚಾಟ? ನಿದ್ರೆ ಮಾಡ್ಲಿಕ್ಕೇ ಬಿಡ್ತಿಲ್ಲ?" ಮಗ್ಗುಲಿನಲ್ಲಿ ಮಲಗಿದ ನಾನು ಅಂಗಾತವಾಗುತ್ತ ಗೊಣಗುತ್ತೇನೆ. "ಗುಬ್ಬಚ್ಚಿಗಳು ಕಣೋ.. ಪಾಪ ಗೂಡು ಕಟ್ಕೊಳ್ತಿವೆ.. ಎರಡು ದಿನದಿಂದ ಹುಲ್ಲು ಹೆಕ್ಕಿ ತರೋದು, ಜೋಡಿಸಿ ಜೋಡಿಸಿ ಇಡೋದು -ಇದೇ ಕೆಲಸ ಸರಭರ. ಅವು ನೆಲಕ್ಕೆ ಬೀಳಿಸಿದ ಹುಲ್ಲುಕಡ್ಡಿಗಳನ್ನ ಗುಡಿಸೋ ಕೆಲಸ ಒಂದು ನಂಗೆ ಹೆಚ್ಚಿಗೆ ಅಷ್ಟೇ!" ಅರೆ, ಈ ಅಮ್ಮನಿಗೇಕೆ ಈ ಗುಬ್ಬಚ್ಚಿಗಳ ಮೇಲೆ ಕರುಣೆ? ಬೇರೆ ಎಲ್ಲಾದ್ರೂ ಕಟ್ಟಿಕೋಬಹುದಪ್ಪ ಗೂಡು.. ನಮ್ಮನೆ ಸಜ್ಜಾನೇ ಬೇಕಾ? ಗಲಾಟೆ ಅಂದ್ರೆ ಗಲಾಟೆ. "ಬೇರೆ ಕಡೆ ಅಂದ್ರೆ ಎಲ್ಲಿಗೆ ಹೋಗ್ತಾವೋ ಪಾಪ? ಅದ್ರಲ್ಲಿ ಹೆಣ್ಣುಹಕ್ಕಿ ಬಸುರಿ ಇರ್ಬೇಕು.. ಹೊಟ್ಟೆ ನೋಡಿದ್ರೆ ಹಾಗೇ ಅನ್ಸುತ್ತಪ್ಪ.." ಸಂಭ್ರಮದ ದನಿಯಲ್ಲಿ ಹೇಳುತ್ತಿದ್ದಾಳೆ ಅಮ್ಮ. </span><br /><br /><span style="color: rgb(0, 102, 0);">ಹತ್ತು ದಿನ ಆದ್ರೂ ಇನ್ನೂ ಹೋಗಿಲ್ಲ ಜ್ವರ.. ನೂರಾ ಎರಡು ಡಿಗ್ರಿ.. ಸೊರಬದ ಡಾಕ್ಟರ್ ಬಳಿ ಹೋಗುವುದು ಅಂತ ತೀರ್ಮಾನವಾಗಿದೆ. "ಎರಡು ಡ್ರಿಪ್ ಹಾಕಿದ್ರೆ ಎಲ್ಲ ಸರಿ ಆಗುತ್ತೆ.. ನೀವ್ ಏನೂ ಹೆದರ್ಬೇಡಿ.. ನಾನು ಸರಿ ಮಾಡಿ ಕಳುಸ್ತೀನಿ ನಿಮ್ಮ ಮಗನ್ನ" ಡಾ| ಎಂ.ಕೆ. ಭಟ್ಟರು ಹುರುಪುನಿಂದಲೇ ಹೇಳುತ್ತಿದ್ದಾರೆ. ಸಲೈನಿನ ಹನಿಗಳು ಒಂದೊಂದೆ ಒಂದೊಂದೇ ಆಗಿ ಸೇರಿಕೊಳ್ಳುತ್ತಿವೆ ದೇಹದಲ್ಲಿ.. ಸ್ವಲ್ಪ ಚೇತರಿಕೆ ಕಾಣಿಸುತ್ತಿದೆ ಈಗ.. ಇನ್ನು ಎರಡು ದಿನ. ಇದೊಂದು ಕೋರ್ಸ್ ಟ್ಯಾಬ್ಲೆಟ್ ತಗೊಂಡ್ರೆ ಫುಲ್ ರೆಡಿಯಾಗ್ತೀನಿ. ಹಾಗಂತ ನಂಗೇ ಅನ್ನಿಸ್ತಿದೆ. </span><br /><br /><span style="color: rgb(0, 102, 0);">...ಒಂದು ದಿನ ಮುಂಜಾನೆ ಥಟ್ಟನೆ ಎಚ್ಚರಾದಂತಾಗಿ ಕಣ್ಣು ಬಿಡುತ್ತೇನೆ. ಆಹ್ಲಾದವೆನಿಸುವ ಹಾಗೆ ಸೂರ್ಯರಶ್ಮಿ ಕಣ್ಣಿಗೆ ಬೀಳುತ್ತಿದೆ. ಅಪ್ಪ ಹತ್ತಿರ ಬಂದು ಡಿಗ್ರಿ ಕಡ್ಡಿ ಇಟ್ಟು ನೋಡುತ್ತಿದ್ದಾನೆ. ಇಲ್ಲ, ಜ್ವರ ಇಲ್ಲ; ನಾರ್ಮಲ್ ಟೆಂಪರೇಚರ್! ಹೌದು, ಜ್ವರ ಹೊರಟುಹೋಗಿದೆ. ನಿಜವಾಗಿಯೂ. ಆಹ್, ಅಮ್ಮ ದೇವರಿಗೆ ತುಪ್ಪದ ದೀಪ ಹಚ್ಚಲು ಓಡುತ್ತಿದ್ದಾಳೆ. ಅಜ್ಜ ಉಟ್ಟ ಸಾಟಿಪಂಚೆಯಿಂದಲೇ ಒರೆಸಿಕೊಳ್ಳುತ್ತಿದ್ದಾನೆ ಕಂಬನಿ. ಸುತ್ತ ನಿಂತ ಮಕ್ಕಳು "ಹಂಗಾದ್ರೆ ಇವತ್ತಿಂದ ನಮ್ ಜೊತೆ ಕ್ರಿಕೆಟ್ ಆಡ್ಬಹುದು ನೀನು?" ಕೇಳುತ್ತಿದ್ದಾರೆ ಉತ್ಸಾಹದಲ್ಲಿ. "ಪೂರ್ತಿ ರಿಕವರ್ ಆಗ್ಲಿಕ್ಕೆ ಇನ್ನೂ ಒಂದು ತಿಂಗಳು ಬೇಕು ನಿಂಗೆ. ಈಗ್ಲೇ ಹೊರಡ್ತೀನಿ ಬೆಂಗಳೂರಿಗೆ ಅಂತೆಲ್ಲ ಹಟ ಮಾಡ್ಬೇಡ. ವಾರ ಬಿಟ್ಟು ಹೋಗು" -ತಾಕೀತು ಅಪ್ಪನಿಂದ.</span><br /><br /><span style="color: rgb(0, 102, 0);">ಮಂಚದಿಂದಿಳಿದು ಮುಚ್ಚೆಕಡೆ ಬಾಗಿಲಿನೆಡೆಗೆ ಹೊರಟಿದ್ದೇನೆ. ಫಕ್ಕನೆ ಮೈಮೇಲೆ ಏನೋ ಬಿದ್ದಂತಾಗಿದೆ. ಏನಿದು? ಒಂದು ಹುಲ್ಲುಕಡ್ಡಿ. ಮೇಲೆ ನೋಡುತ್ತೇನೆ. ಒತ್ತೊತ್ತಾಗಿ ಚಂದವಾಗಿ ಜೋಡಿಸಿ ನಿರ್ಮಿತವಾಗಿರುವ ಗೂಡಿನಿಂದ ಬಸುರಿ ಗುಬ್ಬಚ್ಚಿ ಹೊರಗಿಣುಕಿ ನೋಡುತ್ತಿದೆ ನನ್ನನ್ನೇ: "..ಚಿಲಿಪಿಲಿ ಚಿಲಿಪಿಲಿ.." ಹೇ... ನನಗೆ ಒಮ್ಮೆಲೆ ಖುಶಿ ಉಕ್ಕಿ ಬರುತ್ತಿದೆ.. ಎಲ್ಲಿಂದಲೋ ಪುರ್ರನೆ ಹಾರಿಬಂದ ಗಂಡುಹಕ್ಕಿ ಗೂಡಿನ ಬಳಿ ಕೂತು ಹೆಂಡತಿಗೆ ಅದೇನೋ ಹೇಳುತ್ತಿದೆ. ಅಂದು ಗಲಾಟೆಯಂತೆ ಕೇಳಿದ್ದ ಇವುಗಳ ಮಾತು ಇಂದು ಹಿತವಾಗಿ ಕಲರವದಂತೆ ಕೇಳಿಸುತ್ತಿದೆ. ಎವೆ ಬಡಿಯದೇ ನೋಡುತ್ತಿದ್ದೇನೆ ನಾನು. ಪುಟ್ಟ ಸಂಸಾರಕ್ಕೆ ಇನ್ನೇನು ಬಂದು ಸೇರಲಿರುವ ಹೊಸದೊಂದು ಜೀವಕ್ಕೆ ಸ್ವಾಗತ ಕೋರುವ ತಯಾರಿಯಲ್ಲಿವೆ ಗುಬ್ಬಚ್ಚಿ ದಂಪತಿಗಳು.</span><br /><br /><span style="color: rgb(51, 51, 255);">* </span><span style="color: rgb(0, 153, 0);">* </span><span style="color: rgb(255, 102, 0);">*</span><br /><br /><span style="color: rgb(0, 102, 0);">ಈ ನಡುವೆ, ಏಪ್ರಿಲ್ ೨೬ಕ್ಕೆ ನನ್ನ ಬ್ಲಾಗಿನ ಮೂರನೇ ವರ್ಷದ ಹುಟ್ಟುಹಬ್ಬ ಕಳೆದುಹೋಗಿದೆ! ಸಿಂಗಾರಬಂಗಾರವಾಗಿ ಕಂಗೊಳಿಸಬೇಕಿದ್ದ ನನ್ನ ಬ್ಲಾಗು, ಪಾಪ ಒಡೆಯನ ಅನಾರೋಗ್ಯದಿಂದ ಯಾವುದೇ ಆಚರಣೆಯಿಲ್ಲದೆ ಸೊರಗಿ ಬೇಸರದಲ್ಲಿ ನಿಂತಿದೆ. ಸಮಾಧಾನ ಮಾಡಲು ನಾನು ಕರ್ಚೀಫು ಹುಡುಕುತ್ತಿದ್ದೇನೆ.</span><br /><br /><span style="color: rgb(0, 102, 0);">ನಾನು ಬ್ಲಾಗು ಶುರು ಮಾಡುವಾಗ ಕನ್ನಡದಲ್ಲಿದ್ದ ಬ್ಲಾಗುಗಳು ಬೆರಳೆಣಿಕೆಯಷ್ಟು. ಬ್ಲಾಗು ಎಂದರೇನು, ಬರಹ ಎಲ್ಲಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು, ಯುನಿಕೋಡ್ ಬಳಸುವುದು ಹೇಗೆ, ಲಿಂಕಿಂಗ್ ಮಾಡುವುದು ಹೇಗೆ, ಬೇರೆಯವರಿಗೆ ನನ್ನದೂ ಒಂದು ಬ್ಲಾಗ್ ಇದೆ ಅಂತ ತಿಳಿಸುವುದು ಹೇಗೆ -ಇತ್ಯಾದಿ ಸಹಸ್ರ ಪ್ರಶ್ನೆಗಳಿದ್ದವು ನನ್ನ ಮುಂದೆ. </span><br /><br /><span style="color: rgb(0, 102, 0);">ಹೈಸ್ಕೂಲು ಕಾಲದಿಂದ ಬರೆಯುತ್ತಿದ್ದರೂ ಅವನ್ನು ಯಾರಿಗೂ ತೋರಿಸದೇ ಮುಚ್ಚಿಡುತ್ತ ಬಂದಿದ್ದ ನನಗೆ, ನನ್ನ ಬರಹಗಳು ಬೇರೆಯವರೂ ಓದುವಂತಿದೆಯೋ ಇಲ್ಲವೋ ಎಂಬುದೇ ದೊಡ್ಡ ಕುತೂಹಲವಾಗಿತ್ತು. ಬಹುಶಃ ನಾನು ಬ್ಲಾಗ್ ಶುರು ಮಾಡಿದ್ದು ಅದನ್ನು ಪರೀಕ್ಷಿಸಲೆಂದೇ ಇರಬೇಕು! ತೀರಾ ಪತ್ರಿಕೆಗಳಿಗೆ ನಾನು ಬರೆದ ಕತೆ-ಕವನ ಕಳುಹಿಸಿ ಅವು ರಿಜೆಕ್ಟ್ ಆಗಿ ವಾಪಸು ಬರುವುದಕ್ಕಿಂತ ಈ ಬ್ಲಾಗಿಂಗು ಸೇಫು ಅನ್ನಿಸಿತು ನನಗೆ. ಇಲ್ಲಿ ಇದನ್ನು ಅಕಸ್ಮಾತಾಗಿ ಯಾರಾದರೂ ಓದಿ ಚೆನ್ನಾಗಿದೆ ಅಂದುಬಿಟ್ಟರೆ ನಾನು ಗೆದ್ದೆ; ಅದಿಲ್ಲದಿದ್ದರೆ ಬೇಸರವಂತೂ ಇಲ್ಲ. ಯಾರೂ ಓದಲೇ ಇಲ್ಲವೇನೋ ಅಂದುಕೊಂಡು ಸುಮ್ಮನಿದ್ದರಾಯಿತು! ಬ್ಲಾಗು, ನನ್ನ ಬರಹಗಳ ಪ್ರಯೋಗಕ್ಕೊಂದು ವೇದಿಕೆಯಾಗಲಿ - ಆದೀತು ಎಂಬುದು ನನ್ನ ಆಶಯವಾಗಿತ್ತು.</span><br /><br /><span style="color: rgb(0, 102, 0);">ನಾನು ಬ್ಲಾಗಿಂಗ್ ಶುರುಮಾಡುವಾಗ ಇದ್ದ ಕನ್ನಡ ಬ್ಲಾಗುಗಳಲ್ಲಿ ಹೆಚ್ಚಿನವು ಪರ್ಸನಲ್ ಬ್ಲಾಗುಗಳೇ ಆಗಿದ್ದವು. ಕೆಲವರು ಕತೆ-ಕವನ ಬರೆಯುತ್ತಿದ್ದರು. ಇನ್ನುಳಿದಂತೆ ಪ್ರವಾಸ ಕಥನಗಳು, ಲಹರಿಗಳು, ಲಲಿತ ಪ್ರಬಂಧಗಳು, ಹೆಚ್ಚೆಂದರೆ ಯಾವುದೋ ಕಾರ್ಯಕ್ರಮದ ವರದಿ. ಬ್ಲಾಗುಗಳ ಸಂಖ್ಯೆ ಜಾಸ್ತಿಯಾಗುತ್ತಾ ಹೋದಂತೆ ಬ್ಲಾಗರುಗಳಲ್ಲೇ ಕ್ಲಾಸಿಫಿಕೇಶನ್ನುಗಳು, ಗುಂಪುಗಳು ಪ್ರಾರಂಭವಾದವು. ಬ್ಲಾಗ್ ಜಗತ್ತಿಗೆ ರಾಜಕೀಯ, ಸ್ತ್ರೀವಾದ, ಧೋರಣೆಗಳು, ಎಡಪಂಥ-ಬಲಪಂಥ, ವಿಚಾರವಾದ, ಕಮ್ಯೂನಲಿಸಮ್ಮು, ಟೆರರಿಸಮ್ಮು, ಪಾರ್ನು, ಸೆಲೆಬ್ರಿಟಿಗಳು(!), ಪರಸ್ಪರ ಆರೋಪಗಳು, ಕಚ್ಚಾಟಗಳು, ಪ್ರತಿಕ್ರಿಯಾ ಪ್ರತಿಭಟನೆ -ಇತ್ಯಾದಿ ಸಾಮಾನ್ಯ ಮನುಷ್ಯರಿಗೆ ಅರ್ಥವಾಗದ ಎಲ್ಲಾ ವಿಚಾರಗಳೂ ಕಾಲಿಟ್ಟವು. </span><br /><br /><span style="color: rgb(0, 102, 0);">ಒಬ್ಬ ಬರೆದ ಒಂದು ಬರಹವನ್ನೇ ಎದುರಿಗಿಟ್ಟುಕೊಂಡು "ಆತ ಇಂಥವ" ಅಂತ ಹಣೆಪಟ್ಟಿ ಕೊಡುವ ಪರಿ ಶುರುವಾಯ್ತು. ಅವನಿಗೊಂದು ವಿರೋಧಿ ಗುಂಪೇ ತಯಾರಾಗಿ ಹೋಗಿದೆಯೇನೋ ಎಂಬಂತೆ ಆತನ ಮುಂದಿನ ಬರಹಗಳಿಗೆಲ್ಲವಕ್ಕೂ ಬೈಗುಳಗಳ ಸುರಿಮಳೆಯೇ ಬೀಳತೊಡಗಿದವು. ಅನಾನಿಮಸ್ ಹೆಸರಿನಲ್ಲಿ, ಬೇರೆಯವರ ಹೆಸರಿನಲ್ಲಿ ಬರುವ ಪ್ರತಿಕ್ರಿಯೆಗಳು ಜಾಸ್ತಿಯಾದವು. 'ರೆಸ್ಪಾನ್ಸಿಬಲ್ ಕಮೆಂಟಿಂಗ್'ಅನ್ನು ಕಲಿಯಲು ನಮಗಿನ್ನು ಕಾಲವೇ ಬೇಕೇನೋ ಅಂತ ನಾವು ಆಕಾಶ ನೋಡುವಂತಾಯಿತು. ಸಮಸ್ಯೆಯೆಂದರೆ, ಆವಾಗಿನಿಂದಲೂ ಕತೆ-ಕವನ-ಲಹರಿ ಅಂತ ಬರೆದುಕೊಂಡು ಬಂದಿದ್ದ ನನ್ನಂಥವರಿಗೆ, ಎಲ್ಲೋ ಆಫೀಸಿನ ಬಿಡುವಿನ ವೇಳೆಯಲ್ಲಿ ರಿಲಾಕ್ಸ್ ಆಗೋಣ ಅಂತ ಬ್ಲಾಗ್‍ಗಳ ಕಡೆಗೆ ಕಣ್ಣು ಹಾಯಿಸಿದರೆ, ಬರೀ ಇಂತಹ ಸೀರಿಯಸ್ಸಾದ ಚರ್ಚೆಗಳೋ, ಚರ್ಚೆಯಾಗಿ ಉಳಿದಿರದ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳೇ ಕಣ್ಣಿಗೆ ಬೀಳತೊಡಗಿ -ಛೇ, ಇದೇನಪ್ಪಾ ಆಗಿಹೋಯ್ತು ಕನ್ನಡ ಬ್ಲಾಗಿಂಗ್ ಪರಿಸ್ಥಿತಿ ಅಂತ ಬೇಸರ ಪಟ್ಟುಕೊಳ್ಳುವಂತಾಯ್ತು. </span><br /><br /><span style="color: rgb(0, 102, 0);">ಇರಲಿ, ಯಾವುದೇ ಮಾಧ್ಯಮದಲ್ಲಿ ಆಗುವಂತೆ ಇವೂ ಸಹ ಬ್ಲಾಗ್ ಮಾಧ್ಯಮದಲ್ಲಿ ಕನ್ನಡ ಬೆಳೆಯುತ್ತಿರುವ ಲಕ್ಷಣಗಳು ಅಂತ ಸಧ್ಯ ನಾನಂತೂ ಸಮಾಧಾನ ಮಾಡಿಕೊಂಡಿದ್ದೇನೆ. </span><br /><br /><span style="color: rgb(0, 102, 0);">ಇತ್ತೀಚೆಗೆ ಪ್ರತಿಕ್ರಿಯೆಗಳಿಗಾಗಿ ದಾಹ ಪಡುವ, ಒತ್ತಡ ಹೇರುವ ಬ್ಲಾಗರುಗಳು ಒಂದು ದೊಡ್ಡ ತಲೆನೋವಾಗಿದ್ದಾರೆ. ಬ್ಲಾಗರ್-ಬ್ಲಾಗರುಗಳ ನಡುವೆಯೇ ವೈಮನಸ್ಸುಗಳು ಉಂಟಾಗಿವೆ. ಬ್ಲಾಗರುಗಳಿಗಾಗಿ ಕಮ್ಯೂನಿಟಿಗಳಾಗಿವೆ, ಪರಸ್ಪರ ಪರಿಚಯಕ್ಕೆ-ಸ್ನೇಹಕ್ಕೆ ವೇದಿಕೆಗಳಾಗಿವೆ. ನನ್ನ ಗೂಗಲ್ ರೀಡರಿನಲ್ಲಿಯೇ ಹೆಚ್ಚುಕಮ್ಮಿ ಆರುನೂರು ಕನ್ನಡ ಬ್ಲಾಗುಗಳ ಫೀಡ್ ಇದೆ. ಇಪ್ಪತ್ತು ದಿನಗಳ ರಜೆಯಿಂದ ಮೊನ್ನೆ ವಾಪಸು ಬಂದು ನೋಡಿದರೆ ೧೦೦೦+ ಅಪ್‍ಡೇಟ್‍ಗಳನ್ನು ತೋರಿಸುತ್ತಿದೆ ರೀಡರ್! ಯಾವಾಗ ಓದಿ ಮುಗಿಸುತ್ತೇನೋ?</span><br /><br /><span style="color: rgb(0, 102, 0);">ಅವೆಲ್ಲ ಏನೇ ಇದ್ದರೂ, ಮುಂಬಯಿಯಲ್ಲಿ ಭಯೋತ್ಪಾದಕರ ದಾಳಿಯಾದಾಗ ಒಬ್ಬ ಬ್ಲಾಗರ್ ನೀಡಿದ ಕರೆಗೆ ಸ್ಪಂದಿಸಿ ನಾವು ಎಷ್ಟೊಂದು ಬ್ಲಾಗರುಗಳು ನಮ್ಮ ಬ್ಲಾಗುಗಳ ಹಣೆಗೆ ಕಪ್ಪುಪಟ್ಟಿ ಹಚ್ಚಿಕೊಂಡಿದ್ದು; ಯಾರದೋ ಬ್ಲಾಗಿನ ಹುಟ್ಟುಹಬ್ಬ ಎಂದರೆ ಅಲ್ಲಿ ಹೋಗಿ ಅವರಿಗೆ ಶುಭಾಶಯ ಹೇಳುವುದು; ಒಬ್ಬರ ಬ್ಲಾಗ್ ಮೆಚ್ಚಿ ಮತ್ತೊಬ್ಬರು ಬರೆಯುವುದು; ಕಮ್ಯೂನಿಟಿಗಳಲ್ಲಿ ಬ್ಲಾಗರುಗಳು ಪರಸ್ಪರ ಸ್ನೇಹ ಬಯಸಿ ರಿಕ್ವೆಸ್ಟ್ ಕಳುಹಿಸುವುದು -ಎಲ್ಲಾ ಖುಶಿ ಪಡಬೇಕಾದ ವಿಷಯಗಳೇ. ಎಷ್ಟೊಂದು ಬ್ಲಾಗರುಗಳು ಪೋಸ್ಟಿನಿಂದ ಪೋಸ್ಟಿಗೆ ಪಕ್ವವಾಗುತ್ತ ಹೋಗಿರುವುದು ನಮ್ಮ ಕಣ್ಮುಂದಿದೆ. ಯಾವಾಗ ಮುಂದಿನ ಪೋಸ್ಟು ಅಂತ ಕಾಯುವಂತೆ ಮಾಡುವ ಬಹಳಷ್ಟು ಬ್ಲಾಗರ್ ಗೆಳೆಯ-ಗೆಳತಿಯರು ನಮ್ಮೊಂದಿಗಿದ್ದಾರೆ. ಈಗೀಗ ಬ್ಲಾಗುಗಳು ಇವೆಂಟ್ ನೋಟಿಫಿಕೇಶನ್‍ನಲ್ಲಿ ಮುಖ್ಯ ಪಾತ್ರ ವಹಿಸುತ್ತಿವೆ. ಪರಿಸರ, ಸಮಾಜ, ಪುಸ್ತಕ, ಸಂಗೀತ, ಸಿನೆಮಾಗಳ ಬಗ್ಗೆ ಅರಿವು-ಜಾಗೃತಿ ಮೂಡಿಸುವ ಪ್ರಯತ್ನ ಮಾಡುವ ಬ್ಲಾಗುಗಳು ಶುರುವಾಗಿವೆ. ಅನೇಕ ಹಿರಿಯರು ಉತ್ಸಾಹದಿಂದ ಬ್ಲಾಗಿಸುತ್ತಿದ್ದಾರೆ. ಸುಮಾರು ಬ್ಲಾಗರುಗಳು ಬ್ಲಾಗ್ ಮುಚ್ಚುತ್ತಿದ್ದೇನೆ, ಅಲ್ಪವಿರಾಮ, ಪೂರ್ಣವಿರಾಮ ಅಂತೆಲ್ಲ ಹೇಳಿಕೆ ಕೊಟ್ಟೂ ನಂತರ ಮತ್ತೆ ಬರೆಯಲು ಶುರು ಮಾಡಿದ್ದಾರೆ.. ಹಾಗೇ ಇದು: ಬಿಟ್ಟೇನೆಂದರೂ ಬಿಡದೀ ಮಾಯೆ!</span><br /><br /><span style="color: rgb(0, 102, 0);">ಬಹುಶಃ ಬ್ಲಾಗಿಂಗಿನ ದೊಡ್ಡ ಲಾಭವೆಂದರೆ ಇದು ನಮ್ಮ ಪ್ರತಿಭೆಗೆ ಕಲ್ಪಿಸಿಕೊಡುವ ವೇದಿಕೆ, ಆ ಪ್ರತಿಭೆಯನ್ನು ಮುಂದುವರೆಸಲು ಸಿಗುವ ಪ್ರೋತ್ಸಾಹ, ತಿದ್ದಿಕೊಳ್ಳಲು ಅವಕಾಶಗಳು, ಗಳಿಸಿಕೊಡುವ 'ಐಡೆಂಟಿಟಿ' ಮತ್ತು ಸಂಪಾದಿಸಿಕೊಡುವ ಹೊಸ ಸ್ನೇಹಗಳು. ಅದು ದುರುಪಯೋಗವಾಗದಂತೆ ಕಾಯ್ದುಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಮೂರು ವರ್ಷಗಳಿಂದ ಕನ್ನಡ ಬ್ಲಾಗಿಂಗನ್ನು ಶ್ರದ್ಧೆಯಿಂದಲೇ ಗಮನಿಸಿಕೊಂಡು ಬರುತ್ತಿರುವ ಒಬ್ಬ ಬ್ಲಾಗರ್ ಆಗಿ ನಾನು ಇಷ್ಟೆಲ್ಲ ಬರೆಯಬೇಕಾಯ್ತು ಅಷ್ಟೇ. </span><br /><br /><span style="color: rgb(0, 102, 0);">ಒಂದೊಂದೇ ಹುಲ್ಲುಕಡ್ಡಿ ಸೇರಿಸುತ್ತ ನಾವೇ ಕಟ್ಟಿಕೊಂಡಿರುವ ಗುಬ್ಬಚ್ಚಿ ಗೂಡು ಇದು.. ಇಲ್ಲಿ ಕಚ್ಚಾಟಗಳು ಬೇಡ. ಪರಸ್ಪರ ಪ್ರೀತಿಯಿಂದ ಇರೋಣ. ಗುಬ್ಬಚ್ಚಿ ಗೂಡಿನಿಂದ ಹೊರಬೀಳುವ ಚಿಲಿಪಿಲಿ ಕಲರವ ಕೇಳುಗರ ಕಿವಿಗೆ ಇಂಪಾಗಿರಲಿ; ನಮ್ಮ ವರ್ತನೆ ನೋಡುಗರ ಕಣ್ಣಿಗೆ ತಂಪಾಗಿರಲಿ.</span><br /><br /><span style="color: rgb(0, 102, 0);">ಈ ಮೂರು ವರ್ಷದ ಹಾದಿಯಲ್ಲಿ ಸಿಕ್ಕ ಎಲ್ಲರಿಗೂ ನನ್ನ ಧನ್ಯವಾದ. ಪಯಣ ಮುಂದುವರೆಯುತ್ತದೆ. ಹ್ಯಾಪಿ ಬ್ಲಾಗಿಂಗ್. ಲವ್ಯೂ ಆಲ್!</span><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-1265498917563287128?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com34tag:blogger.com,1999:blog-27009232.post-49730162628405381102009-04-15T09:53:00.004+05:302009-06-23T12:26:46.163+05:30ಮೀಸೆ ತೆಗೆದಾಗ..ನನ್ನ ಮಹತ್ವದ ಯೋಜನೆಗಳಲ್ಲಿ ಇಂಥವು ಬಹಳ: ಹೇಗಾದರೂ ಮಾಡಿ, ಇನ್ನು ಯಾರೂ ‘ಕಡ್ಡಿ ಫೈಲ್ವಾನ್’ ಅಂತ ಕರೆಯದ ಹಾಗೆ ದಪ್‍ಪ್‍ಪ್ಪ ಆಗಬೇಕು (ಚಿಕನ್ ತಿನ್ನು, ಪ್ರತಿದಿನ ಒಂದೇ ಒಂದು ಪಿಂಟ್ ಬಿಯರ್ ಕುಡಿ -ಗೆಳೆಯರ ಸಲಹೆಗಳು). ಈ ತಿಂಗಳ ಒಂದನೇ ತಾರೀಖಿನಿಂದ ಜಿಮ್ಮಿಗೆ ಸೇರಿಕೊಂಡು ಬಿಡಬೇಕು (ಸುಮಾರು ಒಂದನೇ ತಾರೀಖುಗಳು ಕಳೆದುಹೋಗಿವೆ). ಇಷ್ಟರೊಳಗೆ ಯಾರಿಂದಲೂ ಕಂಡುಹಿಡಿಯಲಾಗದ ವಸ್ತುವೊಂದನ್ನು ಕಂಡುಹಿಡಿಯಬೇಕು (ಬಚಾವ್, ನಾನು ವಿಜ್ಞಾನಿಯಲ್ಲ). ಒಂದು ದಿನ, ಯಾರೆಂದರೆ ಯಾರಿಗೂ ಹೇಳದೇ, ಸಿಕ್ಕಿದ ಟ್ರೈನ್ ಹತ್ತಿ, ಗೊತ್ತೇ ಇಲ್ಲದ ಊರಿಗೆ ಹೋಗಿಬಿಡಬೇಕು. ಒಂದು ತಿಂಗಳು ಅಲ್ಲಿ ಭೂಗತನಾಗಿದ್ದು ವಾಪಸು ಬರಬೇಕು (ಇದನ್ನು ಮಾತ್ರ ಮಾಡಿಯೇ ತೀರುವವನಿದ್ದೇನೆ!).<br /><br />ಇವುಗಳ ಸಾಲಿಗೇ ಸೇರುವ ನನ್ನ ಮತ್ತೊಂದು ಯೋಜನೆ ಎಂದರೆ, ‘ಒಮ್ಮೆ ಮೀಸೆ ಬೋಳಿಸಿ ನೋಡಬೇಕು’ ಎಂಬುದು! ನೀವು ಕೇಳಬಹುದು, ‘ಮೀಸೆ ತೆಗೆಯುವುದು ಅಂತಹ ಮಹತ್ವದ ಯೋಜನೆ ಹೇಗೆ? ಅದೇನು ಹಿಮಾಲಯ ಹತ್ತಿಳಿಯೋ ಹಾಗಾ?’ ಎಂದು. ನನ್ನ ಪ್ರಕಾರ ಅದು ಮಹತ್ವದ ಯೋಜನೆಯೇ. ಏಕೆಂದರೆ, ನನಗೆ ಬೋಳಿಸಬೇಕೆಂದಿರುವುದು ನನ್ನದೇ ಮೀಸೆ! (೧) ನೀವು ಯಾವಾಗಲೂ ಮೀಸೆ ತೆಗೆದಿರುವವರೇ ಆಗಿದ್ದರೆ ಅಥವಾ (೨) ನೀವು ಪದೇ ಪದೇ ಮೀಸೆ ತೆಗೆದು-ಮತ್ತೆ ಬಿಟ್ಟು-ಮತ್ತೆ ತೆಗೆದು -ನಿಮ್ಮ ಮುಖವನ್ನು ಫ್ರೆಂಚು, ಗಡ್ಡ, ಲಾಕು ಅಂತೆಲ್ಲ ಪ್ರಯೋಗಗಳಿಗೆ ಒಳಪಡಿಸುವ ಗುಂಪಿಗೆ ಸೇರಿದವರಾದರೆ ಅಥವಾ (೩) ನೀವು ಇನ್ನೂ ಮೀಸೆಯೇ ಬಂದಿಲ್ಲದ ಎಳೆಯ ಹುಡುಗನಾಗಿದ್ದರೆ ಅಥವಾ (೪) ನೀವು ಹೆಂಗಸಾಗಿದ್ದರೆ -ನಾನೀಗ ಹೇಳುತ್ತಿರುವುದು ಸರಿಯಾಗಿ ಅರ್ಥವಾಗದೇ ಹೋಗಬಹುದು. ಅಥವಾ ತಮಾಷೆ ಅನ್ನಿಸಬಹುದು. ಆದರೆ ನೀವು ‘ಮೀಸೆ ತೆಗೆದರೆ ನಾನು ಹೇಗೆ ಕಾಣುತ್ತೇನೋ’ ಎಂಬ ಭಯ ಇರುವ ನನ್ನಂಥವರ ಗುಂಪಿಗೆ ಸೇರಿದವರಾದರೆ ನನ್ನ ಕಷ್ಟ ನಿಮಗೆ ಅರ್ಥವಾಗುತ್ತದೆ.<br /><br />ನನಗೆ ನನ್ನ ಮೂಗಿನ ಕೆಳಗೆ ಯಾವಾಗ ಈ ಕಪ್ಪು ಕೂದಲುಗಳು ಮೂಡಿದವೆಂಬ ದಿನಾಂಕ ನೆನಪಿಲ್ಲ. ನಮ್ಮ ಎಸ್ಸೆಸ್ಸೆಲ್ಸಿ ಬ್ಯಾಚಿನ ಗ್ರೂಪ್ ಫೋಟೋದಲ್ಲಿ ಹೌದೋ ಇಲ್ಲವೋ ಎಂಬಂತೆ ಕಾಣುವ ಇದು, ಕಾಲೇಜ್ ಗ್ರೂಪ್ ಫೋಟೋದಲ್ಲಿ ಸ್ವಲ್ಪ ಢಾಳಾಗೇ ಕಾಣುತ್ತೆ. ಬಹುಶಃ ನಾನು ಹೈಸ್ಕೂಲಿನ ಡೆಸ್ಕಿನ ಮೇಲೆ ಕೈವಾರದಿಂದ ಚಿತ್ರ ಕೊರೆಯುತ್ತಿದ್ದಾಗಲೇ ನನ್ನ ಮೇಲ್ದುಟಿಗಳ ಮೇಲೆ ಶುರುವಾದ ಈ ಶ್ಮಶ್ರುಬೆಳೆ, ಹಾಗೇ ಅವ್ಯಾಹತವಾಗಿ ಮುಂದುವರೆದು ಕಾಲೇಜಿನ ರಿಸಲ್ಟ್ ನೋಡಲು ಹೋಗುವ ವೇಳೆಗೆ ಕಟಾವಿಗೆ ಬಂದಿರಬೇಕು. ಅದಕ್ಕೇ ಮತ್ತೆ, ರಿಸಲ್ಟ್ ನೋಡಿ ವಾಪಸ್ ಬರುತ್ತಿದ್ದಾಗ ಸಿಕ್ಕ ಸದಾಶಿವನೆಂಬ ಹೈಸ್ಕೂಲು ಗೆಳೆಯ ನನ್ನನ್ನು ನಿಲ್ಲಿಸಿ ‘ಓಹ್, ಸುಶ್ರುತ ಅಲ್ಲೇ ನೀನು? ಗುರ್ತೇ ಸಿಕ್ಕದಿಲ್ಲಲಾ ಮಾರಾಯಾ! ಆವಾಗ ಸಣ್ಣಕ್ ಇದ್ದೆ; ಈಗ ಮೀಸೆ-ಗೀಸೆ ಬಂದು ಒಳ್ಳೇ ದೊಡ್ ಗಂಡ್ಸಿನ್ ಹಂಗೆ ಕಾಣ್ತಿದೀಯಾ’ ಅಂದದ್ದು!<br /><br />ಮತ್ತು ಅವತ್ತೇ ನಾನು ಯಾರಿಗೂ ಕಾಣದಂತೆ ಅಪ್ಪನ ರೇಸರ್ ಸೆಟ್ಟಿನ ಜೊತೆಗಿದ್ದ ಪುಟ್ಟ ಕತ್ತರಿಯಿಂದ ಹಾಗೆ ಉದ್ದುದ್ದ ಬೆಳೆದಿದ್ದ ಮೀಸೆಯ ಕೂದಲುಗಳನ್ನು ಕತ್ತರಿಸಿ ‘ಟ್ರಿಮ್’ ಮಾಡಿಕೊಂಡದ್ದು! ಅಪ್ಪನಿಗೆ ಗೊತ್ತಾದರೂ ಸುಮ್ಮನಿದ್ದದ್ದು!<br /><br />ಅದೆಲ್ಲಾ ಇರಲಿ, ಒಂದಂತೂ ಸತ್ಯ: ನನಗೆ ಬರಬೇಕಿದ್ದ ಕಾಲಕ್ಕೆ ಮೀಸೆ ಬಂದಿತ್ತು. ಕನ್ನಡಿ ನೋಡಿಕೊಂಡಾಗಲೆಲ್ಲ ‘ನೀನು ಗಂಡಸು ಕಣೋ’ ಅಂತ ಹೇಳುತ್ತಿತ್ತು. ಮತ್ತೆ, ಆವಾಗ ‘ಹವ್ಯಕ ಬ್ರಾಹ್ಮಣರಲ್ಲಿ ವಧುಗಳ ಕೊರತೆ’ ಇನ್ನೂ ಶುರುವಾಗಿರದಿದ್ದರಿಂದಲೋ ಏನೋ, ‘ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು’ ಎಂಬ ಕಾಶಿನಾಥನ ಚಿತ್ರಗೀತೆ ನನ್ನ ಗುನುಗುಗಳಲ್ಲೊಂದಾಗಿತ್ತು.<br /><br />ನಾನು ನೀವಿದ್ದಕ್ಕೇ ಖುಶಿಯಾಯ್ತೋ ಎಂಬಂತೆ ಮೀಸೆ ಬೆಳೆಯುತ್ತಾ ಹೋಯ್ತು. ಬೆಂಗಳೂರಿನಲ್ಲಿ ವಿವಿಧ ರೀತಿಯ ಮೀಸೆ ಬಿಟ್ಟವರೆಲ್ಲ ಕಾಣುತ್ತಿದ್ದರು. ರಾಜ್‌ಕುಮಾರ್ ಥರ ಸಣ್ಣಮೀಸೆ, ವೀರಪ್ಪನ್ ಥರ ಹುರಿಮೀಸೆ, ಚಾಪ್ಲಿನ್ ಥರ ಪುಟ್ಟ ಮೀಸೆ (ಪ್ಲೀಸ್, ಉದಾಹರಣೆಗಾಗಿ ಹೇಳಿದ್ದು ಅಷ್ಟೇ), ಹಾಗೇ ಚೂಪುಮೀಸೆ, ಚುಪುರುಮೀಸೆ, ಬಿಲ್ಲಿನಂತಹ ಮೀಸೆ, ಇನ್ನೂ ಏನೇನೋ. ಆದರೆ ಇವರೆಲ್ಲರಿಗಿಂತ ನನಗೆ ಈ ಮೀಸೆ ತೆಗೆದವರೇ ಗ್ರೇಟ್ ಗಂಡಸರಂತೆ ಕಾಣುತ್ತಿದ್ದರು. ಅವರಂತೆ ನಾನೂ ಒಮ್ಮೆ ಮೀಸೆಯನ್ನು ಪೂರ್ತಿಯಾಗಿ ತೆಗೆದು ನೋಡಬೇಕು ಅಂತ ಅನ್ನಿಸುತ್ತಿತ್ತು. ಆದರೆ ಧೈರ್ಯ ಸಾಲುತ್ತಿರಲಿಲ್ಲ.<br /><br />ನನ್ನ ಹಳೆಯ ಆಫೀಸಿನ ಕಲೀಗು ವಿಕ್ರಮ್, ನಾನು ಜಾಬ್ ಇಂಟರ್ವ್ಯೂಗಳಲ್ಲಿ ಆಯ್ಕೆಯಾಗದೇ ಇರುತ್ತಿದ್ದುದಕ್ಕೆ ಕಾರಣ ನನ್ನ ಮೀಸೆಯೇ ಅಂತ ವಾದಿಸುತ್ತಿದ್ದ. ಅವನ ಪ್ರಕಾರ ಮೀಸೆಯಿದ್ದವರು ಇನ್ನೂ ‘ಪ್ರೌಢತ್ವ ಪ್ರಾಪ್ತವಾಗದವರು’. ಮೀಸೆ ತೆಗೆದರೂ ಗಂಡಸಿನ ಹಾಗೆ ಕಾಣಿಸುವವನೇ ನಿಜವಾದ ಗಂಡಸು ಎಂಬುದವನ ತರ್ಕವಾಗಿತ್ತು. "ನೀವು ಒಮ್ಮೆ ಮೀಸೆ ತೆಗ್ದು ನೋಡಿ ಸುಶ್ರುತ್.. ಆಗ ಮುಖದಲ್ಲಿ ಸೀರಿಯಸ್‌ನೆಸ್ ಬರುತ್ತೆ. ಹ್ಯಾಗೆ ಪಟ್ಟಂತ ಸೆಲೆಕ್ಟ್ ಆಗ್ತೀರೋ ನೋಡಿ ಜಾಬ್‌ಗೆ!" ಅಂದಿದ್ದ ವಿಕ್ರಮ್.<br /><br />ಆದರೆ ಮೀಸೆ ತೆಗೆದುಬಿಟ್ಟರೆ ನಾನೆಲ್ಲಿ ಹುಡುಗಿ ಥರ ಕಾಣ್ತೀನೋ ಎಂಬುದು ನನ್ನ ಭಯ. ಕನ್ನಡಿ ಮುಂದೆ ನಿಂತಾಗ ನನ್ನ ತೋರುಬೆರಳುಗಳಿಂದ ಮೀಸೆ ಮುಚ್ಚಿಕೊಂಡು ನಾನು ಮೀಸೆ ತೆಗೆದಾಗ ಹೇಗೆ ಕಾಣಬಹುದು ಅಂತ ಕಲ್ಪಿಸಿಕೊಳ್ಳುತ್ತಿದ್ದೆ. ಆದರೆ ಕಲ್ಪನೆಯೇ ಸರಿಯಾಗಿ ಆಗುತ್ತಿರಲಿಲ್ಲ. ಕೊನೆಗೆ ಫೋಟೋಶಾಪಿನಲ್ಲಿ ನನ್ನ ಫೋಟೋದ ಮೀಸೆ ಅಳಿಸಿ ನೋಡಿದೆ. ಆಗ ಅದೊಂಥರಾ ಪ್ರೇತದ ಹಾಗೆ ಕಂಡಿತು. ನೋಡಿದ ನನ್ನ ಕಲೀಗುಗಳು ನಗಾಡಿಬಿಟ್ಟರು. ಇದರ ಸಹವಾಸವೇ ಬೇಡ ಅಂತ ಸುಮ್ಮನಾಗಿಬಿಟ್ಟೆ.<br /><br />ಮೊನ್ನೆ ನನ್ನ ರೂಮ್‌ಮೇಟು ಊರಿಗೆ ಹೋಗಿದ್ದ ಭಾನುವಾರ ನಾನೊಬ್ಬನೇ ಮನೆಯಲ್ಲಿದ್ದೆ. ಮಾಡಲಿಕ್ಕೇನೂ ಕೆಲಸವಿರಲಿಲ್ಲ, ಮಧ್ಯಾಹ್ನ ಹನ್ನೆರಡರ ಹೊತ್ತಿಗೆ ಸ್ನಾನಕ್ಕೆ ಹೊರಟವನಿಗೆ ಕನ್ನಡಿ ಕಂಡಿದ್ದೇ ಅಪಶಕುನವಾಗಿಹೋಯಿತು. ಈ ಕನ್ನಡಿ ದಾಡಿ ಮಾಡದ ನನ್ನ ಮುಖವನ್ನು ಪ್ರಾಮಾಣಿಕವಾಗಿ ಹಾಗೇ ತೊರಿಸಿಬಿಟ್ಟಿತು. ತಕ್ಷಣ ‘ಓಹ್, ಶೇವಿಂಗ್ ಮಾಡ್ಕೋಬೇಕು’ ಎಂಬುದು ಹೊಳೆದುಬಿಟ್ಟಿತು. ಸರಿ, ಮುಖದ ತುಂಬ ಕ್ರೀಮ್ ಹಚ್ಚಿಕೊಂಡು, ‘ಜಿಲೆಟ್ಟಿ ಸಖತ್ತಾಗಿ ಬರುತ್ತೆ’ ಅಂದಿದ್ದ ಗೆಳೆಯನ ಮಾತು ಕೇಳಿ ತಂದುಕೊಂಡಿದ್ದ ರೇಸರಿನಿಂದ ಶೇವ್ ಮಾಡಿಕೊಳ್ಳತೊಡಗಿದೆ. ಈ ಏರ್?ಟೆಲ್ ಕಂಪನಿಯವರಿಗೆ ಭಾನುವಾರವೂ ರಜೆ ಇಲ್ಲವೋ ಅಥವಾ ಉಪೇಂದ್ರ ಮಾತಾಡಿದ ಕಾಲರ್‌ಟ್ಯೂನನ್ನು ನಾನು ಡೌನ್‌ಲೋಡ್ ಮಾಡಿಕೊಳ್ಳುವವರೆಗೆ ನಿದ್ದೆ ಮಾಡುವುದಿಲ್ಲ ಅಂತ ಹರಕೆ ಹೊತ್ತುಕೊಂಡಿದ್ದಾರೋ ಏನೋ, ಸರಿಯಾಗಿ ನನ್ನ ರೇಸರ್ ಕಪಾಳದಿಂದ ಕೆಳಕ್ಕಿಳಿಯುತ್ತಿದ್ದಾಗ ರಿಂಗ್ ಮಾಡಿದರು. ಅದ್ಯಾವಾಗ ಆ ಪರಿ ಹೈ ವಾಲ್ಯೂಮಿನಲ್ಲಿಟ್ಟುಕೊಂಡಿದ್ದೆನೋ ಏನೋ, ಒಳ್ಳೇ ಅಕ್ಕಚ್ಚಿಗೆ ಕೊಡದ ಜರ್ಸಿ ದನದ ಥರ ಕೂಗಿಕೊಂಡಿತು ನನ್ನ ಮೊಬೈಲು. ಬೆಚ್ಚಿಬಿದ್ದವನಂತೆ ತಿರುಗಿ ನೋಡಿದೆ, ಓಡಿ ಹೋಗಿ ಟೀಪಾಯಿಯ ಮೇಲಿದ್ದ ಮೊಬೈಲನ್ನು ಕ್ರೀಮ್ ಹತ್ತದಂತೆ ಹುಷಾರಾಗಿ ಕಿವಿಗಿಟ್ಟುಕೊಂಡೆ, ಉಪ್ಪಿ ಶುರುಮಾಡುತ್ತಿದ್ದಂತೆಯೇ ‘ಥೂ, ಈ ಏರ್‌ಟೆಲ್ ಮನೆ ಹಾಳಾಗ!’ ಅಂತ ಬೈದುಕೊಂಡು ಕಟ್ ಮಾಡಿದೆ, ತಿರುಗಿ ಬಂದು ಕನ್ನಡಿಯೆದುರು ನಿಂತೆ. ಜಿಲೆಟ್ಟಿ ಒಂದು ಮಹತ್ಕಾರ್ಯ ಮಾಡಿತ್ತು.<br /><br />ನನಗೆ ಅದುವರೆಗೆ ಕಲ್ಪನೆಯೇ ಇರಲಿಲ್ಲ: ಈ ಜಿಲೆಟ್ಟಿ, ಮೊಬೈಲು, ಉಪೇಂದ್ರ, ಏರ್‌ಟೆಲ್ಲು, ಕನ್ನಡಿ ಎಲ್ಲರಿಗೂ ನನ್ನ ಮೀಸೆಯ ಮೇಲೆ ಅದೆಂತಹ ಹೊಟ್ಟೆಕಿಚ್ಚಿತ್ತು ಅಂತ. ಅಷ್ಟು ವರ್ಷಗಳಿಂದ ಒಬ್ಬ ಮುತ್ತೈದೆ ಹಣೆಯ ಕುಂಕುಮವನ್ನು ಜೋಪಾನವಾಗಿ ಕಾಯ್ದುಕೊಂಡು ಬರುವಂತೆ ನಿಗಾ ವಹಿಸಿಕೊಂಡು ಬಂದಿದ್ದ ನನ್ನ ಮೀಸೆಯ ಬಲಭಾಗವನ್ನು ಜಿಲೆಟ್ಟಿ ಕ್ಷಣದಲ್ಲಿ ಸವರಿಹಾಕಿತ್ತು! ಕರೆಂಟ್ ಹೊಡೆದವನಂತೆ ಬಾಯಿ ಕಳೆದು, ಕಣ್ಣು ಮಿಟುಕಿಸಿ ದೊಡ್ಡದಾಗಿ ಮಾಡಿ ನೋಡಿಕೊಂಡೆ. ನನ್ನ ಪ್ರತಿಬಿಂಬವೂ ಬಾಯಿ ಕಳೆದು, ಕಣ್ಣು ಮಿಟುಕಿಸಿ ದೊಡ್ಡದಾಗಿ ಮಾಡಿತೇ ಹೊರತು ಮೀಸೆಯ ಸವರಿದ ಜಾಗದಲ್ಲಿ ಏನೂ ಬದಲಾವಣೆ ಆಗಲಿಲ್ಲ. ನನಗೆ ಸಿ‌ಇಟಿ ಫೇಲಾದಷ್ಟು ಬೇಸರವಾಗಿ ಕುಸಿದು ಕುಳಿತೆ.<br /><br />ಸಿನಿಮಾಗಳಲ್ಲಿ ಇಂತಹ ಪ್ರಕರಣ ನಡೆದದ್ದು ನೋಡಿ ಗೊತ್ತಿತ್ತೇ ಹೊರತು ನನಗೆ ಇಷ್ಟು ಹತ್ತಿರದಲ್ಲಿ ದುರ್ಘಟನೆಯೊಂದು ಸಂಭವಿಸಿದಾಗ ಏನು ಮಾಡಬೇಕೆಂದೂ ಗೊತ್ತಿರಲಿಲ್ಲ. ಮೀಸೆಯೆಂದರೆ ಮುಖದ ಮೇಲಿನ ಕಪ್ಪು ಕಾಮನಬಿಲ್ಲಿನಂತೆ. ಅದಿದ್ದರೇನೇ ಗಂಡಸಿನ ಮುಖಕ್ಕೊಂದು ಲಕ್ಷಣ. ಅದೇ ಇಲ್ಲದಿದ್ದರೆ?<br /><br />ಪಾರ್ಶ್ವವಾಯು ಹೊಡೆದವನಂತೆ ಕೂತಿದ್ದ ನನ್ನನ್ನು ಕರೆದೊಯ್ಯಲು ಯಾವ ಆಂಬುಲೆನ್ಸೂ ಬರುವ ಲಕ್ಷಣ ಕಾಣಲಿಲ್ಲ. ಒಂದೆರಡು ಹನಿ ಕಣ್ಣೀರಾದರೂ ಉದುರಿಸೋಣವೆಂದುಕೊಂಡವನು ಸೀನ್ ಸ್ವಲ್ಪ ಜಾಸ್ತಿ ಆಗುತ್ತೇನೋ ಅನ್ನಿಸಿ ಸುಮ್ಮನಾದೆ. ಅರ್ಧ ಭಾಗ ಮಾತ್ರ ಉಳಿದಿದ್ದ ನನ್ನ ಮೀಸೆಯನ್ನು ಮತ್ತೊಮ್ಮೆ ಕಣ್ತುಂಬ ನೋಡಿಕೊಂಡೆ. ಜಿಲೆಟ್ಟಿಗೆ ಬಲಿಯ ಜೀವ ಪೂರ್ತಿ ತೆಗೆದುಕೊಳ್ಳುವಂತೆ ಸೂಚಿಸಿದೆ.<br /><br />ಸ್ನಾನ ಮಾಡಿ ಹೊರಬರುವಾಗ ‘ಸಧ್ಯ, ಇವತ್ತು ರೂಮ್‌ಮೇಟ್ ಮನೇಲಿಲ್ಲ’ ಅಂತ ನಿಟ್ಟುಸಿರು ಬಿಟ್ಟೆ. ಒಬ್ಬನೇ ಇದ್ದಾಗ ಅವಮಾನವಾಗುವುದಕ್ಕೂ ನಾಲ್ಕು ಜನರ ಎದುರಿಗೇ ಆಗುವುದಕ್ಕೂ ವ್ಯತ್ಯಾಸವಿರುತ್ತದೆ. ಅವನಿದ್ದಿದ್ದರೆ ನನ್ನ ಶೇವಿಂಗ್ ಕಾರ್ಯ ಮುಗಿಯುತ್ತಿದ್ದಂತೆಯೇ ಉಗಿಯುತ್ತಿದ್ದ. ಈಗಾದರೆ ಹಾಗಲ್ಲ; ನಾನು ಮನುಷ್ಯಲೋಕವನ್ನು ಎದುರಿಸಲು ಮಾನಸಿಕವಾಗಿ ಸನ್ನದ್ಧನಾಗಲಿಕ್ಕೆ ಸಮಯವಿದೆ. ಹಾಗಂದುಕೊಂಡು, ಬಟ್ಟೆ ಧರಿಸಿ ಕನ್ನಡಿ ಮುಂದೆ ನಿಂತೆ. ಜಗತ್ತಿನ ಪೆಕರರ ಸಂಘದ ಅಧ್ಯಕ್ಷನೇ ನಾನಿರಬೇಕು ಅನ್ನಿಸಿತು. ಸಾವರಿಸಿಕೊಂಡೆ. ಸಮಾಧಾನ ಮಾಡಿಕೊಂಡೆ. ಒಂದಲ್ಲಾ ಒಂದು ದಿನ ಮೀಸೆ ತೆಗೆದು ನೋಡಬೇಕು ಅಂದುಕೊಂಡಿದ್ದ ನನ್ನ ಯೋಜನೆಯಂತೂ ಈಡೇರಿದೆ, ಇನ್ನು ಯಾರು ಏನೇ ಅಂದರೂ ಶಾಂತಚಿತ್ತದಿಂದ ಸ್ವೀಕರಿಸಬೇಕು ಅಂತ ತೀರ್ಮಾನಿಸಿದೆ. ನನಗೆ ನಾನೇ ‘ಬಾಲಿವುಡ್ ಹೀರೋ ಹಾಗೆ ಕಾಣ್ತಿದೀಯಾ ಬಿಡು’ ಅಂತ ಬೆನ್ತಟ್ಟಿಕೊಂಡೆ.<br /><br />ದಿನವೂ ಹೋಗುವ ಹೋಟೆಲ್ಲಿಗೆ ಹೋಗಲು ಭಯವಾಗಿ ಹೊಸ ಹೋಟೆಲ್ಲಿಗೆ ಹೋದೆ. ಆದರೂ ಕ್ಯಾಶಿಯರ್ರಿನಿಂದ ಹಿಡಿದು ಎಲ್ಲರೂ ನನ್ನನ್ನೇ ನೋಡುತ್ತಿದ್ದಾರೆ ಅನ್ನಿಸಿತು. ಆವತ್ತು ಯಾವ ಗೆಳೆಯರನ್ನೂ ಕಾಣಲು ಹೋಗಲಿಲ್ಲ. ಮರುದಿನ ಆಫೀಸಿಗೆ ಹಿಂಜರಿಯುತ್ತಲೇ ಹೋದೆ. ಕಲೀಗುಗಳ ಹೋ ನಗು. "ಗರ್ಲ್ ಫ್ರೆಂಡ್ ಚುಚ್ಚುತ್ತೆ ಅಂದ್ಲೇನ್ರೀ?"ಯಿಂದ "ಯಕ್ಷಗಾನದಲ್ಲಿ ಸ್ತ್ರೀಪಾತ್ರ ಮಾಡೋಕೆ ಹೋಗಿದ್ಯಾ?" ತನಕ ಪ್ರತಿಕ್ರಿಯೆಗಳು, ಹೀಯಾಳಿಕೆಗಳು, ಕಾಲೆಳೆಯುವಿಕೆಗಳು. ಅಷ್ಟು ದಿನ ಒಂದೂ ಮಾತಾಡದ ಕಲೀಗೊಬ್ಬಳು "ಐ ಲೈಕ್ ಗಯ್ಸ್ ವಿಥ್ ಮಸ್ಟಾಕ್" ಎಂದುಬಿಟ್ಟಳು. ಆದರೂ ‘ನೆನಪಿಗಿರಲಿ’ ಅಂತ ಒಂದೆರಡು ಫೋಟೋ ನಾನೇ ತೆಗೆದುಕೊಂಡೆ. ಧೈರ್ಯ ಮಾಡಿ ಆರ್ಕುಟ್ಟಿಗೂ ಹಾಕಿದೆ. ಕೆಲವರು ‘ಹಾರಿಬಲ್’ ಅಂದರು, ಕೆಲವರು ‘ಮದುವೆ ಯಾವಾಗ?’ ಕೇಳಿದರು, ಇನ್ನು ಕೆಲವರು ‘ಕೆಟ್ಟದಾಗಿ ಕಾಣ್ತೀಯ. ತಕ್ಷಣ ಛೇಂಜ್ ಮಾಡ್ದಿದ್ರೆ ಒದೆ ತಿಂತೀಯ’ ಅಂತ ಬೆದರಿಕೆ ಹಾಕಿದರು. ರೂಮ್‌ಮೇಟು ತಾನಿಲ್ಲದಾಗ ಇಂತಹ ಅಚಾತುರ್ಯವೊಂದು ಘಟಿಸಿದುದಕ್ಕಾಗಿ ವಿಷಾದ ವ್ಯಕ್ತಪಡಿಸಿದ. ಮೊನ್ನೆ ಮೇಫ್ಲವರಿಗೆ ಹೋಗಿದ್ದಾಗ ಮೋಹನ್ ಸರ್ ಕೈಕುಲುಕಿ ‘ಬೇಗ ಮೀಸೆ ಬರ್ಲಿ’ ಅಂತ ಹಾರೈಸಿಬಿಟ್ಟರು!<br /><br />ಕಳೆದುಕೊಂಡಾಗಲೇ ಇದ್ದುದರ ನಿಜವಾದ ಬೆಲೆ ಗೊತ್ತಾಗೋದು ಅಂತಾರೆ.. ನನ್ನ ಮೀಸೆ, ಅದು ಇಲ್ಲವಾದಮೇಲೆ ಅದಕ್ಕೆ ಭಾರೀ ಡಿಮಾಂಡ್ ಶುರುವಾಗಿದೆ. ಆದಷ್ಟೂ ಬೇಗ ಬೆಳೆಯಲಪ್ಪಾ ಅಂತ ನಂಬದ ದೇವರಲ್ಲೆಲ್ಲಾ ಪ್ರಾರ್ಥಿಸುತ್ತಿದ್ದೇನೆ. ಮೊರೆ ಕೇಳಿದೆಯಿರಬೇಕು, ಈಗ ಈ ಮಾನಿಟರ್ ಆಫ್ ಮಾಡಿದರೆ ಕಾಣುವ ನನ್ನ ಬಿಳೀ ಮೋರೆಯ ಅಸ್ಪಷ್ಟ ಪ್ರತಿಬಿಂಬದಲ್ಲಿ, ಸಣ್ಣ ಸಣ್ಣ ಕಪ್ಪುಚುಕ್ಕಿಗಳು ಒತ್ತೊತ್ತಾಗಿ ಮೂಡಿರುವುದು ಗೋಚರಿಸುತ್ತಿದೆ. ರಾತ್ರಿಯ ಆಕಾಶವನ್ನು ‘ಇನ್ವರ್ಟ್ ಕಲರ್ಸ್’ ಮಾಡಿದ ಹಾಗೆ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-4973016262840538110?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com26tag:blogger.com,1999:blog-27009232.post-28688626089327807302009-03-26T12:45:00.001+05:302009-05-29T12:54:30.359+05:30ಹಾರಯಿಕೆಫಾಲ್ಗುಣದ ಕೊನೆ ಸಂಜೆ, ಹೊತ್ತು ಮುಳುಗುವ ಸಮಯ,<br />ರವಿ ಕಂಡು ಕುಂಕುಮಕೆ ಹೊಟ್ಟೆಕಿಚ್ಚು;<br />ತನ್ನ ಕೊಕ್ಕಿನ ಕೆಂಪೆ ಹೆಚ್ಚೆಂಬ ಭ್ರಮೆ ಕಳೆದು,<br />ಗೂಡ ದಾರಿಯಲಿರ್ದ ಗಿಳಿಮೊಗವು ಪೆಚ್ಚು ||<br /><br />ಇರುಳು ಇಳಿಯಲೆಬೇಕು, ಹಗಲು ಅಳಿಯಲೆಬೇಕು,<br />ಇಲ್ಲದಿರೆ ಇಳೆಗಿಲ್ಲ ನಾಳೆಯಾ ನಲಿವು;<br />ಮುಗಿದು ಚಂದ್ರನ ಪಾಳಿ, ತಾರೆ ತೆರೆಮರೆ ಸರಿದು<br />ಅರಳಿದರೆ ಅರುಣಪ್ರಭೆ ಮಧುಮಾಸವು ||<br /><br />ಚೈತ್ರವೆಂದರೆ ಹಸಿರು, ನಭದಲ್ಲಿ ಮೇಘಗಳು,<br />ಝರಿನೀರು ಜರಿದು ಧರೆ ಧುಮುಕುವಾ ಸದ್ದು;<br />ಎಲ್ಲೊ ತಪ್ಪಲಿನಲ್ಲಿ ನಾಟ್ಯವಾಡಲು ನವಿಲು,<br />ಸೆಟೆದು ನೂಪುರ ಸೆರಿಗೆ ಮೈಕೊಡವಿ ಸಜ್ಜು ||<br /><br />ಸಿರಿಸೂರೆಯಾಗಿರುವ ಮಾಮರದ ಎಲೆಮರೆಯೇ<br />ಪರಪುಟ್ಟ ಹಕ್ಕಿಗೆ ಸರಿಯಾದ ಗೊತ್ತು;<br />ಕುಹುಕುಹುವೆ ಹಾಡಿಲ್ಲಿ, ಪಕ್ಕವಾದ್ಯವೇ ಬೇಡ<br />ಶ್ರವಣಸ್ವರ್ಗದಿ ಸರಿದು ಸರಸರನೆ ಹೊತ್ತು ||<br /><br />ಋತುರಾಜನಾರ್ಭಟದಿ ಕಳೆದು ಕಹಿಯೆಲ್ಲ<br />ಹಿತಭಾವ ಹೃದಯದಲಿ ನೆಲೆಯೂರಲಿ;<br />ಜೀವಜೀವಪ್ರೀತಿ ಎಂದೂ ಮುಗಿಯದೆ ಇರಲಿ<br />ವರುಷವಿಡೀ 'ವಿರೋಧಿ' ಬರಿ ಹೆಸರಿಗಿರಲಿ ||<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-2868862608932780730?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com16tag:blogger.com,1999:blog-27009232.post-47652651429726366622009-03-16T01:31:00.007+05:302009-05-29T13:10:20.758+05:30ಇವತ್ತು ಬರೆಯದೇ ಇರಲಾರೆ.."ಭಾಗ್ಯನ್ನ ಮನೆ ತುಂಬಿಸ್ಕ್ಯಂಡಾತು" ಎಂದ ಅಮ್ಮನ ದನಿಯಲ್ಲಿ ಸಂಭ್ರಮವಿತ್ತು. 'ಇಪ್ಪತ್ತೈದು ವರ್ಷದ ಹಿಂದೆ ನೀನು ಈ ಮನೆ ತುಂಬಬೇಕಾದ್ರೂ ಇಷ್ಟೇ ಸಂಭ್ರಮವಿತ್ತಾ ಅಮ್ಮಾ?' ಅಂತ ಕೇಳಬೇಕು ಅಂದುಕೊಂಡೆ, ಅಷ್ಟೊತ್ತಿಗೆ "ಒಲೆ ಮೇಲೆ ಎಂತೋ ಇಟ್ಟಿಕ್ ಬೈಂದಿ.. ಅಪ್ಪನ್ ಹತ್ರ ಮಾತಾಡ್ತಿರು" ಅಂತಂದು, ಅಪ್ಪನಿಗೆ ಫೋನು ಕೊಟ್ಟು ಅಡುಗೆ ಮನೆಗೋಡಿದಳು ಅಮ್ಮ. ಏನೆಲ್ಲ ಕೇಳಬೇಕೆಂದುಕೊಂಡಿದ್ದೆ ಅಮ್ಮನ ಬಳಿ, ಕೇಳಲಾಗಲೇ ಇಲ್ಲ.<br /><br />ಹಾಗೆ ಒಲೆ ಮೇಲಿಟ್ಟ ಪಾತ್ರೆ ನೆನಪಿಸಿಕೊಂಡು ಒಳಗೋಡಿದ್ದು ಅದೆಷ್ಟು ಸಲವೋ ನನ್ನಮ್ಮ... 'ಅಯ್ಯೋ ಉಕ್ಕಿದರೆ ಉಕ್ಕಿತು, ಸೀದರೆ ಸೀಯ್ತು, ಹೊತ್ತಿದರೆ ಹೊತ್ತಿತು, ಆಮೇಲ್ ನೋಡ್ಕೊಂಡ್ರಾಯ್ತು; ಫಸ್ಟು ಪಿಚ್ಚರ್ ನೋಡು, ಇಲ್ಲಿ ಬಾ ಕೂತ್ಕೋ' ಎಂಬ ನಮ್ಮ ಮಾತು ಅವಳು ಎಂದಾದರೂ ಕೇಳಿದ್ದಿದೆಯಾ? ಅವಳ ಕಾಳಜಿಗೆ ಎಣೆಯಿಲ್ಲ.. ಅಡುಗೆ ಮನೆಯಲ್ಲಿ ಹೊಳೆಯುವ ಪ್ರತಿ ದಬರಿ, ಪ್ರತಿ ಸೌಟು, ಪ್ರತಿ ಲೋಟ, ಪ್ರತಿ ಚಮಚಕ್ಕೂ ಗೊತ್ತು ಅದು. ಕೇಳಿ ನೋಡಿ ಬೇಕಿದ್ದರೆ.<br /><br />ಆದರೂ... ಇಂಥದ್ದೊಂದು ಆಸ್ತೆಯನ್ನು, ಇಂಥದ್ದೊಂದು ಪ್ರೀತಿಯನ್ನು ಅದು ಹೇಗೆ ತಾನೆ ರೂಢಿಸಿಕೊಂಡೆ ಅಮ್ಮಾ? ಅಥವಾ, ಅದು ಹೆಣ್ಣುಮಕ್ಕಳ ರಕ್ತದಲ್ಲೇ ಇರುತ್ತದಾ? ಇದು ನಮ್ಮ ಮನೆ, ಇವು ನಮ್ಮ ಮನೆಯ ವಸ್ತುಗಳು, ಇವರು ನಮ್ಮವರು -ಎಂದೆಲ್ಲ ಗುರುತಿಸಿಕೊಂಡು, ಗಟ್ಟಿ ಮಾಡಿಕೊಂಡು, ಇವಕ್ಕೆಲ್ಲಾ ಹೊಂದಿಕೊಂಡು, ಇವನ್ನೆಲ್ಲ-ಇವರನ್ನೆಲ್ಲ ಸಲಹುವ ಈ ಗುಣ ಹೇಗೆ ಬಂತದು ನಿಂಗೆ? ಎಷ್ಟು ದಿನ ತಗೊಂಡೆ ಕಲಿಯಲು: ಈ ಮನೆಯ ಸಂಪ್ರದಾಯಗಳು, ಅಡುಗೆಯ ರುಚಿ, ಯಜಮಾನರ ಬೇಕು-ಬೇಡಗಳು, ಮಾವನ ಸಿಡಿಮಿಡಿಗೆ ಕಾರಣಗಳು, ಅತ್ತಿಗೆಯರ ಗಮನಿಸುವಿಕೆ - ಅತ್ತೆಯ ಜೋರುಬಾಯಿಗಳ ಜತೆಗೇ ನಿನ್ನನ್ನು ನೀನು ಸ್ಥಾಪಿಸಿಕೊಳ್ಳಬೇಕಾದ ಅನಿವಾರ್ಯತೆ... ಹೆಪ್ಪಿಗೆ ಎಷ್ಟು ಮಜ್ಜಿಗೆ ಬಿಡಬೇಕು, ಬೆಳಗ್ಗೆ ಬೆಡ್‍ಕಾಫಿಗೆ ಹಾಲೆಷ್ಟು ಎತ್ತಿಡಬೇಕು, ಸಾಕಿದ ನಾಯಿಯ ತಟ್ಟೆಗಿಷ್ಟು ಅನ್ನ ಹಾಕಬೇಕು, ಸದ್ದಾಗದಂತೆ ಹಾಕಿಕೊಳ್ಳಬೇಕು ಕೋಣೆಯ ಬಾಗಿಲ ಚಿಲಕ, ಏಳಬೇಕು ಎಲ್ಲ ಏಳುವ ಮುನ್ನ, ಬಳಿದ ಅಂಗಳದಲ್ಲಿ ದಿನಕ್ಕೊಂದು ಚುಕ್ಕಿರಂಗೋಲಿ, ಗುಡಿಸಿ ಪುಟ್ಟ ಮನೆ - ಜೋಡಿಸಿಟ್ಟು ಎಲ್ಲ ಅಚ್ಚುಕಟ್ಟಾಗಿ, ಎಷ್ಟೆಂದರೂ ತವರಿನದೆಂತನಿಸದ ಬಚ್ಚಲಿನಲ್ಲಿ ಸ್ನಾನ, ಪೂಜೆಯ ಸಮಯಕ್ಕೊಂದು ಹಾಡು, ಹೊತ್ತಿಗೆ ಸರಿಯಾಗಿ ಅಡುಗೆ, ಹೊಸ ಪರಿಚಯದ ಪಕ್ಕದ ಮನೆಯವಳ ಜೊತೆ ಕಳೆದೂ ಸಮಯ, ಇಳಿದರೆ ಸಂಜೆಯಲೆ ರಾತ್ರಿ -ಮೌನ ಸಮ್ಮತಿ.<br /><br />ಎಷ್ಟು ಮಾಗಿ, ಎಷ್ಟು ಚಳಿ, ಎಷ್ಟು ಮಳೆಗಾಲ, ಅದೆಷ್ಟು ದಾಹ ನೀಗದ ಬೇಸಗೆ, ಇದ್ದಕ್ಕಿದ್ದಂತೆ ಬಂದ ಹಳೇಮಳೆ, ತವರ ನೆನಪು, ಗುಡುಗು, ಅಪ್ಪುಗೆ, ರಾತ್ರಿ, ಕತ್ತಲೆ, ಮುನಿಸು, ತಣಿಸು, ಬೆರಗು, ಕನಸು, ಬೆಳಗು.. ಮೊದಲ ಬಾರಿ ಸಾರಿಗೆ ಉಪ್ಪು ಜಾಸ್ತಿಯಾದಾಗ, ಅದು ಹೇಗೆ ಸಹಿಸಿಕೊಂಡೆ ಅಪ್ಪ ಸಿಡಿಗುಟ್ಟಿದ್ದು? ಮೊದಲ ಬಾರಿ ತನಗಾಗದವರಿಗೆ ನೀನೇನೋ ಕೊಟ್ಟೆ ಅಂತ ಅಜ್ಜಿ ಕೋಪ ತೋರಿದಾಗ ಬೆವರಿದ ನೀನು ಅದು ಹೇಗೆ ಕರಗದೇ ಉಳಿದೆ? ಮೊದಲ ಬಾರಿ ಪೂಜೆಯ ಸಮಯಕ್ಕೆ ದೇವರ ದೀಪ ಹಚ್ಚಿರಲಿಲ್ಲಾಂತ ಅಜ್ಜ ಬಾಯಿ ಮಾಡಿದಾಗ ನೀನು ಸುರಿಸಿದ ಕಣ್ಣೀರು ನೆಲದಲ್ಲಿ ಹಿಂಗಿ ಎಷ್ಟಾಳಕ್ಕೆ ಇಳಿದಿರಬಹುದು ಈಗ?<br /><br />ಹೇಳು: ತಿಂಗಳು ನಿಂತು, ವಾಕರಿಕೆ ಶುರುವಾದಾಗ ನಿನ್ನ ಹೃದಯದಲ್ಲಿ ಮಿಡಿದ ಮೊದಲ ಭಾವ ಯಾವುದು..? ತುಂಬಾ ಕಷ್ಟ ಕೊಟ್ಟೆನಾ ಅಮ್ಮಾ ನಾ ನಿನ್ನ ಹೊಟ್ಟೆಯಲ್ಲಿದ್ದಾಗ? ಒದ್ದೆನಾ ನಿನಗೆ? ತಿಂದಿದ್ದೆಲ್ಲಾ ವಾಂತಿಯಾಗುತ್ತಿತ್ತಂತೆ.. ಹಣುಕಿದ ನನ್ನ ಅತ್ತೆ ನಕ್ಕಳಂತೆ.. ತವರಿಗೆ ಸುದ್ದಿ ಮುಟ್ಟಿಸಿದ್ಯಾರು? ಬಂದನಾ ಮಾವ ತಕ್ಷಣ ಓಡೋಡಿ- ತಂಗಿಯನ್ನು ಕಾಣಲು? ಅಣ್ಣ ಬಂದಿದ್ದಾನೆಂದು ಹೆಚ್ಚು ಸಂಭ್ರಮಿಸಲು ಹೋಗಿ ಅಜ್ಜಿಯ ದೊಡ್ಡ ಕಣ್ಣುಗಳ ನೋಟಕ್ಕೆ ಗುರಿಯಾದೆಯಾ? ಹೊಟ್ಟೆಯೊಳಗೆ ಬೆಳೆಯುತ್ತಿದ್ದಾಗ ನಾನು, ಕೆಮ್ಮಣ್ಣು ತಿನ್ನುವ ಬಯಕೆಯಾಯ್ತಾ? ಎಷ್ಟು ನೋವನುಭವಿಸಿದೆ ನನ್ನ ಭುವಿಗೆ ತರಲು? ಕೈತುತ್ತು ಬೇಡವೆಂದು ದೂಡಿದಾಗ ಚಂದಿರನ ಕರೆದದ್ದು ನೀನೇನಾ? ಎದೆಹಾಲ ಸವಿ, ನಿನ್ನ ಮಡಿಲ ಬೆಚ್ಚನೆ ಅನುಭವ, ಮೆತ್ತನೆ ತೊಟ್ಟಿಲ ತೂಗು, ಲಾಲಿಯ ಗಾನದ ಲಹರಿ, ನಿನ್ನ ಮೈಮೇಲೇ ಉಚ್ಚೆ ಹೊಯ್ದದ್ದು... ಊಹೂಂ, ಒಂದೂ ನೆನಪಿಲ್ಲ ನನಗೆ. ಗೌರಿ ಎಂಬ ಹೆಸರಿನ ಹುಡುಗಿ ಬೆಂಕಟವಳ್ಳಿ ಎಂಬ ಹೆಸರಿನ ಗ್ರಾಮದಲ್ಲಿ ಬಿರಿದರಳಿ ಹಸಿಗನಸುಗಳ ಕಂಡು ಮಾಗಿ ಬೆಳೆದು ದೊಡ್ಡೇರಿ ಎಂಬೂರಿನ ಶ್ರೀಧರಮೂರ್ತಿ ಎಂಬ ಹುಡುಗನಿಗೊಲಿದು ಲಗ್ನವಾಗಿ ಬಂದು ಇಂದಿಗೆ ಇಪ್ಪತ್ತೈದು ವಸಂತಗಳು ಆಗಿಹೋದವು -ಎಂಬ ಸಂಗತಿ ಇಷ್ಟೆಲ್ಲಾ ಕಲ್ಪಿಸಿಕೊಳ್ಳುವಂತೆ ಮಾಡುತ್ತಿದೆ ಅಷ್ಟೇ..<br /><br />ಒಂದು ನಿಮಿಷ ಅಪ್ಪಾ, ಫೋನಿಡಬೇಡ.. ಮಾತನಾಡುವುದಿದೆ ನಿನ್ನ ಬಳಿಯೂ.. ಅಮ್ಮನೇ ಆಗಿದ್ದಳಾ ನಿನ್ನ ಕನಸು? ಹುಡುಗಿ ನೋಡಿ ಬಂದ ರಾತ್ರಿ ಕೂತು ಬರೆದೆಯಾ ಕವನ ಎದೆಯಲ್ಲಿ? ಅಕ್ಷತಾವರ್ಷದಲಿ ತೋಯುತ್ತ ಕಟ್ಟುವಾಗ ತಾಳಿ, ಓಲಗದ ದನಿ ಝೇಂಕಾರವಾಗಿತ್ತಾ? ಮನೆಗೆ ಬಂದ ಹುಡುಗಿ ಬಡತನದ ಚಾಪೆಗೂ ಹೊಂದಿಕೊಳ್ವೆನೆಂದಾಗ ಸೆರೆಯುಬ್ಬಿಬಂತಾ? ಹೌದು ಹೌದು, ಇವಳೇ ನನ್ನವಳು ಎನ್ನಿಸಿತಾ? 'ಅಮ್ಮ ಸ್ವಲ್ಪ ಜೋರು, ಏನಾದ್ರೂ ಅಂದ್ರೆ ಬೇಜಾರಾಗ್ಬೇಡ' ಅಂತ ಎಷ್ಟು ಸಣ್ಣ ದನಿಯಲ್ಲಿ ಹೇಳಿದೆ? ಪೇಟೆಯಿಂದ ತಂದು ಕದ್ದು-ಮುಚ್ಚಿ ಕೊಟ್ಟ ಮೊದಲ ವಸ್ತು ಯಾವುದು? ಥೇಟರಿಗೆ ಹೋಗಿ ಒಟ್ಟಿಗೆ ನೋಡಿದ ಮೊದಲ ಸಿನಿಮಾ ಯಾವುದು? ತವರಿಂದ ತಂದ ಹೂಗಿಡವನ್ನು ನೆಡಬೇಕೆಂದಾಗ ಬುಟ್ಟಿಯಲ್ಲಿ ಗೊಬ್ಬರ ಹೊತ್ತುತಂದು ಕೊಟ್ಟೆಯಂತೆ ಅಂಗಳಕ್ಕೆ? ಅದರಲ್ಲರಳಿದ ಮೊದಲ ಹೂವು ಮುಡಿದಾಗ ಮಡದಿ, ತುಂಬ ಚಂದವೆನಿಸಿದ್ದು ಅವಳೋ ಅಥವಾ ಅವಳ ನಾಚಿಕೆಯೋ? ಅವಳೊಳಗೂ ನಿನ್ನದೊಂದು ಹೂವರಳಿರುವ ಸುದ್ದಿ ತಿಳಿದಾಗ, ಆ ಮೊದಲ ಸಿನಿಮಾದಲ್ಲಿ ನಾಯಕ ಎತ್ತಿಕೊಂಡಂತೆಯೇ ಎತ್ತಿಕೊಳ್ಳಬೇಕಿನಿಸಿತಾ ಅಮ್ಮನನ್ನು?<br /><br />ನಾನು ಹುಟ್ಟಿದಾಗ, ಯಾರೋ 'ಥೇಟ್ ಅಪ್ಪಂದೇ ಮುಖ' ಎಂದಾಗ, ಎಷ್ಟು ಅಪ್ಪ ಅಪ್ಪ ಅನ್ನಿಸಿರಬಹುದು ನಿನಗೆ.. ಮೊದಲ ಬಾರಿ ನಾನು 'ಪ್ಪ' ಅಂತ ತೊದಲಿದಾಗ ಹಿಗ್ಗಿ ಎಷ್ಟೆತ್ತರಕ್ಕೆ ಎತ್ತಿಕೊಂಡೆ ನನ್ನ? ನಿನಗಿಲ್ಲದಿದ್ದ ಸೌಭಾಗ್ಯವೆಲ್ಲ ನನಗೆ ದೊರಕಲಿ ಎಂದು ಎಲ್ಲೆಲ್ಲೋ ಸಾಲ ಮಾಡಿ ದುಡ್ಡು ಹೊಂದಿಸಿ ಯುನಿಫಾರಂ ಹೊಲಿಸಿ, ಜಾಮಿಟ್ರಿ ಬಾಕ್ಸ್ ಕೊಡಿಸಿ, ಶಾಲೆಗೆ ಸೇರಿಸಿದ ಶ್ರಮಕ್ಕೆ 'ನಿಮ್ ಮಗ ಓದೋದ್ರಲ್ಲಿ ಸಖತ್ ಜೋರಿದಾನೆ' ಎಂಬ ಟೀಚರ್ರ ಪ್ರಶಂಸೆ ಮತ್ತು ವರ್ಷದ ಕೊನೆಯ 'ಕ್ಲಾಸಿಗೇ ಫಸ್ಟ್' ಮಾರ್ಕ್ಸ್ ಕಾರ್ಡ್ ಸಾಟಿಯಾ? ಊಹೂಂ.. ನೀನು ನನಸು ಮಾಡಿಕೊಳ್ಳಲಾಗದ ಕನಸುಗಳನ್ನು ನನ್ನಲ್ಲಿ ಬಿತ್ತಿ ಚಿಗುರಿಸಿ ಅವು ಸಾಕಾರಗೊಳ್ಳುತ್ತಾ ಹೋಗುವುದನ್ನು ಕಂಡು ಖುಶಿಗೊಂಡೆಯಾ? ನನ್ನನ್ನು ಬೆಂಗಳೂರಿಗೆ ಕಳುಹಿಸುವಾಗ ನಿನಗಾದ ಕಳವಳವೆಷ್ಟು? 'ಕೆಲಸ ಸಿಗ್ತು' ಅಂತ ನಾ ಫೋನಲ್ಲಿ ತಿಳಿಸಿದಾಗ ನಿನಗಾದ ನಿರಾಳವೆಷ್ಟು? ನನ್ನ ಮೊದಲ ಕತೆ ಪ್ರಕಟವಾದಾಗ ಹೇಗೆ ಪ್ರತಿಕ್ರಿಯಿಸಿದೆ? ನನ್ನ ಮೊದಲ ಪುಸ್ತಕವನ್ನು 'ಮಗ ಬರ್ದಿದ್ದು' ಅಂತ ಎಷ್ಟು ಜನಕ್ಕೆ ತೋರಿಸಿದೆ?<br /><br />ಅಮ್ಮಾ, ಹೊರಬೈಲಿನಿಂದ ಸೈಕಲ್ಲಿನಲ್ಲಿ ಬರುತ್ತಿದ್ದ ಅಪ್ಪ ದಾರಿಯಲ್ಲಿ ಎಚ್ಚರತಪ್ಪಿ ಬಿದ್ದಿದ್ದಾನೆ ಎಂಬ ಸುದ್ದಿ ಕೇಳಿ ಎಷ್ಟು ಜೋರಾಗಿ ಓಡಿದೆ ಅಲ್ಲಿಗೆ? ರಕ್ತ ಸೋರುವ ಅವನ ಹಣೆ ಕಂಡಾಗ ನಿನಗೂ ತಲೆಸುತ್ತಿ ಬಂತಲ್ಲ.. ಕೊಟ್ಟಿಗೆಮನೆಗೆ ಬೆಂಕಿ ಬಿದ್ದಾಗ ಮೊದಲು ಓಡಿ ದನಕರುಗಳ ಹಗ್ಗ ಕತ್ತರಿಸಿ ಅವನ್ನು ಹೊರಗೋಡಿಸಿ ಸಮಯಪ್ರಜ್ಞೆ ತೋರಿದ್ದೂ ನೀನೇ ಅಲ್ಲವಾ? ಅಜ್ಜಿ ಹಾಸಿಗೆ ಹಿಡಿದಾಗ ಅವಳ ಸೇವೆ ಮಾಡುವುದು ಸೊಸೆಯ ಕರ್ತವ್ಯ ಎಂಬಂತೆ ನಡೆದುಕೊಂಡೆಯಲ್ಲ.. ಅವಳು ತೀರಿಕೊಂಡಾಗ, ಇನ್ನು ನೀನೇ ಈ ಮನೆಯನ್ನು ಸಂಭಾಳಿಸಬೇಕು ಎಂಬ ಸತ್ಯವನ್ನು ಹೇಗೆ ಮನದಟ್ಟು ಮಾಡಿಕೊಂಡೆ? ಅಪ್ಪಾ, ಜೋರು ಜ್ವರ ಬಂದ ನನ್ನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ತಾನೂ ಬರುತ್ತೇನೆಂದು ಅಂಜುಮೋರೆಯಲ್ಲಿ ಹೇಳಿದ ಅಮ್ಮನನ್ನು ಹೇಗೆ ಸಮಾಧಾನಿಸಿದೆ? ನೆಂಟರ ಮನೆ, ಯಕ್ಷಗಾನ ತಾಳಮದ್ದಲೆ, ಬೆಂಗಳೂರು -ಅಂತ ಎಲ್ಲೇ ಒಂದು ರಾತ್ರಿ ಹೊರಗೆ ಉಳಿಯಬೇಕಾದ ಸಂದರ್ಭ ಬಂದಾಗಲೂ ಅಮ್ಮನಿಗೆ ಫೋನ್ ಮಾಡಿ ತಿಳಿಸುವುದನ್ನು ಮರೆತೆಯಾ? ಒಮ್ಮೆಯಾದರೂ..?<br /><br />ಕೆ‍ಎಸ್‍ನ ಬರೆದರು ಕವಿತೆ:<br /><br />ಒಂದು ಹೆಣ್ಣಿಗೊಂದು ಗಂಡು<br />ಹೇಗೋ ಸೇರಿ ಹೊಂದಿಕೊಂಡು<br />ಕಾಣದೊಂದು ಕನಸ ಕಂಡು<br />ಮಾತಿಗೊಲಿಯದಮೃತವುಂಡು<br />ದುಃಖ ಹಗುರವೆನುತಿರೆ,<br />ಪ್ರೇಮವೆನಲು ಹಾಸ್ಯವೇ?<br /><br />ಇಪ್ಪತ್ತೈದು ವರ್ಷಗಳ ಹಿಂದೆ ಅಮ್ಮ ನಮ್ಮನೆಗೆ ಬಂದ ಹಾಗೇ, ಇವತ್ತು ಮತ್ತೊಬ್ಬಳು ಬಂದು ಸೇರಿದಳಂತೆ ನಮ್ಮನೆಗೆ.. ಹೆಸರು ಭಾಗ್ಯ.. ಅದು ಅಜ್ಜನ ಮನೆಯಿಂದ ನಮ್ಮನೆಗೆ ಬಂದ ದನವಿನ ಕರು.. ಈ ಇಪ್ಪತ್ತೈದು ವರ್ಷಗಳಲ್ಲಿ ನಮ್ಮಿಬ್ಬರ ಮನೆಗಳ ಮಧ್ಯೆ ಹೀಗೆ ಅದೇನೇನು ಬಂದು-ಹೋಗಿವೆಯೋ.. ವಿನಿಮಯಗಳಾಗಿವೆಯೋ.. ಪ್ರೀತಿಗೆ ಹೇಗೆ ಹಚ್ಚೋಣ ಲೆಕ್ಕ? ಮದುವೆಯೆಂಬುದು ಬರೀ ಒಂದು ಗಂಡು-ಹೆಣ್ಣಿನ ನಡುವಿನದಲ್ಲವಷ್ಟೇ? ದಾಂಪತ್ಯವೆಂಬುದು ಬಂಧವೇ ಆದರೂ ಅದರಲ್ಲಿ ಪ್ರೇಮವೊಂದು ಇದ್ದರೆ ಬಾಳೆಷ್ಟು ಸುಂದರ..<br /><br />ಭಾಗ್ಯನನ್ನು ಮನೆತುಂಬಿಸಿಕೊಂಡ ಖುಶಿಯಲ್ಲಿದ್ದಾರೆ ಅಲ್ಲಿ ಅಮ್ಮ-ಅಪ್ಪ.. ಸುದ್ದಿ ಕೇಳಿದ ನನಗೂ ಏನೆಲ್ಲ ನೆನಪಾಗಿ ತುಂಬಿಬಂದಿದೆ ಮನಸು.. ಯಾಕೋ, ಕಣ್ಣೂ.<br /><br />[<span style="font-style: italic;">15.03.2009; ಮಧ್ಯಾಹ್ನ 12:30</span>]<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-4765265142972636662?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com38tag:blogger.com,1999:blog-27009232.post-75833909167129089462009-01-15T12:13:00.001+05:302009-05-29T12:54:30.361+05:30ಸೂತ್ರ ತಪ್ಪಿದೆಸುಗ್ಗಿಯ ಬಿಡುವಿನಲ್ಲಿ<br />ಅಣ್ಣನು ಮಾಡಿಕೊಟ್ಟ ಬಣ್ಣದ ಹಾಳೆಯ<br />ಬಾಲಂಗೋಚಿಯ ತನ್ನಯ ಪಟವನ್ನು<br />ಹಾರಿಸುತ್ತಿದ್ದಾಗ ಆ ತಮ್ಮ, ಕಣ್ಣಲ್ಲಷ್ಟೇ ಅಲ್ಲ;<br />ಎದೆಯಲ್ಲೂ ನೀಲಿ ಬಾನು, ಸಂಭ್ರಮ.<br /><br />ಎಷ್ಟೋ ಸಲ ಆ ಬಾನ ಕಕ್ಷೆಯಲ್ಲಿ ಬಣ್ಣಬಿಲ್ಲು ಮೂಡುತಿತ್ತು..<br />ಸಾಲಲಿ ಸಾಗುವ ಬಿಳಿಹಕ್ಕಿಗಳು,<br />ಥಳಥಳ ಹೊಳೆಯುವ ಬಾಲದ ವಿಮಾನ,<br />ಕನಸಿನಲ್ಲೋ, ಕೆಲವೊಮ್ಮೆ ಸಾಕ್ಷಾತ್ ದೇವರು!<br /><br />ನೋಡನೋಡುತ್ತಲೇ ಚದುರಿ ಹೋಯಿತಲ್ಲ ಆ ಚಿತ್ರ..<br />ನಗರಕ್ಕೆಂದು ರಾತ್ರಿಬಸ್ಸು ಹತ್ತಿ ಹೊರಟುಬಿಟ್ಟನಲ್ಲ ಹುಡುಗ-<br />ಹರಿದು ಆ ಪಟದ ಸೂತ್ರ..<br /><br />ಲಿಫ್ಟಿನ ಗುಂಡಿಯೊತ್ತಿ ಮೇಲೇರಿ ಸೇರಿಬಿಟ್ಟನಲ್ಲ<br />ಗಾಜು ಹೊದಿಸಿದ ಬೃಹತ್ ಕಟ್ಟದ<br />ಎಂಟನೇ ಮಹಡಿಯಲ್ಲಿನ ತನ್ನ ಕಛೇರಿ..<br />ಮೊಬೈಲಿನ ಮಾತಾಗಿ, ತಾಕಿಯೇಬಿಟ್ಟನಲ್ಲ<br />ಎತ್ತರದ ಟವರ್ರಿನ ಆಂಟೆನಾ ಕಡ್ಡಿ..<br />ಆಗಸಮುಖಿಯಾಗಿ ಹಾರಿಯೇಬಿಟ್ಟನಲ್ಲ<br />ಕಂಡು ಕೇಳರಿಯದ ದೇಶಕ್ಕೆ ವಿಮಾನದಲ್ಲಿ..<br />ಕೊನೆಗೆ ಯಾರಿಗೂ ಸಿಗದವನಾಗಿ..<br />ಅದೇ ಪಟದಂತೆ.. ಎತ್ತರದಲ್ಲಿ..<br />ತೇಲಿಸಿದ ಯಾವುದೋ ಗಾಳಿಯಲ್ಲಿ.. ಏರಿ ಏರಿ..<br />ಏರಿ.. ಅವನು.. ಬಿತ್ತರದಲ್ಲಿ..<br /><br />ನೋಡನೋಡುತ್ತಲೇ ಚದುರಿ ಹೋಯಿತಲ್ಲ ಆ ಚಿತ್ರ..<br />ಹರಿದಿದ್ದು ಹೇಗೆ ಈ ಪಟದ ಸೂತ್ರ?<br /><br />ಕಾಯುತ್ತಿದ್ದಾನೆ ಹುಡುಗ, ಕನಸು ಕಾಣುತ್ತಿದ್ದಾನೆ..<br />ಬೀಸಿ ಬಂದೀತೇ ಮತ್ತೆ ಮಾಯೆಯ ಗಾಳಿ?<br />ತೇಲಿಸೀತೇ, ನೆಲ ಬಿಟ್ಟು ಹಾರಿಸೀತೇ ಕರುಣಾಮಯಿ?<br />ಕೂಡೀತೆ ಹರಿದ ದಾರ? ಸಿಕ್ಕೀತೆ ಸೂತ್ರ?<br /><br />ಮಳೆಬಿಲ್ಲಿಲ್ಲದ ಬಾನಬಯಲಲ್ಲೀಗ ಹಕ್ಕಿಯಿಲ್ಲ,<br />ವಿಮಾನಬಾಲವಿಲ್ಲ, ದೇವರಂತೂ ಸುಳಿವಿಗೇ ಇಲ್ಲ;<br />ಇಲ್ಲಿ ಸೂತ್ರ ತಪ್ಪಿದೆ ಮತ್ತು-<br />ಹಳೆಯ ಬಾನಿನ ವಿಳಾಸ ಮರೆತು ಹೋಗಿದೆ!<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7583390916712908946?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com22tag:blogger.com,1999:blog-27009232.post-79907137385601285582009-01-09T09:44:00.003+05:302009-01-09T10:02:24.044+05:30ನವರಂಗ್ ಟು ಶಿವಾನಂದಇದನ್ನು ಬರೀಲಿಕ್ಕೆ ಕಾರಣ: (೧) ಶ್ರೀನಿಧಿ ಅವತ್ತೆಲ್ಲೋ ಮೆಸೇಜು ಮಾಡಿ 'ನೀನು ನಾರ್ತ್ ಬೆಂಗಳೂರಿನ ಹೋಟೆಲುಗಳ ಯಾಕೆ ಬರೀಬಾರ್ದು? ನಾನು ಸೌತ್ಸ್ ಬಗ್ಗೆ ಬರೀತೀನಿ' ಅಂತ ಹೇಳಿದ್ದು; (೨) ಸಾಮಾನ್ಯವಾಗಿ ಕರ್ತವ್ಯಲೋಪ ಮಾಡುವ ಅವನು, ಸೌತ್ ಬೆಂಗಳೂರಿನ ಹೋಟೆಲುಗಳ ಬಗ್ಗೆ ಮೊನ್ನೆ <a href="http://shree-lazyguy.blogspot.com/2008/11/blog-post_12.html">ಬರೆದೇಬಿಟ್ಟಿದ್ದು</a>.<br /><br />ನಾನಿದನ್ನು ಬರೆಯಲಿಕ್ಕೆ ಸಾಧ್ಯವಾಗುತ್ತಿರುವುದು: (೧) ನಾನಿರುವುದು ರಾಜಾಜಿನಗರದಲ್ಲಿ ಮತ್ತು ಆಫೀಸಿರುವುದು ಕುಮಾರ ಪಾರ್ಕ್ ಬಳಿ; (೨) ನನಗಿನ್ನೂ ಮದುವೆಯಾಗಿಲ್ಲ ಮತ್ತು ನಾನಿನ್ನೂ ಬ್ಯಾಚುಲರ್ರು (ಅಥವಾ ವೈಸಾ ವರ್ಸಾ); (೩) ನಾನು ಮನೆಯಲ್ಲಿ ಅಡುಗೆ ಮಾಡಬೇಕೆಂದರೆ ಅದಕ್ಕೆ ಸಿಕ್ಕಾಪಟ್ಟೆ ಫ್ರೀ ಟೈಮ್ ಇರಬೇಕು, ರೂಮ್‍ಮೇಟ್ ಇರಬೇಕು ಮತ್ತು ಮುಖ್ಯವಾಗಿ ಮೂಡ್ ಇರಬೇಕು -ಇವು ಪ್ರತಿದಿನ ಕೂಡಿಬರುವುದಿಲ್ಲ; (೪) ಹೋಟೆಲುಗಳಲ್ಲಿ ತಿನ್ನುವುದು ನನ್ನ ಸೋಮಾರಿತನಕ್ಕೆ ಒಳ್ಳೆಯ ಔಷಧಿ.<br /><br />ರಾಜಾಜಿನಗರದ ನವರಂಗ್ ಸರ್ಕಲ್ಲಿನಿಂದ ಕುಮಾರ ಪಾರ್ಕ್‌ನ ಶಿವಾನಂದ ಸರ್ಕಲ್‌ವರೆಗಿನ ನನ್ನ ಇಷ್ಟದ ಹೋಟೆಲ್ಲುಗಳು ಅಥವಾ ಎಲ್ಲ ಹೋಟೆಲುಗಳಿಗಿಂತ ಸ್ವಲ್ಪ ಭಿನ್ನ/ವಿಶೇಷ ಉಪಹಾರ ಸಿಗುವ ಹೋಟೆಲುಗಳು ಹೀಗಿವೆ:<br /><br /><span style="color: rgb(102, 0, 0); font-weight: bold;">ಹೋಟೆಲ್ ನಳಪಾಕ, ನವರಂಗ್:</span> ನವರಂಗ್ ಟಾಕೀಸಿನಿಂದ ಮೋದಿ ಆಸ್ಪತ್ರೆ ಕಡೆ ನಾಲ್ಕೇ ನಾಲ್ಕು ಹೆಜ್ಜೆ ಇಟ್ಟರೆ ಎಡಗಡೆಗೆ ತನ್ನ ಆಕಾಶನೀಲಿ ಬಣ್ಣದ ಬೋರ್ಡಿನೊಂದಿಗೆ ನಳನಳಿಸುವ ಈ 'ಈಟ್ ನ್ ಔಟ್' ಹೋಟೆಲ್ಲಿನಲ್ಲಿ ಸಿಗುವ ಸ್ಪೆಶಲ್ ಫುಡ್ಡುಗಳೆಂದರೆ: ಅವಲಕ್ಕಿ, ಪಡ್ಡು (ಗುಳಿಯಪ್ಪ ಅಥವಾ ಕುಣಿ-ಕುಣಿ-ದೋಸೆ), ಮಿರ್ಚಿ, ಗಿರ್‌ಮಿಟ್ಟಿ. ಬೆಣ್ಣೆದೋಸೆ ಸಹ ಚೆನ್ನಾಗಿರುತ್ತೆ.<br /><br /><span style="color: rgb(102, 0, 0); font-weight: bold;">ಹಳ್ಳಿಮನೆ, ಮಲ್ಲೇಶ್ವರಂ:</span> 'ಆರೋಗ್ಯಕರ ಆಹಾರ' ಎಂಬ ಹಣೆಪಟ್ಟಿ ಇಲ್ಲಿಯ ಎಲ್ಲ ಐಟೆಮ್ಮುಗಳಿಗೆ ಇದೆ. ರವೆ ಇಡ್ಲಿ, ಪೂರಿ-ಪಲ್ಯ ಸೂಪರ್ರು. ಟೊಮ್ಯಾಟೋ ದೋಸೆ, ಅನಾನಸ್ ದೋಸೆ, ಪುದಿನಾ ದೋಸೆ, ಕ್ಯಾರೇಟ್ ದೋಸೆ ಅಂತೆಲ್ಲ ಸ್ಪೆಶಲ್ ದೋಸೆಗಳನ್ನು ಮಾಡುತ್ತಾರೆ. ಇಲ್ಲಿ ದೋಸೆ ಬೇಯಿಸಲಿಕ್ಕೆ ಎಣ್ಣೆ ಬಳಸುವುದಿಲ್ಲ. ಶುದ್ಧ ತುಪ್ಪ ಬಳಸುತ್ತಾರೆ. ಸೊಗದೆ ಬೇರು, ಕೋಕಮ್, ಗಸಗಸೆ -ಮುಂತಾದ ತಂಪು ಪಾನೀಯಗಳು ಲಭ್ಯ. ಕಾಫಿಯಂತೂ ನನ್ನಂತ 'ಕಾಫೀ-ಕುಡುಕ'ರಿಗೆ ಕಿಕ್ಕು!<br /><br /><span style="color: rgb(102, 0, 0); font-weight: bold;">ಶಕ್ತಿ ವೆಜಿಟೇರಿಯನ್, ಮಲ್ಲೇಶ್ವರಂ:</span> ಸಂಪಿಗೆ ರಸ್ತೆಯಲ್ಲಿ, ಹಳ್ಳಿಮನೆ ಹೋಟೆಲ್ಲಿಗಿಂತ ಎರಡು ಕ್ರಾಸು ಹಿಂದೆ ಇದೆ. ಮೊದಲ ಮಹಡಿಯಲ್ಲಿರುವುದರಿಂದ ಕಣ್ಣು ತಪ್ಪಿಹೋಗುವ ಸಾಧ್ಯತೆ ಹೆಚ್ಚು. ಇಲ್ಲಿಯ ಮೃದು ಚಪಾತಿ, ಅದನ್ನು ಮುರಿಯುವಾಗಲೇ ಅದರಲ್ಲಿನ ಸ್ವಾದಿಷ್ಟತೆಯ ಅನುಭವ ಆಗುತ್ತದೆ. ಹಚ್ಚಿಕೊಳ್ಳಲಿಕ್ಕೆ ಸಬ್ಜಿಗಳೂ ಚೆನ್ನಾಗಿರುತ್ತವೆ. 'ಇಲ್ಲಿ ಎಷ್ಟು ಚಪಾತಿ ತಿಂದರೂ ತಿಂದದ್ದೇ ಗೊತ್ತಾಗೊಲ್ಲ ಮಾರಾಯಾ!' ಎನ್ನುವುದು ಇಲ್ಲಿ ತಿನ್ನುವಾಗಿನ ಪ್ರಶಂಸೆ ಮತ್ತು ಬಿಲ್ ಕೊಡುವಾಗಿನ ಆರೋಪ.<br /><br /><span style="color: rgb(102, 0, 0); font-weight: bold;">ಸಹ್ಯಾದ್ರಿ ದರ್ಶಿನಿ, ಮಲ್ಲೇಶ್ವರಂ:</span> ಬೆಂಗಳೂರಿನ ಹೋಟೆಲ್ಲುಗಳಲ್ಲಿ ವಿರಳವಾಗಿ ಸಿಗುವ ಖಾಲಿ ದೋಸೆ ಮತ್ತು ಶ್ಯಾವಿಗೆ ಉಪ್ಪಿಟ್ಟು -ಇಲ್ಲಿ ಸಿಗುತ್ತೆ ಮತ್ತು ಸಖತ್ತಾಗಿರುತ್ತೆ. ವಿಳಾಸ: ಮಾರ್ಗೋಸಾ ರೋಡ್, ಹತ್ತನೇ ಕ್ರಾಸ್ ಹತ್ತಿರ.<br /><br /><span style="color: rgb(102, 0, 0); font-weight: bold;">ಹೋಟೆಲ್ ಜನತಾ, ಮಲ್ಲೇಶ್ವರಂ:</span> ಜನನಿಭಿಡ ಏಯ್ಥ್ ಕ್ರಾಸಿನಲ್ಲಿದೆ. ಮಸಾಲೆ ದೋಸೆಗೆ 'ಕ್ಯೂ-ಫೇಮಸ್ಸು'. ವಡೆ-ಸಾಂಬಾರ್, ಕಾಫಿ ಸಖತ್. ಪಂಚೆ ಉಟ್ಟುಕೊಂಡ ಸರ್ವರುಗಳು ಊರ ಕಡೆ ಹೋಟೆಲು ನೆನಪಿಸಿ ಅರೆಕ್ಷಣ ಮೈಮರೆಸಿದರೆ ಅಚ್ಚರಿಯೇನಲ್ಲ.<br /><br /><span style="color: rgb(102, 0, 0); font-weight: bold;">ರಸ, ಮಲ್ಲೇಶ್ವರಂ: </span>ಸಂಪಿಗೆ ರಸ್ತೆಯಲ್ಲಿ, ಶಕ್ತಿ ವೆಜಿಟೇರಿಯನ್‌ನ ಹಿಂದಿನ ಕ್ರಾಸಿನಲ್ಲಿದೆ. ದುಬಾರಿ ರೆಸ್ಟುರೆಂಟು, ಹೀಗಾಗಿ ಬಿಲ್ಲು ಪಾವತಿಸುವವರು ಬೇರೆಯವರು ಅಂತಾದರೆ ಕರೆದುಕೊಂಡು ಹೋಗಬಹುದು! ಮೂರು ಫ್ಲೋರುಗಳಲ್ಲಿದೆ. ಒಂದು ಫ್ಲೋರಿಗೆ 'ರಸ', ಇನ್ನೊಂದಕ್ಕೆ 'ಹೆಜ್ಜೆ', ಮತ್ತೊಂದಕ್ಕೆ 'ಶೀಶ' ಎಂಬುದಾಗಿ ಹೆಸರಿಡಲಾಗಿದೆ. ಇದು ಬಾರ್-ಕಮ್-ರೆಸ್ಟುರೆಂಟು ಮತ್ತೆ ವೆಜ್ ಅಂಡ್ ನಾನ್‌ವೆಜ್. ಇದರ ಬಗ್ಗೆ ಬರೆಯಲು ಕಾರಣ, ಇಲ್ಲಿ ಏನು ಬೇಕಾದರೂ ಸಿಗುತ್ತದೆ! ಬೆಂಗಳೂರು, ಮಂಗಳೂರು, ಮಲೆನಾಡು, ಚೈನೀಸು, ನಾರ್ತ್ ಇಂಡಿಯನ್ನು -ಹೀಗೆ ಎಲ್ಲಾ ಕಡೆಯ ತಿನಿಸುಗಳು ಸಿಗುತ್ತವೆ. ಅಂಬೊಡೆ, ಪತ್ರೊಡೆ, ಶಾವಿಗೆ-ಕಾಯಿಹಾಲು, ಪಕೋಡ -ಎಲ್ಲವೂ ತಿನ್ನುವಾಗ ರುಚಿಗೆ ಮತ್ತೊಂದು ಹೆಸರೇನೋ ಅನ್ನಿಸೊತ್ತೆ. 'ನಾನ್‍ವೆಜ್ ಐಟೆಮ್ಮುಗಳೂ ಅದ್ಭುತ' -ನನ್ನ ಕಲೀಗುಗಳ ಹೇಳಿಕೆ.<br /><br /><span style="font-weight: bold; color: rgb(102, 0, 0);">ಕೃಷ್ಣಾ ಭವನ, ಮಲ್ಲೇಶ್ವರಂ: </span>ಸಂಪಿಗೆ ರಸ್ತೆಯಲ್ಲಿ, ಸಂಪಿಗೆ ಟಾಕೀಸ್ ಬಳಿ ಇದೆ. ಮಂಗಳೂರು ಬನ್ಸ್, ಶ್ಯಾವಿಗೆ ಸಿಗುತ್ತೆ. ಮತ್ತೆ 'ಬಟನ್ ಇಡ್ಲಿ' ಅಂತ ಕೊಡ್ತಾರೆ.. ಗೋಲಿಯಂತಹ ಪುಟ್ಟ ಪುಟ್ಟ ಇಡ್ಲಿಗಳು ಸಾಂಬಾರಿನಲ್ಲಿ ತೇಲುತ್ತಿರುತ್ತವೆ. ಇಡಿ ಇಡೀ ಇಡ್ಲಿಗಳನ್ನು ಸ್ಪೂನಿನಿಂದ ಬಾಯಿಗಿಟ್ಟುಕೊಂಡು ಗುಳುಂ ಮಾಡುವಾಗ ಮಜಾ ಬರುತ್ತೆ.<br /><br /><span style="color: rgb(102, 0, 0); font-weight: bold;">ಭೀಮಾಸ್, ಶೇಷಾದ್ರಿಪುರಂ:</span> ಮಂಗಳೂರಿನ ಕಡೆಯವರ ಹೋಟೆಲ್ಲು. ಮಂಗಳೂರು ಭಜ್ಜಿ (ಗೋಳಿಭಜ್ಜಿ), ಆಲೂ ಪರೋಟಾ, ನಾನ್-ರೋಟಿ ಚೆನ್ನಾಗಿರುತ್ತವೆ. ವಿಶಾಲವೆನಿಸುವಂತಹ ಹೊರ ಆವರಣದಲ್ಲಿ ಮರದ ನೆರಳಲ್ಲಿ ಹಾಕಿದ ಖುರ್ಚಿಯಲ್ಲಿ ಕೂತು ತಿನ್ನಬಹುದು. ಇಲ್ಲಿಯ ಊಟ ವರ್ಷಗಳಿಂದ ನನ್ನ ಮತ್ತು ನನ್ನ ಕಲೀಗುಗಳ ಮಧ್ಯಾಹ್ನದ ಹಸಿವನ್ನು ತಣಿಸುತ್ತಿದೆ.<br /><br /><span style="color: rgb(102, 0, 0); font-weight: bold;">ಜನಾರ್ಧನ ಹೋಟೆಲ್, ಶಿವಾನಂದ ಸರ್ಕಲ್:</span> ಸಾಗು ದೋಸೆ, ಮಸಾಲೆ ದೋಸೆ ಮತ್ತು ಕಾಫಿ -ರುಚಿ ನೋಡಲೇಬೇಕಾದವು. ಟೈಮಿಂಗ್ಸ್ ಇದೆ, ನೋಡಿಕೊಂಡು ಹೋಗಬೇಕು. ಬಾಗಿಲು ತೆರೆಯುವುದನ್ನೇ ಕಾಯುತ್ತಾ ಹೊರಗೆ ಜನ ಕೂತಿರುತ್ತಾರೆ. ಸಂಜೆ ಐದು ಗಂಟೆಗೆ ಓಪನ್ನು ಎಂದರೆ, ೦೫:೦೫ಕ್ಕೆ ಹೋದರೆ ನೀವು ವೇಯ್ಟಿಂಗ್ ಲಿಸ್ಟ್ ಸೇರುತ್ತೀರಿ! ಅನಾದಿ ಕಾಲದಿಂದಲೂ 'ಜನಾರ್ಧನ' ದೋಸೆಗೆ ಹೆಸರುವಾಸಿ.<br /><br />ಸಧ್ಯಕ್ಕೆ ನೆನಪಾಗುತ್ತಿರುವುದು ಇಷ್ಟು. ಅಥವಾ ನಾನು 'ಟ್ರೈ' ಮಾಡಿರುವ, 'ಟ್ರೈ' ಮಾಡಿದಾಗ ಇಷ್ಟವಾದ ಹೋಟೆಲುಗಳು ಇವು. ಇವನ್ನು ಬಿಟ್ಟು ಬೆಂಗಳೂರಿನ ತುಂಬ ಇರುವ ಶಾಂತಿಸಾಗರಗಳು, ಅಡಿಗಾಸ್‍ಗಳು ನಮ್ಮ ಏರಿಯಾದಲ್ಲೂ ಇವೆ. ಕಾಫಿ ಡೇ, ಪಿಜಾ ಹಟ್‌ಗಳೂ ಇವೆ. ಆಯ್ಕೆ ನಿಮ್ಮ ಪಾಕೀಟು, ಸಮಯ, ನಾಲಿಗೆ ಮತ್ತು ಬಹಳ ಸಲ, ಸಂಗಾತಿಗೆ ಬಿಟ್ಟಿದ್ದು. <span style="color: rgb(255, 0, 0);">:-)</span><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7990713738560128558?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com29tag:blogger.com,1999:blog-27009232.post-92044838136036553382009-01-01T00:10:00.001+05:302009-01-01T00:10:00.304+05:30ಕೀನ್ಯಾದ ಕಾಡಲ್ಲಿ ಹೊಸ ವರ್ಷ ಬಂದಂತೆಅಗೋ ಅಲ್ಲಿ ಮತ್ತೆ ಬಂದು ನಿಂತಿದೆ ಹೊಸ ವರ್ಷ.. ನಾನೂ ನೋಡುತ್ತಿದ್ದೇನೆ ಇಪ್ಪತ್ಮೂರು ವರ್ಷಗಳಿಂದ, ಸ್ವಲ್ಪವೂ ನಾಚಿಕೆಯಿಲ್ಲ ಈ ಹೊಸ ವರ್ಷಕ್ಕೆ, ಪ್ರತೀ ವರ್ಷ ಬರುತ್ತದೆ.. ನನಗಂತೂ ಇದನ್ನು ಸ್ವಾಗತಿಸೀ ಸ್ವಾಗತಿಸಿ, ಇದು ಬಂತು ಅಂತ ಆಪ್ತರಿಗೆಲ್ಲಾ ಶುಭಾಶಯ ಕೋರಿ, ಇದೇ ಸಂದರ್ಭ ಅಂತ ಗ್ರೀಟಿಂಗು-ಪ್ರೀಟಿಂಗು ಪ್ರಿಪೇರು ಮಾಡಿ, ಬರೆದು-ಬಿಡಿಸಿ ಎಲ್ಲರಿಗೂ ಕಳಿಸಿ, ಅವರಿಂದಲೂ ತರಹೇವಾರಿ ಶುಭಾಶಯಗಳು ವಾಪಸು ಬಂದು, ಅವುಗಳ ವೈವಿಧ್ಯತೆಗೇ ಮಾರುಹೋಗಿ ಮೆಚ್ಚಿಕೊಂಡು ಸಂಭ್ರಮಿಸಿ ಸಂಭ್ರಮಿಸಿ.... ಥೂ, ಬೇಸರ ಬಂದುಬಿಟ್ಟಿದೆ. ಸರೀನಪ್ಪ, ಒಂದ್ ವರ್ಷ ಬಂತು ಆಯ್ತು ಹೋಯ್ತು ಅಂತ ಇಲ್ವಾ ಹಾಗಾದ್ರೆ? ಬಹುಶಃ ಈ ಹೊಸ ವರ್ಷಕ್ಕೆ ಒಂದು ತರಹದ ಹುಂಬ ಜಂಬ: ತಾನು ಬರ್ತಿದೀನಿ ಅಂದಕೂಡಲೇ ಈ ಜನಗಳೆಲ್ಲಾ ಖುಶಿಯಿಂದ ಸ್ವಾಗತಿಸಲಿಕ್ಕೆ ತಯಾರಾಗ್ತಾರೆ ಅಂತ.. ಅದಕ್ಕೇ, ನಾನು ಈ ವರ್ಷ ಏನೇನೂ ಸೆಲೆಬ್ರೇಟ್ ಮಾಡಬಾರ್ದು, ಬಂದ ಹೊಸ ವರ್ಷಕ್ಕೆ ಸ್ವಲ್ಪಾನೂ ಗೌರವ ತೋರಿಸದೇ ಅವಮಾನ ಮಾಡ್ಬೇಕು ಅಂತ ತೀರ್ಮಾನಿಸಿದೀನಿ!<br /><br />ಆದರೆ ಹಾಗೆ ಸುಮ್ಮನೆ ಕುಳಿತಿರಲು ಆಗುತ್ತಾ? ಕನ್ವರ್ಷನ್ನು ಟೆರರಿಸಮ್ಮು ರಿಸಿಷನ್ನು ರೀ‌ಎಲೆಕ್ಷನ್ನು ವೋಟಿಂಗು ಕಾಸ್ಟ್ ಕಟಿಂಗು ಅಯ್ಯೋ ಬಿಟ್‌ಹಾಕಿ ಸಾರ್, ದಿನಾ ಇದ್ದದ್ದೇ ರಗಳೆ, ಹೊಸ ವರ್ಷ ಬಂದಿದೆ, ಪಾರ್ಟಿ ಮಾಡೋಣ ಬನ್ನಿ, ಎಂಜಾಯ್ ಮಾಡಿ, ಅದೇ ಲೈಫು -ಕೈ ಹಿಡಿದು ಎಳೆಯುತ್ತಿದ್ದಾರೆ ಗೆಳೆಯರು! ರೆಸಾರ್ಟುಗಳೆಲ್ಲಾ ಆಲ್ರೆಡೀ ಬುಕ್ಕುಡು, ಎಂಟ್ರಿ ಫಾರ್ ಕಪಲ್ಸ್ ಓನ್ಲೀ, ಇಡೀ ಫ್ಯಾಮಿಲಿನೇ ಹೋದ್ರೆ ಡಿಸ್ಕೌಂಟು, ಓನ್ಲೀ ಟೂ ಥೌಸಂಡ್ ಪರ್ ಹೆಡ್ಡು (ಫ್ರೀ ಬಿಯರ್ರು; ಫುಡ್ಡಿಗೆ ಎಕ್ಸ್‌ಟ್ರಾ ದುಡ್ಡು), ವರ್ಷಕ್ಕೊಂದೇ ಇಯರೆಂಡು, ರಾತ್ರಿಯಿಡೀ ಗ್ಲಾಸ್ ಎತ್ತು, ಬಾಟಮ್ಸ್ ಅಪ್ಪು, ಎಂಜಿ ರಸ್ತೆಗೆ ಹೋದರೆ ಡೈರೆಕ್ಟಾಗಿ ಯಾರನ್ನಾದ್ರೂ ಅಪ್ಪು, ಹೇಳೋರಿಲ್ಲಾ ಕೇಳೋರಿಲ್ಲ, ಮುಂಜಾನೆ ಹೊತ್ತಲ್ಲಿ-ಕಂಪ್ಲೀಟ್ ಮತ್ತಲ್ಲಿ ಡ್ರೈವ್ ಮಾಡ್ಕೊಂಡ್ ಹೊರಡು, ಯಾರಿಗಾದ್ರೂ ಗುದ್ದು, ನೋ ಪ್ರಾಬ್ಲಮ್ಮು, ಅವ್ರೂ ನಶೇನಲ್ಲೇ ಇರ್ತಾರೆ, ವಿಷ್ ಮಾಡು, ಕೈ ಕುಲುಕು, ಮುಂದೆ ಹೋಗ್ತಿರು. ಹೊಸ ವರ್ಷ, ನಮ್ದೇಯಾ ಅಂತ ತಿಳ್ಕೋ, ಮಸ್ತ್ ಮಜಾ ಮಾಡು. ಈ ವರ್ಷ ಬಿಟ್ಕೊಂಡ್ರೆ ಮತ್ತೆ ನೆಕ್‌ಸ್ಟಿಯರ್ರೇ ಬರೋದು, ಸೋ ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೋಬೇಡ. ಹೊಸಬಟ್ಟೆ ಕೇಕು ಸ್ವೀಟು ಗಿಫ್ಟು ವೋಡ್ಕಾ ವ್ಹಿಸ್ಕಿ ಪಾರ್ಟಿ ಬೇಕಾಬಿಟ್ಟಿ ಕ್ರ್ಯಾಕರ್ರು ಬ್ಯಾನರ್ರು ಕ್ಯಾಲೆಂಡರು ಹ್ಯಾಪಿನಿವ್ವಿಯರ್ರು ಒಟ್ನಲ್ಲಿ ಖುಶ್ ಖುಶ್ ಆಗಿ ಇರು. ಜಸ್ಟ್ ಸೇ ಚಿಯರ್ಸ್.<br /><br />‘ಏನಾಗ್ತಾ ಇದೆ ನಮ್ಮ ಸಂಸ್ಕೃತಿ? ಎಲ್ಲಾ ಪಾಶ್ಚಿಮಾತ್ಯ ದೇಶದವರನ್ನ ಅನುಕರಿಸ್ತಾ ಇದೀವಿ. ಇದು ಒಳ್ಳೇದಲ್ಲ..’ ರುದ್ರಾಕ್ಷಿ ಸರ ಹಿಡಿದ ವಿಭೂತಿ ಹಣೆಪಟ್ಟಿಯ ವೃದ್ಧ ಗೊಣಗುತ್ತಾನೆ. ‘ಛೇ ಅಜ್ಜಾ ನಿಂಗೆ ಅವೆಲ್ಲಾ ಗೊತ್ತಾಗಲ್ಲ. ಹೊಸವರ್ಷ ಹ್ಯಾಸ್ ಕಮ್ಮು, ವಿ ಹ್ಯಾವ್ ಟು ವೆಲ್‌ಕಮ್ಮು! ನೀನು ಸುಮ್ನೇ ಕೂತಿರು. ಈಗ ಅಯಾಮ್ ಗೋಯಿಂಗ್ ಫಾರ್ ಶಾಪಿಂಗು ವಿಥ್ ಮೈ ಗರ್ಲ್‌ಫ್ರೆಂಡು’ ಮೊಮ್ಮಗ ತಿರುಗಿ ಹೇಳುತ್ತಾನೆ.<br /><br />ನಾನು ಮೂಕವೀಕ್ಷಕನಂತೆ ಕುಳಿತಿದ್ದೇನೆ ಎಂದಿನಂತೆ. ಛಂದ ಪುಸ್ತಕ ಮೊನ್ನೆ ಹೊರತಂದ ‘ಲೇರಿಯೊಂಕ’ ಎಂಬ ಕಾದಂಬರಿ ಹಿಡಿದು. ಪ್ರಶಾಂತ್ ಬೀಚಿ ಅನುವಾದಿಸಿರುವ ಹೆನ್ರಿ ಆರ್. ಓಲೆ ಕುಲೆಟ್‌ರವರ ಕಾದಂಬರಿ ‘ಲೇರಿಯೊಂಕ’. ಕೀನ್ಯಾ ದೇಶದ ಮಾಸಾಯಿ ಜನಾಂಗದ ದನಗಾಹಿ ಹುಡುಗನೊಬ್ಬ ಅಕ್ಷರ ಕಲಿಯಲು ಹೊರಡುವ ಕತೆ ಅದು. ಅದೆಷ್ಟು ರೋಚಕವಾಗಿದೆ ಕತೆ ಎಂದರೆ, ಇನ್ನೂರಾ ಮೂವತ್ತೆರಡು ಪುಟಗಳ ಕಾದಂಬರಿಯನ್ನು ನಾಳೆಗಿಟ್ಟುಕೊಳ್ಳಲೂ ಆಗದೇ ನಾನು ಒಂದೇ ಸಿಟ್ಟಿಂಗಿಗೆ ಓದಿ ಮುಗಿಸಿಬಿಟ್ಟೆ.<br /><br />ದಟ್ಟ ಆಫ್ರಿಕನ್ ಕಾಡುಗಳಲ್ಲಿ ಅದು ನಡೆಯುವಾಗ ನಮಗೆ ಕುವೆಂಪುರವರ ‘ಮಲೆಗಳಲ್ಲಿ ಮದುಮಗಳು’ ನೆನಪಾಗುತ್ತದೆ. ಭರ್ಜಿ ಎಸೆದು ಪ್ರಾಣಿಗಳನ್ನು ಹೊಡೆದು ತಿನ್ನುವ ನಿರೂಪಣೆ ಓದುವಾಗ ಕೆದಂಬಾಡಿ ಜತ್ತಪ್ಪ ರೈರವರ ‘ಬೇಟೆಯ ನೆನಪುಗಳು’ ನೆನಪಾಗುತ್ತದೆ. ಲೇರಿಯೊಂಕ ಎಂಬ ಆ ಹುಡುಗ ತನ್ನ ಮುದ್ದು ಶೈಲಿಯಲ್ಲಿ ಕತೆ ಹೇಳುತ್ತಾ ಹೋಗುವಾಗ ಎಲ್ಲೋ ಒಂದು ಕಡೆ ‘ಆಲ್ಕೆಮಿಸ್ಟ್’ ನೆನಪಾಗುತ್ತದೆ. ನಿರಾಶ್ರಿತನಂತೆ ಕೇವಲ ಬದುಕುಳಿಯುವ ಛಲದಿಂದ ನಡೆಯುತ್ತ ನಡೆಯುತ್ತ ಹೋಗುವಾಗ ‘ಮಹಾಪಲಾಯನ’ ನೆನಪಾಗುತ್ತದೆ. ಕಲಿತು ಬಂದ ಹುಡುಗನನ್ನು ಊರು ಒಪ್ಪಲು ನಿರಾಕರಿಸುವ ದೃಶ್ಯ ಓದುವಾಗ ‘ಕಾನೂರು ಹೆಗ್ಗಡಿತಿ’ಯ ಹೂವಯ್ಯ ನೆನಪಾಗುತ್ತಾನೆ. ಹೀಗೆ ಓದಿನುದ್ದಕ್ಕೂ ಹಳೆಯ ಓದಿನ ಚಿತ್ರಗಳನ್ನು ಕೆದಕುತ್ತಾ ಹೋಗುವ ಇದು, ‘ಓದುವ ಸುಖ’ ಅಂತಾರಲ್ಲ, ಅದನ್ನನುಭವಿಸಲಿಕ್ಕೆ ಇರುವ ತಕ್ಕ ಉಪಕರ. ನಾವು ಆ ಹಳೆಯ ಕಾದಂಬರಿ-ಪುಸ್ತಕಗಳನ್ನೆಲ್ಲಾ ಎಷ್ಟು ಚೆನ್ನಾಗಿ ಓದಿಬಿಟ್ಟಿರುತ್ತೇವೆಂದರೆ, ಈ ಕಾದಂಬರಿ ಓದುವಾಗ ಆ ಕಾದಂಬರಿಯ ಚಿತ್ರಗಳೆಲ್ಲಾ ನಾವೇ ಈ ಹಿಂದೆ ಕಣ್ಣಾರೆ ಕಂಡವೇನೋ ಎಂಬಂತೆ ಬ್ಯಾಕ್‌ಗ್ರೌಂಡಿನಲ್ಲಿ ತೇಲುತ್ತಿರುತ್ತವೆ.<br /><br />ಈ ಅನಕ್ಷರಸ್ಥ ಕಾಡುಜನಗಳ ದುನಿಯಾ, ಅವರ ಬದುಕುವ ರೀತಿ, ಮುಗ್ಧತೆ, ನಂಬಿಕೆಗಳು ಅದೆಷ್ಟು ಬೇರೆಯೇ ಆಗಿವೆ ಎಂದರೆ, ನಮ್ಮ ಮುಂದುವರೆದ ಜಗತ್ತಿನೊಂದಿಗೆ ಅವು ಯಾವ ರೀತಿಯಲ್ಲೂ ಬೆರೆಯಲಾರವು. ಆದರೆ ಅದನ್ನು ಬೆರೆಸಲಿಕ್ಕಿರುವ ‘ಕಲಬಶ’ದಂತೆ ಭಾಸವಾಗುತ್ತದೆ ಶಿಕ್ಷಣ. ತಮ್ಮ ಜನಾಂಗದ ಹುಡುಗನೊಬ್ಬ ಸುಶಿಕ್ಷಿತನಾಗಲು ಹೊರಟನೆಂದರೆ ಆತ ವಾಪಸು ಬರುವುದಿಲ್ಲ, ಬಂದರೂ ಆತ ನಮ್ಮವನಾಗಿ ಉಳಿಯುವುದಿಲ್ಲ ಎಂದು ನಂಬಿದ್ದ ಮಾಸಾಯಿಗಳು, ಕೊನೆಗೆ ‘ಒಂದು ಕೈಯಲ್ಲಿ ಭರ್ಜಿ, ಇನ್ನೊಂದು ಕೈಯಲ್ಲಿ ಪುಸ್ತಕ ಹಿಡಿಯಲು ಸಾಧ್ಯ’ ಎಂಬ ತೀರ್ಮಾನಕ್ಕೆ ಬರುತ್ತಾರೆ. ಅದಕ್ಕೆ ಆಗ ಆಫ್ರಿಕಾದಲ್ಲಿದ್ದ ಸ್ವಾತಂತ್ರ್ಯ ಚಳುವಳಿಯೂ ಇಂಬು ಕೊಡುತ್ತದೆ. ನಗರ, ಶಾಲೆ, ಓದು, ವಿದ್ಯೆ, ಅಕ್ಷರ -ಇತ್ಯಾದಿ ಶಬ್ದಗಳ ಪರಿಚಯವೇ ಇಲ್ಲದಿದ್ದ ಲೇರಿಯೊಂಕ ವಿದ್ಯಾವಂತನಾಗಿ ಮರಳಿ ಬರುವಾಗ -ಕಾದಂಬರಿ ಓದುತ್ತಿರುವ ನಮ್ಮ ಮೈಯೂ ಒಮ್ಮೆ ಜುಮ್ಮೆನ್ನುತ್ತದೆ; ಉತ್ಸಾಹದಿಂದ ನರನಾಡಿಗಳಲ್ಲಿ ರಕ್ತದ ಚಲನೆ ವೇಗಗೊಳ್ಳುತ್ತದೆ.<br /><br />೧೯೫೦ರ ದಶಕದಲ್ಲಿನ ಕೀನ್ಯಾದ ಚಿತ್ರಣ ಈ ಕಾದಂಬರಿಯಲ್ಲಿದೆ. ಜಾಗತೀಕರಣ, ಕ್ರಿಸ್ತೀಕರಣಗಳಂತಹ ವಿಷಯಗಳೂ ಇಲ್ಲಿ ಇರುವುದರಿಂದ ವಿಮರ್ಶಕರಿಗೆ ಕೆಲಸ ಸಿಕ್ಕಿದೆ. ಪಾಶ್ಚಿಮಾತ್ಯ ಅಂತಲ್ಲ; ಹೊರ ಜಗತ್ತಿನ ಗಾಳಿಯ ಸೋಂಕೇ ಇಲ್ಲದೆ ಇದ್ದ ಕೀನ್ಯಾ (ಅಥವಾ ಆ ಮಾಸಾಯಿ ಪ್ರದೇಶ) ಈಗ ಹೇಗಿರಬಹುದು? ಕಾದಂಬರಿಯ ಕೊನೆಯಲ್ಲೇ ಅದು ಬದಲಾಗುವ ಮುನ್ಸೂಚನೆಗಳನ್ನು ಕೊಟ್ಟಿದ್ದಾರೆ ಲೇಖಕರು. ಇನ್ನು ಭಾರತ ಬದಲಾದ ಬಗ್ಗೆ ಅಥವಾ ಬದಲಾಗುತ್ತಿರುವ ಬಗ್ಗೆ ಮಾತನಾಡದಿರುವುದೇ ಲೇಸು! ಕಾದಂಬರಿಯಲ್ಲಿ ಬರುವ ಒಂದು ಸನ್ನಿವೇಶ ಹೀಗಿದೆ: ಹಾದಿ ಮಧ್ಯದಲ್ಲಿ ಶಾಲೆಗೆ ಹೋಗಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದ ಲೇರಿಯೊಂಕನಿಗೆ ಲಿವಿಂಗ್‌ಸ್ಟೋನ್ ಎಂಬ, ಅದಾಗಲೇ ಓದಿ-ಕಲಿತು ಬಂದಿದ್ದ ತಮ್ಮದೇ ಜನಾಂಗದವನ ಪರಿಚಯವಾಗುತ್ತದೆ. ಲಿವಿಂಗ್‌ಸ್ಟೋನ್ ಬಳಿ ಲೇರಿಯೊಂಕ ಕೇಳುತ್ತಾನೆ: "ಒಬ್ಬ ಓದಿ, ವಿದ್ಯಾವಂತನಾಗಿ ಬಂದು ಮತ್ತೆ ಈ ಅನಾಗರೀಕರ ಮಧ್ಯೆ ಅವರಂತೆ ಇರುವುದು ಹೇಗೆ ಸಾಧ್ಯ?" ಅದಕ್ಕೆ ಲಿವಿಂಗ್‌ಸ್ಟೋನ್ ಕಣ್ಣಲ್ಲಿ ನೀರು ತಂದುಕೊಂಡು ಹೇಳುತ್ತಾನೆ: "ದಯವಿಟ್ಟು ಇವರನ್ನು ಅನಾಗರೀಕರು ಎಂದು ಕರೆಯಬೇಡ. ನಿಜ ಹೇಳಬೇಕೆಂದರೆ, ಶಾಲೆಗೆ ಹೋಗಿರುವ ಬಹಳಷ್ಟು ಮಂದಿಗಿಂತ ಇವರು ನಾಗರೀಕರು. ನಮ್ಮಲ್ಲಿ ದ್ವಂದ್ವ ಇದೆ, ನಾವು ನಮ್ಮದೂ ಅಲ್ಲದ ವಿದೇಶಿಯರದೂ ಅಲ್ಲದ ಒಂದು ಕಳೆದುಹೋದ ಸಂಸ್ಕೃತಿಯಲ್ಲಿ ಇದ್ದೇವೆ ಅಷ್ಟೇ."<br /><br />ಇಷ್ಟು ಇಷ್ಟವಾಗುವಂತೆ ಕಾದಂಬರಿಯನ್ನು ಕನ್ನಡಕ್ಕೆ ತಂದ ಪ್ರಶಾಂತ್ ಬೀಚಿಗೂ, ಪ್ರಕಟಿಸಿದ ವಸುಧೇಂದ್ರರಿಗೂ ಥ್ಯಾಂಕ್ಸ್ ಹೇಳಿ ಒಂದು ಮೇಯ್ಲ್ ಮಾಡಬೇಕು ಎಂದುಕೊಂಡು ಖುರ್ಚಿಯಿಂದ ಏಳುತ್ತೇನೆ. ಹೊರಗಾಗಲೇ ಹೊಸ ವರ್ಷ ಬಂದುಬಿಟ್ಟಿದೆ. ಸೈಲೆಂಟ್ ಮೋಡಿನಲ್ಲಿದ್ದ ಮೊಬೈಲಿನ ತುಂಬಾ ‘ಹ್ಯಾಪಿ ನ್ಯೂ ಇಯರ್’ ಎಸ್ಸೆಮ್ಮೆಸ್ಸುಗಳು, ಮಿಸ್ಡ್ ಕಾಲುಗಳು. ಮೇಯ್ಲ್ ಬಾಕ್ಸ್ ತೆರೆದರೆ ಅಲ್ಲೂ ಶುಭಾಶಯಗಳು. ಹಾಸಿಗೆ ಬಿಚ್ಚಿಟ್ಟುಕೊಂಡು, ಆದಷ್ಟೂ ಮಂದಿಗೆ ಈಗಲೇ ರಿಪ್ಲೇ ಮಾಡಿ, ‘ನಮ್ಮ ಹೊಸವರ್ಷ ಯುಗಾದಿಗೆ ಶುರು ಆಗೋದು’ ಎಂದ ಗೆಳತಿಗೂ ಶುಭಾಶಯ ಕಳುಹಿಸಿ, ಇದೊಂದು ಬ್ಲಾಗ್‌ಪೋಸ್ಟ್ ಬರೆದು ಮಲಗುತ್ತಿದ್ದೇನೆ. ಕೀನ್ಯಾದ ಕಾಡಲ್ಲೂ ಬಂದಿರಬಹುದು ಹೊಸ ವರ್ಷ.. ಇನ್ನೇನು ನನಗೆ ಬೀಳಲಿರುವ ಕನಸಲ್ಲಿ ಲೇರಿಯೊಂಕ ಓಡುತ್ತಿರುತ್ತಾನೆ.. ಹಸುರಿನ ಹಳುವಿನಲ್ಲಿ ನುಸುಳಿ ಹಾರಿ ಓಡೋಡಿ ತನ್ನ ಗೆಳೆಯ ಲಿವಿಂಗ್‌ಸ್ಟೋನ್‌ನನ್ನು ಕಂಡು ಬಿಗಿದಪ್ಪಿ ಹೇಳುತ್ತಿರುತ್ತಾನೆ ‘ಹ್ಯಾಪಿ ನ್ಯೂ ಇಯರ್’.. ಸುತ್ತಲ ಹುಡುಗರೆಲ್ಲ ಅದನ್ನೇ ಪುನರುಚ್ಚರಿಸುತ್ತಾ ಕುಣಿದಾಡುತ್ತಾ ಕೈ ಕೈ ಹಿಡಿದು ಇವರನ್ನೇ ಸುತ್ತುತ್ತಾ...<br /><br />ನಿಮಗೂ ಹೊಸ ವರುಷದಲ್ಲಿ ಒಳ್ಳೊಳ್ಳೇದೇ ಆಗಲಿ. ಶುಭಾಶಯಗಳು.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-9204483813603655338?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com15tag:blogger.com,1999:blog-27009232.post-7097948263725153922008-12-16T10:52:00.009+05:302008-12-16T17:03:37.730+05:30ಸುಗ್ಗಿಗಾಗಿ ಹಾಕಿದ ಚಪ್ಪರಈ ಭಯೋತ್ಪಾದನೆ ಕೃತ್ಯ ನಡೆದ ಮೇಲೆ, ನಾವೆಲ್ಲಾ ಬ್ಲಾಗಿಗೆ ಕಪ್ಪು ಪಟ್ಟಿ ಬಳಿದುಕೊಂಡಮೇಲೆ ಒಂಥರಾ ಫುಲ್ ಸೀರಿಯಸ್‍ನೆಸ್ ಆವರಿಸಿಕೊಂಡುಬಿಟ್ಟಿದೆ! ಬಾಂಬು-ಟೆರರಿಸಂನಂತಹ ’ಸ್ಪೋಟಕ’ ವಿಷಯವನ್ನು ಬಿಟ್ಟು ಬೇರೆ ಏನೂ ಸಾಧಾರಣ ವಿಷಯ ಬರೀಲಿಕ್ಕೆ ಮನಸಾಗುತ್ತಲೇ ಇಲ್ಲ! ಹೀಗಾಗಿ, ನಾನು ಈ ’ಬರೆಯುವ’ ಗೋಜಿಗೇ ಹೋಗದೇ, ಒಂದಷ್ಟು ಫೋಟೋಗಳನ್ನು ಪೋಸ್ಟ್ ಮಾಡುವ ಆಲೋಚನೆ ಮಾಡುತ್ತಿದ್ದೇನೆ.<br /><br />ಕಳೆದ ವಾರ ಊರಿಗೆ ಹೋಗಿದ್ದೆ. ಊರಲ್ಲಿ ಸುಗ್ಗಿಯ ಸಿದ್ಧತೆ ನಡೆದಿತ್ತು. ನಮ್ಮನೆ ಪಕ್ಕದಲ್ಲಿ, ಅಡಿಕೆ ಸುಲಿಯಲು ಕೂರುವವರಿಗಾಗಿ ಆಳುಗಳು ಚಪ್ಪರ ಹಾಕುತ್ತಿದ್ದರು. ’ಸುಮ್ಮನೇ ಇರಲಿ’ ಎಂದು ಕ್ಲಿಕ್ಕಿಸಿದ ಅದರ ಒಂದಷ್ಟು ಫೋಟೋಗಳನ್ನು ಇಲ್ಲಿ ಹಾಕುತ್ತಿದ್ದೇನೆ.<br /><br />ಒಂದು ಕಡೆಯಿಂದ ನಾವು ಯುವಕರೆಲ್ಲಾ ಹಳ್ಳಿ ಬಿಟ್ಟು ಪಟ್ಟಣಗಳಿಗೆ ಬರುತ್ತಿದ್ದೇವೆ. ನನ್ನ ಅಥವಾ ನನ್ನ ಆಸುಪಾಸಿನ ವಯಸ್ಸಿನ ಯುವಕರು ಯಾರೂ ಉಳಿದಿಲ್ಲ ನಮ್ಮೂರಲ್ಲಿ ಸಧ್ಯ. ಬರೀ ಹಿರಿತಲೆಗಳೇ ತುಂಬಿಕೊಂಡಿವೆ. ಮತ್ತೊಂದು ಕಡೆ, ಈ ಹಿರಿಯರಿಗೆ ಕೆಲಸ ಮಾಡಿಸಿಕೊಳ್ಳಲು ಆಳುಗಳೂ ಸಿಗುತ್ತಿಲ್ಲ. ಅಂಗಳ ಮಾಡುವುದಕ್ಕೆ, ಅಟ್ಟ-ಚಪ್ಪರ ಹಾಕುವುದಕ್ಕೆ, ಕೊನೆ ಕೊಯ್ಲಿಗೆ, ನೇಣು ಹಿಡಿಯಲಿಕ್ಕೆ, ಅಡಿಕೆ ಹೆಕ್ಕಲಿಕ್ಕೆ, ಆಮೇಲೆ ಹೊರಲಿಕ್ಕೆ -ಆಳು ಸಿಗದೇ, ಸುಗ್ಗಿ ಮಾಡುವುದೇ ಕಷ್ಟ ಎಂಬಂತಹ ಪರಿಸ್ಥಿತಿ ಉಂಟಾಗಿದೆ. ನಮ್ಮೂರಲ್ಲಿ ಸುಮಾರು ಮನೆಗಳಲ್ಲಿ ಈ ವರ್ಷ ಫಸಲುಗುತ್ತಿಗೆ ಕೊಡುವುದೇ ಸೈ ಎಂದು ಯೋಚಿಸುತ್ತಿದ್ದಾರೆ. ಹಾಗಾಗಿ, ಈಗ ನಾನು ತೆಗೆದಿರುವ ಈ ಫೋಟೋಗಳು ಮುಂದೊಂದು ದಿನ ’ಡಾಕ್ಯುಮೆಂಟರಿ’ಗಳಾದರೂ ಅಚ್ಚರಿಯಲ್ಲ!<br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdeQmI17lI/AAAAAAAADSM/TvrGgZxv5kk/s1600-h/IMG_1291.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://1.bp.blogspot.com/_c2gCy0eVwAM/SUdeQmI17lI/AAAAAAAADSM/TvrGgZxv5kk/s320/IMG_1291.JPG" alt="" id="BLOGGER_PHOTO_ID_5280292727323749970" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://2.bp.blogspot.com/_c2gCy0eVwAM/SUdeRsXKdlI/AAAAAAAADSU/u6okQClMgc8/s1600-h/IMG_1292.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://2.bp.blogspot.com/_c2gCy0eVwAM/SUdeRsXKdlI/AAAAAAAADSU/u6okQClMgc8/s320/IMG_1292.JPG" alt="" id="BLOGGER_PHOTO_ID_5280292746174297682" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdeS8NccII/AAAAAAAADSc/EGs7JcKba-8/s1600-h/IMG_1296.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://1.bp.blogspot.com/_c2gCy0eVwAM/SUdeS8NccII/AAAAAAAADSc/EGs7JcKba-8/s320/IMG_1296.JPG" alt="" id="BLOGGER_PHOTO_ID_5280292767608369282" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://4.bp.blogspot.com/_c2gCy0eVwAM/SUdeTMKKyXI/AAAAAAAADSk/bW3j6BCeRqU/s1600-h/IMG_1298.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://4.bp.blogspot.com/_c2gCy0eVwAM/SUdeTMKKyXI/AAAAAAAADSk/bW3j6BCeRqU/s320/IMG_1298.JPG" alt="" id="BLOGGER_PHOTO_ID_5280292771889596786" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://2.bp.blogspot.com/_c2gCy0eVwAM/SUdeTaTT_tI/AAAAAAAADSs/f9wjBIjhkiE/s1600-h/IMG_1302.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://2.bp.blogspot.com/_c2gCy0eVwAM/SUdeTaTT_tI/AAAAAAAADSs/f9wjBIjhkiE/s320/IMG_1302.JPG" alt="" id="BLOGGER_PHOTO_ID_5280292775686045394" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdj1_fAKRI/AAAAAAAADTM/ZvfdonqinDU/s1600-h/IMG_1328.JPG"><img style="margin: 0px auto 10px; display: block; text-align: center; cursor: pointer; width: 240px; height: 320px;" src="http://1.bp.blogspot.com/_c2gCy0eVwAM/SUdj1_fAKRI/AAAAAAAADTM/ZvfdonqinDU/s320/IMG_1328.JPG" alt="" id="BLOGGER_PHOTO_ID_5280298867340880146" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdj1QAWmhI/AAAAAAAADTE/zZr6IRuzI4M/s1600-h/IMG_1323.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://1.bp.blogspot.com/_c2gCy0eVwAM/SUdj1QAWmhI/AAAAAAAADTE/zZr6IRuzI4M/s320/IMG_1323.JPG" alt="" id="BLOGGER_PHOTO_ID_5280298854595861010" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdj2ti5RxI/AAAAAAAADTU/C7LvrL2s744/s1600-h/IMG_1331.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://1.bp.blogspot.com/_c2gCy0eVwAM/SUdj2ti5RxI/AAAAAAAADTU/C7LvrL2s744/s320/IMG_1331.JPG" alt="" id="BLOGGER_PHOTO_ID_5280298879705237266" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://4.bp.blogspot.com/_c2gCy0eVwAM/SUdlRYRprZI/AAAAAAAADTc/dfbscODVmSA/s1600-h/IMG_1314.JPG"><img style="margin: 0px auto 10px; display: block; text-align: center; cursor: pointer; width: 240px; height: 320px;" src="http://4.bp.blogspot.com/_c2gCy0eVwAM/SUdlRYRprZI/AAAAAAAADTc/dfbscODVmSA/s320/IMG_1314.JPG" alt="" id="BLOGGER_PHOTO_ID_5280300437363862930" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SUdj08oATaI/AAAAAAAADS8/CYfl3kUZBR4/s1600-h/IMG_1321.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://1.bp.blogspot.com/_c2gCy0eVwAM/SUdj08oATaI/AAAAAAAADS8/CYfl3kUZBR4/s320/IMG_1321.JPG" alt="" id="BLOGGER_PHOTO_ID_5280298849393462690" border="0" /></a><br /><br /><a onblur="try {parent.deselectBloggerImageGracefully();} catch(e) {}" href="http://4.bp.blogspot.com/_c2gCy0eVwAM/SUdj0jX0wQI/AAAAAAAADS0/KE5ZcIDZ-XY/s1600-h/IMG_1307.JPG"><img style="margin: 0px auto 10px; display: block; text-align: center; cursor: pointer; width: 320px; height: 240px;" src="http://4.bp.blogspot.com/_c2gCy0eVwAM/SUdj0jX0wQI/AAAAAAAADS0/KE5ZcIDZ-XY/s320/IMG_1307.JPG" alt="" id="BLOGGER_PHOTO_ID_5280298842614710530" border="0" /></a><br /><div style="text-align: right;"><span style="color: rgb(51, 0, 0); font-weight: bold;">ಓದಿಲ್ಲದಿದ್ದಲ್ಲಿ: </span><a style="color: rgb(51, 102, 255); font-weight: bold;" href="http://hisushrutha.blogspot.com/2006/12/blog-post.html">ಸುಗ್ಗಿ ವ್ಯಾಳ್ಯಾಗ..</a><br /></div><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-709794826372515392?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com23tag:blogger.com,1999:blog-27009232.post-38857054676847626742008-12-02T11:11:00.005+05:302008-12-03T10:12:57.517+05:30ಅಟೆನ್ಷನ್ ಬ್ಲಾಗರ್ಸ್!!ಮುಂಬಯಿ ಗೆಳತಿ ನೀಲಾಂಜಲ, ತಮ್ಮ ಬ್ಲಾಗಿನಲ್ಲಿ <a href="http://neelanjala.wordpress.com/2008/12/01/%e0%b2%b9%e0%b3%80%e0%b2%97%e0%b3%8d%e0%b2%af%e0%b2%be%e0%b2%95%e0%b3%86-%e0%b2%ae%e0%b2%be%e0%b2%a1%e0%b2%ac%e0%b2%be%e0%b2%b0%e0%b2%a6%e0%b3%81/">ಬ್ಲಾಗಿಗರಿಗೆ ಒಂದು ಕರೆ ಇತ್ತಿದ್ದಾರೆ</a>. ಅತ್ತ ನಿಮ್ಮ ಗಮನ ಸೆಳೆಯಲು ಈ ಪೋಸ್ಟು. ದಯವಿಟ್ಟು ಎಲ್ಲರೂ ಸ್ಪಂದಿಸಿ.<br /><br />ಇದರಿಂದ ಏನೋ ದೊಡ್ಡ ಸಾಧನೆಯಾಗತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಎಲ್ಲರೂ ಸ್ಪಂದಿಸಿದರೆ ’ಏನಾದರೂ ಒಂದು’ ಆದೀತೇನೋ ಎಂಬ ಆಸೆ. ಏನಾದರೂ.. ಯಟ್ ಲೀಸ್ಟ್..<br /><br />ಏನಾದರೂ ಮಾಡೋಣ. ಇದನ್ನೆಲ್ಲಾ ನೋಡುತ್ತಾ ತೀರಾ ಸುಮ್ಮನೆ ಕೂತಿರುವುದು ಬೇಡ. ಭಯೋತ್ಪಾದಕ ಕೃತ್ಯದ ಲೈವ್ ಶೋ, ರಾಜಕಾರಣಿಗಳ ಹೊಲಸು ಮುಖವನ್ನು ನೋಡುತ್ತಾ ಹಲ್ಲು ಕಡಿದದ್ದು ಸಾಕು. ಒದ್ದೆಯಾಗುವ ಮನಸು ಮಾಡೋಣ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-3885705467684762674?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com1tag:blogger.com,1999:blog-27009232.post-32113880847074978812008-11-27T16:40:00.004+05:302009-05-29T13:20:16.709+05:30ಮೋಡ ಕವಿದ ವಾತಾವರಣ‘ಸ್ಥಳೀಯ ಹವಾ ಮುನ್ಸೂಚನೆಯಂತೆ, ಬೆಂಗಳೂರು ಮತ್ತು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ತುಂತುರು ಮಳೆ ಬೀಳುವ ಸಾಧ್ಯತೆ ಇದೆ’ -ಊರಲ್ಲಿದ್ದಾಗ, ರೇಡಿಯೋ-ಟೀವಿಗಳ ಹವಾ ವರ್ತಮಾನದಲ್ಲಿ ಪ್ರತಿದಿನ ಕೇಳಿಬರುತ್ತಿದ್ದ ಸಾಲು. ‘ಇದೇನು ಬೆಂಗಳೂರಿನಲ್ಲಿ ಯಾವಾಗಲೂ ಮೋಡ ಕವಿದ ವಾತಾವರಣ ಇರುತ್ತದಾ?’ ಅಂತ ನಮಗೆ ಆಶ್ಚರ್ಯವಾಗುತ್ತಿತ್ತು. ಆದರೆ ನಾನು ಬೆಂಗಳೂರಿಗೆ ಬರುವಷ್ಟರಲ್ಲಿ ಬೆಂಗಳೂರು ‘ಉದ್ಯಾನನಗರಿ’ಯೆಂಬ ಬಿರುದಿಗೆ ತದ್ವಿರುದ್ಧವಾಗಿ ತನ್ನ ಹಸಿರು ಬಟ್ಟೆಯನ್ನೆಲ್ಲಾ ಬಿಚ್ಚಿಹಾಕಲು ಶುರು ಮಾಡಿತ್ತು. ಹಾಗಾಗಿ ನಾನು ಇಂಟರ್‌ವ್ಯೂಗೆಂದು ಕಂಪನಿ-ಕಂಪನಿ ಅಲೆಯುವಾಗ, ಬಿಸಿಲೆಂಬುದು ಇಂಟರ್‌ವ್ಯೂವರುಗಳಿಗಿಂತ ಭಯಾನಕವಾಗುವ ಹಂತಕ್ಕೆ ಮುಟ್ಟಿತ್ತು. ಈಗಂತೂ ಹಸಿರು ನೋಡಲು ಕಬ್ಬನ್ ಪಾರ್ಕು-ಲಾಲ್‌ಭಾಗುಗಳಿಗೇ ಹೋಗಬೇಕು ಎಂಬಂತಹ ಪರಿಸ್ಥಿತಿ. ಇಲ್ಲಿ ನನ್ನ ಆಫೀಸಿನ ಬಳಿ ರೇಸ್‌ಕೋರ್ಸ್ ರಸ್ತೆ ಅಗಲೀಕರಣ ಅಂತ ಅಷ್ಟೂ ಮರಗಳನ್ನು ಉರುಳಿಸಿದ್ದಾರೆ. ಅದನ್ನು ಮುಗಿಸಿ, ಪ್ಯಾಲೇಸ್ ರಸ್ತೆಯ ಕಡೆ ಹೋಗುತ್ತಿವೆ ಬುಲ್ಡೋಜರ್-ಜೆಸಿಬಿಗಳು. ಸಂಕಟವಾಗುತ್ತದೆ.<br /><br />ಆದರೆ ಅದೇನೋ ತಮಿಳುನಾಡಿನಲ್ಲಿ ಡಿಪ್ರೆಶನ್ನಂತೆ, ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸೂರ್ಯರಶ್ಮಿ ನಾಪತ್ತೆ! ‘ವ್ಹಾಟ್ ಎ ರೋಮಾಂಟಿಕ್ ವೆದರ್..! ಊಟೀಲಿ ಇದ್ದಹಾಗಿದೆ’ ಎನ್ನುವ ಫ್ರೆಂಡು, ‘ಸುಶ್ರುತ್, ಈ ವೆದರಲ್ಲಿ ಕೆಲಸ ಮಾಡಬಾರ್ದು ಕಣ್ರೀ.. ಒಂದು ಕ್ಯಾಂಪ್‌ಫೈರ್ ಹಾಕ್ಕೊಂಡು ಚಿಲ್ಲಾಗಿ ಕೂತು ವ್ಹಿಸ್ಕಿ ಹಾಕ್ಬೇಕು!’ ಎನ್ನುವ ಕಲೀಗು, ಒಂದೇ ಒಂದು ಮೆಸೇಜು ಸಹ ಕಳುಹಿಸದೇ ಜೀವ ತಿನ್ನುವ ಹುಡುಗಿ... ಛೇ! ಲೈಫು!<br /><br />ಐಟಿ ಇಂಡಸ್ಟ್ರಿ ಕುಸಿತ, ಸಾಫ್ಟ್‌ವೇರ್ ಕಂಪನಿಗಳಲ್ಲಿ ಎಂಪ್ಲಾಯ್‌ಮೆಂಟ್ ರೇಶಿಯೋ ಕುಸಿತ, ಶೇರ್‌ಮಾರ್ಕೆಟ್ ಕುಸಿತ -ಇತ್ಯಾದಿ ಕುಸಿತಗಳ್ಯಾವುವೂ ನಮ್ಮ ಲೀಗಲ್ ಇಂಡಸ್ಟ್ರಿಯ ಮೇಲೆ ಯಾವುದೇ ಪರಿಣಾಮ ಉಂಟುಮಾಡದಿದ್ದರೂ, ಈ ಇದೇನೋ ‘ವಾಯುಭಾರ ಕುಸಿತ’ ಮಾತ್ರ ನನ್ನೆಲ್ಲಾ ಕಲೀಗುಗಳನ್ನೂ ನಿರುತ್ಸಾಹಿಗಳನ್ನಾಗಿ ಮಾಡಿಬಿಟ್ಟಿದೆ! ಬೆಳಗ್ಗೆಯಿಂದ ಏನೆಂದರೆ ಏನೂ ಕೆಲಸ ಮಾಡದೇ ಕುಳಿತಿದ್ದೇವೆ ಎಲ್ಲರೂ. ಇದ್ದುದರಲ್ಲೇ ನಮ್ಮನ್ನು ಬೆಚ್ಚಗಿಟ್ಟಿರುವುದು ಎಂದರೆ, ಮುಂಬಯಿಯಲ್ಲಿ ಆಗಿರುವ ಸರಣಿ ಬಾಂಬ್ ಸ್ಪೋಟಗಳು. ನ್ಯೂಸ್ ಛಾನೆಲ್ ವರದಿಗಾರರ ಮೇಲಂತೂ ಒಂದು ತರಹದ ‘ಮೋದ ಕವಿದ ವಾತಾವರಣ’ ಸೃಷ್ಟಿಯಾಗಿಬಿಟ್ಟಿದೆ. ಸಿ‌ಎನ್ನೆನ್ ಐಬಿ‌ಎನ್, ಎನ್‌ಡಿಟಿವಿ ಮುಂತಾದ ಛಾನೆಲ್ಲುಗಳು ತಾಜ್, ಒಬೇರಾಯ್, ನಾರಿಮನ್ ಪಾಯಿಂಟುಗಳ ಪಕ್ಕದಲ್ಲಿ ನಿಂತು ಲೈವ್ ವರದಿ ಮಾಡುತ್ತಿವೆ: ‘ನಹೀ ಬತಾ ಸಕ್ತೇ.. ಒಳಗಡೆ ಎಷ್ಟು ಜನ ಇದಾರೆ ಅಂತ ಹೇಳಕ್ಕೇ ಆಗಲ್ಲ’.. ‘ಅದೋ ಸ್ಪೆಶಲ್ ಸ್ಕ್ವಾಡ್ ಬಂತು’.. ‘ಹಾಂ, ಗುಂಡಿನ ಶಬ್ದ ಕೇಳಿಸ್ತಿದೆಯಾ? ಕ್ಯಾನ್ಯೂ ಹಿಯರ್?’.. ‘ಇಗೋ, ಇದೀಗ ಎನ್‌ಕೌಂಟರ್ ಶುರು ಆಗ್ತಿದೆ’.. ‘ತಾಜ್ ಹೋಟೆಲಿನಲ್ಲಿ ಸಿಕ್ಕಿಹಾಕಿಕೊಂಡಿರೋರು ಒಬ್ಬರು ನಂಗೆ ಎಸ್ಸೆಮ್ಮೆಸ್ ಮಾಡಿದಾರೆ’... ಎಲ್ಲರೂ ಉಸಿರು ಬಿಗಿಹಿಡಿದು ನೋಡುತ್ತಿದ್ದೇವೆ.. ಅಬ್ಬ! ಈ ಟೆರರಿಸಂ ಮತ್ತು ಬಾಂಬ್ ಸ್ಪೋಟಗಳು ನಮ್ಮ ದೈನಂದಿನ ಜೀವನಕ್ಕೆ ಎಂತಹ ಒಂದು ‘ಥ್ರಿಲ್’ ತಂದುಬಿಟ್ಟವು! ಎಲ್ಲಿ ಯಾವಾಗ ಸಿಡಿಯೊತ್ತೆ ಅಂತಲೇ ಹೇಳಕ್ಕಾಗಲ್ಲ! ಕೋರ್ಟಿಗೆ ಹೋಗಿರೋ ಕಲೀಗು ವಾಪಸು ಬರ್ತಾನೋ ಇಲ್ವೋ ಯಾರಿಗ್ಗೊತ್ತು? ಇವತ್ತು ನಾನೇ ಆಫೀಸಿನಿಂದ ಮನೆಗೆ ವಾಪಸು ಹೋಗ್ತೀನೋ ಇಲ್ವೋ? ಹಹ್!<br /><br />ಆದರೆ ಇನ್ನು ಸ್ವಲ್ಪ ಕಾಲಕ್ಕೆ ಇದೂ ನಮಗೆ ಅಭ್ಯಾಸವಾಗಿಬಿಡಬಹುದೇನೋ? ಮುಂಬಯಿಯ ಗೆಳತಿಯೊಬ್ಬಳಿಗೆ ಪಿಂಗ್ ಮಾಡಿ ‘ಪರಿಸ್ಥಿತಿ ಹೇಗಿದೆ ನೀನಿರೋ ಜಾಗದಲ್ಲಿ?’ ಅಂತ ಕೇಳಿದೆ. ‘ಯಾಸ್ ಎವೆರಿಡೇ! ನಾರ್ಮಲ್ ಇದೆ. ನಾನು ಆಫೀಸಿನಲ್ಲಿದೀನಿ. ನನ್ ಗಂಡನೂ ಆಫೀಸಿಗೆ ಹೋಗಿದಾನೆ. ಸ್ಕೂಲುಗಳಿಗೆ ರಜೆ ಕೊಟ್ಟಿರೋದ್ರಿಂದ ಕೆಲ ಮಕ್ಕಳು ಹೊರಗೆ ಆಡ್ತಿರೋದು ಇಲ್ಲಿ ಕಿಟಕಿಯಿಂದ ಕಾಣ್ತಿದೆ. ನೀವೆಲ್ಲಾ ನೋಡ್ತಿರೋ ಹಾಗೆ ನಾನೂ ಟೀವಿಯಲ್ಲಿ ನೋಡ್ತಿದೀನಿ’ ಅಂದಳು. ಅಚ್ಚರಿಯಾಯಿತು. ‘ಛೇ! ಮತ್ತೆ ನಾನ್ಯಾಕೆ ಬೆಳಗ್ಗೆಯಿಂದ ಒಳ್ಳೇ ಸಸ್ಪೆನ್ಸ್ ಪಿಚ್ಚರ್ ನೋಡಿದಹಾಗೆ ನ್ಯೂಸ್ ನೋಡುತ್ತಿದ್ದೇನೆ?’ ಅನ್ನಿಸಿ, ಸಿ‌ಎನ್ನೆನ್ ವೆಬ್‌ಸೈಟ್‌ನ ವಿಂಡೋವನ್ನು ತಟ್ಟನೆ ಕ್ಲೋಸ್ ಮಾಡಿದೆ.<br /><br />ಮತ್ತೆ ಮೋಡ ಕವಿಯಿತು. ಕೊಂಚ ಎದ್ದು ಹೋಗಿ, ಪಕ್ಕದ ಕಿಟಕಿಯ ಗಾಜಿನ ಮೇಲೆ ನಿಂತಿರುವ ಮಳೆನೀರ ಹನಿಗಳ ಮೂಲಕ ಹೊರಗೆ ನೋಡಿದರೆ, ಕಪ್ಪು ಜಾಕೆಟ್ಟನ್ನು ಬೆಚ್ಚಗೆ ಹೊದ್ದುಕೊಂಡಿರುವ ಪಕ್ಕದ ಆಫೀಸಿನ ಹುಡುಗಿ ತನ್ನ ಸ್ಕೂಟಿ ಸ್ಟಾರ್ಟ್ ಮಾಡುತ್ತಿರುವುದು ಕಾಣುತ್ತಿದೆ. ತಂಡಿಯಾಗಿರುವ ಅದರ ಎಂಜಿನ್ ಏನೆಂದರೂ ಸ್ಟಾರ್ಟ್ ಆಗುತ್ತಿಲ್ಲ. ‘ಕೆಳಗಿಳಿದು ಹೋಗಿ ಸಹಾಯ ಮಾಡಲಾ?’ ಅಂದುಕೊಳ್ಳುತ್ತೇನೆ. ಮತ್ತೆ, ‘ಮೈಯೆಲ್ಲಾ ಒದ್ದೆಯಾಗುತ್ತದೆ, ಬೇಡ’ ಅಂತ ಸುಮ್ಮನಾಗುತ್ತೇನೆ.<br /><br />ವಾಪಸು ಬಂದು ಕಂಪ್ಯೂಟರ್ ಮುಂದೆ ಕೂತರೆ, ಯಾರೋ ಪಿಂಗ್ ಮಾಡುತ್ತಾರೆ: ‘ಶೇಮ್‌ಲೆಸ್ ಯಾರ್.. ಈ ಯುಪಿ‌ಎ ಸರ್ಕಾರ, ನಮ್ಮ ಪೋಲೀಸ್ ವ್ಯವಸ್ಥೆ.....’ ನಾನು ಸೈನ್‌ಔಟ್ ಆಗುತ್ತೇನೆ. ಗೂಗಲ್ ರೀಡರ್ ಹೊಸ ಬ್ಲಾಗ್ ಅಪ್‌ಡೇಟ್‌ಗಳನ್ನು ತೋರಿಸುತ್ತಿದೆ. ಅಲ್ಲೂ ಶುರುವಾಗಿಬಿಟ್ಟಿದೆ: ‘ಪ್ರತೀಕಾರ’, ‘ಪ್ರತಿಧಾಳಿ’, ‘ಪ್ರತಿಭಟನೆ’, ‘ಈ ಮುಸ್ಲಿಮರಿದ್ದಾರಲ್ಲಾ...’ ಚರ್ಚೆಗಳು. ವಾದಗಳು. ಬೆಚ್ಚಗೆ, ಅವರವರ ಆಫೀಸು-ಮನೆಗಳಲ್ಲಿ ಕೂತು.<br /><br />ಹುಡುಗಿಯ ಸ್ಕೂಟಿ ಇನ್ನೂ ಸ್ಟಾರ್ಟ್ ಆಗಿಲ್ಲ. ನನಗೆ ಒದ್ದೆಯಾಗುವೆನೆಂಬ ಹಿಂಜರಿಕೆ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-3211388084707497881?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com15tag:blogger.com,1999:blog-27009232.post-80606881643189859872008-11-17T13:08:00.006+05:302009-05-29T13:19:08.132+05:30ಟೀವಿಯಲ್ಲಿ ನಾವು"ಸ್ಲಂ ಬಾಲ ಪಿಚ್ಚರ್ ನೋಡಿದ್ರಾ?" ಅಂತ ನಾಗೇಗೌಡ್ರು ಕೇಳಿದಾಗ, "ಹುಂ, ನಿನ್ನೆ ತಾನೇ ನೋಡಿದ್ನಲ್ಲ? ಯಾಕೆ?" ಅಂದೆ. "ಅದ್ರಲ್ಲಿ ನಾನೂ ಯಾಕ್ಟ್ ಮಾಡಿದೀನಿ, ನೋಡ್ಲಿಲ್ವಾ?" ಅಂದರು. "ನೀವಾ?! ಎಲ್ಲಿ? ಯಾವ ಸೀನಲ್ಲಿ?" ಆಶ್ಚರ್ಯದಿಂದ ಕೇಳಿದೆ. ಅವರಂದ್ರು, "ಅದೇ, ಪೋಲೀಸ್ ಕಮಿಷನರ್ ಮೀಟಿಂಗ್ ಕರೆದಿರ್ತಾರಲ್ಲ, ಆಗ ಸುತ್ಲೂ ಸುಮಾರ್ ಪೋಲೀಸ್ರು ಕೂತಿರ್ತಾರೆ.. ಅವ್ರಲ್ಲಿ ಒಬ್ಬ ಪೋಲೀಸ್ ನಾನಾಗಿದ್ದೆ!" "ಓಹ್, ಹೌದಾ? ನಾನು ಗಮನಿಸ್ಲೇ ಇಲ್ಲ.. ಛೇ, ಸುಮ್ನೇ ದುಡ್ಡು ಕೊಟ್ಟು ಹೋದ್ವಲ್ರೀ ನಿನ್ನೆ ನಾವು.. ನೀವು ಯಾಕ್ಟ್ ಮಾಡಿದೀರ ಅಂದ್ಮೇಲೆ ನಮ್ಗೆ ಫ್ರೀ ಟಿಕೇಟ್ ಕೊಡಿಸ್ತಿದ್ರಿ.. ಮಿಸ್ ಮಾಡ್ಕೊಂಡ್ಬಿಟ್ವಿ!" ನಗುತ್ತಾ ಹೇಳಿದೆ. "ಹೆಹ್ಹೆ! ಅದ್ಕೇನಂತೆ, ಮತ್ತೊಂದ್ಸಲ ಹೋಗ್ಬನ್ನಿ. ಕೊಡಿಸ್ತೀನಿ ಟಿಕೇಟು.. ನನ್ನನ್ನೇ ನೋಡ್ಲಿಲ್ಲ ನೀವು ಅಂದ್ಮೇಲೆ ಮತ್ತೊಂದ್ಸಲ ನೋಡೋದು ಸರಿ ಇದೆ.." ಎಂದು ನಗುತ್ತಾ ಖುರ್ಚಿಯಿಂದ ಎದ್ದರು ನಾಗೇಗೌಡ್ರು. <br /><br />ಈ ನಾಗೇಗೌಡ್ರು ನಮ್ಮ ಕ್ಲೈಂಟು. ಸಿನಿಮಾವೊಂದರಲ್ಲಿ ನಾವು ಇರೋದು ಅಂದ್ರೆ ಅದು ನಿಜಕ್ಕೂ ಹೇಳಿಕೊಳ್ಳಬೇಕಾದ ವಿಷಯವೇ. ಒಂದು ಸಿನಿಮಾ ಅಂದರೆ ಲಕ್ಷಗಟ್ಟಲೇ ಜನ ನೋಡುತ್ತಾರೆ. ಒಂದು ಕ್ಷಣದಲ್ಲಿ ಬಂದು ಹೋಗುವ ಸೀನೇ ಇರಬಹುದು, ಆದರೂ ಅದೊಂದು ಖುಶಿಯ ವಿಷಯವೇ ತಾನೇ? ಹೀಗಾಗಿ ನಾಗೇಗೌಡ್ರು ನನಗೆ ಮತ್ತೊಮ್ಮೆ ಸಿನಿಮಾ ನೋಡಲು ಟಿಕೇಟ್ ತೆಗೆಸಿಕೊಡುತ್ತೀನಿ ಅಂದಿದ್ದರಲ್ಲಿ ಅತಿಶಯೋಕ್ತಿಯೇನೂ ಕಾಣಲಿಲ್ಲ. ಆದರೆ ‘ಸ್ಲಂ ಬಾಲ’ ಪಿಚ್ಚರ್ರು ಮತ್ತೊಮ್ಮೆ ನೋಡುವಷ್ಟೆಲ್ಲಾ ಚೆನ್ನಾಗಿಯೇನೂ ಇಲ್ಲವಾದ್ದರಿಂದ ನಾನು ನಾಗೇಗೌಡ್ರು ಟಿಕೇಟು ತೆಗೆಸಿಕೊಟ್ಟರೂ ಹೋಗುವುದು ಅನುಮಾನ.<br /><br />* * *<br /><br />ಹಿಂದೊಮ್ಮೆ ನನ್ನ ಅಜ್ಜ ‘ಸೂರಪ್ಪ’ ಎಂಬ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ. ಅಜ್ಜ ಆಗ ಮೈಸೂರಿನಲ್ಲಿದ್ದ, ಅಲ್ಲಿನ ಯಾವುದೋ ಛತ್ರದಲ್ಲಿ ಇವನು ಅಡುಗೆಗೆ ಹೋಗಿದ್ದಾಗ ಅಲ್ಲಿ ಶೂಟಿಂಗ್ ನಡೆಯುತ್ತಿತ್ತಂತೆ. ಅವತ್ತಿನ ಚಿತ್ರೀಕರಣದಲ್ಲಿ ಭಟ್ಟರ ಅಸಿಸ್ಟೆಂಟ್ ಪಾತ್ರ ಮಾಡಲು ವಯಸ್ಸಾದ ಯಾರಾದರೂ ಒಬ್ಬರು ಬೇಕಿತ್ತು. ನಿರ್ದೇಶಕರು ಅಲ್ಲೇ ಓಡಾಡುತ್ತಿದ್ದ ಅಜ್ಜನನ್ನು ‘ಪಾತ್ರ ಮಾಡುತ್ತೀರಾ?’ ಅಂತ ಕೇಳಿದರಂತೆ. ಅಜ್ಜ ಡ್ರೆಸ್ ಸಮೇತ ತಯಾರಿದ್ದ, (ಹಿಂದೆಲ್ಲಾ ಯಕ್ಷಗಾನ ಕುಣಿದು ರೂಢಿಯಿದ್ದವನು ಅವನು), ‘ಸರಿ’ ಅಂದ! ಡೈರೆಕ್ಟರು ಮತ್ತೊಂದಷ್ಟು ಎಕ್ಸ್‌ಟ್ರಾ ವಿಭೂತಿ ಪಟ್ಟಿ ಬಳಿಸಿ, ಎರಡ್ಮೂರು ಟೇಕ್ ತಗೊಂಡು, ಅಜ್ಜನ ಅಭಿನಯವನ್ನು ಸೆರೆ ಹಿಡಿದೇಬಿಟ್ಟರು.<br /><br />ಅದಾದನಂತರ ಮನೆಗೆ ಫೋನ್ ಮಾಡಿದ್ದಾಗ ಅಜ್ಜ ಇದರ ಬಗ್ಗೆ ಹೇಳಿದ್ದ. ಸಾಗರಕ್ಕೆ ಆ ಸಿನಿಮಾ ಮೂರ್ನಾಲ್ಕು ತಿಂಗಳ ನಂತರ ಬಂತು. ಹೋಗಲಾಗದೇ ಇದ್ದೀತೇ? ನನಗೆ ಒಂದು ವಾರದಲ್ಲಿ ಪರೀಕ್ಷೆ ಇದ್ದರೂ ಅಪ್ಪನೊಂದಿಗೆ ಹೋಗಿ ಸಿನಿಮಾ ನೋಡಿ ಬಂದಿದ್ದೆ. ಅಜ್ಜ ಪರದೆಯ ಮೇಲಿರುವುದು ಮೂರರಿಂದ ನಾಲ್ಕು ಸೆಕೆಂಡು, ಸಿನಿಮಾದ ಕೊನೆಯಲ್ಲಿ. ಎರಡೂ ಕಾಲು ತಾಸು ಸಿನಿಮಾವನ್ನು ‘ಅಜ್ಜ ಈಗ ಬರುತ್ತಾನೆ, ಈಗ ಬರುತ್ತಾನೆ’ ಅಂತ ಕಾದು ಕಾದು, ಪ್ರತಿ ಸೀನಿನಲ್ಲಿ ಜಂಗುಳಿ ಕಂಡಾಗಲೂ ‘ಇದರಲ್ಲೆಲ್ಲಾದರೂ ಅಜ್ಜ ಮಿಸ್ ಆಗಿಬಿಟ್ಟರೆ ಕಷ್ಟ’ ಅಂತ ಕಣ್ಣು ಕೀಲಿಸಿಕೊಂಡು ನೋಡಿ, ಇಂಟರ್‌ವೆಲ್ಲಿನಲ್ಲಿ ಹ್ಯಾಪ ಮೋರೆ ಹಾಕಿಕೊಂಡು ಕಡಲೆ ತಿಂದು, ಸಿನಿಮಾ ಮುಗಿಯಲು ಬರುತ್ತಿದ್ದಾಗ ‘ಅಯ್ಯೋ ಅಜ್ಜ ಬರಲೇ ಇಲ್ವಲ್ಲಪ್ಪಾ’ ಅಂದುಕೊಳ್ಳುತ್ತಿರುವಾಗಲೇ ಗೂನು ಬೆನ್ನಿನ ನನ್ನ ಅಜ್ಜ ಕುಂಟುತ್ತಾ ಬಂದಿದ್ದ..! ಅವನು ಕಣ್ ಕಣ್ ಬಿಡುತ್ತಾ ದೊಡ್ಡ ಭಟ್ಟರ ಪಕ್ಕ ನಿಂತಿದ್ದು ನೋಡಿ ನಾನಂತೂ ಖುಶಿಯಿಂದ ಚಪ್ಪಾಳೆ ತಟ್ಟುತ್ತಾ ಕುಣಿದಾಡಿಬಿಟ್ಟಿದ್ದೆ. ನನ್ನ ಹಿಂದು-ಮುಂದಿನ ಸೀಟಿನವರು ‘ಈ ಸೀನಿನಲ್ಲಿ ಚಪ್ಪಾಳೆ ತಟ್ಟುವಂಥದ್ದು ಏನಿದೆ?’ ಎಂದು ವಿಚಿತ್ರವಾಗಿ ನನ್ನನ್ನೇ ನೋಡಿದ್ದರು.<br /><br />ಊರಿಗೆ ಬಂದು, ಸುಮಾರು ಜನರಿಗೆ ಹೇಳಿ, ಅವರೂ ಹೋಗಿ ನೋಡಿಕೊಂಡು ಬಂದಿದ್ದರು. ‘ಅಯ್ಯೋ, ಹೌದೇ ವರಮಾಲಕ್ಷ್ಮಕ್ಕ, ಅನಂತಣ್ಣ ಘನಾಗ್ ಕಾಣ್ತ’ ಅಂತ ಶ್ರೀಮತಕ್ಕ ನನ್ನ ಅಜ್ಜಿಯ ಬಳಿ ಹೇಳಿದಾಗ ‘ಹೌದನೇ?’ ಎನ್ನುತ್ತಾ ನಾಚಿದ್ದಳು ಅಜ್ಜಿ. ನಾನು ಅಜ್ಜನಿಗೆ ಫೋನ್ ಮಾಡಿ ‘ಅಜ್ಜಾ, ಸಖ್ಖತ್ತಾಗ್ ಯಾಕ್ಟ್ ಮಾಡಿದ್ದೆ ನೀನು’ ಎಂದು ಉಬ್ಬಿಸಿದ್ದೆ ಸಹ.<br /><br />ಆಮೇಲೆ ಆ ಸಿನಿಮಾ ಟೀವಿಯಲ್ಲೂ ಪ್ರಸಾರವಾಗಿತ್ತು. ಆಗ ಊರವರೆಲ್ಲಾ ನಮ್ಮ ಮನೆಯಲ್ಲಿ ಸೇರಿದ್ದರು. ಎಲ್ಲರ ಮನೆಯಲ್ಲೂ ಟೀವಿಯಿದ್ದರೂ, ಪಾತ್ರಧಾರಿಯ ಮನೆಯಲ್ಲೇ ಕೂತು ಸಿನಿಮಾ ನೋಡುವುದರಲ್ಲಿ ಇರುವ ಥ್ರಿಲ್ ಹೆಚ್ಚಲ್ಲವೇ! ಕರೆಂಟು ಹೋಗುವುದು-ಬರುವುದು ಆಗುತ್ತಿತ್ತು.. ಜಾಹೀರಾತುಗಳಂತೂ ಅವತ್ತೇ ಜಾಸ್ತಿಯಿದ್ದಂತ್ತಿತ್ತು.. ಈಗಾಗಲೇ ಸಿನಿಮಾ ನಾನು ನೋಡಿಬಿಟ್ಟಿದ್ದರಿಂದ ‘ತಲೆಬಿಸಿ ಮಾಡ್ಕ್ಯಳಡಿ.. ಈಗಲ್ಲ, ಲಾಸ್ಟಿಗೆ ಬರ್ತ ಅಜ್ಜ’ ಎಂದು, ಎಲ್ಲಾ ತಿಳಿದವನಂತೆ, ಎಲ್ಲರಿಗೂ ಸಮಾಧಾನ ಮಾಡುತ್ತಿದ್ದೆ.. ಅಂತೂ ಅಜ್ಜ ಬರುವ ಕೊನೆಯ ಸೀನ್ ಹತ್ತಿರ ಬಂದಾಗ, ‘ಹೂಂ, ಈಗ್ಲೇಯ, ಎಲ್ಲಾ ನೋಡ್ತಿರಿ, ಈಗ ಬರ್ತ ಅಜ್ಜ..’ ಎನ್ನುತ್ತಿದ್ದೆ, ಅಷ್ಟರಲ್ಲಿ.... ಇಲ್ಲ, ಕರೆಂಟು ಹೋಗಲಿಲ್ಲ, ಅಜ್ಜ ಬಂದ! (ಸಾಮಾನ್ಯವಾಗಿ ನಮ್ಮೂರಿನ ಕರೆಂಟು ಇಂತಹ ಸಮಯವನ್ನೇ ಕಾಯುತ್ತಿರುತ್ತದೆ ಹೋಗುವುದಕ್ಕೆ: ಕ್ರಿಕೆಟ್ ಮ್ಯಾಚಿನ ಕೊನೆಯ ಓವರು, ಸಿನಿಮಾದ ಕ್ಲೈಮ್ಯಾಕ್ಸ್ ಸೀನು, ಧಾರಾವಾಹಿಯ ಕೊನೇ ಕ್ಷಣ, ಹೀಗೆ. ಆದರೆ ಅವತ್ತು ಪುಣ್ಯಕ್ಕೆ ಹೋಗಲಿಲ್ಲ.) ‘ಓಹೋಹೋ! ಅನಂತಣ್ಣ!’ ಎಂದು ಎಲ್ಲರೂ ಒಕ್ಕೊರಲಿನಿಂದ ಉದ್ಘರಿಸಿದರು. ಅಜ್ಜಿಯಂತೂ ಟೀವಿಯ ಬುಡಕ್ಕೇ ಹೋಗಿ ತನ್ನ ಪತಿದೇವರನ್ನು ನೋಡಿದಳು. ‘ಹೌದೇ ಹೌದಲೇ!’ ಎಂದಳು. ಆದ ಆನಂದಕ್ಕೆ ಅವಳ ಕಣ್ಣಿಂದ ಒಂದೆರಡು ಹನಿಗಳೂ ಉದುರಿದವು. ಆಮೇಲೆ ಅಮ್ಮ ಎಲ್ಲರಿಗೂ ಸಕ್ಕರೆ ಹಂಚಿದಳು, ಈ ಹೆರಿಗೆ ಆದಕೂಡಲೇ ಹಂಚುತ್ತಾರಲ್ಲಾ, ಹಾಗೆ.<br /><br />* * *<br /><br />ದೂರದರ್ಶನದ ‘ಚಂದನ’ ವಾಹಿನಿಯಲ್ಲಿ ‘ಥಟ್ ಅಂತ ಹೇಳಿ?!’ ಎಂಬ ಕ್ವಿಜ್ ಕಾರ್ಯಕ್ರಮವೊಂದು ಬರುತ್ತದೆ. <a href="http://naasomeswara.blogspot.com/">ಡಾ| ನಾ. ಸೋಮೇಶ್ವರ</a> ಅವರು ನಡೆಸಿಕೊಡುವ ಬಹು ಜನಪ್ರಿಯ ಕಾರ್ಯಕ್ರಮ ಅದು. ಅಪ್ಪನಿಗೆ ತಾನೊಮ್ಮೆ ಆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂಬ ಹಂಬಲ ಬಂತು. ದೂರದರ್ಶನಕ್ಕೆ ಪತ್ರ ಹಾಕಿದ. ಇಂತಹ ದಿನ ಬರಬೇಕೆಂದು ಕರೆ ಬಂತು. ಅಪ್ಪ ನನಗೆ ಫೋನ್ ಮಾಡಿ ಬೆಂಗಳೂರಿಗೆ ಬರುತ್ತಿರುವುದಾಗಿ ತಿಳಿಸಿದ.<br /><br />ಅಪ್ಪನನ್ನು ಕರೆದುಕೊಂಡು ದೂರದರ್ಶನ ಕಛೇರಿಗೆ ಹೋದೆ. ಹೆಸರು ಬರೆಸುವುದು, ಸಹಿ ಪಡೆಯುವುದು, ಮೊಬೈಲ್ ತೆಗೆದಿಟ್ಟುಕೊಳ್ಳುವುದು ಇತ್ಯಾದಿ ಪ್ರೊಸೀಜರ್ರುಗಳೆಲ್ಲ ಮುಗಿದು, ‘ಶ್ ಶ್’ ಎನ್ನುತ್ತಾ ಸ್ಟುಡಿಯೋದೊಳಗೆ ನಮ್ಮನ್ನು ಬಿಡಲಾಯಿತು. ಸ್ಟುಡಿಯೋವೊಂದರ ಒಳಗೆ ನಾನು ಮತ್ತು ಅಪ್ಪ ಇದೇ ಮೊದಲು ಕಾಲಿಡುತ್ತಿದ್ದುದು.. ಅಲ್ಲಿ ಅದಾಗಲೇ ಸಂಚಿಕೆಯೊಂದರ ಚಿತ್ರೀಕರಣ ನಡೆಯುತ್ತಿತ್ತು. ಸೋಮೇಶ್ವರರು ಎದುರಿಗೆ ಕೂತ ಮೂವರು ಸ್ಪರ್ಧಿಗಳಿಗೆ ಪ್ರಶ್ನೆಗಳ ಬಾಣ ಎಸೆಯುತ್ತಿದ್ದರು. ನಮ್ಮನ್ನು ದೂರದಲ್ಲಿ ಇದ್ದ ಖುರ್ಚಿಗಳಲ್ಲಿ ಶಬ್ದ ಮಾಡದಂತೆ ಕೂತಿರುವಂತೆ ಸೂಚಿಸಲಾಯಿತು. ಮುಂದಿನ ಚಿತ್ರೀಕರಣಕ್ಕೆ ತಾನು ಹೋಗಬೇಕಲ್ಲವೇ- ಅಪ್ಪ ಎಲ್ಲವನ್ನೂ ಕುತೂಹಲದಿಂದ ನೋಡಿಕೊಳ್ಳುತ್ತಿದ್ದ.. ಫೋಕಸ್ ಲೈಟುಗಳು, ಸ್ಕ್ರೀನುಗಳು, ಬ್ಯಾಕ್‌ಗ್ರೌಂಡಿನ ಬಣ್ಣಗಳನ್ನು ಲೇಸರ್ ರೇಗಳಿಂದ ಬದಲಿಸುವುದು, ಮೇಲ್ಗಡೆ ಕೋಣೆಯಲ್ಲಿ ಕೂತ ಡೈರೆಕ್ಟರ್ ಕೊಡುವ ಸೂಚನೆಗಳನ್ನು ಪಾಲಿಸುವ ಕೆಮೆರಾದವರು... ಸೋಮೇಶ್ವರರೂ ಕಿವಿಗೆ ಒಂದು ಇಯರ್‌ಫೋನ್ ಹಾಕಿಕೊಂಡಿರುತ್ತಾರೆ, ಚಿತ್ರೀಕರಣದ ಮಧ್ಯೆ ಅಲ್ಲಲ್ಲಿ ‘ಕಟ್’, ‘ರಿಪೀಟ್’ ಇತ್ಯಾದಿ ಪ್ರಸಂಗಗಳು ನಡೆದಿರುತ್ತವೆ ಅಂತೆಲ್ಲ ಗೊತ್ತಾಗಿದ್ದೇ ಆವಾಗ ನಮಗೆ..!<br /><br />ನಿಧಾನಕ್ಕೆ ಪಕ್ಕದಲ್ಲಿದ್ದ ಅಪ್ಪನ ಮುಖವನ್ನು ನೋಡಿದೆ ನಾನು.. ಅಪ್ಪ ಸ್ವಲ್ಪ ಹೆದರಿದ್ದಂತೆ, ನರ್ವಸ್ ಆಗಿದ್ದಂತೆ ಕಂಡಿತು.. ಆ ಚಿತ್ರೀಕರಣದ ನಂತರ ಅಪ್ಪನನ್ನು ವೇದಿಕೆಗೆ ಕರೆದರು. ಅಪ್ಪ ನನ್ನತ್ತ ಬಾಗಿ ‘ಹೋಗ್ಬರ್ತಿ ಹಂಗರೆ’ ಎಂದ.. ಪ್ರತಿ ಪರೀಕ್ಷೆಗೆ ಹೋಗುವಾಗಲೂ ನನಗೆ ‘ಚನಾಗ್ ಮಾಡು.. ಟೆನ್ಷನ್ ಮಾಡ್ಕ್ಯಳಡ..’ ಅಂತೆಲ್ಲ ಹೇಳಿ ಕಳುಹಿಸುತ್ತಿದ್ದವ ಅಪ್ಪ.. ಅಪ್ಪ ಈಗ ಪರೀಕ್ಷೆಗೆ ಹೊರಟ ಪುಟ್ಟ ವಿದ್ಯಾರ್ಥಿಯಂತೆಯೇ ಕಾಣಿಸಿದ.. ‘ಆಲ್ ದಿ ಬೆಸ್ಟ್!’ ಎಂದು ಕೈ ಅದುಮಿದೆ.. ಅಪ್ಪನೊಂದಿಗೆ ಭಾಗವಹಿಸುವ ಮತ್ತಿಬ್ಬರು ಸ್ಪರ್ಧಿಗಳೂ ವೇದಿಕೆಗೆ ಬಂದರು.. ಸಿಟ್ಟಿಂಗ್ ಪೊಸಿಷನ್, ವಾಯ್ಸ್ ಟೆಸ್ಟಿಂಗ್, ಬಜರ್ ಒತ್ತುವುದನ್ನು ಹೇಳಿಕೊಡುವುದು, ಎಲ್ಲಾ ಮುಗಿಯಿತು. ಸೋಮೇಶ್ವರರು ಡ್ರೆಸ್ ಬದಲಿಸಿಕೊಂಡು ಬಂದರು. ಕೆಮೆರಾದವರೆಲ್ಲಾ ತಯಾರಾದ ಮೇಲೆ, ಮೇಲಿದ್ದ ಡೈರೆಕ್ಟರ್ ‘ಸ್ಟಾರ್ಟ್’ ಎಂದಿದ್ದೇ ತಡ,<br /><br />‘ಸ್ವಾಗತಾ.. ಸುಸ್ವಾಗತಾ.. ಥಟ್ ಅಂತ ಹೇಳಿ ಕ್ವಿಜ್ ಕಾರ್ಯಕ್ರಮಕ್ಕೆ ನಿಮಗೆಲ್ಲಾ ಆತ್ಮೀಯ ಸ್ವಾಗತ..!’ ಎಂದು ಸೋಮೇಶ್ವರರು ತಮ್ಮ ಎಂದಿನ ಶೈಲಿಯಲ್ಲಿ ಶುರು ಮಾಡಿಯೇ ಬಿಟ್ಟರು! ಇದೊಂಥರಾ ತೀರಾ ನಾಟಕೀಯವೆನಿಸಿತಾದರೂ ನಾನು ಉತ್ಸಾಹ ತಡೆಯಲಾರದೇ ಖುರ್ಚಿಯಿಂದೊಮ್ಮೆ ಎದ್ದು ಕೂತೆ! ಸ್ಪರ್ಧಿಗಳ ಪರಿಚಯವಾಯಿತು, ಪ್ರಶ್ನೆಗಳು ಒಂದಾದ ನಂತರ ಒಂದು ಬರಲಾರಂಭಿಸಿದವು.. ಮನೆಯಲ್ಲಿ ಟೀವಿ ಮುಂದಿರುವಾಗ ಅಷ್ಟೂ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುತ್ತಿದ್ದ ಅಪ್ಪ ಇಲ್ಲಿ ತಡವರಿಸಲಾರಂಭಿಸಿದ.. ನನಗೆ ಜಯಂತ ಕಾಯ್ಕಿಣಿಯವರ ‘ಟಿಕ್ ಟಿಕ್ ಗೆಳೆಯ’ ಕಥೆ ನೆನಪಾಗುತ್ತಿತ್ತು.. ಎರಡ್ಮೂರು ಪ್ರಶ್ನೆಗಳಿಗೆ ಅಪ್ಪ ತಪ್ಪು ಉತ್ತರ ಕೊಟ್ಟ. ಮಧ್ಯೆ ಒಮ್ಮೆ ಬ್ಯಾಕ್‌ಗ್ರೌಂಡ್ ಲೈಟ್ ಏನೋ ತೊಂದರೆ ಕೊಟ್ಟು ಚಿತ್ರೀಕರಣ ಕಟ್ ಮಾಡಿ ನಿಲ್ಲಿಸಿದರು. ಆಗ ಅಪ್ಪ ದೂರದಲ್ಲಿ ಕತ್ತಲಲ್ಲಿ ಕೂತಿದ್ದ ನನ್ನನ್ನು ನೋಡಿ ಮುಗುಳ್ನಕ್ಕ. ನಾನು ಕೈ ಮಾಡಿದೆ. ಮತ್ತೆ ಕಾರ್ಯಕ್ರಮ ಮುಂದುವರೆಯಿತು. ಕೊನೆಯಲ್ಲಿ ಅಪ್ಪ ಐದು ಪುಸ್ತಕಗಳನ್ನು ಗೆದ್ದುಕೊಂಡು ಕೆಳಗಿಳಿದು ಬಂದ. ‘ಕಂಗ್ರಾಜುಲೇಷನ್ಸ್!’ ಎಂದರೆ, ‘ಎಂಥಾ, ಫುಲ್ ಟೆನ್ಷನ್ ಆಗಿಹೋತು.. ಎಷ್ಟ್ ಸುಲಭದ ಪ್ರಶ್ನೆ ಇತ್ತು.. ಥೋ..!’ ಎಂದು ಅಲವತ್ತುಕೊಳ್ಳುತ್ತಲೇ ಅಪ್ಪ ಸ್ಟುಡಿಯೋದಿಂದ ಹೊರಬಂದ.<br /><br />ಅಪ್ಪನಿಗೆ ಎಳನೀರು ಕುಡಿಸುತ್ತಾ ಮನೆಗೆ ಫೋನ್ ಮಾಡಿದೆ. ‘ಐದೇ ಪುಸ್ತಕವಾ? ಅಷ್ಟೂ ಪುಸ್ತಕ ತಗಂಬರ್ತಿ ನೋಡು ಅಂತ ಹೇಳಿ ಕೊಚ್ಕ್ಯಂಡ್ ಹೋಯ್ದ ಇಲ್ಲಿಂದ.. ಬರ್ಲಿ ಇರು!’ ಎಂದಳು ಅಮ್ಮ. ನಾನು ನಕ್ಕೆ. ಕಾರ್ಯಕ್ರಮ ಪ್ರಸಾರವಾದ ದಿನ ಮತ್ತೆ ನಮ್ಮ ಮನೆಯಲ್ಲಿ ಊರವರೆಲ್ಲಾ ಸೇರಿದ್ದರಂತೆ. ರಾತ್ರಿ ಫೋನಿಸಿದ ನನ್ನ ಬಳಿ ಅಮ್ಮ ‘ಇಶೀ, ಕಪ್ಪಗ್ ಕಾಣ್ತಿದ್ವಪ.. ಎಂಥೇನ, ಪೌಡರ್ ಆದ್ರೂ ಹಚ್ಕ್ಯಂಡ್ ಹೋಗ್ಲಾಗಿತ್ತು. ನಿಂಗೆ ಹೇಳಕ್ಕಾಗಲ್ಯಾ?’ ಎಂದಳು!<br /><br />* * *<br /><br />‘ಅಜ್ಜ ಬಂದ, ಮಗ ಬಂದ, ಇನ್ನು ಮೊಮ್ಮಗ ಬಪ್ದು ಯಾವಾಗ ಟೀವಿಲಿ?’ ಊರವರು ಕೇಳುತ್ತಿದ್ದರು..<br /><br />ಆವತ್ತು ಆಫೀಸಿನಲ್ಲಿದ್ದೆ. ಸೋಮವಾರದ ಬ್ಯುಸಿ. ಶ್ರೀನಿಧಿ ಫೋನಿಸಿದ: ‘ದೋಸ್ತಾ ಆಫೀಸಲ್ಲಿದ್ಯಾ? ನಮ್ ಛಾನೆಲ್ಲಿಗೆ ನಿಂದೊಂದು ಸಣ್ಣ ಸಂದರ್ಶನ ಬೇಕು. ಬರ್ತಿದ್ದಿ ಈಗ ಅಲ್ಲಿಗೆ!’ ಹಹ್! ನನ್ನ ಸಂದರ್ಶನವಾ? ಏನಾಗಿದೆ ಇವನಿಗೆ ಅನ್ನಿಸಿತು. ‘ನಂದಾ? ಯಾಕೆ? ಏನು?’ ಕೇಳಿದೆ. ‘ಏನಿಲ್ಲಾ, ನಮ್ಮ ಛಾನೆಲ್ಲಿನಲ್ಲಿ ಯಾವ ತರಹದ ಕಾರ್ಯಕ್ರಮಗಳನ್ನು ನೀನು ನಿರೀಕ್ಷಿಸ್ತೀಯ ಅಂತ ಐದು ನಿಮಿಷ ಮಾತಾಡು ಸಾಕು’ ಎಂದ. ನಾನು ಟೀವಿಯನ್ನೇ ನೋಡುವವನಲ್ಲ, ಇನ್ನು ಇದು ಹೇಗೆ ಹೇಳಲಿ?! ಆದರೂ ನಿಧಿ ಬಿಡಲಿಲ್ಲ. ಅವನೇ ಏನೇನೋ ಟಿಪ್ಸ್ ಕೊಟ್ಟ. ‘ಸರಿ ಮಾರಾಯ’ ಅಂತ ಒಪ್ಪಿಕೊಂಡೆ. ಈ ಸಲ ನನ್ನ ಕಲೀಗುಗಳು ‘ಆಲ್ ದಿ ಬೆಸ್ಟ್’ ಹೇಳಿದರು. ಆಫೀಸಿನ ಪಕ್ಕದ ಪಾರ್ಕಿನ ಎದುರು ನನ್ನನ್ನು ನಿಲ್ಲಿಸಿ ‘ಹೂಂ, ಮಾತಾಡು!’ ಎಂದ ನಿಧಿ; ನಾನು ಬೆವರತೊಡಗಿದೆ.<br /><br />ಅದು ಪ್ರಸಾರವಾದ ದಿನ ನಮ್ಮೂರಿನಲ್ಲಿ ಕರೆಂಟ್ ಇರಲಿಲ್ಲ. ಅಪ್ಪ ಬೇರೆ ಊರಿನ ಆ ಛಾನೆಲ್ ಬರುವ ಮನೆಗೆ ಹೋಗಿ ನೋಡಿಕೊಂಡು ಬಂದಿದ್ದ. ನಾನು ಆಗ ಆಫೀಸಿನಲ್ಲಿದ್ದೆ, ಹಾಗಾಗಿ ನೋಡಲು ಆಗಲಿಲ್ಲ. ನನ್ನ ಹೆಸರಿನ ಕೆಳಗೆ ‘ಉದಯೋನ್ಮುಖ ಸಾಹಿತಿ’ ಅಂತೇನೋ ತೋರಿಸಿದ್ದರಂತೆ. ನನಗೆ ಮೈ ಉರಿದುಹೋಗಿ ನಿಧಿ ಸಿಕ್ಕಾಗ ಕೊಲೆ ಮಾಡಬೇಕು ಅಂದುಕೊಂಡಿದ್ದೆ. ಕೊನೆಗೆ, ‘ಪಾಪ, ಎಷ್ಟಂದ್ರೂ ನನ್ ಡಾರ್ಲಿಂಗ್ ಅಲ್ವಾ?’ ಅಂತ ಬಿಟ್ಟುಬಿಟ್ಟೆ. ಅದೇ ನಾನು ಮಾಡಿದ ದೊಡ್ಡ ತಪ್ಪು ಅಂತ, ಈಗ ದಿನಕ್ಕೊಮ್ಮೆ ಅವನು ಫೋನ್ ಮಾಡಿ ‘ಏನಾದ್ರೂ ಬರೆಯೋ..’ ಎಂದು ಕಾಟ ಕೊಡುವಾಗ ಅನ್ನಿಸುತ್ತಿದೆ. ;)<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-8060688164318985987?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com33tag:blogger.com,1999:blog-27009232.post-31320502734353130092008-10-31T15:59:00.006+05:302008-11-03T14:12:04.273+05:30ಎಲ್ಲಾದರೂ ಇರು...ರಚನೆ: ಕುವೆಂಪು; ರಾಗ ಸಂಯೋಜನೆ: ಸಿ. ಅಶ್ವತ್ಥ್; ಗಾಯಕ: ಡಾ| ರಾಜ್‍ಕುಮಾರ್; ನಿರ್ದೇಶನ ಮತ್ತು ಚಿತ್ರೀಕರಣ: ಟಿ.ಎಸ್. ನಾಗಾಭರಣ<br /><br /><br /><object width="425" height="344"><param name="movie" value="http://www.youtube.com/v/qwZxKREpvCI&amp;hl=en&amp;fs=1"><param name="allowFullScreen" value="true"><param name="allowscriptaccess" value="always"><embed src="http://www.youtube.com/v/qwZxKREpvCI&amp;hl=en&amp;fs=1" type="application/x-shockwave-flash" allowscriptaccess="always" allowfullscreen="true" width="425" height="344"></embed></object><br /><br /><br />ನನ್ನಿಷ್ಟದ ವೀಡಿಯೋ ಇದು. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-3132050273435313009?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com4tag:blogger.com,1999:blog-27009232.post-77355160746846217402008-10-23T09:27:00.003+05:302008-10-23T12:18:27.650+05:30ಆಕಾಶಬುಟ್ಟಿ<span style="color: rgb(102, 51, 0);">ವರುಷವಿಡೀ ವಯಸ್ಸಾದ ಅಮ್ಮಮ್ಮನ ಹಾಗೆ ನಾಗಂದಿಗೆಯ ಮೇಲೆ ಮುದುಡಿ ಮಲಗಿಕೊಂಡಿದ್ದ ಅದನ್ನು ಅಪ್ಪ ಕೆಳಗಿಳಿಸಿ ಧೂಳು ಹೊಡೆದನೆಂದರೆ ಅದು ದೀಪಾವಳಿಯ ಹಿಂದಿನ ದಿನ ಎಂದರ್ಥ. ಬಣ್ಣದ ಕಾಗದ ಮುಚ್ಚಿದ ಬಿದಿರು ಕಡ್ಡಿಯ ದೇಹದ ಈ ಮಡಿಕೆ-ಮಡಿಕೆಯ ಛತ್ರಿಯಂತಹ ವಸ್ತುವನ್ನು ಅಪ್ಪ ಹುಶಾರಾಗಿ ಬಿಚ್ಚುತ್ತಾ ಹೋಗುವಾಗ ಎದುರಿಗೆ ಕುಕ್ಕರಗಾಲಲ್ಲಿ ಕೂತ ಪುಟ್ಟ ಕಣ್ಮಿಟುಕಿಸದೇ ನೋಡುತ್ತಿರುತ್ತಾನೆ.. ಏನಿದು? ಏನಿರಬಹುದು ಒಳಗೆ? ಮ್ಯಾಜಿಕ್ ಮಾಡುವವನಂತೆ ಅಪ್ಪ ಅದರ ಪದರಗಳನ್ನು ಪೂರ್ತಿಯಾಗಿ ಬಿಚ್ಚಿ ಎತ್ತಿ ಹಿಡಿದರೆ ಅದೊಂದು ನಕ್ಷತ್ರವಾಗಿಬಿಟ್ಟಿದೆ! 'ಹೇ..! ಆಕಾಶಬುಟ್ಟಿ..!' ಪುಟ್ಟ ಖುಶಿಯಲ್ಲಿ ಚಪ್ಪಾಳೆ ತಟ್ಟುತ್ತಾನೆ ಕುಣಿಯುತ್ತಾ.</span><br /><br /><span style="color: rgb(102, 51, 0);">ಆಮೇಲೆ ಊದ್ದದೊಂದು ವೈರು ಹುಡುಕಬೇಕು. ಅದರ ಒಂದು ತುದಿಗೆ ಪಿನ್ನು. ಇನ್ನೊಂದು ತುದಿಗೆ ಬಲ್ಬ್-ಹೋಲ್ಡರು. ಜಗುಲಿಯಲ್ಲಿರುವ ಪ್ಲಗ್ಗಿಗೆ ಈ ಪಿನ್ನು ಹಾಕಿ ವೈರನ್ನು ಕಿಟಕಿಯ ಕಂಡಿಯಲ್ಲಿ ತೂರಿಸಿ ಮನೆಯ ಹೊರತಂದು ಎದೂರಿಗೆ - ಸೂರಿನ ತುದಿಗೆ ಸುತ್ತಿ ನೇತು ಹಾಕಬೇಕು ಹೋಲ್ಡರನ್ನು. ಈಗ ಒಂದು ಬಲ್ಬು ಬೇಕಲ್ಲಾ..? ಹೊಸದು ತಂದಿಟ್ಟದ್ದು ಇಲ್ಲ. ಬಚ್ಚಲು ಮನೆಗೆ ಹೋಗುವ ದಾರಿಯಲ್ಲಿ ಹಾಕಿರುವ ಬಲ್ಬು ಸ್ವಲ್ಪ ದಿನಕ್ಕೆ ಇಲ್ಲದಿದ್ದರೂ ನಡೆಯುತ್ತೆ. ಒಂದು ತಿಂಗಳು ಅಷ್ಟೇ ತಾನೇ? ಅದನ್ನೇ ತಂದು ಇಲ್ಲಿ ಹಾಕೋದು. </span><br /><br /><span style="color: rgb(102, 51, 0);">'ಹಾಂ, ತಗಂಬಾ ಈಗ ಆಕಾಶಬುಟ್ಟಿ!' ಚಲಾವಣೆ ಕೊಡುತ್ತಾನೆ ಅಪ್ಪ ಪುಟ್ಟನಿಗೆ. ಪುಟ್ಟ ಓಡಿ ಹೋಗಿ ತರಾತುರಿಯಿಂದ ಅದರ ತಲೆಯ ಮೇಲೆ ಜುಟ್ಟಿನಂತಿರುವ ದಾರವನ್ನು ಹಿಡಿದು ತರುವ ವೇಳೆಯಲ್ಲೇ, ಬಾಗಿಲು ದಾಟುವಾಗ ಅದು ಕಾಲಿಗೆ ಸಿಕ್ಕಿ, ಆಕಾಶಬುಟ್ಟಿ ಹರಿದು, ಪುಟ್ಟ ಬಿದ್ದು... ಅಳಲು ಶುರುವಿಡುತ್ತಾನೆ! </span><br /><br /><span style="color: rgb(102, 51, 0);">'ಏ.. ಹೋತು.. ಹೋತು ಬಿಡು.. ಏನೂ ಆಗಲ್ಲೆ..' ಮಳ್ಳಂಡೆಯ ಗಾಯಕ್ಕೆ ಕೊಬ್ರಿ ಎಣ್ಣೆ ಹಚ್ಚುತ್ತಾ ಸಮಾಧಾನ ಮಾಡಿದಳು ಅಮ್ಮ. ಪುಟ್ಟನಿಗೆ ತನ್ನ ಕಾಲಿಗಾದ ಗಾಯಕ್ಕಿಂತ ಹೆಚ್ಚಿನ ನೋವಾದದ್ದು ಆಕಾಶಬುಟ್ಟಿ ಹರಿದುಹೋಯಿತಲ್ಲಾ ಎಂಬುದಕ್ಕೆ! ಆತ ಮತ್ತೂ ಜೋರಾಗಿ ಅಳತೊಡಗಿದ. ಮತ್ತೆ, ಆಗಲೇ ಉರಿಗಣ್ಣು ಮಾಡಿದ್ದ ಅಪ್ಪ, ತಾನು ಅಳು ನಿಲ್ಲಿಸಿದ್ದೇ ಬೈಯಲು ಶುರು ಮಾಡುತ್ತಾನೆ ಎಂಬ ಭಯ ಅವನಿಗೆ. ಅದಕ್ಕಾಗಿ ಅಂವ ಅಳು ನಿಲ್ಲಿಸುವುದೇ ಬೇಡವೆಂದು ತೀರ್ಮಾನಿಸಿದ..! </span><br /><br /><span style="color: rgb(102, 51, 0);">ಆ ಸಣ್ಣ ಊರಿನಲ್ಲಿ ಆಕಾಶಬುಟ್ಟಿ ಸಿಗುವ ಅಂಗಡಿಗಳಿರಲಿಲ್ಲ. ಇಪ್ಪತ್ತು ಕಿಲೋಮೀಟರ್ ದೂರದ ಪೇಟೆಗೆ ಹೋಗಿ ಹೊಸ ಆಕಾಶಬುಟ್ಟಿ ತಂದು, ಹೂಡಿ, ನೇತುಹಾಕಿ... ಇದೆಲ್ಲಾ ಈ ಗಡಿಬಿಡಿಯಲ್ಲಿ ಆಗುಹೋಗುವ ಕೆಲಸ ಅಲ್ಲವೆಂದು ತೀರ್ಮಾನಿಸಿದ ಅಪ್ಪ, ಮತ್ತೆ ರಿಪೇರಿ ಮಾಡಿ ಜೋಡಿಸಲಾಗದ ಸ್ಥಿತಿಯಲ್ಲಿದ್ದ ಹಳೇ ಆಕಾಶಬುಟ್ಟಿಯನ್ನು ನೋಡುತ್ತಾ 'ಹ್ಮ್.. ಒಟ್ನಲ್ಲಿ ಈ ವರ್ಷ ನಮ್ಮನೆ ಎದ್ರಿಗೆ ಆಕಾಶಬುಟ್ಟಿ ಇಲ್ದೇ ಹೋದಂಗೆ ಮಾಡ್ದೆ' ಎಂದು ಪುಟ್ಟನಿಗೆ ಬೈದಂತೆ ಹೇಳಿ ಒಳನಡೆದುಬಿಟ್ಟ. ಪುಟ್ಟನಿಗೆ ಮೊದಲಿಗಿಂತ ಜೋರಾಗಿ ಅಳು ಬಂತು.. ಪ್ರಣವನ ಮನೆಯಲ್ಲಿ ಹಾಕ್ತಾರೆ, ಪಲ್ಲವಿಯ ಮನೆಯಲ್ಲಂತೂ ನಿನ್ನೆಯೇ ಹಾಕಿಯಾಗಿದೆ, ಊರಲ್ಲೆಲ್ಲರ ಮನೆಯಲ್ಲೂ ಹಾಕ್ತಾರೆ. ನಮ್ಮ ಮನೆಯಲ್ಲಿ ಮಾತ್ರ ಇಲ್ಲ ಈ ವರ್ಷ.. ಶಾಲೆಗೆ ಹೋಗುವಾಗ ಅವರೆಲ್ಲರೂ ನಮ್ಮನೆಯೆಡೆಗೆ ನೋಡಿಯೇ ನೋಡುತ್ತಾರೆ.. ಆಗ ಇಲ್ಲಿ ಆಕಾಶಬುಟ್ಟಿ ಇಲ್ಲವೆಂದರೆ ಕೇಳಿಯೇ ಕೇಳುತ್ತಾರೆ: 'ಅಕ್ಷಯಾ, ನಿಮ್ಮನೇಲಿ ಮಾತ್ರ ಎಂಥಕ್ ಆಕಾಶಬುಟ್ಟಿ ಹಾಕಲ್ಲೆ?' ಅಂತ.. ಪುಟ್ಟನಿಗೆ ಅಳು ತಡೆಯಲಿಕ್ಕೇ ಆಗಲಿಲ್ಲ.. </span><br /><br /><a onblur="try {parent.deselectBloggerImageGracefully();} catch(e) {}" href="http://1.bp.blogspot.com/_c2gCy0eVwAM/SQAeKE9WBOI/AAAAAAAACKc/Sh1NOrejc-c/s1600-h/2003174903_391ac0c84e_o.jpg"><img style="margin: 0pt 10px 10px 0pt; float: left; cursor: pointer; width: 240px; height: 320px;" src="http://1.bp.blogspot.com/_c2gCy0eVwAM/SQAeKE9WBOI/AAAAAAAACKc/Sh1NOrejc-c/s320/2003174903_391ac0c84e_o.jpg" alt="" id="BLOGGER_PHOTO_ID_5260237523247301858" border="0" /></a><span style="color: rgb(102, 51, 0);">'ಥೋ.. ಇಷ್ಟ್ ಸಣ್ಣ ಗಾಯಕ್ಕೆ ಎಂಥಕ್ ಇಷ್ಟೆಲ್ಲಾ ಅಳ್ತಾ ಇದ್ಯಾ? ದಿನಾನೂ ಬಿದ್ದು ಗಾಯ ಮಾಡ್ಕ್ಯಂಡ್ ಬರ್ತೆ ನೀನು..' ಅಮ್ಮ ಗೊಣಗಿದಳು. </span><br /><span style="color: rgb(102, 51, 0);">'ಅಮ್ಮಾ, ನಮ್ಮನೇಲೂ ಆಕಾಶಬುಟ್ಟಿ ಹಾಕವು.. ಎಲ್ಲಾರ್ ಮನೇಲೂ ಹಾಕ್ತ.. ಅಪ್ಪಂಗೆ ಪ್ಯಾಟಿಗ್ ಹೋಗಿ ಹೊಸಾದು ತಗಂಬರಕ್ ಹೇಳು.. ನಂಗೆ ಬೇಕೇ ಬೇಕು..' ಪುಟ್ಟ ಹಟಕ್ಕೆ ಬಿದ್ದ. </span><br /><span style="color: rgb(102, 51, 0);">'ಅಷ್ಟೇ ಸೈಯಾ? ಅದ್ಕೇ ಇಷ್ಟೆಲ್ಲಾ ರಂಪಾಟಾನಾ? ನಾ ಹೇಳ್ತಿ ಬಿಡು ಅಪ್ಪನ್ ಹತ್ರ..' ಸಮಾಧಾನಿಸಿದಳು ಅಮ್ಮ. </span><br /><span style="color: rgb(102, 51, 0);">'ಹೇ..' ಅಮ್ಮನಿಗೊಂದು ಮುತ್ತೊತ್ತಿ ಮಡಿಲಿಂದ ಜಿಗಿದೆದ್ದು ಓಡಿದ ಪುಟ್ಟ. ಅವನ ಕೆನ್ನೆಯ ಮೇಲಿಳಿದಿದ್ದ ಕಣ್ಣೀರು ತನ್ನ ತುಟಿಗೆ ತಾಗಿ ಉಪ್ಪುಪ್ಪೆನಿಸಿ 'ಶೀ! ಕೊಳಕು!' ಎಂದು ಒರೆಸಿಕೊಳ್ಳುತ್ತಾ ಒಳನಡೆದಳು ಅಮ್ಮ!</span><br /><br /><span style="color: rgb(102, 51, 0);">ಅವತ್ತು ರಾತ್ರಿಯ ನಿದ್ರೆಯಲ್ಲಿ ಪುಟ್ಟನಿಗೆ ಕನಸೋ ಕನಸು.. ಕನಸಿನಲ್ಲಿ ಅವನ ಮನೆ ಮುಂದೆ ನೂರಾರು ಆಕಾಶಬುಟ್ಟಿಗಳನ್ನು ನೇತುಹಾಕಲಾಗಿದೆ.. ಒಂದೊಂದೂ ಒಂದೊಂದು ಬಗೆಯ ಬಣ್ಣದ ಬೆಳಕನ್ನು ಬೀರುತ್ತಿದೆ.. ನಕ್ಷತ್ರಲೋಕದಲ್ಲಿರುವವನಂತೆ ಅವನ್ನೆಲ್ಲಾ ಬಾಯ್ಕಳೆದುಕೊಂಡು ನೋಡುತ್ತಾ ಸಂಚರಿಸುತ್ತಿದ್ದಾನೆ ಪುಟ್ಟ.. </span><br /><br /><span style="color: rgb(102, 51, 0);">ಬೆಳಗಾಗಿದೆ. ಇವತ್ತೇ ಹಬ್ಬ! ಇವತ್ತು ಸಂಜೆಯೊಳಗೆ ಮನೆಯೆದುರು ಆಕಾಶಬುಟ್ಟಿ ನೇತಾಡುತ್ತಿರಬೇಕು..! ಅಪ್ಪ ಇನ್ನೇನು ಪೇಟೆಗೆ ಹೊರಡುತ್ತಾನೆ ಹೊಸ ಆಕಾಶಬುಟ್ಟಿ ತರುವುದಕ್ಕೆ ಅಂತ ಒಳಹೊರಗೆ ಓಡಾಡುತ್ತಾ ಕಾಯುತ್ತಿದ್ದಾನೆ ಪುಟ್ಟ. ಊಹುಂ, ಅಪ್ಪ ಹೊರಡುವ ಲಕ್ಷಣವೇ ಕಾಣುತ್ತಿಲ್ಲ. ಕೊಟ್ಟಿಗೆ ತೊಳೆಯುವುದು, ದನಕರುಗಳಿಗೆ ಸಿಂಗಾರ ಮಾಡುವುದು, ತೋರಣ ಕಟ್ಟುವುದು, ಇತ್ಯಾದಿ ಅವನದೇ ಕೆಲಸಗಳಲ್ಲಿ ಮಗ್ನನಾಗಿದ್ದಾನೆ ಅಪ್ಪ. ಹಾಗಾದರೆ ಅಮ್ಮ ಅಪ್ಪನಿಗೆ ಹೇಳಲೇ ಇಲ್ಲವೇ? ಮರೆತುಬಿಟ್ಟಳೇ? ಕೇಳೋಣವೆಂದರೆ ಅಮ್ಮ ಅಡುಗೆಮನೆಯಲ್ಲಿ ಬ್ಯುಸಿ! 'ಮಡಿ..! ಇಲ್ಲೆಲ್ಲಾ ಬರಡ ನೀನು' ಗುರುಗುಡುತ್ತಿದ್ದಾಳೆ ಒಳಗಿಂದಲೇ. ಪುಟ್ಟನಿಗೆ ಆಕಾಶಬುಟ್ಟಿಯದೇ ಚಿಂತೆ..</span><br /><br /><span style="color: rgb(102, 51, 0);">ಪುಟ್ಟನ ಮನೆಯ ಪಕ್ಕದಲ್ಲಿರುವುದು 'ಮೇಷ್ಟ್ರಂಕಲ್' ಮನೆ. ರಮೇಶ್ ಸೆಬಾಸ್ಟಿಯನ್ ಅವರ ಹೆಸರು. ಸುಮಾರು ವರ್ಷಗಳ ಹಿಂದೆಯೇ ಪಕ್ಕದೂರಿನ ಶಾಲೆಗೆ ಮೇಷ್ಟ್ರಾಗಿ ಬಂದ ಅವರು ಇಲ್ಲಿ ಮನೆ ಮಾಡಿಕೊಂಡು, ರಿಟೈರ್ ಆದಮೇಲೂ ಇಲ್ಲೇ ನೆಲೆಯೂರಿರುವವರು. ಊರವರೆಲ್ಲರ ಜೊತೆ ಚೆನ್ನಾಗಿದ್ದ ಅವರು, ಹಾಗಂತ ಯಾರನ್ನೂ ಅಷ್ಟಾಗಿ ಹಚ್ಚಿಕೊಂಡವರೂ ಅಲ್ಲ. ತಾವಾಯಿತು ತಮ್ಮ ಪಾಡಾಯಿತು ಎಂಬಂತೆ ಇರುವವರು. ಮದುವೆ - ಹಬ್ಬ - ವಿಶೇಷ ದಿನಗಳಂದು ಯಾರ ಮನೆಯಲ್ಲಾದರೂ ಕರೆದರೆ ಹೋಗಿ ಬರುತ್ತಿದ್ದರು. ಹಾಗೆಯೇ ಕ್ರಿಸ್‍ಮಸ್ ದಿನ ಊರವರೆಲ್ಲರೂ ಅವರ ಮನೆಗೆ ಹೋಗಿ, ಮಾಡಿದ್ದ ಅಲಂಕಾರವನ್ನೆಲ್ಲಾ ಹೊಗಳಿ, ಸೆಬಾಸ್ಟಿಯನ್ನರ ಹೆಂಡತಿ ಹಾಕಿಕೊಂಡ ಒಡವೆಗಳನ್ನೂ ಒಮ್ಮೆ ಪರಿಶೀಲಿಸಿ ನೋಡಿ, ಕೇಕು-ಸ್ವೀಟು ತಿಂದು ಬರುತ್ತಿದ್ದರು. ಹಿರಿಯರೂ ನಿವೃತ್ತ ಮಾಸ್ತರರೂ ಆಗಿದ್ದರಿಂದ ಅವರಿಗೆ ಊರಲ್ಲೊಂದು ಗೌರವವಿತ್ತು. ಮತ್ತೆ ಇಡೀ ಊರಲ್ಲಿ ಹುಡುಗರು ಹೀಗೆ ಇಂಗ್ಲೀಷಿನಲ್ಲಿ 'ಅಂಕಲ್' ಅಥವಾ 'ಮೇಷ್ಟ್ರಂಕಲ್' ಅಂತ ಕರೆಯುವುದು ಅವರೊಬ್ಬರನ್ನೇ.</span><br /><br /><span style="color: rgb(102, 51, 0);">ಅಳುಮುಖ ಮಾಡಿಕೊಂಡು ಹೊರಗಡೆ ಕಟ್ಟೆಯ ಮೇಲೆ ಕೂತಿದ್ದ ಪುಟ್ಟನನ್ನು ಕಂಡು ಅವರು ಮಾತಾಡಿಸಿದರು: 'ಯಾಕ್ ಪುಟ್ಟಾ..? ಹಬ್ಬದ ದಿನ ಖುಶ್‍ಖುಶಿಯಾಗಿರೋದು ಬಿಟ್ಟು ಹೀಗೆ ಕೂತಿದೀಯಾ?' ಅಂತ. ಪುಟ್ಟ ಹೀಗ್ ಹೀಗಾಯ್ತು, ಈ ವರ್ಷ ನಮ್ಮನೇಲಿ ಆಕಾಶಬುಟ್ಟೀನೇ ಇಲ್ಲ ಅಂತ ಹೇಳಿದ. ಮಕ್ಕಳಿಲ್ಲದ ಸೆಬಾಸ್ಟಿಯನ್ ಅಂಕಲ್‍ಗೆ ಪುಟ್ಟನನ್ನ ಕಂಡ್ರೆ ಯಾವಾಗಲೂ ಅಕ್ಕರೆ. ತಕ್ಷಣ ಪುಟ್ಟನನ್ನ ಎತ್ತಿಕೊಂಡ ಅವರು, 'ಅಯ್ಯೋ.. ಅದಕ್ಯಾಕೆ ಇಷ್ಟೆಲ್ಲಾ ಬೇಜಾರ್ ಮಾಡ್ಕೊಂಡಿದೀಯಾ..? ನಮ್ಮನೇಲಿ ಕ್ರಿಸ್‍ಮಸ್ ಟೈಮಲ್ಲಿ ಹಾಕೋ ಆಕಾಶಬುಟ್ಟಿ ಇದೆಯಲ್ಲಾ..? ಅದನ್ನೇ ಕೊಡ್ತೀನಿ. ನಿಮ್ಮನೇಲಿ ಹಾಕಿ. ಹಬ್ಬ ಮುಗಿದ ಮೇಲೆ ವಾಪಸು ಕೊಡಿ.. ಸಿಂಪಲ್..!' ಎಂದವರೇ ಪುಟ್ಟನನ್ನ ತಮ್ಮನೆ ಒಳಗೆ ಕರೆದುಕೊಂಡು ಹೋಗಿ, ಗಾಡ್ರೇಜಿನಲ್ಲಿದ್ದ ಬಣ್ಣಬಣ್ಣದ ಝರಿಯ, ಫಳಫಳನೆ ಹೊಳೆಯುವ, ಹೊಸದರ ಹಾಗೆ ಕಾಣುವ ಆಕಾಶಬುಟ್ಟಿಯನ್ನು ತೆಗೆದುಕೊಟ್ಟರು.. ಪುಟ್ಟನ ಕಣ್ಣಲ್ಲೀಗ ನಕ್ಷತ್ರ ಕಾರಂಜಿ..!</span><br /><br /><span style="color: rgb(102, 51, 0);">ಅಷ್ಟೊತ್ತಿಗೆ ಗೋಪೂಜೆಗೆ ಕರೆಯಲೆಂದು ಅಲ್ಲಿಗೆ ಬಂದ ಅಮ್ಮನಿಗೆ ಪುಟ್ಟ ಮೇಷ್ಟ್ರಂಕಲ್ ಕೊಟ್ಟ ಆಕಾಶಬುಟ್ಟಿ ತೋರಿಸಿದ. 'ಓಹ್, ಸಿಗ್ತಲ್ಲಪ್ಪಾ ಅಂತೂ ನಿಂಗೆ ಆಕಾಶಬುಟ್ಟಿ..? ಮೇಷ್ಟ್ರ್‍ಏ, ಇವನಿಗೆ ಇವತ್ತು ಹೆಂಗೆ ಸಮಾಧಾನ ಮಾಡೋದು ಅಂತ್ಲೇ ನಂಗೆ ಗೊತ್ತಾಗ್ದೇ ಸುಮ್ನಾಗ್ಬಿಟ್ಟಿದ್ದೆ.. ಅಂತೂ ನೀವು ಇದನ್ನ ಕೊಟ್ಟು ಒಳ್ಳೇ ಕೆಲಸ ಮಾಡಿದ್ರಿ ನೋಡಿ!' ಎಂದು, ಅವರನ್ನು ಮಡದಿ ಸಮೇತ ಪೂಜೆಗೆ - ಊಟಕ್ಕೆ ಬರುವಂತೆ ಕರೆದು ಹೋದಳು. </span><br /><br /><div style="text-align: left;"><span style="color: rgb(102, 51, 0);">ಆಕಾಶಬುಟ್ಟಿಯನ್ನು ಹುಶಾರಾಗಿ ಮನೆಗೆ ತಂದ ಪುಟ್ಟ. ಅವನಿಗೆ ಅದನ್ನು ಮನೆಯೆದುರು ನೇತು ಹಾಕಿ, ಒಮ್ಮೆ ಸ್ವಿಚ್ ಹಾಕಿ ನೋಡುವವರೆಗೆ ಸಮಾಧಾನವಿಲ್ಲ.. ಅಪ್ಪನ ಬಳಿ ಕೇಳಿದರೆ 'ಈಗ ಆಗಲ್ಲೆ ಅಪ್ಪೀ.. ಮಧ್ಯಾಹ್ನದ್ ಮೇಲೆ ನೋಡನ.. ಈಗ ಸ್ನಾನಕ್ಕೆ ಹೋಗವು, ಗೋಪೂಜೆ ಮಾಡವು, ದೇವಸ್ಥಾನಕ್ ಹೋಗವು..' ಎನ್ನುತ್ತಾ ಗಡಿಬಿಡಿಯಲ್ಲಿ ಟವೆಲ್ ಎತ್ತಿಕೊಂಡು ಬಚ್ಚಲಿನೆಡೆಗೆ ನಡೆದೇಬಿಟ್ಟ. ಪುಟ್ಟ ಚಡಪಡಿಸುತ್ತಾ ಮನೆಯ ಒಳಗೂ ಹೊರಗೂ ಓಡಾಡತೊಡಗಿದ. ಅಪ್ಪ ಸ್ನಾನ ಮಾಡಿ ಬಂದು, ಮಡಿ ಉಟ್ಟು, ಪೂಜೆ ಸಾಮಾನನ್ನೆಲ್ಲಾ ಎತ್ತಿಕೊಂಡು ಕೊಟ್ಟಿಗೆ ಕಡೆ ಹೊರಟ. ಅಮ್ಮನೂ ಅಪ್ಪನ ಹಿಂದೆಯೇ ನೈವೇದ್ಯಕ್ಕೆ ಭಕ್ಷ್ಯಗಳನ್ನು ಹಿಡಿದು ಹೊರಟಳು. 'ಝಾಂಗ್ಟೆ ಹೊಡಿಲಕ್ಕು ಬಾರಾ' ಎಂದು ಕೂಗಿದರೆ ಪುಟ್ಟ ಸಿಟ್ಟು ಮಾಡಿಕೊಂಡು ಕೊಟ್ಟಿಗೆಗೆ ಹೋಗಲೇ ಇಲ್ಲ.</span><br /></div><br /><span style="color: rgb(102, 51, 0);">ಸ್ವಲ್ಪ ಸಮಯದಲ್ಲಿ ಹೊಸ ಬಟ್ಟೆ ಹಾಕಿಕೊಂಡು ಮೇಷ್ಟ್ರಂಕಲ್ ಪುಟ್ಟನ ಮನೆಗೆ ಬಂದರು. ಪುಟ್ಟನ ಚಡಪಡಿಕೆ ಅವರಿಗೆ ಅರ್ಥವಾಯಿತು. ಅದಾಗಲೇ ವೈರೆಳೆದು ತಯಾರಾಗಿದ್ದ ವ್ಯವಸ್ಥೆಗೆ ತಮ್ಮ ಮನೆಯ ಆಕಾಶಬುಟ್ಟಿಯನ್ನು ನೇತುಬಿಟ್ಟರು. ಪುಟ್ಟ ಒಳಗೋಡಿ ಸ್ವಿಚ್ ಹಾಕಿದ. ಕನಸಿನ ಲೋಕದಿಂದಲೇ ಇಳಿದು ಬಂದಂತಿದ್ದ ಆ ಆಕಾಶದೀಪ ಝಗ್ಗನೆ ಹೊತ್ತಿಕೊಳ್ಳುವುದಕ್ಕೂ, ಪುಟ್ಟನ ಮೊಗದಲ್ಲಿ ಖುಶಿಯ ಪಟಾಕಿ ಸಿಡಿದರಳುವುದಕ್ಕೂ, ಕೊಟ್ಟಿಗೆಯಿಂದ ಅಪ್ಪನ ಗೋಪೂಜೆಯ ಘಂಟೆ ಸದ್ದಾಗುವುದಕ್ಕೂ ಸರಿ ಹೋಯಿತು. 'ಹೇ..' ಎನ್ನುತ್ತಾ ಮೇಷ್ಟ್ರಂಕಲ್ಲನ್ನೂ ಎಳೆದುಕೊಂಡೇ ಕೊಟ್ಟಿಗೆಯೆಡೆಗೆ ಓಡಿದ ಪುಟ್ಟ.</span><br /><br /><span style="color: rgb(0, 153, 0);">*</span> <span style="color: rgb(204, 0, 0);">*</span><br /><br /><span style="color: rgb(0, 0, 102);">ಆಕಾಶಬುಟ್ಟಿಯ ಬೆಳಕು ಮೌಢ್ಯದ ಕತ್ತಲೆಯನ್ನು ತೊಡೆದು, ಸ್ನೇಹ-ಪ್ರೀತಿ-ಸಹಬಾಳ್ವೆಗಳೆಡೆಗೆ ಜನರನ್ನು ನಡೆಸುವಲ್ಲಿ ನೆರವಾಗಲಿ ಎಂದು ಹಾರೈಸೋಣ. ದೀಪಾವಳಿಯ ಶುಭಾಶಯಗಳು.</span><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7735516074684621740?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com19tag:blogger.com,1999:blog-27009232.post-32996421208420651922008-09-24T11:13:00.003+05:302009-05-29T12:54:30.363+05:30ಪನ್ನೀರಿನ ಹುಡುಗಿಶಹರದ ಛತ್ರದಿ ಗೆಳೆಯನ ಮದುವೆ<br />ಕರೆದಿಹ ತಪ್ಪದೇ ಬರಬೇಕೆಂದು<br />'ಆರತಕ್ಷತೆಗೂ ಬಾರದೆ ಇದ್ದರೆ<br />ಮಾತೇ ಆಡಿಸೆ' ಎಂದಿಹನು<br /><br />ಗರಿಗರಿ ಜುಬ್ಬಾ, ಬಗಲಿಗೆ ಅತ್ತರು,<br />ಹೊಸ ಶೂಗೂನೂ ಪಾಲೀಶು!<br />ನಾನೂ ಭಾವೀ ಮದುಮಗನಲ್ಲವೇ?<br />ಇಷ್ಟೂ ಇರದಿರೆ ಬರಿ-ವೇಷ್ಟು!<br /><br />ದಂಪತಿಗೆಂದೊಂದುಡುಗೊರೆ ಹಿಡಿದು<br />ಹೊರಟೆನು ನಯ ನಾಜೂಕಿನಲಿ<br />ಛತ್ರದ ತೋರಣ ಬಾಗಿಲು ಕೋರಿತು<br />ಸ್ವಾಗತ ಭಾರೀ ಸಂಭ್ರಮದಿ<br /><br />ಬಾಗಿಲ ಪಕ್ಕದಿ ಗೆಳತಿಯರೊಡನೆ<br />ನಿಂತಿಹಳ್ಯಾರೋ ಸುಂದರಿಯು<br />ಬೆಳ್ಳಿಯ ಬಣ್ಣದ ದಾನಿಯ ತುಂಬಾ<br />ಹಿಡಿದು ಸಿಂಪಿಸಲ್ ಪನ್ನೀರು<br /><br />ಸೋಕಿರೆ ನನಗೂ ಪರಿಮಳ ನೀರು<br />ಆಗಿದೆ ಮನಮೈ ರೋಮಾಂಚನವು<br />ಮುನಿಸನು ನಟಿಸುತ ದಿಟ್ಟಿಸೆ ನಾನು<br />ಚೆಲುವೆ ಕಿಲಾಡಿಗೆ ನಾಚಿಕೆಯು!<br /><br />ಛತ್ರವೇ ಇದು? ಕಿನ್ನರ ಲೋಕವೇ?-<br />ನನಗೋ ದಿಗ್ಭ್ರಮೆ; ಅರೆ ಮರುಳು<br />ಮರೆತಿಹೆ ನಿಂತಿಹ ಸ್ಥಳವನೆ ಅರೆಚಣ;<br />ಈ ಚೆಲುವೆಗೋ, ನಗೆ-ಜೋರು!<br /><br />ಹಂಸದ ಬಣ್ಣದ ಸೀರೆಯ ಹುಡುಗಿ,<br />ಕೈ ಬೆರಳುಗಳಿಗೆ ಮದರಂಗಿ<br />ಹಿಮಾಲಯದ ತರು ಬಿಟ್ಟರೆ ಕೆಂಪುಹೂ<br />ಹೀಗೆಯೆ ಕಾಣಲುಬಹುದೇನೋ?<br /><br />ನೂಕುನುಗ್ಗಲಲಿ ಸರಿದೆಹೆ ನಾನೂ<br />ಛತ್ರದ ಸಭೆಯ ಅಂಗಳಕೆ<br />ಉಡುಗೊರೆ ಸಾಲೋ ಉದ್ದವೇ ಉದ್ದ<br />ಕಾಯಲೇಬೇಕು ಹಾ, ಆಕಳಿಕೆ!<br /><br />ಯಾರಿರಬಹುದು ಆ ಎಳೆತರಳೆ-<br />ಗಂಡಿನ ಕಡೆಯವಳೆ? ಹೆಣ್ಣಿನ ಕಡೆಯವಳೆ?<br />ಸಭೆಯೊಳಗೊಮ್ಮೆ ಹಾದು ಹೋಗಿರೆ<br />ಓಹ್! ಕೋಲ್ಮಿಂಚೊಂದು ಹೊಳೆದಂತೆ<br /><br />ಏನೋ ನೆವದಲಿ ಸುಳಿದಾಡುವಳು<br />ನನಗೆ ತಿಳಿಯದೆ ಇದರ ಒಳಗುಟ್ಟು?<br />'ಅಯ್ಯೋ ಹುಡುಗಿ, ನಾ ಮೆಚ್ಚಿಯಾಗಿದೆ<br />ಸಾಕು ಬಿಡು ನೀ ಈ ಕಸರತ್ತು!'<br /><br />ಲಗ್ನದ ಗದ್ದಲ ತುಂಬಿದ ಮನೆಯಲಿ<br />ಇಬ್ಬರು ಕಳ್ಳರು ಇರುವವರೀಗ<br />ನೋಟವ ಕದ್ದರೆ ಸದ್ದೇ ಆಗದು<br />ಪ್ರೇಮ ಅರಳುವುದು ಬಲುಬೇಗ<br /><br />ಮಂಟಪದಲ್ಲಿ ನಿಂತಿಹ ಜೋಡಿಯು<br />ನಾನು-ಅವಳೇ ಆದಂತೆ;<br />ಊಟದ ತಟ್ಟೆಯ ಹೋಳಿಗೆಯಲ್ಲೂ<br />ಅವಳಾ ಮುಖವೇ ಕಂಡಂತೆ!<br /><br />ನನಗೂ ತಿಳಿದಿದೆ: ಇಂತಹ ಪ್ರೀತಿಗೆ<br />ಆಯಸ್ಸೆಂಬುದು ಬಲು ಕಮ್ಮಿ<br />ಛತ್ರದ ಹೊಸ್ತಿಲ ದಾಟಲು ಮರೆವುದು<br />ಅನಿವಾರ್ಯವೇ ಹೂಂ, ಸರಿಯೆನ್ನಿ.<br /><br />ಆದರೂ ಈಕೆಯು ಬರುವಳು ಸಂಗಡ<br />ಜುಬ್ಬದ ವಸಂತ ಪರಿಮಳವಾಗಿ;<br />ಪನ್ನೀರಿನ ಘಮ ಸುಳಿದಾಗೆಲ್ಲ<br />ನೆನಪಾಗುವಳು ಕಾಡುವ ಕಣ್ಣಾಗಿ.<br /><br /><div style="text-align: right;">[<span style="font-style: italic; color: rgb(153, 0, 0);">ನನ್ನ ಬ್ಲಾಗಿನ ನೂರನೇ ಪೋಸ್ಟು</span>]<br /></div><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-3299642120842065192?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com42tag:blogger.com,1999:blog-27009232.post-62889710256420247392008-09-02T11:13:00.002+05:302009-05-29T13:14:54.845+05:30ಚೌತಿಯ ಮುನ್ನಾದಿನ, ಗಣೇಶವಾಹನನ ನೆನೆದು...ತುಂಗಾ ತೀರದ ಬಲಗಡೆಯಲ್ಲಿ ಹಿಂದಲ್ಲಿದ್ದುದು ಬೊಮ್ಮನ ಹಳ್ಳಿ<br />ಅಲ್ಲೇನಿಲಿಗಳ ಕಾಟವೆ ಕಾಟ ಅಲ್ಲಿನ ಜನಗಳಿಗತಿಗೋಳಾಟ |<br /><br />ಕುವೆಂಪುರವರ ಕಥನಕವನ 'ಬೊಮ್ಮನಹಳ್ಳಿಯ ಕಿಂದರಿಜೋಗಿ' ಶುರುವಾಗುವುದೇ ಹೀಗೆ. ಎಲ್ಲಾ ಹಳ್ಳಿಗಳಂತೆ ಅದೂ ಒಂದು ಹಳ್ಳಿ. ಆದರೆ ಅಲ್ಲಿ ಇಲಿಗಳ ಕಾಟ! ಇಲಿ ಯಾವೂರಲ್ಲಿಲ್ಲ ಹೇಳಿ? ಎಲ್ಲಾ ಊರಲ್ಲೂ ಎಲ್ಲರ ಮನೆಯಲ್ಲೂ ಇದ್ದದ್ದೇ ಇಲಿ ಕಾಟ. ಆದರೆ ಬೊಮ್ಮನಹಳ್ಳಿಯಲ್ಲಿ ಇಲಿಗಳ ಕಾಟ ಮಿತಿ ಮೀರಿದೆ. ಎಷ್ಟು ಅಂತೀರಾ? ಅಲ್ಲಿನ ಇಲಿಗಳಿಗೆ ಹೆದರಿಕೆ ಬೆದರಿಕೆ ಒಂದೂ ಇಲ್ಲ.. ಅವು ನಾಯಿ, ಬೆಕ್ಕುಗಳನ್ನೇ ಕಡಿಯುತ್ತವೆ..! ಅಡುಗೆ ಭಟ್ಟನ ಕೈಯ ಸಟುಗವನ್ನು ಭೀತಿಯಿಲ್ಲದೇ ನೆಕ್ಕುತ್ತವೆ..! ಟೋಪಿ ಒಳಗೇ ಗೂಡು ಮಾಡಿಕೊಳ್ಳುತ್ತವೆ, ಪೇಟದ ಒಳಗೆ ಆಟವಾಡ್ತವೆ, ಗೋಡೆಗೆ ತಗುಲಿಸಿದಂಗಿಯ ಜೇಬನು ದಿನವೂ ಜಪ್ತಿಯ ಮಾಡುತ್ತವೆ..! ಮಲಗಿದ್ದ ಶೇಶಕ್ಕ ಬೆಳಗೆದ್ದು ನೋಡುವಾಗ ಕೇಶವೇ ಇಲ್ಲ! ಸಿದ್ದೋಜೈಗಳು ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗ ಅವರ ಜೇಬಿನಿಂದ ಇಲಿಯೊಂದು ಛಂಗನೆ ನೆಗೆದು, ಮಕ್ಕಳೆಲ್ಲಾ ಗೇಲಿ ಮಾಡಿ, ಮೇಷ್ಟರಿಗೆ ತುಂಬಾ ಅವಮಾನವಾಗುತ್ತದೆ.<br /><br />ಇಲಿಗಳ ಕೊಲ್ಲಲು ಜನಗಳು ಮಾಡಿದ ನಾನಾ ಯತ್ನ ನಿಶ್ಫಲವಾಗಲು ಊರ ಗೌಡ ಈ ಇಲಿಗಳನ್ನು ಕೊಂದವರಿಗೆ ಆರು ಸಾವಿರ ನಾಣ್ಯಗಳನ್ನು ಕೊಡುವುದಾಗಿ ಘೋಶಿಸುತ್ತಾನೆ. ಆಗ ಬರುತ್ತಾನೆ ನಮ್ಮ ಕಿಂದರಿಜೋಗಿ.. ಅವನು ಕಿಂದರಿ ಊದಿದ್ದೇ ಇಲಿಗಳೆಲ್ಲ ಬುಳಬುಳನೆ ಹೊರಬರುತ್ತವೆ, ಜೋಗಿಯನ್ನೇ ಹಿಂಬಾಲಿಸುತ್ತವೆ. ಯಾವ್ಯಾವ ಥರದ ಇಲಿಗಳು ಅವು: ಕುಂಟಿಲಿ, ಕಿವುಡಿಲಿ, ಹೆಳವಿಲಿ, ಮೂಗಿಲಿ, ಸಣ್ಣಿಲಿ, ದೊಡ್ಡಿಲಿ, ಸುಂಡಿಲಿ, ಅಣ್ಣಿಲಿ, ತಮ್ಮಿಲಿ, ಅವ್ವಿಲಿ, ಅಪ್ಪಿಲಿ, ಮಾವಿಲಿ, ಭಾವಿಲಿ, ಅಕ್ಕಿಲಿ, ತಂಗಿಲಿ, ಗಂಡಿಲಿ, ಹೆಣ್ಣಿಲಿ, ಮುದುಕಿಲಿ, ಹುಡುಗಿಲಿ -ಎಲ್ಲಾ ಬಂದುವಂತೆ ಓಡೋಡಿ... ಕೆಂಪಿನ ಇಲಿಗಳು, ಹಳದಿಯ ಇಲಿಗಳು, ಬೆಳ್ಳಿಲಿ, ಕರಿಯಿಲಿ, ಗಿರಿಯಿಲಿ, ಹೊಲದಿಲಿ, ಕುಂಕುಮ ರಾಗದ, ಚಂದನ ರಾಗದ, ಹಸುರಿನ ಬಣ್ಣದ, ಪಚ್ಚೆಯ ವರ್ಣದ, ಸಂಜೆಯ ರಾಗದ, ಗಗನದ ರಾಗದ ನಾನಾ ವರ್ಣದ ಇಲಿಗಳು ಬಂದವು... ಹೀಗೆ ಕುವೆಂಪುರವರ ಶಬ್ದ ಭಂಡಾರದೊಳಗಿದ್ದ ಇಲಿಗಳೆಲ್ಲ ಹೊರಬರುತ್ತವೆ.<br /><br />ಜೋಗಿ ಕಿಂದರಿ ಊದುತ್ತಾ ಊದುತ್ತಾ ಇಲಿಗಳನ್ನೆಲ್ಲಾ ಮೋಡಿ ಮಾಡಿ ಅವೆಲ್ಲಾ ಹೊಳೆಯಲ್ಲಿ ಮುಳುಗಿ ಸಾಯುವಂತೆ ಮಾಡುತ್ತಾನೆ. ಆಮೇಲಿನ ಕಥೆ ನಿಮಗೆ ಗೊತ್ತೇ ಇದೆ: ಗೌಡ ಮಾತಿಗೆ ತಪ್ಪುತ್ತಾನೆ; ಹೇಳಿದಂತೆ ಆರು ಸಾವಿರ ನಾಣ್ಯ ಕೊಡುವುದಿಲ್ಲ. ಆಗ ಜೋಗಿ ಮತ್ತೆ ಕಿಂದರಿ ಊದುತ್ತಾನೆ, ಊರಿನ ಮಕ್ಕಳೆಲ್ಲಾ ಅವನ ಹಿಂದೆ ಹೋಗುತ್ತವೆ, ಬೆಟ್ಟವೊಂದು ಬಾಯಿ ತೆರೆಯುತ್ತದೆ, ಅದರೊಳಗೆ ಜೋಗಿ - ಅವನ ಹಿಂದೆಯೇ ಮಕ್ಕಳು - ಕೊನೆಗೆ ಉಳಿದವನೊಬ್ಬನೇ ಕುಂಟ. 'ಅಯ್ಯೋ ಹೋಯಿತೆ ಆ ನಾಕ! ಅಯ್ಯೋ ಬಂದಿತೆ ಈ ಲೋಕ!'<br /><br />* * *<br /><br />ಇಲಿಗಳ ಜೊತೆ ಗುದ್ದಾಡುವುದು ಕಷ್ಟ. ಮನೆಯೊಳಗೆ ಒಂದು ಇಲಿ ಹೊಕ್ಕಿಕೊಂಡಿತೆಂದರೇ ತಲೆಬಿಸಿ ನಿಭಾಯಿಸಲಿಕ್ಕಾಗುವುದಿಲ್ಲ; ಇನ್ನು ನೂರಾರು ಇಲಿಗಳು ಸೇರಿಬಿಟ್ಟರೆ ಗತಿಯೇನು ಹೇಳಿ? ಈ ಇಲಿಗಳ ವಾಸಕ್ಕೆ ಸಂದಿಗೊಂದಿಯೇ ಆಗಬೇಕು. ಓಡಾಟಕ್ಕೆ ಗೋಡೆಬದಿಯೇ ಆಗಬೇಕು. ರಾಜಾರೋಶವಾಗಿ ಕೋಣೆಯ ಮಧ್ಯದಲ್ಲಿ ಇವು ಓಡಾಡುವುದನ್ನು ನಾನು ಕಂಡಿದ್ದೇ ಇಲ್ಲ. ಉಗ್ರಾಣದಲ್ಲಿನ ಚೀಲಗಳನ್ನು ಕೊರೆಯುವುದು, ಸ್ಟ್ಯಾಂಡಿನಲ್ಲಿನ ಬಟ್ಟೆಗಳನ್ನು ತೂತು ಮಾಡುವುದು, ಗ್ಯಾಸ್‍ಕಟ್ಟೆಯ ಮೇಲಿದ್ದ ಕಾಯಿಕಡಿಯನ್ನು ಎತ್ತಿಕೊಂಡು ಹೋಗುವುದು -ಇತ್ಯಾದಿ ಕಿತಾಪತಿ ಕೆಲಸಗಳನ್ನು ಮಾಡುವುದೇ ಇವುಗಳ ಜಾಯಮಾನ. ಹಾಕಿದಷ್ಟನ್ನು ತಿಂದುಕೊಂಡು, ಶಿಸ್ತಾಗಿ ಓಡಾಡಿಕೊಂಡಿದ್ದು, ಕೋಣೆಯಲ್ಲಿ ಒಂದು ಕಡೆ ಮಲಗೆದ್ದು ಹೋಗುವಂತಿದ್ದರೆ ಇವನ್ನೂ ನಾಯಿ-ಬೆಕ್ಕುಗಳಂತೆ ಸಾಕಬಹುದಿತ್ತೇನೋ ಎಂದು ನಾನು ಯೋಚಿಸಿದ್ದಿದೆ.<br /><br />ಈ ಇಲಿಗಳ ಮೂಗು ಬಹು ಚುರುಕು. ಹತ್ತಾರು ಮಾರು ದೂರದಲ್ಲಿ ಬಿದ್ದಿರುವ ಕಾಯಿಚೂರಿನ ಪರಿಮಳವನ್ನೂ ಇವು ಗ್ರಹಿಸಿ, ಅಲ್ಲಿಗೆ ಧಾವಿಸಿ, ಅದನ್ನು ಗುಳುಂ ಮಾಡಬಲ್ಲವು. ಬಹುಶಃ ಗಣೇಶ ಈ ಇಲಿಯನ್ನೇ ತನ್ನ ವಾಹನವನ್ನಾಗಿ ಆರಿಸಿಕೊಂಡಿರುವ ಹಿಂದೆ ಈ ಕಾರಣವೂ ಇದ್ದಿರಬಹುದು. ಸದಾ ಹಸಿದ ಹೊಟ್ಟೆಯ ಈ ಟೊಣಪನಿಗೆ ಆಹಾರ ಎಲ್ಲಿದೆ ಎಂದು ಪತ್ತೆಹಚ್ಚಿ, ಅಲ್ಲಿಗೆ ಕರೆದೊಯ್ದು ಕೊಡಿಸುವ ಆಶ್ವಾಸನೆಯನ್ನು ಇಲಿ ಕೊಟ್ಟಿರಬೇಕು. ಹಾಗಾಗೇ ಇವನು ಇಲಿಗೆ ತನ್ನ ಟ್ರಾವೆಲ್ ಕಾಂಟ್ರಾಕ್ಟ್ ವಹಿಸಿಕೊಟ್ಟಿರುವುದು. ಹಾಗೆ ನೋಡಿದರೆ, ಪ್ರಥಮಪೂಜಿತ ಗಣೇಶನ ವಾಹನವನ್ನು ನಾವೆಲ್ಲಾ ಅರ್ಚಿಸಿ ಗೌರವಿಸಬೇಕು. ಆಫ್ಟರಾಲ್ ಒಬ್ಬ ಮಂತ್ರಿಯ ಕಾರಿಗೆ - ಅದರ ಡ್ರೈವರಿಗೆ ಎಷ್ಟು ಗೌರವ ಇರುತ್ತದೆ ಯೋಚಿಸಿ? ಮೊದಲು ಅವನಿಗೆ ಸೆಲ್ಯೂಟ್ ಹೊಡೆದೇ 'ಸಾಯೇಬ್ರು ಯಾವ ಮೂಡಲ್ಲವ್ರೆ?' ಅಂತ ಕೇಳೋದಿಲ್ಲವಾ? ಅಂಥಾದ್ದರಲ್ಲಿ, ಗಜಮುಖನ ವಾಹನವೆಂದಾದರೂ ನಾವು ಇಲಿಗೆ ಸ್ವಲ್ಪ ಕನ್ಸಿಡರೇಶನ್ ಕೊಡಬಹುದಿತ್ತು. ಆದರೆ ಅದರದ್ದು ಅದೇನು ಕರ್ಮವೋ ಏನೋ, ಜನ ಅದನ್ನು ತಮ್ಮ ಆಜನ್ಮ ಶತ್ರುವೆಂಬಂತೆ ಪರಿಗಣಿಸಿಬಿಟ್ಟಿದ್ದಾರೆ. ಕಣ್ಣಿಗೆ ಬಿದ್ದರೆ ಹೊಡೆಯಲಿಕ್ಕೆ ದೊಣ್ಣೆ ಎಲ್ಲಿದೆ ಹುಡುಕುತ್ತಾರೆ.<br /><br />ನಮ್ಮ ಹಳೆ ಮನೆಯಲ್ಲಿ ಇಲಿಗಳ ಕಾಟ ಜೋರಿತ್ತು. ಅದು ಮಣ್ಣುಗೋಡೆಯ ಮನೆಯಾಗಿದ್ದರಿಂದ ಇವಕ್ಕೆ ಬಿಲ ತೋಡಲಿಕ್ಕೆ ಬಹಳ ಸುಲಭವಾಗಿತ್ತು. ರಾತ್ರಿಯಾಯಿತೆಂದರೆ ಸಾಕು, ಕೊಟ್ಟಿಗೆ ಮನೆಯಿಂದಲೋ ಮತ್ತೆಲ್ಲಿಂದಲೋ ಮನೆಯೊಳಗೆ ಟುಕುಟುಕನೆ ಆಗಮಿಸುತ್ತಿದ್ದ ಇವು ಕಣ್ಣು ಮಿಟುಕಿಸುವುದರೊಳಗೆ ಒಳಗೆಲ್ಲೋ ಹೋಗಿ ಸೇರಿಕೊಂಡುಬಿಡುತ್ತಿದ್ದವು. ಮಂಚದಡಿಗೋ, ಕಪಾಟಿನ ಕೆಳಗೋ ಅಡಗಿಕೊಂಡಿರುತ್ತಿದ್ದ ಇವು ನಾವು ಲೈಟೆಲ್ಲಾ ಆಫ್ ಮಾಡಿ ಮಲಗಿದಮೇಲೆ ಕಾರ್ಯಾಚರಣೆಗೆ ಇಳಿಯುತ್ತಿದ್ದವು. ಸೀದಾ ಅಡುಗೆಮನೆಗೆ ಹೋಗಿ ಸ್ಟ್ಯಾಂಡ್ ಹತ್ತಿ ಢಣಾರನೆ ಯಾವುದಾದರೂ ಪಾತ್ರೆ ಕೆಡವುವುದೋ, ಗೋಡೌನಿಗೆ ಹೋಗಿ ಕೊರಕೊರ ಎಂದು ಹೊಸ ಕನ್ನ ಕೊರೆಯುವುದೋ ಮಾಡುತ್ತಾ, ತಮ್ಮತಮ್ಮಲ್ಲೇ ಕಿಚಪಿಚ ಎಂದು ಕಾನ್ವರ್ಸೇಶನ್ ಮಾಡಿಕೊಳ್ಳುತ್ತಾ ನಮ್ಮ ನಿದ್ದೆಗೆಡಿಸುತ್ತಿದ್ದವು. ಆಗ ಅಜ್ಜಿ "ಥೋ, ಈ ಇಲಿ ಕಾಲದಲ್ಲಿ ಆಗಲ್ಯೇ" ಎಂದು ಗೊಣಗುತ್ತಾ ಲೈಟ್ ಹಾಕಿದ್ದೇ ತಡ, ಸದ್ದು ಬಂದ್! ಅಡುಗೆಮನೆಗೆ ಹೋಗಿ ಬಿದ್ದಿದ್ದ ಪಾತ್ರೆ ಎತ್ತಿಟ್ಟು ಬಂದು, ದೀಪವಾರಿಸಿ ಮಲಗಿದ ಐದು ನಿಮಿಷಕ್ಕೆ ಮತ್ತೆ ಶುರುವಾಗುತ್ತಿತ್ತು ಸದ್ದು..!<br /><br />ನೋಡೀ, ವಿನಾಕಾರಣ ಈ ಮಲಗಿದ್ದ ಮನುಷ್ಯನ ನಿದ್ದೆ ಕೆಡಿಸುವುದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಆಗ ಆತನ ಕೋಪ ನೆತ್ತಿಗೇರಿಬಿಡುತ್ತದೆ. ಆತ ತನ್ನ ನಿದ್ರಾಹರಣಕ್ಕೆ ಕಾರಣರಾದವರನ್ನು ಮುಗಿಸಲಿಕ್ಕೂ ಹಿಂದೆಮುಂದೆ ನೋಡುವುದಿಲ್ಲ. ಅದಕ್ಕೆ ನನ್ನ ಅಜ್ಜಿಯೇ ಉದಾಹರಣೆ. ಅಜ್ಜಿಯ ಮಂಚದ ಪಕ್ಕದಲ್ಲಿ ಯಾವಾಗಲೂ ಒಂದು ದೊಣ್ಣೆ ಇರುತ್ತಿತ್ತು. ನಿದ್ದೆಗಣ್ಣ ಆಕೆ ಅದನ್ನು ಕೈಗೆತ್ತಿಕೊಳ್ಳುತ್ತಿದ್ದಳು. 'ಎಲಾ ಇಲಿಯೇ, ಎಲ್ಲಿರುವೆ ನೀನು? ನನ್ನ ಮುಂದೆ ನಿನ್ನಾಟವೇನೂ ನಡೆಯದು. ಇಗೋ, ನಿನ್ನ ಆಯುಷ್ಯ ಇಂದಿಗೆ ಮುಗಿಯಿತೆಂದೇ ತಿಳಿದುಕೋ' ಎಂದು ಮನಸಿನಲ್ಲಿಯೇ ಅಬ್ಬರಿಸಿ, ರಣಚಂಡಿ ಅವತಾರ ತಾಳಿ ಇಲಿ ಎಲ್ಲೈತೆ ಎಲ್ಲೈತೆ ಎಂದು ಹುಡುಕುತ್ತಾ ಮನೆಯನ್ನೆಲ್ಲಾ ಜಾಲಾಡಿ ಒಂದಾದರೂ ಇಲಿಯನ್ನು ಹೊಡೆದು ತನ್ನ ದೊಣ್ಣೆಗೆ ಸವರಿದ್ದ ನೆತ್ತರನ್ನು 'ಜೋಗಿ' ಚಿತ್ರದ ಶಿವರಾಜ್‍ಕುಮಾರ್ ಸ್ಟೈಲಲ್ಲಿ ನೋಡಿ ಸಂತೃಪ್ತಿ ಪಟ್ಟುಕೊಂಡ ನಂತರವೇ ಮಲಗುತ್ತಿದ್ದಳು. ಅಷ್ಟರಲ್ಲೇ ಒಂದೆರಡು ರೌಂಡು ಸಣ್ಣ ನಿದ್ರೆಗಳನ್ನು ಪೂರೈಸಿ ಎಚ್ಚರಾಗಿರುತ್ತಿದ್ದ ನಾನು, ಅಜ್ಜಿ ಈ ಹತ್ಯಾಕಾಂಡಕ್ಕೆ ಮುಂದಾಗುವಾಗ ಅವಳ ಹಿಂದೆಯೇ ಹೋಗಿ, ಅವಳು ಕೊಲೆ ಎಸಗುವುದನ್ನು ಕಣ್ತುಂಬ ನೋಡಿ, ಆಮೇಲಷ್ಟೇ 'ಕ್ರೈಂ ಡೈರಿ' ವೀಕ್ಷಕನಂತೆ ನಿದ್ರೆ ಹೋಗುತ್ತಿದ್ದೆ.<br /><br />ಈ ದೇವರು ಎಂಬಾತ, ಪ್ರಾಣಿಗಳಿಗೆ ಬುದ್ಧಿಶಕ್ತಿಯನ್ನು ಅಲಾಟ್ ಮಾಡುವಾಗ ತುಂಬಾನೇ ಪಕ್ಷಪಾತ ಮಾಡಿಬಿಟ್ಟ. ಮನುಷ್ಯನಿಗೆ ಸಿಕ್ಕಾಪಟ್ಟೆ ಬುದ್ಧಿ ಕೊಟ್ಟು, ಉಳಿದ ಪ್ರಾಣಿಗಳಿಗೆ ತಮ್ಮ ಆಹಾರ ಹುಡುಕಿಕೊಳ್ಳಲಿಕ್ಕೆ - ಬದುಕಿಕೊಳ್ಳಲಿಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಬುದ್ಧಿ ಕೊಟ್ಟ. ಈ ಮನುಷ್ಯ ಏನು ಮಾಡಿದಾ, ಇಲಿಗತ್ತರಿ - ಇಲಿಬೋನು ಇತ್ಯಾದಿ ಮಷಿನ್ನುಗಳನ್ನು ಕಂಡುಹಿಡಿದ. ಇಲಿಪಾಶಾಣದಂತಹ ವಿಷಗಳನ್ನು ಕಂಡುಹಿಡಿದ. 'ಪ್ರತಿದಿನ ನಿದ್ರೆ ಕೆಡಿಸಿಕೊಂಡು ಇಲಿ ಹೊಡೆಯುವುದ್ಯಾಕ? ಇಟ್ಟರೆ ಒಂದು ಹಿಡಿ ಪಾಶಾಣ ಸಾಕ!' ಎಂದು ಜಾಹೀರಾತು ಮಾದರಿಯಲ್ಲಿ ತನಗೆ ತಾನೇ ಹೇಳಿಕೊಂಡು, ಇಲಿಗೆ ಪ್ರಿಯವಾಗುವ ಯಾವುದೇ ತಿಂಡಿಯ ಜೊತೆ ಈ ಪುಡಿಯನ್ನು ಕಲಸಿ, ಅದು ಓಡಾಡುವ ದಾರಿಯಲ್ಲಿ ಇಟ್ಟುಬಿಟ್ಟ. ಇಲಿ ಪಾಪ ವಾಸನೆ ಗ್ರಹಿಸಿಕೊಂಡು ಬಂತು, 'ತನಗಾಗಿಯೇ' ಎಂಬಂತೆ ಇಟ್ಟಿರುವ ಆಹಾರವನ್ನು ತಿಂತು, ಅಟ್ಟದ ಮೇಲೋ ಗೋಡೌನಿನ ಮೂಲೆಗೋ ಹೋಗಿ ಸತ್ತಿತು. ಆಮೇಲೆ ಮನೆಯಿಡೀ ದುರ್ನಾತ! "ಓಹ್ ಎಲ್ಲೋ ಇಲಿ ಸತ್ತಿದ್ದು ಕಾಣ್ತು" ಎನ್ನುತ್ತಾ ಮೂಗಿಗೆ ಸೆರಗು ಮುಚ್ಚಿಕೊಳ್ಳುವ ಅಮ್ಮ; ಬ್ಯಾಟರಿ ಬಿಟ್ಟುಕೊಂಡು ಹುಡುಕುವ ಅಪ್ಪ; ಗೂಡಚರ ಸಂಸ್ಥೆಯ ವಕ್ತಾರನಂತೆ ಕತ್ತಲ ಮೂಲೆಯಲ್ಲಿ ಹಾರಾಡುವ ನೊಣಗಳಿಂದಾವೃತ ಹೆಣವನ್ನು ಪತ್ತೆಹಚ್ಚುತ್ತಿದ್ದ ನಾನು; ನಂತರ ಶವದ ವಿಲೇವಾರಿ.<br /><br />ಇವೆಲ್ಲಾ ಸ್ವಲ್ಪ ರಗಳೆಯ ವಿಷಯ ಎನ್ನಿಸಿತು ನಮಗೆ. ಅಲ್ಲದೇ ಈ ಪಾಶಾಣವನ್ನು ತಿಂದಮೇಲೆ ಕುಡಿಯಲಿಕ್ಕೆ ನೀರೇನಾದರೂ ಸಿಕ್ಕಿಬಿಟ್ಟರೆ ಇಲಿ ಬದುಕಿಕೊಂಡುಬಿಡುತ್ತಿತ್ತು. ವಿಷ ತಿಂದೂ ಅರಗಿಸಿಕೊಂಡು ತನ್ನ ಬಾಸ್ ಗಣೇಶನ ಬಳಿ 'ನಿನ್ನಪ್ಪ ವಿಷಕಂಠನಿಗಿಂತ ನಾನೇನು ಕಮ್ಮಿ?' ಎಂಬಂತೆ ಮೀಸೆ ತಿರುವುತ್ತಿತ್ತು. ಈ ಬಾರಿ ಅಜ್ಜಿ ಇಲಿಗತ್ತರಿ ಎಂಬ ಹತಾರವನ್ನು ಉಪಯೋಗಿಸಿದಳು. ಒಂದು ಸಣ್ಣ ಕಾಯಿಚೂರನ್ನೋ, ಬೋಂಡವನ್ನೋ ಈ ಕತ್ತರಿಯ ಮಧ್ಯಕ್ಕೆ ಸಿಕ್ಕಿಸಬೇಕು. ಇದೊಂದು ಭಾರೀ ಅಪಾಯದ ಅಸ್ತ್ರ. ಇದನ್ನು ಹೂಡಿ ಇಡುವಾಗ ಸ್ವಲ್ಪ ಎಚ್ಚರ ತಪ್ಪಿದರೂ ನಮ್ಮ ಕೈಯೇ ತುಂಡಾಗುವ ಸಾಧ್ಯತೆ ಇರುತ್ತದೆ. ತಿಂಡಿಯನ್ನು ತಿನ್ನಲಿಕ್ಕೆಂದು ಈ ಕತ್ತರಿಯನ್ನೇರಿ ಇಲಿ ಬಾಯಿ ಹಾಕಿದ್ದೇ ಇದರ ಎರಡಲಗುಗಳೂ ಮುಚ್ಚಿಕೊಂಡು, ಇಲಿ ಮಧ್ಯದಲ್ಲಿ ಸಿಕ್ಕಿಕೊಂಡು, 'ಸ್ಪಾಟ್ ಡೆತ್' ಆಗುತ್ತದೆ! ಅಜ್ಜಿ ಪರಮಾನಂದತುಂದಿಲಳಾಗಿ ಮರುದಿನ ಅದನ್ನು ಹೊರಗೆಸೆಯುತ್ತಾಳೆ. ಕಾಗೆಗಳು 'ಥ್ಯಾಂಕ್ಸ್ ಫಾರ್ ದಿ ಬ್ರೇಕ್‍ಫಾಸ್ಟ್' ಅಂತಂದು ಕಚ್ಚಿಕೊಂಡು ಹೋಗುತ್ತವೆ.<br /><br />ಇಲಿಗತ್ತರಿಯ ನಂತರ ನಮ್ಮ ಮನೆಗೆ ಬಂದ ಇಲಿಸಂಹಾರೀ ಯಂತ್ರ ಇಲಿಬೋನು. ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದ ಇದು, ಶತ್ರುವನ್ನು ಕೊಲ್ಲುತ್ತಿರಲಿಲ್ಲ; ಸಜೀವ ಸೆರೆ ಹಿಡಿಯುತ್ತಿತ್ತು! ಅಗೇನ್ ಇದರ ಪ್ರಯೋಗಕ್ಕೆ ಬೇಕಾದ ಮದ್ದೂ ಒಂದು ಕಾಯಿಚೂರು ಅಥವಾ ಕರಿದ ತಿಂಡಿ. ಬೋನಿನೊಳಗೆ ಇಳಿಬಿಟ್ಟಿದ್ದ ಕೊಕ್ಕೆಗೆ ತಿಂಡಿಯನ್ನು ಸಿಕ್ಕಿಸಿಡುವುದು. ಕತ್ತಲಲ್ಲಿ ಇಲಿ ಇದರೊಳಗೆ ಹೋಗಿ ತಿಂಡಿಯನ್ನು ಕಚ್ಚಿದಾಕ್ಷಣ ಬೋನಿನ ಬಾಗಿಲು ಹಾಕಿಕೊಂಡು ಇಲಿ ಬಂಧಿಯಾಗಿಬಿಡುತ್ತಿತ್ತು! ಬೆಳಗ್ಗೆ ಎದ್ದು ನೋಡಿದರೆ, ದಿಕ್ಕೆಟ್ಟು ಜೈಲಿನೊಳಗೆ ಅತ್ತಿತ್ತ ಓಡಾಡುತ್ತಾ, ಕಿಂಡಿಗಳಿಂದ ತನ್ನ ಮೂತಿಯನ್ನು ಹೊರತೂರಿಸುತ್ತಾ ಒದ್ದಾಡುತ್ತಿರುವ ಇಲಿರಾಯ! ನನಗೆ ಖುಷಿಯೋ ಖುಷಿ. ಸದ್ಧಾಂ ಸಿಕ್ಕಿಬಿದ್ದಾಗ ಅಮೇರಿಕನ್ನರೂ ಅಷ್ಟು ಹಾರಾಡಿದ್ದರೋ ಇಲ್ಲವೋ, ನಾನಂತೂ ಬೋನೆತ್ತಿಕೊಂಡು ಕೇಕೆ ಹಾಕುತ್ತಾ ಇಡೀ ಮನೆಯೆಲ್ಲಾ ಹಾರಾಡುತ್ತಿದ್ದೆ. ನಂತರ ಒಂದು ಬಕೆಟ್ಟಿಗೆ ನೀರು ತುಂಬಿ ಅದರಳೊಗೆ ಬೋನನ್ನು ಮುಳುಗಿಸುವುದು. ಇಲಿ ಉಸಿರುಗಟ್ಟಿ ಸಾಯುತ್ತಿತ್ತು.<br /><br />ಹಾಗಂತ ಇಲಿಗಳು ನಮ್ಮ ಯುದ್ಧತಂತ್ರಗಳಿಂದ ತಪ್ಪಿಸಿಕೊಂಡು ಹೋದ ಘಟನೆಗಳೂ ಇಲ್ಲದಿಲ್ಲ. ಇಲಿಗತ್ತರಿಯಂತಹ ಅಪಾಯಕಾರಿ ಶಸ್ತ್ರದಲ್ಲೂ ಸಿಕ್ಕಿ ಸಾಯದೇ ಅದರಲ್ಲಿಟ್ಟಿದ್ದ ತಿಂಡಿಯನ್ನಷ್ಟೇ ಇವು ಎಗರಿಸಿಕೊಂಡು ಹೋದದ್ದಿದೆ. ಇಲಿ ತುಂಬಾ ಲೈಟ್‍ವೆಯ್ಟ್ ಆಗಿದ್ದರೆ ಆಗ ಕತ್ತರಿ ಆಪರೇಟ್ ಆಗುತ್ತಲೇ ಇರಲಿಲ್ಲ. ಇಲಿ ಆರಾಮಾಗಿ ತಿಂಡಿ ತಿಂದುಕೊಂಡು ಹೋಗಿಬಿಡುತ್ತಿತ್ತು. (ಈ ಗುಟ್ಟು ಎಲ್ಲಾ ಇಲಿಗಳಿಗೂ ಗೊತ್ತಾಗಿದ್ದರೆ, ಅವೆಲ್ಲಾ ಡಯಟ್ ಮಾಡಿ ತೂಕ ಇಳಿಸಿಕೊಂಡು ಕತ್ತರಿಯನ್ನು ಒಂದು ನಿಶ್ಪ್ರಯೋಜಕ ಅಸ್ತ್ರವನ್ನಾಗಿ ಮಾಡಿಬಿಡುತ್ತಿದ್ದವೇನೋ?!) ಮತ್ತೆ ಕೆಲ ಶಕ್ತಿಶಾಲೀ ಹೆಗ್ಗಣಗಳು ಬೋನಿನ ಬಾಗಿಲನ್ನು ತಳ್ಳಿಕೊಂಡು ಹೊರಗೋಡಿಹೋದದ್ದೂ ಇದೆ. ಕೆಲ ಪುಟಾಣಿ ಇಲಿಗಳು ಬೋನಿನಲ್ಲಿ ಸಿಕ್ಕಿಬಿದ್ದರೂ, ಬೋನಿನ ಸಣ್ಣ ಕಿಂಡಿಯಿಂದಲೇ ತೂರಿ, ತಿಂಡಿಯನ್ನೂ ತಿಂದು ಪರಾರಿಯಾಗಿ ನಮಗೆ ಚಳ್ಳೇಹಣ್ಣು ತಿನ್ನಿಸಿದ್ದಿದೆ.<br /><br />ಇಷ್ಟಕ್ಕೂ ಇಲಿ ಕಾಟದ ಪರಿಹಾರಕ್ಕೆ ಎಲ್ಲರಂತೆ ನಾವೂ ಬೆಕ್ಕು ಸಾಕಲಿಲ್ಲವೇ ಎಂದು ನೀವು ಯೋಚಿಸಬಹುದು. ನಮ್ಮ ಪಕ್ಕದ ಮನೆಯಲ್ಲಿ ಸಾಕಿದ್ದರು. ಆದರೆ ಅದು ಮರಿಬೆಕ್ಕು. ಅದಕ್ಕೆ ಯಾವ ಇಲಿಯೂ ಹೆದರುತ್ತಿರಲಿಲ್ಲ. ಅವು ಗುಂಪಾಗಿ ಬಂದು 'ಇಲಿಗೆ ಚೆಲ್ಲಾಟ; ಬೆಕ್ಕಿಗೆ ಪ್ರಾಣಸಂಕಟ' ಎಂಬಂತೆ ಬೆಕ್ಕನ್ನೇ ಹೆದರಿಸುತ್ತಿದ್ದವು. ದಡಿಯ ಹೆಗ್ಗಣಗಳನ್ನು ಕಂಡರಂತೂ ಈ ಬೆಕ್ಕಿನ ಮರಿ ತಾನೇ ಓಡಿ ಹೋಗುತ್ತಿತ್ತು. ಇದನ್ನು ನೋಡಿದ್ದ ನನಗೆ ಬೆಕ್ಕು ಸಾಕುವ ತಲುಬು ಬರಲೇ ಇಲ್ಲ. ಅಲ್ಲದೇ ಹಿಂದೊಮ್ಮೆ ನಾಯಿಮರಿ ಸಾಕಿ, ಅದು ನನಗೆ ಅತಿಯಾಗಿ ಹೊಂದಿಕೊಂಡುಬಿಟ್ಟು, ನಾನು ಹೋದಲ್ಲೆಲ್ಲಾ ಹಚ್ ನೆಟ್‍ವರ್ಕಿನಂತೆ ನನ್ನ ಹಿಂದೆಯೇ ಬರತೊಡಗಿ, ಒಂದು ದಿನ ತೋಟಕ್ಕೆ ಹೋಗುತ್ತಿದ್ದಾಗ ನನ್ನ ಹಿಂದೆ ಬಂದ ಇದನ್ನು ಪಟೇಲರ ಮನೆಯ ನಾಯಿ ಕಚ್ಚಿ ಕೊಂದು ಹಾಕಿದ ಮೇಲೆ ನಾನು ಇನ್ನು ಯಾವ ಪ್ರಾಣಿಯನ್ನೂ ಸಾಕಬಾರದು ಎಂಬ ತೀರ್ಮಾನಕ್ಕೆ ಬಂದಿದ್ದೆ. ಪ್ರೀತಿಪಾತ್ರ ಸಾಕುಪ್ರಾಣಿಗಳನ್ನು ಕಳೆದುಕೊಳ್ಳುವ ದುಃಖ ಯಾವ ದುಃಖಕ್ಕೂ ಕಮ್ಮಿಯಲ್ಲ.<br /><br />ನಾವು ಹೊಸ ಮನೆಗೆ ಬಂದಮೇಲೆ ಇಲಿಗಳ ಕಾಟ ಪ್ರಾಯಶಃ ನಿಂತೇ ಹೋಯಿತು. ಸಿಮೆಂಟ್ ಗೋಡೆ-ಟೈಲ್ಸ್ ನೆಲ ಅವಕ್ಕೆ ಸರಿ ಬರಲಿಲ್ಲವೇನೋ, 'ನಿಮ್ಮ ಹೊಸಮನೆ ನಿಮಗೇ ಇರ್ಲಿ' ಅಂತ ಬಿಟ್ಟುಕೊಟ್ಟು ಅವು ಹಳೆಯ ಕೊಟ್ಟಿಗೆ ಮನೆ, ಕಟ್ಟಿಗೆ ಮನೆ, ಬಚ್ಚಲು ಮನೆಗಳಲ್ಲೇ ಸಂಸಾರ ಹೂಡಿದವು. ಹಿಂಡಿಚೀಲಕ್ಕೆ ತೂತು ಮಾಡುವುದು, ಗೋಧಿಬೂಸ ಮೆಲ್ಲುವುದು, ಜಾನುವಾರುಗಳಿಗೆಂದು ಇಟ್ಟಿದ್ದ ಆಹಾರವನ್ನು ತಿನ್ನುವುದು -ಇತ್ಯಾದಿ ಕಡಿಮೆ ಪ್ರಮಾಣದ ಕಾಟ ಕೊಡುವುದರಲ್ಲಿ ನಿರತವಾದವು. ಕೊಟ್ಟಿಗೆ ಕಡೆ ಹೋದಾಗ ಎಲ್ಲೋ ಒಮ್ಮೊಮ್ಮೆ 'ಹಾಯ್' ಎಂದು ಕಣ್ಮರೆಯಾಗುತ್ತಿದ್ದ ಇವನ್ನು ನಾವೂ ಕಡೆಗಣಿಸಿದೆವು.<br /><br />ಕಳೆದ ಬಾರಿ ಗಣೇಶ ಚತುರ್ಥಿಗೆ ನಾನು ಊರಿಗೆ ಹೋದಾಗ, ಅಮ್ಮ ಹೇಳಿದ ಮಜಾ ಘಟನೆಯೊಂದನ್ನು ಹಂಚಿಕೊಂಡು ನಾನು ಈ ಲೇಖನವನ್ನು ಮುಗಿಸುತ್ತೇನೆ. ಚೌತಿಗೆ ಒಂದು ವಾರವಿರಬೇಕಾದರೆ ಬಚ್ಚಲು ಮನೆಯಲ್ಲಿಟ್ಟಿದ್ದ ಅಪ್ಪನ ರೇಸರ್ ಸೆಟ್ ಕಾಣೆಯಾಯಿತಂತೆ. ಅಪ್ಪ ಅಲ್ಲಿಲ್ಲಿ ಹುಡುಕಿದ, ಸಿಗದಿದ್ದರಿಂದ ಹೊಸ ರೇಸರ್ ಕೊಂಡು ಶೇವಿಂಗ್ ಮಾಡಿಕೊಂಡ. ಮಾರನೇ ದಿನ ನೋಡಿದರೆ ಮೈಸೋಪು ಇಲ್ಲ! ಹೊಸ ಸೋಪು.. ನಿನ್ನೆ ತಾನೇ ಒಡೆದದ್ದು.. ಹನ್ನೆರಡು ರೂಪಾಯಿ.. ಶೋಧಿಸಿದರು. ಸಿಕ್ಕಲಿಲ್ಲ. ಹೊಸ ಸೋಪಿನ ಪ್ಯಾಕು ಒಡೆದರು. ಅದರ ಮರುದಿನ ಮೈ ತಿಕ್ಕುವ ಬ್ರಶ್ ಇಲ್ಲ! 'ಎಲಾ! ಇದು ಇಲಿಗಳದ್ದೇ ಕೆಲಸ' ಅಂತ ಗೊತ್ತಾಯಿತು. ಅಮ್ಮ-ಅಪ್ಪ ಸೇರಿ ಹುಡುಕಿದರು. ಬಾವಿಕಟ್ಟೆಯ ಸಂದಿಗೆ ಒಂದು ಬಿಲ. ಅದರ ಬಾಗಿಲಲ್ಲಿ ಕಳೆದುಹೋಗಿದ್ದ ರೇಸರ್ ಸೆಟ್ಟು, ಅರ್ಧಮರ್ಧ ಕೊರೆಯಲ್ಪಿಟ್ಟಿದ್ದ ಸೋಪು, ಹರಿದು ಕೆದರಿಹೋಗಿದ್ದ ಬ್ರಶ್ಶು!<br /><br />ಕಥೆ ಕೇಳಿ ನನಗೆ ನಗುವೋ ನಗು. ಬಹುಶಃ ಚೌತಿಗೆ ಗಣೇಶಾರೂಢ ಇಲಿ, ಚಂದ ಶೇವಿಂಗ್-ಗೀವಿಂಗ್ ಮಾಡಿಕೊಂಡು, ಸ್ನಾನ ಮಾಡಿ ಫ್ರೆಶ್ಶಾಗಿ ಬರುತ್ತೇನೋ ಎಂದುಕೊಂಡು ಕಾಯತೊಡಗಿದೆವು... ಅಡುಗೆ ಮನೆಯಿಂದ ಕಾಯಿಕಡುಬು - ಚಕ್ಕುಲಿಯ ಪರಿಮಳ.<br /><br />* * *<br /><br />ಮೂಷಿಕವಾಹನನ ಆಗಮನ ನಿಮ್ಮ ಮನೆಗೆ ಸಂತಸ ತರಲಿ. ಶುಭಾಶಯಗಳು.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-6288971025642024739?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com23tag:blogger.com,1999:blog-27009232.post-72596962694138321682008-08-25T10:28:00.003+05:302009-05-29T13:08:54.478+05:30ಸಂಪಿಗೆ ಮರನೀವು ಸಾಗರದಿಂದ ಗುಬ್ಬಗೋಡಿಗೆ ಹೋಗುವ ಟಾರ್ ರಸ್ತೆಯಲ್ಲಿ ಸುಮಾರು ಏಳು ಕಿಲೋಮೀಟರ್ ಸಾಗಿಬಂದ ನಂತರ, ರಸ್ತೆಯ ಎಡಗಡೆಗೆ ಒಂದು ತ್ರಿಕೋಣಾಕೃತಿಯ ಕಟ್ಟೆಯೂ, ಆ ಕಟ್ಟೆಯ ಗೋಡೆಯ ಮೇಲೆ ಕಪ್ಪಕ್ಷರದಿಂದ ಬರೆದ 'ಬೆಂಕಟವಳ್ಳಿ' ಎಂಬ ಬೋರ್ಡೂ ಕಾಣುತ್ತದೆ. ಅದೇ ನನ್ನ ಅಜ್ಜನ ಮನೆಯು. 'ಅದೇ' ಎಂದರೆ ಆ ಕಟ್ಟೆಯಲ್ಲ; ಆ ಕಟ್ಟೆಯ ಪಕ್ಕದ, ತಿರುವುಮುರುವಿನ, ಸೀದಾ ಇಳುಕಲಿನ, ಒಂದು ಕಡೆ ಬೆಟ್ಟವೂ ಇನ್ನೊಂದು ಕಡೆ ಪ್ರಪಾತವೂ ಇರುವ ಮಣ್ಣಿನ ರಸ್ತೆಯಲ್ಲಿ ಇಳಿದು ಹೋದರೆ ಸಿಗುವುದು ನನ್ನ ಅಜ್ಜನ ಮನೆ. ಅಜ್ಜನ ಮನೆಯ ಹಿಂದಿರುವ ಬೆಟ್ಟವನ್ನು ಈ ಕಡೆಯಿಂದ ಹತ್ತಿ ಆ ಕಡೆ ಇಳಿದರೆ ನೀವು ವರದಹಳ್ಳಿಯಲ್ಲಿರುತ್ತೀರಿ. ಹಿಂದೆಲ್ಲ ನನ್ನ ಅಮ್ಮ-ಮಾವಂದಿರೆಲ್ಲ ಪ್ರತಿ ಶನಿವಾರ-ಭಾನುವಾರ ಶ್ರೀಧರ ಸ್ವಾಮಿಗಳ ಪ್ರವಚನ ಕೇಳಲು ಇದೇ ಗುಡ್ಡ ಹತ್ತಿಳಿದು ವರದಹಳ್ಳಿಗೆ ಹೋಗುತ್ತಿದ್ದರಂತೆ. ಪ್ರವಚನ ಮುಗಿದ ನಂತರ ಶ್ರೀಧರ ಸ್ವಾಮಿಗಳು ಎಲ್ಲರಿಗೂ ಮಂತ್ರಾಕ್ಷತೆ ಕೊಡುತ್ತಿದ್ದರಂತೆ ಮತ್ತು ಅಮ್ಮ-ಮಾವರಂತಹ ಸಣ್ಣ ಮಕ್ಕಳಿಗೆ ತಮ್ಮ ಬಳಿಯಿದ್ದ ಹಣ್ಣು-ಹಂಪಲನ್ನೆಲ್ಲ ಕೊಡುತ್ತಿದ್ದರಂತೆ. "ಆವಾಗ ಪ್ರವಚನ ಎಲ್ಲಾ ನಮ್ಗೆ ಎಲ್ಲಿ ಅರ್ಥ ಆಗ್ತಿತ್ತು? ಹಣ್ಣು ಸಿಗ್ತಲಾ ಅಂತ ಗುಡ್ಡ ಹತ್ತಿಳ್ದು ವದ್ಧಳ್ಳಿಗೆ ಹೋಗ್ತಿದ್ಯ. ಈಗ ಹಣ್ಣು ಬಿಟ್ಟು ಏನು ಕೊಡ್ತಿ ಅಂದ್ರೂ ಗುಡ್ಡ ಹತ್ತಕ್ಕೆ ಹರಿಯದಿಲ್ಲೆ..!" ನೆನಪು ಮಾಡಿಕೊಳ್ಳುತ್ತಾ ಹೇಳುತ್ತಾಳೆ ಅಮ್ಮ.<br /><br />ಅದಿರಲಿ, ನಾನಾಗ ಹೇಳಿದೆನಲ್ಲ, ಸಾಗರದಿಂದ ಏಳು ಕಿಲೋಮೀಟರ್ ಸಾಗಿಬಂದ ನಂತರ ಸಿಗುವ ಕಟ್ಟೆ, ಈ ಕಟ್ಟೆಯ ಬಾಜೂ, ಕಟ್ಟೆಗೆ ಸದಾ ನೆರಳಾಗಿ, ಒಂದು ಬೃಹತ್ ಸಂಪಿಗೆ ಮರವಿದೆ. ರಸ್ತೆಯ ಬಲಬದಿಗೆ ಲೋಕೋಪಯೋಗಿ ಇಲಾಖೆಯವರು ಕಟ್ಟಿಸಿದ ಬಸ್‌ಸ್ಟ್ಯಾಂಡ್ ಇದೆಯಾದರೂ ಯಾರೂ ಅದನ್ನು ಬಳಸುವುದಿಲ್ಲ. ಸದಾ ಅದರೊಳಗೆ ಹೇರಳ ಕಸ ಶೇಖರವಾಗಿರುತ್ತದೆ. ಬಿಂದಿಲು-ಬಲೆ ಕಟ್ಟಿಕೊಂಡಿರುತ್ತದೆ. ದನಕರುಗಳು ಅದನ್ನು ಕೊಟ್ಟಿಗೆ ಎಂದೇ ಭಾವಿಸಿ ಅಲ್ಲೇ ಮಲಗಿ ಮೆಲುಕು ಹಾಕುತ್ತಿರುವುದನ್ನೂ ಕಾಣಬಹುದು. ವರ್ಷ-ಎರಡು ವರ್ಷಕ್ಕೊಮ್ಮೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಬಸ್‌ಸ್ಟಾಂಡನ್ನು ನವೀಕರಣಗೊಳಿಸುವ ನೆಪದಲ್ಲಿ ಪೇಯಿಂಟ್ ಮಾಡಿಸಿ, ಒಡೆದ ಹಂಚುಗಳನ್ನು ಬದಲಿಸಿ, ತಮ್ಮ ಜೇಬು ಭರ್ತಿ ಮಾಡಿಕೊಳ್ಳುತ್ತಾರೆ. ಬಸ್ಸಿಗೆ ಕಾಯುವ ಊರಿನ ಜನ ಯಾವಾಗಲೂ ನಿಲ್ಲುವುದು ಸಂಪಿಗೆ ಮರದ ಕೆಳಗೇ. ಬಸ್ ಬರುವುದು ತಡವಾಗಿ, ನಿಂತೂ ನಿಂತೂ ಸುಸ್ತಾದರೆ ಸಂಪಿಗೆ ಮರದ ಬುಡದಲ್ಲಿರುವ ತ್ರಿಕೋಣಾಕಾರದ ಕಟ್ಟೆಯ ಮೇಲೆ ಕೂರುತ್ತಾರೆ. ಕೆಲವರು ಮರದ ಬುಡದಲ್ಲೇ, ಮೇಲೆದ್ದು ಬಂದಿರುವ ಮರದ ಬೃಹತ್ ಬೇರುಗಳ ಮೇಲೇ ಅಂಡೂರುತ್ತಾರೆ. ಇನ್ನು ಕೆಲವರು ಟಾರ್ ರೋಡಿನ ಮೇಲೂ ಕೂರುವುದುಂಟು.<br /><br />ಈ ಮರ ಯಾವುದೇ ಸಾಧಾರಣ ಸಂಪಿಗೆ ಮರದಂತೆ ಕಂಡರೂ ಇದಕ್ಕೊಂದು ಮಹತ್ವವಿದೆ. ಬೆಂಕಟವಳ್ಳಿ ಊರಿನ ಜನ ತಮ್ಮೂರಿನ ಬಸ್ ಇಳಿದು-ಹತ್ತುವ ಜಾಗವನ್ನು ಎಲ್ಲಾ ಊರಿನವರಂತೆ 'ಬಸ್‌ಸ್ಟ್ಯಾಂಡ್' ಎಂದು ಕರೆಯುವುದಿಲ್ಲ; 'ಸಂಪಿಗೆ ಮರ' ಅಂತ ಕರೆಯುತ್ತಾರೆ. ನಾವಾದರೆ 'ಬಸ್‌ಸ್ಟ್ಯಾಂಡಲ್ ಕಾದೂ ಕಾದೂ ಸಾಕಾಯ್ತು ಮಾರಾಯಾ, ಕೃಷ್ಣಾ ಬಸ್ ಬರಲೇ ಇಲ್ಲ!' ಎನ್ನುತ್ತೇವೆ. ಆದರೆ ಬೆಂಕಟವಳ್ಳಿಯ ಜನ 'ಬೇಗ್ ಬೇಗ ನಡೆ.. ಎರಡೂ ವರೆಗೆ ಕರೆಕ್ಟಾಗಿ ಬರತ್ತೆ ವರದಾ ಬಸ್ಸು ಸಂಪಿಗೆ ಮರದ ಹತ್ರ' ಎನ್ನುತ್ತಾರೆ. ಇವರು 'ಬಸ್‌ಸ್ಟ್ಯಾಂಡ್' ಶಬ್ದವನ್ನು ಬಳಸುವುದೇ ಇಲ್ಲ. ಅದರ ಜಾಗದಲ್ಲಿ ಸದಾ ಸಂಪಿಗೆ ಮರ ತೂಗುತ್ತಿರುತ್ತದೆ.<br /><br />ವಸಂತ ಮಾಸದಲ್ಲಿ ನೀವೇನಾದರೂ ಇಲ್ಲಿಗೆ ಬಂದರೆ ಈ ಮರದ ಗೆಲ್ಲ ಮೇಲೆ ಕೋಗಿಲೆ ಕೂತು ಹಾಡುವುದನ್ನು ಕೇಳಬಹುದು. 'ಸಂಪಿಗೆಯೆಲ್ಲೋ ಕೋಗಿಲೆಯೆಲ್ಲೋ?' ಎಂಬ ಉದ್ಘಾರ ನಿಮ್ಮಿಂದ ಹೊರಬೀಳುವುದಂತೂ ಖಚಿತ. ಆದರೆ ಹಾಗೆ ಹಾಡು ಕೇಳಬೇಕೆಂದರೆ ನೀವು ಈ ಮರದಿಂದ ತುಸು ದೂರದಲ್ಲಿ, ಮರೆಯಲ್ಲಿ ನಿಂತಿರಬೇಕಾಗುತ್ತದೆ. ಮರದ ಕೆಳಗೇ ಇದ್ದರೆ ಕೋಗಿಲೆಗೆ ಸಂಕೋಚವಾಗಿ ಹಾಡುವುದಿಲ್ಲ. ಭಯಗೊಂಡು ಹಾರಿಹೋದರೂ ಹೋಗಬಹುದು. ನೀವು ದೂರದಲ್ಲಿ, ಅಗೋ, ಆ ಟ್ರಾನ್ಸ್‌ಫಾರ್ಮರ್ ಕಂಬದ ಬಳಿ ಒಂದು ಸಣ್ಣ ಗುಡ್ಡ ಇದೆಯಲ್ಲ, ಅದರ ಮೇಲೆ ಕುಳಿತುಕೊಳ್ಳಬೇಕು. ಆಗ ಈ ಕೋಗಿಲೆ, ವಧುವನ್ನು ನೋಡಲು ವರನ ಮನೆಯವರು ಹೋದಾಗ ತಲೆ ತಗ್ಗಿಸಿಕೊಂಡು ನಾಚುತ್ತಾ ಹಾಡುವ ಹುಡುಗಿಯಂತೆ, ಸುಮಧುರವಾಗಿ ಹಾಡುತ್ತದೆ. ಆ ಕೋಗಿಲೆ ಹಾಡು, ಪಕ್ಕದ ಗಹ್ವರದಲ್ಲಿಳಿದು, ಗಿರಿಗೆ ಬಡಿದು, ದೊಡ್ಡ ಮರಗಳ ಕಂಕುಳಲ್ಲಿ ಕಚಗುಳಿಯಾಗುವಂತೆ ಹಾದು ಪ್ರತಿಧ್ವನಿಸುವಾಗ ನಿಮಗದು ಹತ್ತಿರದಲ್ಲೆಲ್ಲೋ ಮತ್ತೊಂದು ಕೋಗಿಲೆ ಇದೆಯೇನೋ ಎಂಬ ಭ್ರಮೆ ತರಿಸುತ್ತದೆ. ಎರಡು ಕೋಗಿಲೆಗಳ ಜುಗಲ್‌ಬಂದಿಯಂತೆ ಭಾಸವಾಗುತ್ತದೆ.<br /><br />ಸಂಪಿಗೆ ಮರ ವರ್ಷಕ್ಕೊಮ್ಮೆ ಹೂ ಬಿಡುತ್ತದೆ. ಆಗ ಈ ಮರದ ಸುತ್ತೆಲ್ಲ ಸಂಪಿಗೆಕಂಪು ಪೂಸಿಕೊಂಡಿರೊತ್ತೆ. ಬಸ್ಸಿಗೆ ಹೋಗಲೆಂದು ಬೆಂಕಟವಳ್ಳಿಯ ಮಣ್ಣು ರಸ್ತೆಯ ಏರು ಹತ್ತುತ್ತಿರುವವರು ಕೊನೆಯ ತಿರುವಿನಲ್ಲಿರುವಾಗಲೇ ಇದರ ಘಮ ಮೂಗಿಗಡರಿ ಅವರ ಏದುಸಿರೂ ಆಪ್ಯಾಯಮಾನವಾಗುತ್ತದೆ. ತಮ್ಮ ತಮ್ಮ ವಾಹನಗಳಲ್ಲಿ ಟಾರು ರಸ್ತೆಯಲ್ಲಿ ಗುಬ್ಬಗೋಡಿನ ಕಡೆ ಹೊರಟವರು, ಗುಬ್ಬಗೋಡಿನಿಂದ ಸಾಗರಕ್ಕೆ ಹೊರಟವರು ಸಂಪಿಗೆ ಮರ ಹೂ ಬಿಡುವ ಕಾಲದಲ್ಲಿ ಇಲ್ಲಿ ಐದು ನಿಮಿಷ ನಿಲ್ಲಿಸಿ, ಬಡಿಗೆಯಿಂದ ಬಡಿದು, ಒಂದೆರಡಾದರೂ ಹೂವುದುರಿಸಿಕೊಂಡು, ಅದರ ಪರಿಮಳ ಹೀರುತ್ತಾ ಮುಂದೆ ಸಾಗುತ್ತಾರೆ.<br /><br />ನನ್ನ ಅಜ್ಜನ ಮನೆ ಊರಿನಲ್ಲಿ ಸಾಗರದ ಕಾಲೇಜಿಗೆ ಹೋಗುವ ಅತಿ ಚಂದದ ಹುಡುಗಿಯರು ಇದ್ದಾರೆ ಎಂದು ನಾನು ಹೇಳಿದರೆ ನೀವದನ್ನು ಆತ್ಮಪ್ರಶಂಸೆ ಎಂದು ಭಾವಿಸಬಾರದು. ಏಕೆಂದರೆ, ಹಾಗೆ ಹೇಳಿಕೊಳ್ಳುವುದರಿಂದ ನನಗೇನೂ ಲಾಭವಿಲ್ಲ. ಲಾಭವೇನಿದ್ದರೂ ಇರುವುದು ಬೆಂಕಟವಳ್ಳಿ ಮತ್ತು ಅಕ್ಕಪಕ್ಕದ ಊರಿನ ಹುಡುಗರಿಗೆ! ಬಸ್ಸು ಬರುವುದಕ್ಕೂ ಕನಿಷ್ಟ ಅರ್ಧ ಗಂಟೆ ಮುಂಚಿತವಾಗಿಯೇ ಇಲ್ಲಿಗೆ ಬಂದು ಸೇರುವ ಹುಡುಗರು, ಹುಡುಗಿಯರಿಗಾಗಿ ಕಾಯತೊಡಗುತ್ತಾರೆ. ಬೆಂಕಟವಳ್ಳಿಯ ಹಿಂದು-ಮುಂದಿನ ಊರಿನ ಹುಡುಗರೂ ಸಹ ಇಲ್ಲಿಗೇ ಬಂದು ಬಸ್ಸು ಹತ್ತುತ್ತಾರೆಂದರೆ ಅದರ ಹಿಂದೊಂದು ಗುಟ್ಟಿರಬೇಕಲ್ಲವೇ? ಅದು ಮತ್ತೇನೂ ಅಲ್ಲ: ಬಿಳಿ ಚೂಡಿದಾರು, ಮುಖಕ್ಕೆ ಕ್ರೀಮು-ಪೌಡರು, ಚಂದ ಬಾಚಿದ ಕೂದಲು, ಮ್ಯಾಚಿಂಗ್ ಕಲರ್ ಸ್ಲಿಪ್ಪರು -ಧರಿಸಿ ಚಂದದ ಬೊಂಬೆಗಳಂತೆ ತಯಾರಾಗಿ ಕಾಲೇಜಿಗೆ ಹೊರಟಿರುವ ಈ ಹುಡುಗಿಯರಿಗೆ ಸಂಪಿಗೆಯ ಪರಿಮಳ ಕೇಳಿ ಅದನ್ನು ಮುಡಿಯಬೇಕೆಂಬ ಆಸೆಯಾಗುತ್ತದಾದರೂ, ಬಡಿಗೆ ಹುಡುಕಿ, ಎತ್ತಿ ಎಸೆದು, ಹೂವು ಬೀಳಿಸಿ ಮುಡಿದುಕೊಳ್ಳಲಿಕ್ಕೆ -ತಮ್ಮ ಅಲಂಕಾರವೆಲ್ಲಾ ಎಲ್ಲಿ ಹಾಳಾಗುತ್ತದೋ ಎಂಬ ಹಿಂಜರಿಕೆ. ಇದನ್ನರಿತಿರುವ ಚಾಣಾಕ್ಷಮತಿ ಹುಡುಗರು, ಮುಂಚೆಯೇ ಇಲ್ಲಿಗೆ ಬಂದು ಹೂವನ್ನೆಲ್ಲಾ ಹುಡುಕಿ ಬಡಿದು ಕೆಡವಿ ಗುಡ್ಡೆ ಮಾಡಿ, ಹುಡುಗಿಯರು ಬರುವಷ್ಟರಲ್ಲಿ ಬೊಗಸೆ ತುಂಬ ಹೂ ಹಿಡಿದು ನಿಂತಿರುತ್ತಾರೆ. ಹೀಗಾಗಿ, ಸಂಪಿಗೆ ಹೂ ಬಿಡುವ ಕಾಲದಲ್ಲಿ ನೀವು ಈ ಕಡೆ ಬಂದರೆ, ಇನ್ನೂ ಮಂಜು ಮುಸುಕಿದ ಮುಂಜಾವಿನಲ್ಲಿ, ಮೊದಲ ಬಸ್ಸಿನ್ನೂ ಬರುವುದಕ್ಕೆ ಸಮಯವಿರಲು, ಬೆಂಕಟವಳ್ಳಿಯ ಸಂಪಿಗೆ ಮರದ ಕೆಳಗೆ ಹುಡುಗರು ಹುಡುಗಿಯರಿಗೆ ಹೂ ಕೊಟ್ಟು ಪ್ರತಿದಿನವೂ 'ಪ್ರಪೋಸ್' ಮಾಡುವ ಅಮೋಘ ಸಿನಿಮಾ ದೃಶ್ಯವನ್ನು ಕಾಣಬಹುದು!<br /><br />ಹಾಂ, ಸಿನಿಮಾ ಎಂದಾಕ್ಷಣ ನೆನಪಾಯಿತು. ಪುಟ್ಟಣ್ಣ ಕಣಗಾಲರ 'ಅಮೃತ ಘಳಿಗೆ' ಸಿನಿಮಾ ಇದೆಯಲ್ಲಾ, ಆ ಸಿನಿಮಾ ಚಿತ್ರೀಕರಿಸಲ್ಪಟ್ಟಿರುವುದು ಇದೇ ಸಂಪಿಗೆ ಮರದ ಸುತ್ತಲಿನ ಪ್ರದೇಶದಲ್ಲಿ. ಈ ಸಂಪಿಗೆ ಮರವೂ ಆ ಚಿತ್ರದಲ್ಲಿ ಹಸಿರು ಸೀರೆ ಉಟ್ಟು ಚಂದ ಪೋಸ್ ಕೊಟ್ಟಿರುವುದನ್ನು ನೋಡಿದರೆ ಇದಕ್ಕೆ ಅಭಿನಯದಲ್ಲಿ ಆಸಕ್ತಿಯಿತ್ತೇ ಎಂಬ ಅನುಮಾನ ಬರುತ್ತದೆ. ಈ ಸಂಪಿಗೆ ಮರದಿಂದ ಸುಮಾರು ಒಂದೂ ವರೆ ಮೈಲಿ ದೂರದಲ್ಲಿರುವ 'ತುಂಬೆ' ಎಂಬ ಊರಿನಲ್ಲಿ ಒಬ್ಬ ಭಾರೀ ಶ್ರೀಮಂತರ ಮನೆಯಿದೆ. 'ತುಂಬೆ ಹೆಗ್ಡೇರು' ಅಂತಲೇ ಅವರು ಜನಜನಿತರು. ಅವರ ಮನೆಯಲ್ಲೇ ನಡೆದದ್ದು 'ಅಮೃತ ಘಳಿಗೆ'ಯ ಮುಕ್ಕಾಲು ಪಾಲು ಚಿತ್ರೀಕರಣ. ಅದು ನಡೆಯುವಾಗ ಅಮ್ಮ ತನ್ನ ಗೆಳತಿಯರೊಡಗೂಡಿ ಅಲ್ಲಿಗೆ ಹೋದದ್ದು, ಅಲ್ಲಿ ಶ್ರೀಧರ್, ರಾಮಕೃಷ್ಣ, ಪುಟ್ಟಣ್ಣ -ಮುಂತಾದವರನ್ನು ನೋಡಿದ್ದನ್ನು ನೆನಪಿಟ್ಟುಕೊಂಡಿದ್ದಾಳೆ. 'ಅಮೃತ ಘಳಿಗೆ' ಸಿನಿಮಾ ನಮ್ಮೂರ ಡಾ| ವೆಂಕಟಗಿರಿ ರಾವ್ ಅವರ 'ಅವಧಾನ' ಕಾದಂಬರಿಯನ್ನು ಆಧರಿಸಿದ್ದು ಎಂದೆಲ್ಲ ಹೇಳಿದರೆ ನಾನು ಸಂಪಿಗೆ ಮರ ಬಿಟ್ಟು ಎಲ್ಲೆಲ್ಲಿಗೋ ಹೋಗುತ್ತಿದ್ದೇನೆ ಎಂದು ನೀವು ಆಪಾದಿಸಬಾರದು. ಏನು ಮಾಡಲಿ? ಸಂಪಿಗೆ ಮರ ಎಂದಾಕ್ಷಣ ನನಗೆ ಅವೆಲ್ಲ ನೆನಪಾಗುತ್ತದೆ.<br /><br />ಬೆಂಕಟವಳ್ಳಿ ಬಸ್‌ಸ್ಟ್ಯಾಂಡ್‌ನ ಹತ್ತಿರದಲ್ಲಿ ಯಾವುದೇ ಮನೆಯಾಗಲೀ, ಅಂಗಡಿಯಾಗಲೀ ಇಲ್ಲವಾದ್ದರಿಂದ - ಅದೊಂದು ನಿರ್ಜನ ಪ್ರದೇಶವಾದ್ದರಿಂದ, ಅದರ ಸುತ್ತ ಕೆಲವೊಂದು ನಿಗೂಢ ಘಟನೆಗಳೂ ನಡೆದ ಸುದ್ಧಿಗಳಿವೆ. ಉದಾಹರಣೆಗೆ, ಸಂಪಿಗೆ ಮರದ ಕೆಳಗೆ ಬಸ್ಸಿಗೆ ಕಾಯುತ್ತಿದ್ದ ಸುಜಾತಕ್ಕನನ್ನು ಯಾರೋ ಬೆದರಿಸಿ ದುಡ್ಡು ಕಿತ್ತುಕೊಂಡರಂತೆ ಎಂಬುದು; ಬಸ್‌ಸ್ಟ್ಯಾಂಡ್ ಒಳಗೆ ಪ್ರಕಾಶಣ್ಣ ಒಂದು ಮೂಟೆ ಕಂಡನೆಂದೂ - ಅದು ಕಳ್ಳಸಾಗಣೆದಾರರು ಬಚ್ಚಿಟ್ಟಿದ್ದ ಗಂಧವೆಂದೂ - ಮರುದಿನ ನೋಡುವಷ್ಟರಲ್ಲಿ ಇರಲಿಲ್ಲವೆಂದೂ; ಬಸ್‍ಸ್ಟ್ಯಾಂಡ್ ಪಕ್ಕದಲ್ಲಿರುವ ಟ್ರಾನ್ಸ್‌ಫಾರ್ಮರ್ ಪದೇ ಪದೇ ಹೋಗುವುದಕ್ಕೆ ಕಾರಣ ಸಂಪಿಗೆ ಮರದಲ್ಲಿರುವ ಯಾವುದೋ ಕ್ಷುದ್ರಶಕ್ತಿಯೆಂದೂ -ಹೀಗೆ. ಮತ್ತೆ, ಇವೆಲ್ಲಕ್ಕಿಂತಲೂ ಆಸಕ್ತಿಕರವಾದ ಮತ್ತೊಂದು ಘಟನೆಗೆ ಕಣ್ಣು-ಕಿವಿಯಾಗುವ ಅವಕಾಶ ನನಗೊದಗಿ ಬಂತು.<br /><br />ಈ ಸಂಪಿಗೆ ಮರದ ಬಳಿ ಒಬ್ಬ ಬೆತ್ತಲೆ ಹುಡುಗಿ ಓಡಾಡುತ್ತಿದ್ದಳು ಎಂಬ ಸುದ್ಧಿ ಸ್ಪೋಟವಾದದ್ದು ಬಿರುಬೇಸಿಗೆಯ ಸಂಜೆಯೊಂದರಲ್ಲಿ. ನಾನು ಬೇಸಿಗೆ ರಜೆಗೆಂದು ಅಜ್ಜನ ಮನೆಗೆ ಹೋಗಿದ್ದೆ. ಅದಾಗ ತಾನೆ ಆರೂವರೆ ಬಸ್ಸಿಗೆ ಸಾಗರದಿಂದ ಬಂದ ನನ್ನ ಮಾವನಿಗೆ, ಮಾವನೊಂದಿಗೇ ಬಸ್ಸಿಳಿದ ರಾಘವೇಂದ್ರಣ್ಣ ಬೆಳಗ್ಗೆ ತಾನು ಕಂಡ ದೃಶ್ಯವನ್ನು ವಿವರಿಸಿದನಂತೆ: "ಚಾಲಿ ಸುಲ್ಸಿದ್ದು ನಾಕು ಚೀಲ ಆಗಿತ್ತಾ.. ಮಂಡಿಗೆ ಸಾಗ್ಸಲೆ ಆನಂದ್ ಗೌಡನ ರಿಕ್ಷಾಕ್ಕೆ ಬರಕ್ ಹೇಳಿದಿದ್ದಿ.. ಅಂವ ಒಂಭತ್ ಗಂಟಿಗೆ ಬಂದ.. ಚೀಲ ಹೇರ್ಕ್ಯಂಡು, ಆನೂ ಹೊಂಟಿ ರಿಕ್ಷಾದ್ ಮೇಲೇ ಹೇಳ್ಯಾತು.. ಸಂಪ್ಗೆ ಮರದ್ ಬುಡಕ್ ಬಪ್ಪ ಹೊತ್ತಿಗೆ ಅಲ್ಲೊಂದು ಹೆಂಗ್ಸು ಮಾರಾಯಾ.. ಎಂಥಾ? ದುಂಡಗೆ!! ಫುಲ್ ದುಂಡಗ್ ನಿಂತಿದ್ಲಪಾ..! ಕೈ ಮಾಡಿದ ಯಂಗ್ಳ ರಿಕ್ಷಾಕ್ಕೆ.. ಯಂಗಂತು ಹೆದ್ರಿಕೆ ಆಗೀ.. ಆನಂದ ಜೋರಾಗ್ ಹೊಡ್ದ ನೋಡು ರಿಕ್ಷಾನಾ.. ಕರ್ಕಿಕೊಪ್ಪದ್ ಇಳುಕ್ಲು ಇಳಿಯಹೊತ್ತಿಗೆ ಇಬ್ರಿಗೂ ಬೆವ್ರು ಇಳ್ದ್ ಹೋಗಿತ್ತು! ಎಂಥಾ- ದುಂಡಗೆ ಮಾರಾಯಾ..!"<br /><br />ಮಾವ, ರಾಘವೇಂದ್ರಣ್ಣ ತನಗೆ ಹೇಳಿದ್ದನ್ನು ಹಾಗೇ ಹೇಳಿದ. ಕೇಳಿದ ನಮಗೆಲ್ಲರಿಗೂ ಆಶ್ಚರ್ಯವಾಯಿತು. ಸಂಪಿಗೆ ಮರದ ಬಳಿ! ಬೆತ್ತಲೆ ಹುಡುಗಿ! "ಯಾರೂಂತ ಏನಾರು ಗೊತ್ತಾತನಾ?" ಎಂದು ಮಾವ ರಾಘವೇಂದ್ರಣ್ಣನ ಬಳಿ ಕೇಳಿದನಂತೆ. ರಾಘವೇಂದ್ರಣ್ಣ "ಎಂಥೇನ, ಸರಿಯಾಗ್ ನೋಡಕ್ ಆಗಲ್ಲೆ. ಆದರೆ ನಮ್ಮ ಕಡೆಯೋರಂತೂ ಯಾರೂ ಅಲ್ಲ ನೋಡು" ಎಂದನಂತೆ. ಅದರಲ್ಲಿ 'ಸರಿಯಾಗಿ ನೋಡಕ್ಕಾಗಲ್ಲೆ' ಎಂಬ ಮಾತು ನನಗೆ ಮೋಟುಗೋಡೆಯಾಚೆಗಿನ ಆಲೋಚನೆಗಳಿಗೆ ಕೊಂಕಾಯಿತಾದರೂ, ದೇವರ ಮನೆಯಿಂದ ಬಂದ ಅಜ್ಜಿ "ಮಾಣೀ, ಮೂರ್ ಸಂಜೆ ದೀಪ ಹಚ್ಚೋ ಹೊತ್ತಿಗೆ ಎಂಥೆಂತೆಲ್ಲಾ ಹೇಳಡ.. ಮೊದ್ಲು ಕೈಕಾಲ್ ತೊಳ್ಕಂಡ್ ಬಂದು ಕಾಪಿ ಕುಡಿ" ಎಂದದ್ದರಿಂದ ನನ್ನ ಆಲೋಚನೆಗಳಿಗೆ ಕಡಿವಾಣ ಹಾಕಬೇಕಾಯಿತು. ಆದರೆ ಅಂತಹ ರೋಚಕ ಸುದ್ಧಿ ಪ್ರಕಟಗೊಂಡಾಗ ಅದರ ಬಗ್ಗೆ ನಾಲ್ಕು ಮಾತಾಡದೇ, ಚರ್ಚಿಸದೇ ಅಲ್ಲಿಗೇ ನಿಲ್ಲಿಸಲಿಕ್ಕೆ ಬರುತ್ತದೆಯೇ? ಮಾವ ಹಾಗೆ ಕಥೆ ಹೇಳುವಾಗ ಅಲ್ಲಿ ಏಳು ಗಂಟೆ ವಾರ್ತೆ ನೋಡಲಿಕ್ಕೆಂದು ಬಂದು ಕೂತಿದ್ದ ಅಕ್ಕಪಕ್ಕದ ಮನೆಯವರನೇಕರೂ ಇದ್ದರು. ಹೀಗಾಗಿ, ಅಜ್ಜಿಯ ಕಿವಿಮಾತು ಯಾರ ಕಿವಿಗೂ ಬೀಳಲಿಲ್ಲ. "ಅಲ್ದಾ, ಬದ್ಧನಡನಾ?" ಎಂದು ಅನಂತಣ್ಣ ಬಾಯಿ ಹಾಕಿದರೆ, "ಇಶೀ, ಅದು ಹೆಂಗ್ ಸಾಧ್ಯನಾ? ರಾಘವೇಂದ್ರಣ್ಣ ಏನ್ ನೋಡಿ ಏನ್ ತಿಳ್ಕಂಡ್ನಾ ಎಂಥೇನ!" ಎಂದು ಯಶೋಧಕ್ಕ ರಾಘವೇಂದ್ರಣ್ಣನ ಲೌಕಿಕ ಜ್ಞಾನದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದಳು.<br /><br />"ರಾಘವೇಂದ್ರಣ್ಣ ಒಬ್ನೇ ಏನು ಅಲ್ದಲಾ? ಆನಂದ್ ಗೌಡನೂ ನೋಡಿದ್ದ.. ರಿಕ್ಷಾದ ಹಿಂದಕೇ ಅದು ಸುಮಾರ್ ದೂರ ಓಡ್ಯೂ ಬಂತಡ.. ಕನ್ನಡೀಲಿ ಕಾಣ್ತಿತ್ತಡ ಆನಂದಂಗೆ.." ಎಂದ ಮಾವ. ನಾನಾಗ ಇನ್ನೂ ಮೊದಲ ವರ್ಷದ ಕಾಲೇಜು ಹುಡುಗನಾಗಿದ್ದರಿಂದ 'ಇಂತಹ' ವಿಷಯದ ಬಗ್ಗೆ ಆಸಕ್ತಿ ಇರುವವನಂತೆ ನಡೆದುಕೊಳ್ಳುವುದು ಉಚಿತವಲ್ಲೆಂದರಿತು ಸುಮ್ಮನಿದ್ದೆ. ಏಕೆಂದರೆ, ನಾನೇನಾದರೂ ಬಾಯಿ ಬಿಟ್ಟಿದ್ದರೆ, ತಕ್ಷಣ ಎಲ್ಲರೂ ನನ್ನೆಡೆಗೆ ನೋಡುತ್ತಿದ್ದರು ಮತ್ತು ಅಜ್ಜಿ "ಅಪ್ಪೀ ನಿಂಗೆ ಇವೆಲ್ಲ ಎಂಥೂ ಗೊತ್ತಾಗ್ತಲ್ಲೆ; ನೀ ಸುಮ್ಮನ್ ಕೂತ್ಗ" ಎಂದು ಬಾಯಿ ಮುಚ್ಚಿಸುತ್ತಿದ್ದಳು. ನಮ್ಮ ಮನೆಗೆ ಫೋನ್ ಮಾಡಿದಾಗ ಅಮ್ಮನ ಬಳಿ ಸೂಕ್ಷ್ಮವಾಗಿ 'ಅಪ್ಪಿಯ ಬಗ್ಗೆ ಒಂದು ಕಣ್ಣಿಟ್ಟರಲು' ಅಜ್ಜಿ ಸೂಚನೆ ಕೊಟ್ಟರೂ ಕೊಡುವ ಸಾಧ್ಯತೆ ಇತ್ತು. ಹೀಗಾಗಿ, ನಾನು ಏನೂ ಅರಿಯದವನಂತೆ ಸುಮ್ಮನಿದ್ದುಬಿಟ್ಟಿದ್ದೆ. ಒಟ್ಟಿನಲ್ಲಿ ಮರುದಿನ ಬೆಳಗಾಗುವುದರೊಳಗಾಗಿ ಈ ಪ್ರಕರಣ ಬೆಂಕಟವಳ್ಳಿ ಊರಲೆಲ್ಲ ಗುಸುಗುಸು ಸುದ್ಧಿಯಾಗಿತ್ತು. ರಾಘವೇಂದ್ರಣ್ಣನ ಹೆಂಡತಿ ಮಾತ್ರ ಯಾಕೋ ಸೆಟಗೊಂಡ ಮುಖದಲ್ಲಿ ಓಡಾಡುತ್ತಿರುವುದನ್ನೂ ನಾನು ಗಮನಿಸದಿರಲಿಲ್ಲ.<br /><br />ಅದಾಗಿ ಮೂರ್ನಾಲ್ಕು ದಿನಗಳ ನಂತರ, ಕಲ್ಲುಕೊಪ್ಪದ ಬಳಿ ಹೀಗೇ ಬೆತ್ತಲೆ ಹುಡುಗಿ ಕಾಣಿಸಿಕೊಂಡಳಂತೆ ಎಂದು ಸುದ್ಧಿಯಾಯಿತು. ಕಲ್ಲುಕೊಪ್ಪವೆಲ್ಲಿ ಬೆಂಕಟವಳ್ಳಿಯೆಲ್ಲಿ? ಕಲ್ಲುಕೊಪ್ಪ ಬೆಂಕಟವಳ್ಳಿಗೆ ಹದಿನೈದಿಪ್ಪತ್ತು ಮೈಲಿ ದೂರದಲ್ಲಿರುವ ಹಳ್ಳಿ. ಹಾಗಾದರೆ ಇದೂ ಅದೇ ಹುಡುಗಿಯೇ? ಅಥವಾ ಬೇರೆ ಹುಡುಗಿಯೇ? ಅರಳಿಕಟ್ಟೆ ಬಳಿ, ಅಡಿಕೆ ಸುಲಿಯುವಲ್ಲಿ, ರಸ್ತೆ-ತೋಟದಲ್ಲಿ ಯಾರಾದರೂ ಎದುರು ಸಿಕ್ಕಾಗ -ಹೀಗೆ ಎರಡು ಬಾಯಿ ಸೇರಿತೆಂದರೆ ಅಲ್ಲಿ ಬೆತ್ತಲೆ ಹುಡುಗಿ ಕಾಣಿಸಿಕೊಂಡ ಬಿಸಿಬಿಸಿ ಸುದ್ಧಿ ಚರ್ಚೆಯಾಯಿತು. 'ಜೋಗದಲ್ಲಿ ಯಾವುದೋ ಸಿನಿಮಾದ ಶೂಟಿಂಗ್ ನಡೆಯುತ್ತಿದೆಯಂತೆ. ಅಲ್ಲಿಂದೊಬ್ಬ ನಟಿ ಕಾಣೆಯಾಗಿದ್ದಾಳಂತೆ. ಪೋಲೀಸರು ಹುಡುಕುತ್ತಿದ್ದಾರಂತೆ' ಎಂದು ಸಹ ಯಾರೋ ಹೇಳಿಬಿಟ್ಟರು. ಈ ಎಲ್ಲ ಸುದ್ಧಿಗಳು ಹವೆಗೆ ಭಯವನ್ನು ಬೆರೆಸಿಬಿಟ್ಟವು. ಜನ ಸಂಪಿಗೆ ಮರದ ಬಳಿ ಒಬ್ಬರೇ ಹೋಗುವುದಕ್ಕೆ ಹೆದರತೊಡಗಿದರು. ಹೆಂಗಸರನ್ನು ಬಸ್ ಹತ್ತಿಸಲಿಕ್ಕೆ ಜೊತೆಗೆ ಯಾರಾದರೂ ಗಂಡಸರು ಬರಬೇಕಾದಂತಹ ಪರಿಸ್ಥಿತಿ ಬಂತು. ಬಸ್ಸು ಹತ್ತಿದ ಹೆಂಗಸರು ತಮ್ಮ ಗಂಡಂದಿರಿಗೆ 'ಬೇಗ ಮನೆ ಮುಟ್ಕ್ಯಳಿ' ಎಂದು ಎಚ್ಚರಿಕೆ ನೀಡುವುದನ್ನೂ ಮರೆಯುತ್ತಿರಲಿಲ್ಲ.<br /><br />ನಾನು ಈ ವಿದ್ಯಮಾನವನ್ನೆಲ್ಲಾ ಕಂಡೂ-ಕೇಳಿಯೂ ಸುಮ್ಮನೆ ಓಡಾಡಿಕೊಂಡಿದ್ದೆ. ಯಾರಿಗೂ ತಿಳಿಯದಂತೆ ನಾನೊಬ್ಬನೇ ಸಂಪಿಗೆ ಮರದ ಬಳಿ ಹೋಗಿ ಸುಮಾರು ಒಂದು ತಾಸು ಅಡ್ಡಾಡಿಕೊಂಡು ಬಂದಿದ್ದೆ. ಇದರ ಹಿಂದಿರುವ ರಹಸ್ಯವನ್ನು ಒಂಟಿಯಾಗಿ ಭೇದಿಸಿ ಭೇಷ್ ಎನಿಸಿಕೊಳ್ಳಬೇಕೆಂಬ ಇರಾದೆಯೂ ನನಗಿತ್ತೋ ಏನೋ ಈಗ ನೆನಪಿಲ್ಲ. ಆದರೆ ನನ್ನ ದುರಾದೃಷ್ಟಕ್ಕೆ ಆಗ ಯಾವ ನಗ್ನ ಸುಂದರಿಯ ದರ್ಶನವೂ ನನಗಾಗಲಿಲ್ಲ.<br /><br />ಈ ಬಿಸಿಬಿಸಿ ಸುದ್ಧಿಯ ಗುಸುಗುಸು-ಪಿಸಪಿಸಗಳು ನಿಲ್ಲಬೇಕಾದರೆ ಮತ್ತೊಂದು ಗರಮಾಗರಂ ಸುದ್ಧಿ ಬರಬೇಕಾಯಿತು: ಸಂಪಿಗೆ ಮರದಿಂದ ಮೂವತ್ತು ಮೈಲಿಗೂ ಹೆಚ್ಚು ದೂರದಲ್ಲಿರುವ ಕಾನುಬೈಲು ಎಂಬ ಊರಿನ ಕೆರೆಯಲ್ಲಿ ಒಂದು ಹೆಣ್ಣಿನ ಶವ ಸಿಕ್ಕಿತಂತೆ, ಜನ ಸೇರಿ, ಪೋಲೀಸರು ಬಂದು, ಪೋಸ್ಟ್‌ಮಾರ್ಟೆಮ್ ಮಾಡಿ, ಶವವನ್ನು ಯಾರೂ ಗುರುತಿಸದಿದ್ದರಿಂದ, ಅವರೇ ಗುಂಡಿ ತೋಡಿ ಹುಗಿದುಬಿಟ್ಟರಂತೆ ಎಂಬುದೇ ಆ ಸುದ್ಧಿ. ಆದರೆ ಬೆಂಕಟವಳ್ಳಿ ಸಂಪಿಗೆ ಮರದ ಬಳಿ ಕಾಣಿಸಿಕೊಂಡ ಬೆತ್ತಲೆ ಹುಡುಗಿಗೂ, ಕಲ್ಲುಕೊಪ್ಪದ ಬಳಿಯೂ ಬೆತ್ತಲೆ ಹುಡುಗಿ ಕಾಣಿಸಿಕೊಂಡಳಂತೆ ಎಂಬ ಸುದ್ಧಿಗೂ, ಕಾನುಬೈಲಿನ ಕೆರೆಯಲ್ಲಿ ಸಿಕ್ಕ ಅನಾಥ ಹೆಣ್ಣು ಶವಕ್ಕೂ ಅದು ಹೇಗೆ ತಳಕು ಕಲ್ಪಿಸಿಕೊಂಡರೋ ಗೊತ್ತಿಲ್ಲ; ಅಂತೂ 'ರಾಘವೇಂದ್ರಣ್ಣ ನೋಡಿದ ಬೆತ್ತಲೆ ಹೆಂಗಸು ಕೊಲೆಯಾಗಿ ಸತ್ತು ಹೋದಳಂತೆ' ಎಂದು ಜನ ಮಾತಾಡಿಕೊಂಡರು. ಅವರಲ್ಲಡಗಿದ್ದ ಭಯವೂ ಹೋದಂತನಿಸಿತು. ನಾನು ಅಜ್ಜನ ಮನೆ ಪ್ರವಾಸ ಮುಗಿಸಿ ವಾಪಸು ಊರಿಗೆ ಹೊರಟಾಗ, ಯಾಕೋ ಈ ಸಂಪಿಗೆ ಮರವನ್ನು ಮೂರ್ನಾಲ್ಕು ಸುತ್ತು ಸುತ್ತಿ ಬಂದು, ಅದರ ಕಾಂಡವನ್ನು ತಡವಿ, ಅದರ ಎದ್ದು ಬಂದಿರುವ ಬೇರುಗಳ ಮೇಲೆಲ್ಲ ಓಡಾಡಿ, ಕೆಳಗೆ ಬಿದ್ದಿದ್ದ ಒಂದೆರಡು ತರಗೆಲೆಯನ್ನೆತ್ತಿ ಮೂಸಿ, ಬಿಸಾಕಿ ಬಂದಿದ್ದೆ. ಸಂಪಿಗೆ ಮರ ಮಾತ್ರ ನಿರುಮ್ಮಳವಾಗಿ ನೆರಳು ಸೂಸುತ್ತ ನಿಂತಿತ್ತು.<br /><br />ಮೊನ್ನೆ ಊರಿಗೆ ಹೋದವನು ಅಪ್ಪನ ಬೈಕೆತ್ತಿಕೊಂಡು ಅಜ್ಜನ ಮನೆಗೆ ಹೋಗಿದ್ದೆ. ವಾಪಸು ಬರುವಾಗ ಸಂಪಿಗೆ ಮರ ಕಣ್ಣಿಗೆ ಬಿದ್ದದ್ದೇ ಹಳೆಯದೆಲ್ಲ ಕ್ಷಣದಲ್ಲಿ ನೆನಪಾಗಿ, ಹಳೇ ಪ್ರಿಯತಮೆಯನ್ನು ಕಂಡಂತಾಗಿ, ಬೈಕು ನಿಲ್ಲಿಸಿ, ಆಫ್ ಮಾಡಿದೆ. ಫಕ್ಕನೆ ಮೌನ ಕವಿಯಿತು. ಈ ಮರದ ಬಗ್ಗೆ ಏನಾದರೂ ಬರೆಯಬೇಕು ಎನಿಸಿತು ನನಗೆ... ಮೇಲೆ ಸೊಂಪಾಗಿ ಚಪ್ಪರದಂತೆ ಒತ್ತರಿಸಿಕೊಂಡಿರುವ ಇದರ ಹಸಿರೆಲೆರಾಶಿಯನ್ನು ನೋಡುತ್ತಿದ್ದೆ...<br /><br />ಯಾರೋ ಕಿಟಾರನೆ ಕಿರುಚಿಕೊಂಡಂತಾಯಿತು. ಹೆಂಗಸಿನ ಧ್ವನಿ. ನನಗೆ ಒಮ್ಮೆಲೇ ಭಯವಾಗಿ, ಮೈನಡುಗಿ, ಒಂದೇ ಕಿಕ್ಕಿಗೆ ಬೈಕ್ ಸ್ಟಾರ್ಟ್ ಮಾಡಿ, ಎಂಭತ್ತರ ವೇಗದಲ್ಲಿ ಓಡಿಸತೊಡಗಿದೆ.<div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-7259696269413832168?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com22tag:blogger.com,1999:blog-27009232.post-55976002664388360282008-08-13T10:44:00.006+05:302009-05-29T12:54:30.365+05:30ಡೇರೆ-ಗುಲಾಬಿ<div style="text-align: center;"><div style="text-align: left;">ಹೊಸ ಮಳೆಗಾಲ; ಹೊಸ ಮಳೆ:<br />ಮಣ್ಣಾಳದಿಂದೆದ್ದು ಬರುತ್ತದೆ ಡೇರೆ ಗಿಡ...<br />ದುಬುದುಬನೆ ಬೆಳೆಯುತ್ತದೆ ತಲೆಯೆತ್ತಿ<br />ಬಲಿಷ್ಟವಾಗುತ್ತ ಕಾಂಡ ಬಾಗದಂತೆ...<br />ಹೂವಾಗುತ್ತದೆ ತಿಂಗಳಲ್ಲಿ ಮೊಗ್ಗರಳಿ<br />ಪಕಳೆ ಪಕಳೆಯಲ್ಲೂ ಚೆಲ್ಲಿ ಚೆಲುವು.<br /><br />ಅಂಗಳದಲ್ಲೀಗ ಇದರದೇ ರಾಜ್ಯಭಾರ:<br />ಒಡತಿ ಡೇರೆಯನ್ನೇ ಮುಡಿಯುತ್ತಾಳೆ<br />ದೇವರ ಗೂಡಿನಲ್ಲೂ ಇದರದೇ ಅಲಂಕಾರ<br />ದಾರಿಹೋಕರ ಕಣ್ಣಿಗೂ ಡೇರೆಯೇ ಚಂದ<br />ದುಂಬಿಗಂತೂ ಕಹಿ ಬೇರೆ ಹೂವ ಮಕರಂದ!<br /></div><br /></div><div style="text-align: right;"> ವರುಷವಿಡೀ ಹೂ ಬಿಡುವ ಗುಲಾಬಿಗೆ ಹೊಟ್ಟೆಉರಿ!<br />ಮೈಮೇಲಿನ ಮಳೆಹನಿಯನೆಲ್ಲ ಕಣ್ಣೀರಂತೆ ಉದುರಿಸುತ್ತಾ<br />ಅಳು ಅಳು ಅಳುತ್ತದೆ ಗುಲಾಬಿ...<br />ತಾನೆಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದೆನೋ,<br />ಪ್ರೀತಿಯೆಲ್ಲ ಎಲ್ಲಿ ಬೇರೆಯವರ ಪಾಲಾಯಿತೋ<br />ಎಂದು ಕರುಬುತ್ತದೆ...<br />ಮುಳ್ಳುಮುಳ್ಳಿನ ತನ್ನ ಶರೀರ<br />ಕುರೂಪದಂತೆ ಭಾಸವಾಗುತ್ತದೆ;<br />ವಿಧಿಯನ್ನು ಶಪಿಸುತ್ತದೆ; ಡೇರೆಯನ್ನು ದ್ವೇಷಿಸುತ್ತದೆ;<br />'ಈ ಜಗತ್ತು ಮೃಗಜಲ; ಪ್ರೀತಿ ಪ್ರೇಮ ಎಲ್ಲಾ ಸುಳ್ಳು'<br />ಎಂದು ಹತಾಶ ದನಿಯಲ್ಲಿ ಉಸುರುತ್ತದೆ.<br /></div><br /><div style="text-align: center;">ಜಗತ್ತೂ ಸುಮ್ಮನಿದೆ ನೋಡುತ್ತ ಇವನ್ನೆಲ್ಲ<br />ಪ್ರತಿ ಅಂಗಳದಲ್ಲೂ ಇದ್ದದ್ದೇ ಈ ವರಾತ<br />ನೋಡೀ ನೋಡಿ ಬಂದಿದೆ ಅದಕ್ಕೂ ಬೇಸರ<br />ನಕ್ಕು ಸುಮ್ಮನಾಗುತ್ತದೆ ಅದು:<br /><br />'ಹುಚ್ಚು ಹೂವೇ, ಈ ಡೇರೆಯ ಮೆರೆತ<br />ಹೆಚ್ಚೆಂದರೆ ಇದೊಂದು ತಿಂಗಳು...<br />ಆಮೇಲೆ ಬೇಕು ಮತ್ತೆ ನೀನೇ...<br />ವರುಷವಿಡೀ ಗೆಡ್ಡೆಯಾಗಿ ಅಡಗಿದ್ದು<br />ಹೀಗೆಲ್ಲೋ ಋತುವೊಂದರಲ್ಲಿ ಚಿಗಿತು ಬೆಳೆದು<br />ಸುಂದರಿಯಂತೆ ಕಂಡುಬಿಟ್ಟರೆ ಆಗಲಿಲ್ಲ...<br />ಮೈತುಂಬ ಮುಳ್ಳನಿಟ್ಟುಕೊಂಡೂ,<br />ಗ್ರೀಷ್ಮದ ಉರಿಬಿಸಿಲಲ್ಲೂ ಬಾಡದೇ,<br />ಕೊರೆವ ಹುಳುಗಳಿಗೂ ಜಗ್ಗದೇ<br />ಅರಳಿ ನಿಂತು ನಯನವನಾಕರ್ಷಿಸುವುದು ಇದೆಯಲ್ಲ-<br />ಅದು ದೊಡ್ಡದು... ಅದು ಶಾಶ್ವತ...<br />ನೆನಪಿಡು: ನೀನು ಗುಲಾಬಿ; ಪ್ರೀತಿಯ ಸಂಕೇತ'<br /></div><br /><div style="text-align: right;"> ಗುಲಾಬಿಗೀಗ ಚೂರು ಸಮಾಧಾನ...<br />ಇಷ್ಟಗಲ ಹೂ ಬಿಟ್ಟುಕೊಂಡು ನಿಂತ ಡೇರೆ<br />ಬಜಾರಿಯಂತೆ ಕಾಣುತ್ತದೆ...<br />ತನ್ನ ಹೂವೋ, ಪುಟ್ಟಕೆ, ಕೆಂಪಗೆ, ಲಘುವಾಗಿ-<br />ಆಹಾ! ತನ್ನ ಸೌಂದರ್ಯಕ್ಕೆ ತಾನೇ ಮಾರುಹೋದಂತೆ<br />ತೂಗುತ್ತದೆ ಗುಲಾಬಿಗಿಡ...<br />ಕಾಯತೊಡಗುತ್ತದೆ ನಿರೀಕ್ಷೆಯಲ್ಲಿ:<br /><br />ಡೇರೆ ಮುಡಿದು ಬೇಸರ ಬಂದು-<br /> ಒಡತಿ ಬರುವುದ ತನ್ನೆಡೆಗೆ ಮತ್ತೆ;<br />ಮಳೆ ಮಧ್ಯದಲ್ಲೇ ನಿಂತು, ಡೇರೆಗಿಡ ಬಾಡಿ-<br /> ದೇವರಿಗೆ ಗುಲಾಬಿಯೇ ಗತಿಯಾಗಿ ಮತ್ತೆ;<br />ಡೇರೆಯಂಕುರಗಳಲಿ ಖಾಲಿಯಾಗಿ ಜೇನು-<br /> ತನ್ನನರಸಿ ಬರುವ ದುಂಬಿಗಾಗಿ ಮತ್ತೆ;<br />ದಾರಿಗರ ಕಣ್ಣಲ್ಲಿ ತಾನೇ ಬಿಂದುವಾಗಿ-<br /> ಮತ್ತೆ!</div><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-5597600266438836028?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com17tag:blogger.com,1999:blog-27009232.post-4619269188901927932008-07-28T13:44:00.002+05:302009-05-29T13:07:51.478+05:30ಪಯಣ"ಮಿನೂ," <p class="tsik_bodytext">"ಮ್?"</p> <p class="tsik_bodytext">"ಚಂದ್ರನಿಗೆ ಶಶಾಂಕ ಅಂತ ಯಾಕೆ ಹೆಸರು ಗೊತ್ತಾ?"</p> <p class="tsik_bodytext">"ಇಲ್ಲ, ಗೊತ್ತಿಲ್ಲ"</p> <p class="tsik_bodytext">"ಶಶ ಅಂದ್ರೆ ಮೊಲ. ಚಂದ್ರನ ಮೇಲೆ ಮೊಲದ ಚಿತ್ರದ ಅಂಕ -ಅಂದ್ರೆ ಸೈನ್- ಇದೆ ಅಲ್ವಾ, ಅದಕ್ಕೇ ಅವನನ್ನ ಶಶಾಂಕ ಅಂತ ಕರೀತಾರೆ"</p> <p class="tsik_bodytext">"ಓಹ್! ಗೊತ್ತೇ ಇರ್ಲಿಲ್ಲ ನಂಗೆ... ಥ್ಯಾಂಕ್ಯೂ ವೆರಿ ಮಚ್ ಫಾರ್ ದಿ ಇನ್‌ಫಾರ್ಮೇಶನ್ ಮಿ. ಶಶಾಂಕ್! ಆದ್ರೆ ನಿಮಗೆ ಎಲ್ಲಿ ಮೊಲದ ಗುರುತು ಇದೆ ಅಂತ ಕೇಳಬಹುದಾ?"</p> <p class="tsik_bodytext">"ಅಗತ್ಯವಾಗಿ ಕೇಳಬಹುದು. ಆದ್ರೆ ನಾನು ಮಾತ್ರ ಹೇಳಲ್ಲ! ಯಾಕೇಂದ್ರೆ ನಂಗೆ ಎಲ್ಲೂ ಮೊಲದ ಗುರುತಿನ ಮಚ್ಚೆ ಇಲ್ಲ!" </p> <p class="tsik_bodytext">"ಮತ್ಯಾಕಪ್ಪಾ ನೀನು ಶಶಾಂಕ ಅಂತ ಹೆಸರಿಟ್ಕೊಂಡಿದೀಯಾ?"</p> <p class="tsik_bodytext">"ಏಯ್... ನಾನಾ ಇಟ್ಕೊಂಡಿರೋದು? ಅಪ್ಪ ಇಟ್ಟಿದ್ದಪ್ಪ"</p> <p class="tsik_bodytext">"ಹ್ಮ್... ಅದು ನಿಜ... ಶಶೂ, ಈಗ ಹೀಗೆ ನಮ್ಮಿಬ್ರುನ್ನೂ ಒಟ್ಟಿಗೇ ನೋಡಿದ್ರೆ ನಿಮ್ಮಪ್ಪ ಹೇಗೆ ರಿಸೀವ್ ಮಾಡ್ಬಹುದು?"</p> <p class="tsik_bodytext">"ಹೆದರಬೇಡ್ವೋ... ಅಪ್ಪ ತುಂಬಾ ಸೋಶಿಯಲ್ ಅಂಡ್ ಪ್ರಾಕ್ಟಿಕಲ್... ಮೊದಲಿಗೆ ಶಾಕ್ ಆಗ್ತಾರೆ... ಆಮೇಲೆ ತಿಳಿಸಿ ಹೇಳಿದ್ರೆ ಒಪ್ಕೋತಾರೆ"</p> <p class="tsik_bodytext">"ಆದ್ರೂ ನಂಗ್ಯಾಕೋ ತುಂಬಾ ಭಯ ಆಗ್ತಿದೆ ಶಶೂ..."</p> <p class="tsik_bodytext">ಮಿನುಗು ನನ್ನ ಎದೆಗೆ ಒರಗಿದಳು. ಅವಳು ಅಷ್ಟೊಂದು ಭಯ ಪಡಬೇಕಾದ ಅವಶ್ಯಕತೆಯೇ ಇಲ್ಲ ಎನಿಸಿ, ಅವಳ ಬೆನ್ನ ಮೇಲಿಂದ ಕೈ ಹಾಕಿ ಬಳಸಿ ಮತ್ತಷ್ಟು ಬಿಗಿಯಾಗಿ ನನ್ನೆದೆಗೆ ತಬ್ಬಿಕೊಂಡೆ.</p> <p class="tsik_bodytext">ನಾವು ಕುಳಿತಿದ್ದ ವೋಲ್ವೋ ಬಸ್ಸು 'ಸುಂಯ್' ಸದ್ದು ಮಾಡುತ್ತಾ ಓಡುತ್ತಿತ್ತು. ಕಿಟಕಿಗೆ ಇಳಿಬಿಟ್ಟಿದ್ದ ಪರದೆಯನ್ನು ನಾನು ಪಕ್ಕಕ್ಕೆ ಸರಿಸಿದ್ದೆನಾದ್ದರಿಂದ ಚಂದ್ರ ಒಳಬಂದು ನಮ್ಮಿಬ್ಬರ ಮೇಲೂ ಬೆಳದಿಂಗಳ ಹೊದಿಕೆ ಹೊಚ್ಚಿದ್ದ. ಮಿನುಗು ಕಣ್ಣು ಮುಚ್ಚಿಕೊಂಡಿದ್ದಳು. ನಾನು ಅವಳ ಮುಖವನ್ನೇ ನೋಡಿದೆ. ಅವಳ ಬಲಕಿವಿಯ ಲೋಲಕ್‌ನ ತುದಿ ಈಗ ಕೆನ್ನೆಯ ಮೇಲಿತ್ತು. ಮುಂಗುರುಳೊಂದು ಅದರ ಪಕ್ಕ. ನಾನು ಅದನ್ನು ಅವಳ ಕಿವಿಯ ಹಿಂದೆ ಸರಿಸಿದೆ. ಅವಳ ನುಣುಪು ಕೆನ್ನೆ, ಮೂಗು, ಅರ್ಧವಷ್ಟೇ ಕಾಣುತ್ತಿದ್ದ ತುಟಿಗಳು, ಗರಿಗರಿ ಚೂಡಿಯನ್ನು ಬಳಸಿದ್ದ ಮಿದು ಸ್ವೆಟರ್... ಎಲ್ಲಾ ಈ ಬೆಳದಿಂಗಳ ಬೆಳಕಿನಲ್ಲಿ ಹಿತವಾಗಿ ಬ್ಲಾಕ್ ಅಂಡ್ ವೈಟ್ ಚಿತ್ರಗಳಂತೆ ಕಾಣುತ್ತಿದ್ದವು. ನಾನು ನಮ್ಮೊಂದಿಗೇ ಓಡಿ ಬರುತ್ತಿದ್ದ ಚಂದ್ರನತ್ತ ದೃಷ್ಟಿ ಹೊರಳಿಸಿದೆ.</p> <p class="tsik_bodytext">ಈ ಚಂದಿರನೊಬ್ಬ ಅಂದಿನಿಂದ ಇಂದಿನವರೆಗೂ ನನ್ನೊಂದಿಗೇ ಬರುತ್ತಿದ್ದಾನೆ. ಎಲ್ಲರಿಗೂ ಚಂದಿರ ಸದಾ ಹಸನ್ಮುಖಿಯಂತೆ ಕಾಣುತ್ತಾನಂತೆ. ನನಗೆ ಮಾತ್ರ ಹಾಗಲ್ಲ. ಆತ ನನ್ನ ಪರಿಸ್ಥಿತಿಗಳ ಅಭಿವ್ಯಕ್ತಿಯಂತೆ ಕಾಣಿಸುತ್ತಾನೆ ನನಗೆ. ನಾನು ಬೇಸರದಲ್ಲಿದ್ದರೆ ಚಂದ್ರನ ಮುಖ ಬಾಡಿರುತ್ತದೆ, ನಾನು ಕೋಪದಲ್ಲಿದ್ದರೆ ಚಂದ್ರನ ಮುಖ ಗಂಟಿಕ್ಕಿಕೊಂಡಿರುತ್ತದೆ, ನಾನು ಆತಂಕದಲ್ಲಿದ್ದರೆ ಚಂದಿರನ ಮುಖವೂ ಚಿಂತೆಯಲ್ಲಿದ್ದಂತೆ ಗೋಚರಿಸುತ್ತದೆ, ನಾನು ನಗುತ್ತಿದ್ದರೆ, ಅಫ್ ಕೋರ್ಸ್, ಚಂದಿರನೂ ನಗುತ್ತಿರುತ್ತಾನೆ. ಏಕೆಂದರೆ ಚಂದಿರ ನನ್ನ ಗೆಳೆಯ. ಅಲ್ಲ, ಚಂದಿರ ಎಂದರೆ ನಾನೇ.</p> <p class="tsik_bodytext">ಮಿನುಗು ನನ್ನ ಪ್ರಪೋಸಲ್ಲನ್ನು ಒಪ್ಪಿಕೊಳ್ಳುವ ಮುನ್ನ ರೇಗಿಸುತ್ತಿದ್ದಳು. "ಹೇಳೀ ಕೇಳೀ ನೀನು ಶಶಾಂಕ, ಅದೆಷ್ಟು ನಕ್ಷತ್ರಗಳು ಪ್ರೀತಿಸ್ತಿದಾವೇನೋ? ನೀನು ಎಷ್ಟು ನಕ್ಷತ್ರಗಳಿಗೆ ಲೈನು ಹಾಕಿ ಕಾಯ್ತಿದೀಯೇನೋ? ನಿನ್ನಂಥವನನ್ನು ನಂಬುವುದು ಹೇಗೆ ಮಾರಾಯಾ...?" ಆದರೆ ಅವಳು ನನ್ನನ್ನೇ ನಂಬಿರುವುದು, 'ಗುಪ್ತ್ ಗುಪ್ತ್' ಆಗಿ ನನ್ನನ್ನೇ ಪ್ರೀತಿಸುತ್ತಿರುವುದು ಅವಳ ಚಹರೆಯಲ್ಲೇ ಗೊತ್ತಾಗುತ್ತಿತ್ತು. ಸುಮ್ಮನೆ ನಕ್ಕು ಹೇಳಿದ್ದೆ: "ಕಾಯ್ತಿರಬಹುದು... ಆದರೆ ನಿನ್ನಂತಹ 'ಮಿನುಗು'ತಾರೆಯನ್ನು ಕಂಡಮೇಲೆ ಈ ಶಶಾಂಕನ ಕಣ್ಣೇ ಮಂಕಾಗಿಹೋಗಿದೆ ದೇವೀ...! ನನ್ನ ಪೋಷಕ ಸೂರ್ಯನಿಗಿಂತ ಪ್ರಖರ ನಿನ್ನ ಪ್ರಭೆ... ಎಷ್ಟೋ ಬಾರಿ ಅನಿಸುತ್ತದೆ: ನನ್ನ ಬಾಹ್ಯ ರೂಪ ಮಾತ್ರ ಭೂಮಿಯನ್ನು ಸುತ್ತುತ್ತಿರುವುದು; ಮನಸು ಸದಾ ಈ ಮಿನುಗು ಅನ್ನೋ ನಕ್ಷತ್ರವನ್ನು ಸುತ್ತುತ್ತಿರುತ್ತೆ ಅಂತ. ಈ ಬಡ ಚಂದ್ರನ ಪ್ರೀತಿಯನ್ನು ಒಪ್ಪಿಕೋ ತಾರೇ..." ಮಿನುಗುವಿನ ಕಣ್ಣಲ್ಲಿ ಎಂಥಾ ನಕ್ಷತ್ರ ಮಿನುಗಿತ್ತು ಆ ಕ್ಷಣದಲ್ಲಿ...! </p> <p class="tsik_bodytext">ಬಹುಶಃ ಅದು ನನ್ನ ಬಾಳಿನ ಇದುವರೆಗಿನ ಅದ್ಭುತ ಘಳಿಗೆ ಮತ್ತು ದಿನ. ಆಗಸದ ಮುಖ ಕೆಂಪೇರಿದ್ದು ಸಂಜೆಯಾದ್ದರಿಂದಲೋ ಅಥವಾ ಈ ಕಿನ್ನರ ಜೀವಿಗಳ ಪ್ರೇಮ ಸಾಕಾರವಾಗುತ್ತಿರುವ ಪರಿಯನ್ನು ನೋಡುತ್ತಾ ನಾಚಿದ್ದರಿಂದಲೋ ಹೇಳಲಾಗುತ್ತಿರಲಿಲ್ಲ. ಸೂರ್ಯ ಸಹ 'ಇವಳು ಒಪ್ಪುತ್ತಾಳೋ ಇಲ್ಲವೋ ನೋಡಿಕೊಂಡೇ ಮುಳುಗೋಣ' ಎಂದು ನಿರ್ಧರಿಸಿದವನಂತೆ ನಿಧನಿಧಾನವಾಗಿ ಕೆಳಗೆ ಸರಿಯುತ್ತಿದ್ದ. ಮಿನುಗು ಒಪ್ಪಿದಳು. ಇಲ್ಲ, ಮಿನುಗು ಒಪ್ಪದಿರಲಿಕ್ಕೆ ಸಾಧ್ಯವೇ ಇರಲಿಲ್ಲ. 'ಇಂದು ಬಾನಲ್ಲಿ ಚಂದಿರ ಮೂಡುವ ಮೊದಲು ಮಿನುಗುವಿನ ಬಾಳಲ್ಲಿ ಈ ಶಶಾಂಕನ ಪ್ರೀತಿಗೆ ಅಧಿಕೃತ ಒಪ್ಪಿಗೆ ಸಿಕ್ಕಿರುತ್ತೆ' ಅಂತ ಬೆಳಗ್ಗೆ ಎದ್ದು ಟೆರೇಸಿಗೆ ಬಂದಾಗಲೇ ನಾನು ತೀರ್ಮಾನಿಸಿದ್ದೆ. ಎದುರಿನ ಸಿತಾಳೆ ಮರದ ಗೆಲ್ಲ ಮೇಲೆ ಕೂತಿದ್ದ ಹಕ್ಕಿಯೊಂದು ಹಾರಿ ಎಲೆಯ ಮೇಲೆಲ್ಲ ನಿಂತಿದ್ದ ಇಬ್ಬನಿ ಹನಿಗಳು ತಟತಟನೆ ಭಾಷ್ಪವಾಗಿ ನನ್ನ ತೀರ್ಮಾನಕ್ಕೆ ಅಸ್ತು ಅಸ್ತು ಎಂದಿದ್ದವು. ಹಾಗೆ ಬಿದ್ದ ಹನಿಗಳು- ಆವಿಯಾಗಿ ಹೋಗಿ ಹಿಮಗಟ್ಟಿ ಉದುರಿದ ಪಾವನ ಯಮುನೆಯ ನೀರೇ ಇರಬೇಕು -ಎಂದುಕೊಂಡೆ.</p> <p class="tsik_bodytext">ನನಗೇ ನಂಬಲಾಗುವುದಿಲ್ಲ; ನಾನೇನಾ ಈ ಮಿನುಗುವನ್ನು ಒಲಿಸಿಕೊಂಡದ್ದು? ಮಥುರೆಯನ್ನು ಜಯಿಸಿಕೊಂಡದ್ದು? ಬದುಕನ್ನು ಕಟ್ಟಿಕೊಂಡದ್ದು? ಈಗ ಹೀಗೆ ಈಕೆಯನ್ನು ಕರೆದುಕೊಂಡು ಹೋದರೆ 'ಇಲ್ಲ' ಎನ್ನಲಾಗದೆ ಒಪ್ಪಿಕೊಳ್ಳುವಂತೆ ಅಪ್ಪನನ್ನೂ ಮಾನಸಿಕವಾಗಿ ಮಾರ್ಪಡಿಸಿದ್ದು? ಊರು, ಬಂಧುಗಳು, ಸನ್ಮಿತ್ರರನ್ನೆಲ್ಲಾ ಎದುರು ಹಾಕಿಕೊಂಡಾದರೂ -ಇಲ್ಲ, ಅವರೆಲ್ಲ ಭಯ-ವಿಸ್ಮಯ-ಮಿಶ್ರಿತ ನಗೆಯೊಂದಿಗೆ ಮಹಾವಿಶ್ವಾಸಿಗಳಂತೆ ಮೆಲು ನಗೆಯಾಡುತ್ತಾ ಕೈಕುಲುಕುವಂತೆ ಮಾಡಿಕೊಂಡು- ಈಕೆಯನ್ನು ಮದುವೆಯಾಗುವೆನೆಂಬ ಧೈರ್ಯ ಒಡಗೂಡಿಸಿಕೊಂಡದ್ದು? ಅದೇ ಊರ ಜನ, ಬಂಧುಗಳು, ಮಿತ್ರರು ಎಲ್ಲರೂ 'ಶಶಾಂಕ ಹಕ್ಲ್ ಹತ್ತಿ ಹೋದ ತಗ... ಮುಗತ್ತು ಇನ್ನು ಅವನ್ ಕಥೆ!' ಎಂದು ಮಾತಾಡಿಕೊಳ್ಳುವುದು ಕಿವಿಗೆ ಬಿದ್ದಾಗ ಭುಗಿಲೆದ್ದಿದ್ದ ಈ ಛಲದ ಬೆಂಕಿ ಇನ್ನೂ ಉರಿಯುತ್ತಲೇ ಇರುವುದು... ಆಹ್! ಎಲ್ಲಡಗಿತ್ತು ಈ ಆತ್ಮವಿಶ್ವಾಸ ನನ್ನಲ್ಲಿ ಮುಂಚೆ? </p> <p class="tsik_bodytext">ಊರು ಬಿಟ್ಟು ಹೊರಟ ಆ ಕಾವಳದ ರಾತ್ರಿ... ಅಪ್ಪ ಬಸ್‌ಸ್ಟ್ಯಾಂಡಿನವರೆಗೆ ಬ್ಯಾಟರಿ ಹಿಡಿದು ಬಂದಿದ್ದ. "ಅಲ್ಲ ಪಾಪು, ಹೋಗ್ಲೇಬೇಕಾ?" ಎಷ್ಟು ಸಣ್ಣ ದನಿಯಲ್ಲಿ ಕೇಳಿದ್ದ! ಆ ದನಿಯ ತಗ್ಗಿನಲ್ಲಿ ಅದೆಷ್ಟು ಪಶ್ಚಾತ್ತಾಪವಿತ್ತು! 'ಇಲ್ಲ ಮಗನೇ, ಇನ್ನೊಂದು ಸಲ ಹಾಗೆಲ್ಲ ಮಾತಾಡೊಲ್ಲ... ನೀನು ಮನೆ ಬಿಟ್ಟು ಹೊರಡುವಷ್ಟು ಕಠಿಣ ತೀರ್ಮಾನ ತೆಗೆದುಕೊಳ್ತೀಯಾ ಅಂತ ಗೊತ್ತಿದ್ರೆ ಹಾಗೆ ಹೇಳ್ತಿರಲಿಲ್ಲ... ನೀನು ಇಷ್ಟೊಂದು ಗಂಭೀರವಾಗಿ ಪರಿಗಣಿಸ್ತೀಯಾ ಅಂದುಕೊಂಡಿರಲಿಲ್ಲ... ನೀನೀಗ ಹೋಗೋದಿಲ್ಲ ಅಂತಾದ್ರೆ ಬೇಕಾದ್ರೆ ತಪ್ಪಾಯ್ತು ಅಂತ ಕೇಳ್ತೀನಿ... ನನಗೂ ವಯಸ್...' ಹೌದು, ಅಪ್ಪ ಅದನ್ನೆಲ್ಲ ಹೇಳಬಯಸಿದ್ದ. ನನಗದು ಗೊತ್ತಾಗುತಿತ್ತು. ಆಗಾಗ ಬೆಳಗುತ್ತಿದ್ದ ಬ್ಯಾಟರಿಯ ಬೆಳಕಿನಲ್ಲಿ ಕಾಣುತ್ತಿದ್ದ ಅಪ್ಪನ ಮುಖ ಪೂರ್ತಿ- ಪೂರ್ತಿ ಕುಗ್ಗಿಹೋಗಿತ್ತು. ಅಪ್ಪನನ್ನು ಸಮೀಪಿಸಿ, ಅವನ ಕೈಮುಟ್ಟಿ ಹೇಳಿದ್ದೆ: "ಬೇಜಾರಾಗಡ... ನೀ ಹೇಳಿದೆ ಅಂತ ಅಲ್ಲ ನಾ ಹೋಗ್ತಾ ಇರೋದು... ನೀನಷ್ಟೇ ಅಲ್ಲ; ಇಡೀ ಊರೇ ಮಾತಾಡಿಕೊಳ್ತಾ ಇದ್ದು ಕದ್ದು ಮುಚ್ಚಿ ಒಳಗೊಳಗೇ ನಗ್ತಾ.. 'ತಾಯಿ ಒಂದು ಹೋದ್ಮೇಲೆ ವಿನಾಯಕಣ್ಣನ ಮನೆ ಮಾಣಿ ಉಂಡಾಡಿಯಾಗಿಹೋತು... ಅದು ಇರೋ ತನಕ ಹಿಡಿತದಲ್ಲಿದ್ದ ಅಂವ... ಈಗಂತು ಯಾರ ಕೈಗೂ ಸಿಗದಿಲ್ಲೆ...' ಅವ್ರಿಗೆಲ್ಲ ಒಂದು ಉತ್ತರ ಹೇಳೋದು ಬ್ಯಾಡದಾ ಅಪ್ಪಾ? ತೋರುಸ್ತಿ ಅಪ್ಪಾ ನಾ ಯಾರು ಅಂತ..." ಅಪ್ಪನ ಕೈ ತಣ್ಣಗಿತ್ತು.</p> <p class="tsik_bodytext">ಬೆಂಗಳೂರಿನ ಬಸ್ಸು ಹತ್ತಿದಾಗ ಏನಿತ್ತು ನನ್ನ ಕೈಯಲ್ಲಿ? ಮೂರು ವರ್ಷ ಟೆಕ್ಸ್‌ಟೈಲ್ ಡಿಪ್ಲೋಮಾ ಮಾಡಿದ್ದಕ್ಕೆ ಕುರುಹಾಗಿ ಒಂದಷ್ಟು ಸರ್ಟಿಫಿಕೇಟುಗಳು... ಕಿರಣನ ಅಂಗಡಿಯಲ್ಲಿ ಕೂತು ನ್ಯೂಸ್‌ಪೇಪರುಗಳನ್ನು ತಡಕಾಡಿ ಗೀಚಿಕೊಂಡು ಇಟ್ಟುಕೊಂಡಿದ್ದ ಒಂದಷ್ಟು ಜಾಹೀರಾತುಗಳು, ಕಂಪನಿಗಳ ವಿಳಾಸಗಳು... ಎರಡು ವರ್ಷದ ಹಿಂದೆ ಯಾವುದೋ ಕೆಲಸದ ಮೇಲೆ ಹೋಗಿ ಓಡಾಡಿಕೊಂಡು ದಿಗಿಲಿನ ಕಣ್ಣಲ್ಲಿ ನೋಡಿಕೊಂಡು ಬಂದಿದ್ದ ಬೃಹತ್ ಬೆಂಗಳೂರಿನ ಸೆಳೆತ... 'ಏನಕ್ಕಾದ್ರೂ ಬೇಕಾಗ್ತು ಇಟ್ಗ... ಹಂಗೆಲ್ಲ ತೀರಾ ಭಂಡತನ ಮಾಡ್ಲಾಗ' ಎಂದು ಅಪ್ಪ ಕೊನೆಯ ಘಳಿಗೆಯಲ್ಲಿ ಜೇಬಿಗೆ ತುರುಕಿದ್ದ ಸಾವಿರದಿನ್ನೂರು ರೂಪಾಯಿ ಎಣಿಸುವ ನೋಟುಗಳು... ಅಷ್ಟೇ, ಅಷ್ಟೇ ನನ್ನ ಬಳಿ ಇದ್ದದ್ದು.</p> <p class="tsik_bodytext">ಆದರೆ ಅವೆಲ್ಲಕ್ಕಿಂತ ಹೆಚ್ಚಾಗಿ ಇದ್ದದ್ದು ಛಲ! ತಲೆಯೊಳಗೆ ತುಂಬಿಕೊಂಡು ಕೊರೆಯುತ್ತಿದ್ದ -ಅಪ್ಪ ಬೆಳಿಗ್ಗೆ ಕಣದಲ್ಲಿ ಅಡಿಕೆ ಹರವುತ್ತಿದ್ದಾಗ ಹೇಳಿದ್ದ ಮಾತುಗಳು... "ಅಡಿಕೆ ಹರವಿಕ್ಕೆ, ಕೃಷ್ಣಾ ಬಸ್ಸಿಗೆ ಒಂಚೂರು ಸಾಗರಕ್ಕೆ ಹೋಗ್ಬರ್ತಿ ಅಪ್ಪಾ... ಕೆಲ್ಸಿದ್ದು" ಎಂದು ನಾನು ಅಲಕ್ಷ್ಯದಿಂದ ಹೇಳಿದ್ದೆ ತಡ, ಅಪ್ಪ ತಿರುಗಿಬಿದ್ದವನಂತೆ ಕೂಗಿದ್ದ: "ಸಾಕು! ಅದೆಂಥಕೆ ಸಾಗರಕ್ಕೆ ಹೋಗವು ಈಗ? ಏನು ಕೆಲ್ಸಿದ್ದು? ಅಲ್ಲಿ ಆ ಕಿರಣನ ಅಂಗಡೀಲಿ ಕುಂತ್ಗಂಡು ಕತೆ ಹೊಡಿಯಕ್ಕಾ? ಎದ್ರಿಗೆ ಕಾಲೇಜ್ ಹುಡ್ಗೀರ್ ಹೋದಕೂಡ್ಲೆ ಡೈಲಾಗ್ ಹೊಡ್ಕೋತ ನಿಗ್ಯಾಡಕ್ಕಾ? ಮತ್ತೆ ಹತ್ತು ಪ್ಯಾಕೆಟ್ ಗುಟ್ಕಾ ತಿನ್ನಕ್ಕಾ? ಊರೋರೆಲ್ಲ ನಿನ್ ಬಗ್ಗೆ ಏನೇನ್ ಮಾತಾಡಿಕೊಳ್ತ ಗೊತ್ತಿದ್ದಾ ನಿಂಗೆ? ನಿನ್ ಕಾಲದಲ್ಲಿ ನಂಗೂ ಮರ್ಯಾದಿ ಇಲ್ಲೆ. ಎಲ್ಲಿಗೆ ಹೋಪ್ದೂ ಬ್ಯಾಡ. ನಾನಂತೂ ಒಂದ್ರುಪಾಯ್ ಕೊಡದಿಲ್ಲೆ. ತ್ವಾಟಕ್ ಹೋಗಿ ಸ್ವಾಂಗೆ ಸಾಚಿಕ್ ಬಾ. ಒಂದು ರೌಂಡ್ ಬ್ಯಾಣಕ್ ಹೋಗ್ಬಾ. ಸ್ವಲ್ಪನಾದ್ರೂ ಜವಾಬ್ದಾರಿ ಇದ್ದನಾ ನಿಂಗೆ? ದಿನಾ ಪೆನ್ಸಿಲ್ಲು, ಬಣ್ಣ ಇಟ್ಗಂಡು ಏನೇನೋ ಚಿತ್ರ ಬಿಡಿಸ್ತಾ ಕೂತ್ರೆ ಆಗಲ್ಲೆ. ಹಿಂಗೇ ಮಳ್ ಹರಕೋತ ಮನೇಲಿದ್ರೆ ಹೆಣ್ಣು ಕೊಡ್ತ್ವಲ್ಲೆ ನಿಂಗೆ, ತಿಳ್ಕ!" ಅಪ್ಪ ಬಾಯಿಬಿಟ್ಟು ನನ್ನನ್ನು ಒಮ್ಮೆಯೂ ಹೀಗೆ ಬೈದವನಲ್ಲ. ನಾನು ಮನೆಯಲ್ಲಿರುವುದರ ಬಗ್ಗೆ ಅವನಿಗೆ ಅಂತಹ ಅಸಮಾಧಾನವೂ ಇರಲಿಲ್ಲ. ಅಮ್ಮ ತೀರಿಕೊಂಡಮೇಲೆ ಒಂಟಿಯಾಗಿಹೋದೆನೇನೋ ಎಂಬಂತೆ ಚಡಪಡಿಸುತ್ತಿದ್ದ ಅಪ್ಪನಿಗೆ ಮಗ ಜೊತೆಯಲ್ಲಿರುವುದು ಹಿತವಾಗಿಯೇ ಇತ್ತು. ಅದಿಲ್ಲವೆಂದರೆ ಮನೆಯಲ್ಲಿ ತಾನೊಬ್ಬನೇ... ಏನಂತ ಮಾಡುವುದು?</p> <p class="tsik_bodytext">ಆದರೆ ಅಪ್ಪ ಇವತ್ತು ಹೀಗೆ ಬೆಳಬೆಳಗ್ಗೆ ಸಿಟ್ಟಿಗೆದ್ದವನಂತೆ ಕೂಗಿಕೊಂಡದ್ದು -ಅದೂ ಕಣದಲ್ಲಿ, ಅಕ್ಕಪಕ್ಕದ ಮನೆಯವರಿಗೆಲ್ಲ ಕೇಳುವಂತೆ -ನನಗೆ ಕೆರಳಿಹೋಗಿತ್ತು. "ನೀನೇನು ನಂಗೆ ದುಡ್ಡು ಕೊಡೋದು ಬ್ಯಾಡ. ನಾ ಸಾಗರಕ್ಕೆ ಹೋಗವು ಅಂದ್ಮೇಲೆ ಹೋಗವು. ಹೆಂಗಾದ್ರೂ ಹೋಗ್ಬರ್ತಿ" ಅಂತಂದು, ಅರ್ಧ ಹರವಿದ್ದ ಅಡಿಕೆ ಚಾಪೆಯನ್ನು ಹಾಗೆಯೇ ಬಿಟ್ಟು ಒಳಬಂದು, ಪ್ಯಾಂಟು ಹಾಕಿ ಹೊರಟಿದ್ದೆ. ಜೇಬಲ್ಲಿ ನೂರಿನ್ನೂರು ರೂಪಾಯಿಯಂತೂ ಇತ್ತು. ಸಾಗರಕ್ಕೆ ಬಂದು, ಕಿರಣನ ಅಂಗಡಿಯಲ್ಲಿ ಚಡಪಡಿಸುತ್ತಾ ಕೂತಿದ್ದಾಗ ಕಿರಣ "ಏಯ್ ನಿಂದು ಡಿಪ್ಲೋಮಾ ಆಯ್ದಲಾ ಮಾರಾಯಾ... ನನ್ನ ಹಾಗಲ್ಲ. ಬೆಂಗಳೂರಲ್ಲಿ ಒಂದಲ್ಲಾ ಒಂದು ಕೆಲಸ ಸಿಗ್ತು. ಸುಮ್ನೆ ಊರಲ್ಲಿದ್ದು ಹಿಂಗೆ ದಿನಾ ಒಬ್ಬೊಬ್ರ ಹತ್ರ ಏನು ಹೇಳಿಸ್ಕ್ಯಳ್ತೆ? ಹೋಗ್ಬುಡು. ಏನಾದ್ರೂ ಮಾಡ್ಲಕ್ಕು. ಅಲ್ಲಿ ನಿನ್ನನ್ನ ಯಾರೂ ಕೇಳೋರು ಇರೋದಿಲ್ಲೆ. ಜನ ಒಂದಷ್ಟು ದಿನ ಆಡಿಕೊಳ್ತ. ಆಮೇಲೆ ನಿಂಗೂ 'ಜೆಸ್' ತಿರುಗಿ ಏನಾದ್ರೂ ದುಡ್ಡು-ಗಿಡ್ಡು ಮಾಡಿಕೊಂಡು ಬಂದ್ರೆ ಅದೇ ಜನ ನಿನ್ನನ್ನ ಹೆಂಗೆ ಮಾತಾಡಿಸ್ತ ನೋಡ್ಲಕ್ಕಡ" ಎಂದಿದ್ದ. ಅದೇನು ನಾನೂ ಯೋಚಿಸದ ಪರಿಹಾರವಲ್ಲ. ಕಿರಣ ನನ್ನ ಬಳಿ ಹೀಗೆ ಹೇಳುತ್ತಿದ್ದುದೂ ಮೊದಲನೇ ಸಲವಲ್ಲ. ಆದರೆ ಆವತ್ತು ನಿರ್ಧರಿಸಿಬಿಟ್ಟೆ. 'ಮನೆಯಲ್ಲಿದ್ದರೆ ಹೆಣ್ಣು ಸಹ ಸಿಕ್ಕುವುದಿಲ್ಲ!' -ಆಹ್, ಅದು ಒತ್ತಟ್ಟಿಗಿರಲಿ, ಇನ್ನು ಊರಲ್ಲಿದ್ದರೆ ನಾನು ಕೊಳೆತೇಹೋಗುತ್ತೇನೆ ಎಂಬುದಂತೂ ವಿಧಿತವಿತ್ತು. ಕಿರಣನಿಂದ ಒಂದು ಸಾವಿರ ರೂಪಾಯಿ ತೆಗೆದುಕೊಂಡೆ. ವಾಪಸು ಮನೆಗೆ ಬರುವಷ್ಟರಲ್ಲಿ ನನ್ನ ನಿರ್ಧಾರ ದೃಢವಾಗಿತ್ತು. ಬಟ್ಟೆಯನ್ನೆಲ್ಲಾ ಬ್ಯಾಗಿಗೆ ತುರುಕಿಕೊಂಡು ಅಪ್ಪನ ಬಳಿ ನನ್ನ ತೀರ್ಮಾನ ಹೇಳಿದಾಗ ಅಪ್ಪ ಇದ್ದಕ್ಕಿದ್ದಂತೇ ಕುಸಿದುಹೋದ. ಏನೂ ಹೇಳಲಿಲ್ಲ. </p> <p class="tsik_bodytext">ಅವತ್ತೂ ಚಂದ್ರ ಇದ್ದ ನನ್ನ ಜೊತೆ: ಬಸ್ಸ ಕಿಟಕಿಯಾಚೆ, ನನ್ನೊಂದಿಗೇ ಬರುತ್ತಾ. ಮುಗುಳ್ನಗುತ್ತಾ. ಆತ್ಮವಿಶ್ವಾಸ ತುಂಬುತ್ತಾ. ಹಾಗೆ ಆ ಚಂದ್ರನೊಂದಿಗೆ ಶುರುವಾದ ನನ್ನ ಪಯಣ ಆಹಾ, ಇದೆಲ್ಲಿಗೆ ತಂದು ಮುಟ್ಟಿಸಿತು ನನ್ನ? ಇಲ್ಲ, ಮುಟ್ಟಿಸಿಲ್ಲ, ಮುಂದುವರೆಯುತ್ತಲೇ ಇದೆ... ನಿಲ್ಲಲಾರದು ಚಂದಿರನಿರುವವರೆಗೆ.</p> <p class="tsik_bodytext">ಮಿನುಗು ಸಣ್ಣಗೆ ಮಿಸುಕಿದಳು. </p> <p class="tsik_bodytext">"ನಿದ್ರೆ ಬಂತಾ ಮಿನು?" -ಕೇಳಿದೆ. </p> <p class="tsik_bodytext">"ಹುಂ" -ನನ್ನ ಮೈಗೊತ್ತಿ.</p> <p class="tsik_bodytext">ಒಂದು ತಿಂಗಳು ಹಿಡಿಯಿತು ಕೆಲಸವೊಂದು ಸಿಗಲಿಕ್ಕೆ: "ಟೆಕ್ಸ್‌ಟೈಲಲ್ಲಿ ಬರೀ ಡಿಪ್ಲೋಮಾ ಮಾಡಿಕೊಂಡ್ರೆ ಸಾಕಾಗಲ್ಲಪ್ಪಾ... ವಿ ಆರ್ ಲುಕಿಂಗ್ ಫಾರ್ ಗ್ರಾಜುಯೇಟ್ಸ್!" "ಯು ಆರ್ ವೆರಿ ಪೂರ್ ಇನ್ ಇಂಗ್ಲಿಷ್" "ಕಂಪ್ಯೂಟರ್ ಲಿಟರಸಿ ಇಸ್ ಮಸ್ಟ್" -ಎಲ್ಲಾ ಮುಗಿದು, ಕೊನೆಗೆ ಯಾವುದೋ ಕಂಪನಿಯಲ್ಲಿ ಸಿಕ್ಕಿದ ಎರಡೂವರೆ ಸಾವಿರ ರೂಪಾಯಿಯ ಕೆಲಸ. ನಾನು ನಿರಾಳ ನಿಟ್ಟುಸಿರು ಬಿಟ್ಟಿದ್ದೆ. ನನಗೆ ಸಹಾಯಕವಾದದ್ದು ಅದೇ ನನ್ನ ಚಿತ್ರ ಬಿಡಿಸುವ ಕಲೆ. ಡಿಸೈನಿಂಗ್ ವಿಭಾಗದಲ್ಲಿ ನನಗೆ ಕೆಲಸ. ಚಂದಿರನಿಗೆ ಥ್ಯಾಂಕ್ಸ್ ಹೇಳಿದ್ದೆ. ಕಲಿತೆ, ನಿಧಾನವಾಗಿ; ಕಲಿಸಿತು ಬೆಂಗಳೂರು, ಬದುಕು, ಛಲ: ಇಂಗ್ಲೀಷು, ಕಂಪ್ಯೂಟರು, ಡಿಸೈನಿಂಗು, ಎಲ್ಲ. ಅದೊಂದು ದಿನ 'ನಮ್ಮ ಕಂಪನಿಯ ಮುಖ್ಯ ಕಚೇರಿಯಿರುವ ಮಥುರೆಗೆ ನೀನು ಹೋಗುತ್ತೀಯಾ?' ಎಂದು ಎಂ.ಡಿ. ಕೇಳಿದಾಗ ಒಂದೇ ಕ್ಷಣದಲ್ಲಿ ಒಪ್ಪಿಕೊಂಡಿದ್ದೆ. ಬದುಕ ಪಯಣಕ್ಕೆ ಸಿದ್ಧಗೊಂಡು, ಮೇಣದಂತೆ ಅಂಟಿಕೊಂಡಿದ್ದ ಊರಿನ ಜಾಡ್ಯವನ್ನೇ ಬಿಡಿಸಿಕೊಂಡು ಹೊರಟಿದ್ದವನಿಗೆ ಬೆಂಗಳೂರಾದರೇನು, ಮಥುರೆಯಾದರೇನು? ಮನೆಗೆ ಫೋನ್ ಮಾಡಿ ಹೇಳಿದೆ. ಅಪ್ಪ ಮನವಿಯೇನೋ ಎಂಬಂತೆ ಹೇಳಿದ: "ಹೋಗ್ಲಕ್ಕಡ... ಒಂದ್ಸಲ ಮನೆಗೆ ಬಂದು ಹೋಗಾ ಅಪ್ಪೀ.. ನೋಡದೇ ಬ್ಯಾಸರ ಆಗಿಹೋಯ್ದು..." ತಿರಸ್ಕರಿಸಲಾಗಲಿಲ್ಲ. ಒಂದು ವಾರ ಸಮಯ ಕೇಳಿಕೊಂಡು ಊರಿಗೆ ಬಂದೆ.</p> <p class="tsik_bodytext">ಊರು ಹಾಗೆಯೇ ಇತ್ತು. ಆದರೆ ಜನ ಬದಲಾಗಿಹೋಗಿದ್ದರು. ಕನಿಷ್ಟ ನನ್ನ ಪಾಲಿಗೆ! "ಅದೆಲ್ಲೋ ಫಾರಿನ್ನಿಗೆ ಹೋಗ್ತಾ ಇದ್ಯಡ?" -ಕೇಳಿಕೊಂಡು ಬಂದ ವಿಶ್ವೇಶ್ವರಣ್ಣ. 'ಫಾರಿನ್ನಿಗಲ್ಲ ಮಾರಾಯಾ.. ಭಾರತಾನೇ! ಮಥುರೆ. ಯು.ಪಿ.' -ನಾನು ಸರಿ ಮಾಡಲು ಹೋಗಲಿಲ್ಲ. ನಕ್ಕೆ ಅಷ್ಟೇ. "ಬೆಂಗ್ಳೂರಗೆ ಸೈಟ್ ತಗಂಡ್ಯಡ, ಹೌದೇ?" -ವಿಚಾರಿಸುವ ಕೋಮಲಕ್ಕ. 'ಇನ್ನೂ ತಗಳಲ್ಲೆ ಮಾರಾಯ್ತಿ... ಹಾಗಂತ ತಗಳದೇನೂ ದೂರ ಇಲ್ಲೆ!' -ನಾನು ಹೇಳಲು ಹೋಗಲಿಲ್ಲ. ನಕ್ಕೆ ಅಷ್ಟೇ. "ಮಾಣಿಗೆ ಮದುವೆ ಮಾಡ್ತ್ರನಾ ಈ ವರ್ಷ? ಅಲ್ಲ, ಎನ್ನ ಭಾವನ ಮಗಳೂ ಓದಿಕೊಂಡಿದ್ದು. ಬೆಂಗ್ಳೂರಗ್ ಇಪ್ಪೋರೇ ಬೇಕು ಹೇಳಿ ಹಟ ಅದ್ರುದ್ದು..." -ನನಗೆ ಕೇಳಿಸುವಂತೆ ಸುಬ್ಬಣ್ಣನ ಮಾತು ಅಪ್ಪನ ಬಳಿ. ಅಪ್ಪ ನನ್ನ ಕಡೆ ನೋಡಿದ್ದು ಗೊತ್ತಾದರೂ ನಾನು ಮಾತಾಡಲಿಲ್ಲ. ನಕ್ಕೆ ಅಷ್ಟೇ.</p> <p class="tsik_bodytext">ಅಪ್ಪ ಈಗ ಗಟ್ಟಿ ಕೂತಿದ್ದ ತನ್ನ ಕುರ್ಚಿಯ ಮೇಲೆ. ಮಗ... ತನ್ನ ಮಗ... ಏನು ಮಾತಾಡುವುದು ಅವನ ಬಳಿ? ಈಗವನು ಪೂರ್ತಿ ಗಂಭೀರನಾಗಿದ್ದಾನೆ. ಅವನಿಗೆ ಬೈಯುವಂತಿಲ್ಲ. ಏನಾದರೂ ಕೆಲಸ ಹೇಳಲಿಕ್ಕೂ ಹಿಂಜರಿಕೆ. ಯಾವುದಾದರೂ ವಿಷಯ ಪ್ರಸ್ತಾಪಿಸಲೂ ಭಯ. ಆದರೆ ಅಪ್ಪನಿಗೂ ಅದೇ ಬೇಕಿತ್ತು ಎನಿಸುತ್ತೆ. ಅವನು ನನ್ನ ಅಭ್ಯುದಯವನ್ನು ಮನಸಾರೆ ಸವಿಯುತ್ತಿದ್ದಂತೆನಿಸಿತು. ಊರಲ್ಲಿ, ನೆಂಟರಲ್ಲಿ ಇದಾಗಲೇ ಮಗನಿಂದ ಮರುಪ್ರಾಪ್ತವಾಗಿದ್ದ ಗೌರವ ಅವನಿಗೆ ಚೂರು ಗರ್ವವನ್ನೂ ತಂದುಕೊಟ್ಟಿತ್ತಿರಬೇಕು. ಅಪ್ಪ ಒಂದು ವಿಚಿತ್ರ ಸಂಭ್ರಮದಲ್ಲಿದ್ದ. ಸಂಭ್ರಾಂತಿಯಲ್ಲಿದ್ದ. ಮಗನೊಂದಿಗೆ ಎಂದೂ ಹೆಚ್ಚು ಮಾತನಾಡದ ಅವನು ಈಗ ಮಗ ಏನು ಹೇಳಿದರೂ 'ಹಾಂ ಸರಿ ಸರಿ' ಅಂತ ಒಪ್ಪಿಕೊಂಡುಬಿಡುತ್ತಾನೇನೋ ಎಂಬಂತೆ ಕಾಣುತ್ತಿದ್ದ. ಮಗ, ಬಹುಶಃ ಈಗ ಅವನಿಗೆ, ದೊಡ್ಡವನಾದಂತೆ ಕಾಣುತ್ತಿದ್ದ. ಅಪ್ಪ ನನ್ನನ್ನು ಅದು ಎಷ್ಟರ ಮಟ್ಟಿಗೆ ಒಪ್ಪಿಕೊಂಡುಬಿಟ್ಟಿದ್ದನೆಂದರೆ, ನಾನು ಹಿತ್ತಿಲಿಗೆ ಹೋಗಿ ಸಿಗರೇಟ್ ಸೇದುತ್ತಿದ್ದಾಗ ಅಲ್ಲಿಗೆ ಬಂದು, "ಅದೆಂತಕೆ ಇಲ್ಲಿಗ್ ಬರ್ತೆ ಸಿಗರೇಟ್ ಸೇದಕ್ಕೆ? ಮನೇಲೇ ಸೇದು" ಎಂದಿದ್ದ. ಇಷ್ಟು ದೊಡ್ಡವನಾಗಿರುವ ಮಗನಿಗೆ ಬೈಯಬಾರದು ಎಂದುಕೊಂಡನೇ? ಅಥವಾ ತಾನೂ ಸಿಗರೇಟು ಸೇದುವವನಾಗಿ ಮಗನಿಗೆ ಬೈದರೆ ಅವನು ತಿರುಗಿ ಹೇಳಿಯಾನು ಎಂದು ಹಿಂಜರಿದನೇ? ಗೊತ್ತಿಲ್ಲ.</p> <p class="tsik_bodytext">ಚಂದಿರ ಕೈಬಿಡಲಿಲ್ಲ. ನನ್ನ ಜೊತೆ ಮಥುರೆಗೂ ಬಂದ: ರೈಲಿನ ಕಿಟಕಿಯಲ್ಲಿ. ಕೃಷ್ಣ ಹುಟ್ಟಿದ ಭೂಮಿ ಮಥುರೆ. ಕೃಷ್ಣ ಆಡಿ ನಲಿದ ಧರೆ ಮಥುರೆ. ಕೃಷ್ಣ ಈಜಾಡಿದ ಯಮುನೆಯ ತಟದಲ್ಲಿನ ಊರು ಮಥುರೆ. ಕೃಷ್ಣ ಬೆಣ್ಣೆ ಕದ್ದು ಜಾರಿ ಬಿದ್ದು ಮೊಣಕಾಲೂದಿಸಿಕೊಂಡಾಗಿನ ಸ್ಪರ್ಶದ ನೆನಪಿರುವ ನೆಲ ಮಥುರೆ. ಕೃಷ್ಣನ ಕೊಳಲ ದನಿಯನ್ನು ಇನ್ನೂ ಪ್ರತಿಧ್ವನಿಸುವ ಬೃಂದಾವನೀ ಮಥುರೆ. ಮಥುರೆ ನನ್ನನ್ನು ಮೊದಲ ನೋಟದಲ್ಲೇ ಸೆಳೆದುಬಿಟ್ಟಿತು. ಕೆಲಸ, ಹವೆ ಒಗ್ಗಿಕೊಂಡಿತು.</p> <p class="tsik_bodytext">ಒಂದು ರವಿವಾರದ ಶ್ಯಾಮಲ ಸಂಜೆ. ಯಮುನೆಯ ತಟದಲ್ಲಿ, ಬೆಂಚೊಂದರಲ್ಲಿ ಕೂತು, ನನ್ನಿಷ್ಟದ ಹವ್ಯಾಸವಾದ ಚಿತ್ರ ಬಿಡಿಸುತ್ತಿದ್ದೆ. ಕಿಲ್ಲ ನಗುವಿನೊಂದಿಗೆ ಹುಡುಗಿಯರ ಗುಂಪೊಂದು ಬಂತು. ತಲೆಯೆತ್ತಿ ನೋಡಿದೆ. ಮಧ್ಯದಲ್ಲೊಂದು ಮಿನುಗುತಾರೆ. ತಟ್ಟನೆ ನನ್ನತ್ತ ನೋಡಿದ ತಾರೆಯ ಕಣ್ಣುಗಳು. ಮಥುರೆಯಂತೆಯೇ ಸೆಳೆವ ನೋಟ. ಬಾಯ್ಕಳೆದು ನೋಡುತ್ತಿದ್ದ ನನ್ನನ್ನು ದಾಟುವಾಗ ತೊಡೆಯ ಮೇಲಿದ್ದ ಅರ್ಧ ಬಿಡಿಸಿದ್ದ ಚಿತ್ರದೆಡೆಗೆ ಬಿದ್ದ ದೃಷ್ಟಿ. ಸೂರೆ ಹೋದ ಮನಸು. ಪೂರ್ತಿಯಾಗದ ಆ ಚಿತ್ರ; ನಿದ್ರೆಯಿಲ್ಲದ ಆ ರಾತ್ರಿ ಕ್ಯಾನ್ವಾಸಿನಲ್ಲಿ ಮೂಡಿ ನಿಂತ ಅದೇ ಹುಡುಗಿಯ ಚಿತ್ರ. ಚಿತ್ರದ ಕೆಳಗೆ 'ಮಿನುಗುತಾರೆ' ಅಂತ ಬರೆದು, ದಿನಾಂಕ, ಸಹಿ ಹಾಕಿ ಎದುರಿಗಿಟ್ಟುಕೊಂಡು ಅದನ್ನೇ ನೋಡುತ್ತಾ ಮಲಗಿದೆ.</p> <p class="tsik_bodytext">ಮರುವಾರ ಸಂಜೆ ಆ ಚಿತ್ರ ಹಿಡಿದು ಯಮುನೆಯ ತಟದ ಅದೇ ಬೆಂಚಿನಲ್ಲಿ ಕೂತಿದ್ದೆ. ನನ್ನ ಎಣಿಕೆ ಸುಳ್ಳಾಗಲಿಲ್ಲ: ಮಿನುಗು ಬಂದಳು. ತನ್ನೊಬ್ಬಳೇ ಗೆಳತಿಯೊಂದಿಗೆ, ನನ್ನೆಡೆಗೆ ಕಳ್ಳನೋಟ ಬೀರುತ್ತಾ. ಆಕೆ ಹಾಗೆ ನಡೆದು ಬರುತ್ತಿದ್ದರೆ, ಸಖಿಯೊಂದಿಗೆ ಕೃಷ್ಣನೆಡೆಗೆ ನಡೆದು ಬರುತ್ತಿರುವ ರಾಧೆಯಂತೆ ಕಾಣುತ್ತಿದ್ದಳು. </p> <p class="tsik_bodytext">ಮಿನುಗು ನನಗಾಗಿಯೇ ಬಂದಿದ್ದಳು. ನನ್ನ ತೊಡೆಯ ಮೇಲಿದ್ದ ತನ್ನದೇ ಚಿತ್ರ ನೋಡಿದಳು. ತಡೆದು ನಿಂತಳು. ನಾನೂ ಎದ್ದು ನಿಂತೆ. "ದಿಸಿಸ್ ಫಾರ್ ಯೂ, ಇಫ್ ಯು ಡೋಂಟ್ ಮೈಂಡ್..." ಚಿತ್ರವನ್ನು ಆಕೆಯತ್ತ ಚಾಚಿದೆ, ನಡುಗುವ ಕೈಯಿಂದ. ಮಿನುಗು ಅದನ್ನು ತೆಗೆದುಕೊಂಡಳು. "ಏನಿದು ಕೆಳಗಡೆ ಬರೆದಿರುವುದು?" ಓದಲು ಬಾರದ ಕನ್ನಡ ಅಕ್ಷರಗಳನ್ನು ಬೆರಳಲ್ಲಿ ಸವರುತ್ತಾ ಕೇಳಿದಳು, ಇಂಗ್ಲೀಷಿನಲ್ಲಿ. "ಮಿನುಗುತಾರೆ ಅಂತ ಬರೆದಿದ್ದೇನೆ. ಅಂದ್ರೆ ಬ್ಲಿಂಕಿಂಗ್ ಸ್ಟಾರ್. ನಿಮ್ಮನ್ನು ನಾನು ಮೊದಲ ಬಾರಿ ನೋಡಿದಾಗ ನೀವು ನಂಗೆ ಗೋಚರಿಸಿದ್ದೇ ಹಾಗೆ. ನಿಮ್ಮನ್ನ ಮಿನುಗು ಅಂತ ಕರೆದರೆ ಬೇಜಾರಿಲ್ವಲ್ಲ?" ಕಣ್ಣನ್ನೇ ನೋಡುತ್ತಾ ಕೇಳಿದೆ. "ಹಹ್ಹ..! ಚೆನ್ನಾಗಿದೆ. ಇಷ್ಟವಾಯ್ತು. ನನಗೆ ಚಿತ್ರಕಲೆ ಅಂದ್ರೆ ತುಂಬಾ ಇಷ್ಟ. ನೀವೊಬ್ಬ ಒಳ್ಳೆಯ ಆರ್ಟಿಸ್ಟ್" -ಹೊಳೆಯುವ ಕಂಗಳಲ್ಲಿ ತುಂಬಿದ್ದ ಹೊಗಳಿಕೆ. "ಥ್ಯಾಂಕ್ಸ್" -ಕಾರ್ಡ್ ಕೊಟ್ಟೆ. </p> <p class="tsik_bodytext">ನಂತರದ ರವಿವಾರದ ಸಂಜೆ ಆ ಬೆಂಚು ನಮ್ಮಿಬ್ಬರನ್ನೂ ಅಕ್ಕಪಕ್ಕದಲ್ಲಿ ಕೂರಿಸಿಕೊಂಡಿತ್ತು. ಮಿನುಗು ನನ್ನನ್ನು ತಮ್ಮ ಮನೆಗೆ ಕರೆದೊಯ್ದಳು. ತಂದೆ- ತಾಯಿಯರಿಗೆ ಪರಿಚಯಿಸಿದಳು. ತನ್ನ ಕೋಣೆಗೆ ಕರೆದೊಯ್ದು ತಾನು ಮಾಡಿದ್ದ ಪೇಂಟಿಂಗ್‌ಗಳನ್ನು ತೋರಿಸಿದಳು. ಅವಳ ತಂದೆ ಕಾನ್ಪುರದ ದೊಡ್ಡ ಚಪ್ಪಲಿ ಕಾರ್ಖಾನೆಯಲ್ಲಿ ಮ್ಯಾನೇಜರ್ ಆಗಿದ್ದರು. ಅಮ್ಮ ಮನೆಯಲ್ಲಿ. ಮಿನುಗು ಹುಟ್ಟಿ ಬೆಳೆದದ್ದೆಲ್ಲಾ ಮಥುರೆಯಲ್ಲಿ. ಆರ್ಟ್ ಸ್ಕೂಲ್ ಒಂದರಲ್ಲಿ ಕಲಿಯುತ್ತಿದ್ದಳು. ನಮ್ಮ ಸ್ನೇಹಕ್ಕೆ ಅವಳ ಮನೆಯಲಿ ಯಾವ ಅಡ್ಡಿಯೂ ಬರಲಿಲ್ಲ. ಅದು ಸ್ನೇಹವಷ್ಟೇ ಅಲ್ಲ ಎಂಬುದು ತಿಳಿದೂ, ಮಿನುಗುವಿನ ಅಮ್ಮ ನಾನು ಹೋದಾಗಲೆಲ್ಲ ಚೆನ್ನಾಗಿ ಉಪಚರಿಸುತ್ತಿದ್ದರು.</p> <p class="tsik_bodytext">ನನ್ನ ಕಂಪನಿಯ ವತಿಯಿಂದ ಒಮ್ಮೆ ಬ್ಯಾಂಕಾಕಿಗೆ ಹೋಗಬೇಕಾಗಿ ಬಂತು. ಒಂದು ವಾರದ ಟ್ರಿಪ್. ವಾಪಸು ಬಂದವನೇ ಊರಿಗೆ ಹೋದೆ. ಅಪ್ಪನಿಗೆಂದು ತಂದಿದ್ದ ಕ್ವಾರ್ಟ್ಸ್ ವಾಚು ಕೊಟ್ಟೆ. ಜತೆಗೇ, ಹಿಂಜರಿಯುತ್ತಲೇ, ಎರಡು ವಿದೇಶಿ ಸಿಗರೇಟ್ ಪ್ಯಾಕು, ಒಂದು 'ಥಾಯಿ ವೈನ್' ಬಾಟಲು ಕೊಟ್ಟೆ. ಅಪ್ಪ ಏನೆಂದರೆ ಏನೂ ಹೇಳಲಿಲ್ಲ. ಅರೆಕ್ಷಣ ನನ್ನನ್ನೇ ನೋಡಿ, ಆ ಬಾಟಲು, ಪ್ಯಾಕುಗಳನ್ನು ಒಳಗೆ ತೆಗೆದುಕೊಂಡು ಹೋದ. ನನಗೆ ಆ ನೋಟದಲ್ಲಿದ್ದ ಭಾವವನ್ನು ಗ್ರಹಿಸಲಾಗಲಿಲ್ಲ. ಮರುದಿನ ಅಟ್ಟದ ಮೆಟ್ಟಿಲ ಬಳಿ ಖಾಲಿ ಬಾಟಲಿ ಇದ್ದುದು ನೋಡಿ ರಾತ್ರಿ ತನ್ನ ಕೋಣೆಯಲ್ಲಿ ಕೂತು ಕುಡಿದಿರಬಹುದು ಎಂದುಕೊಂಡೆ. ಆಮೇಲೂ ಅಪ್ಪ ಆ ವಿಷಯವಾಗಿ ಒಂದೇ ಒಂದು ಮಾತು ಸಹ ಎತ್ತಲಿಲ್ಲ, ಬೇರೆ ಏನೇನೋ ಮಾತಾಡಿದ: ನನ್ನ ದುಗುಡವನ್ನು ಕಮ್ಮಿ ಮಾಡುವಂತೆ.</p> <p class="tsik_bodytext">ಮೊದಲೆಲ್ಲಾ ನಾನು-ಅಪ್ಪ ಅಷ್ಟೆಲ್ಲಾ ಮಾತೇ ಆಡಿಕೊಳ್ಳುತ್ತಿರಲಿಲ್ಲ. ಆದರೆ ನಾನು ಹೊರ ಹೊರಟಮೇಲೆ, ನನ್ನ ಕಾಲ ಮೇಲೆ ನಿಂತಮೇಲೆ, ನನಗೂ ನನ್ನದೇ ಆದ 'ಐಡೆಂಟಿಟಿ'ಯೊಂದು ಸಿಕ್ಕಮೇಲೆ, ಅಪ್ಪನಿಗೆ ಆಗಾಗ ಫೋನ್ ಮಾಡುವುದು, ಅವನ ಹುಟ್ಟಿದ ದಿನ, ಫಾದರ್ಸ್ ಡೇ, ಇತ್ಯಾದಿ ದಿನಗಳಂದು ಶುಭಾಶಯ ಹೇಳುವುದು -ಹೀಗೆ ನನಗೂ ಅಪ್ಪನಿಗೂ ನಡುವೆ ಈಗ ಒಂದು ಬೇರೆಯದೇ ತೆರನಾದ ಸಂಬಂಧ ಸೃಷ್ಟಿಯಾಗಿಬಿಟ್ಟಿತ್ತು.</p> <p class="tsik_bodytext">ಬದುಕು ನನ್ನನ್ನು ಎಲ್ಲೆಲ್ಲಿಗೋ ಕಳುಹಿಸಿತು, ಏನೇನನ್ನೋ ಕಲಿಸಿತು. ನನ್ನನ್ನು ಬದಲಿಸಿತು. ಆದರೆ ಅಪ್ಪ ಹೇಗೆ ಬದಲಾದ? ಈ ಕಾಲಕ್ಕೆ ಹೊಂದಿಕೊಂಡ? ಅವನನ್ನು ನಾನು ಬದಲಾಯಿಸಿದೆನೇ? ಎಷ್ಟೆಲ್ಲ ಪಯಣ ಮಾಡಿದೆ ನಾನು... ಆದರೆ ಅಪ್ಪ ಅಲ್ಲೇ ಇದ್ದುಕೊಂಡು ಎಲ್ಲೆಲ್ಲಿಗೋ ಹೋದ: ಚಂದಿರನಂತೆ. ನನ್ನೊಂದಿಗೇ ಬಂದ. ಹಿಂದುಳಿಯಲಿಲ್ಲ. ಕಾಲ-ದೇಶಗಳ ಬಗ್ಗೆ ಚಕಾರವೆತ್ತಲಿಲ್ಲ. ಇದು ಅಪ್ಪನ ಮೇಲಿನ ನನ್ನ ಪ್ರಭಾವವಾ? ಅಥವಾ ಅಪ್ಪನ ಬಯಕೆಯೇ ನಾನು ಹೀಗಾಗಬೇಕು ಎಂಬುದಾಗಿತ್ತಾ? </p> <p class="tsik_bodytext">ಬಸ್ಸು ಡಾಬಾವೊಂದರ ಬಳಿ ನಿಂತಿತು. ಮಿನುಗುವಿಗೂ ಎಚ್ಚರವಾಯಿತು. "ಕೆಳಗೆ ಹೋಗಬೇಕಾ?" -ಕೇಳಿದೆ. ಇಲ್ಲವೆಂದಳು. "ಏನಾದ್ರೂ ತರಬೇಕಾ?" -ಕೇಳಿದೆ. ಬೇಡವೆಂದಳು. ನಾನೊಬ್ಬನೇ ಕೆಳಗಿಳಿದು ಹೋದೆ.</p> <p class="tsik_bodytext">ರಸ್ತೆ ದಾಟಿ ಹೋಗಿ ನಿಂತು, ದಿಗಂತದ ಕತ್ತಲೆಯಲ್ಲಿ ತೂಕಡಿಸುತ್ತಿದ್ದ ಬಿಳಿ ಬಿಳೀ ನಕ್ಷತ್ರಗಳನ್ನು ನೋಡುತ್ತಾ, ಉಚ್ಚೆ ಹೊಯ್ದೆ. ನಿರಾಳವಾದಂತೆನಿಸಿತು. ಪ್ಯಾಂಟಿನ ಜಿಪ್ಪೆಳೆದು ಇತ್ತ ತಿರುಗಿದೆ. ಅನತಿ ದೂರದಲ್ಲಿ ಕಿಟಕಿ ಕಿಟಕಿ ಕಿಟಕಿಗಳಲ್ಲಿ ಒಳಗಿನ ಬೆಳಕನ್ನು ತೋರುತ್ತಾ ನಿಂತಿದ್ದ ನಮ್ಮ ಬಸ್ಸು ಒಂದು ದೊಡ್ಡ ರೇಡಿಯೋ ಪೆಟ್ಟಿಗೆಯಂತೆ ಕಂಡಿತು. ಹೌದು, ಅಲ್ಲಿ ಕೂತಿರುವ ಒಂದೊಂದು ಜೀವವೂ ಒಂದೊಂದು ಛಾನೆಲ್ಲಿನಂತೆ. ಸ್ವಲ್ಪ ಟ್ಯೂನ್ ಮಾಡಿದರೆ ಸಾಕು, ಶುರು ಹಚ್ಚಿಕೊಳ್ಳುತ್ತವೆ ಅವು ತಮ್ಮ ತಮ್ಮದೆ ಹಾಡು, ವಾರ್ತೆ, ವರದಿ, ಸುದ್ದಿ, ಪ್ರವಾಸ ಕಥನ. ಪ್ರತಿ ಜೀವಕ್ಕೂ ತನ್ನದೇ ಅನುಭವಗಳು, ಅಭಿಪ್ರಾಯಗಳು, ತುಮುಲಗಳು, ಪ್ರಶ್ನೆಗಳು, ನೀತಿ ಸಂಹಿತೆಗಳು, ಪಯಣದ ಸುಸ್ತು. ಇವರೆಲ್ಲರ ಜೊತೆ ಮಿನುಗು, ನಾನು. ದೂರದಲ್ಲಿ ಅಪ್ಪ. ಮೇಲೆ ಚಂದ್ರ.</p> <p class="tsik_bodytext">ವಾಪಸು ಬಸ್ಸು ಹತ್ತಿ ಸೀಟಿನಲ್ಲಿ ಕೂತೆ. ಪಕ್ಕದ ಸೀಟಿನವರು ಬಿಡಿಸುತ್ತಿದ್ದ ಕಿತ್ತಳೆ ಹಣ್ಣಿನ ಪರಿಮಳ ಅಲ್ಲೆಲ್ಲ ಇತ್ತು. ಪೂರ್ತಿ ಎಚ್ಚರಾಗಿದ್ದ ಮಿನುಗು ಈಗ ಕಿಟಕಿಯಾಚೆ ನೋಡುತ್ತಿದ್ದಳು.</p> <p class="tsik_bodytext">"ಮಿನೂ, ನಾನು ಮೊದಲಿಂದಲೂ ಇಂಟಲಿಜೆಂಟ್ ಇದ್ದೆ. ಅಪ್ಪ ಅದನ್ನು ಗಮನಿಸಿಯೇ ನನ್ನ ಬಗ್ಗೆ ಕನಸು ಕಟ್ಟಿದ್ದ ಅನ್ನಿಸುತ್ತೆ. ಅವನಿಗೂ ಆ ಊರು, ಆ ಏಕತಾನತೆ, ಜನಗಳ ಸಂಕುಚಿತ ಮನೋಭಾವ, ಸಣ್ಣದನ್ನೂ ಆಡಿಕೊಂಡು ಒಳಗೊಳಗೇ ನಗಾಡುವ ರೀತಿ, ಎಲ್ಲಾ ಬೇಸರ ತಂದಿರಬೇಕು. ಎಲ್ಲರ ಮಕ್ಕಳೂ 'ಏನೇನೋ' ಆಗುವುದನ್ನು, ಹೆಸರು ಮಾಡುತ್ತಿರುವುದನ್ನು ನೋಡುತ್ತಾ ಅವನಿಗೆ ಸುಮ್ಮನಿರಲಿಕ್ಕಾಗುತ್ತಿರಲಿಲ್ಲ. ಅವನಿಗೆ ತನ್ನ ಮಗ 'ಏನೋ' ಆಗಬೇಕಿತ್ತು. ತನಗೆ ಸ್ವತಃ ಗಳಿಸಲಾಗದ 'ಐಡೆಂಟಿಟಿ'ಯೊಂದನ್ನು ಪಡೆಯಲಿಕ್ಕೆ ಅವನು ಮಗನನ್ನು ಆಶ್ರಯಿಸಿದ ಅನ್ನಿಸುತ್ತೆ. ಅಪ್ಪ ಆ ವಿಷಯದಲ್ಲಿ ತುಂಬಾ ಪ್ಯಾಶನೇಟ್!" ಹೇಳಿದೆ.</p> <p class="tsik_bodytext">"ಹೀಗೇ ಅಂತ ಹೇಗೆ ಹೇಳ್ತೀಯಾ ಶಶೂ...? ನಿನ್ನ ಅಪ್ಪನ ಮನಸು ಓದೋದಕ್ಕೆ ಸಾಧ್ಯವಾ ನಿಂಗೆ? ಅದು ಚಂದ್ರನನ್ನು ನೋಡಿ ಏನೇನೋ ಅಂದಂತೆ. ಅವನೊಡಲೊಳಗಾಗುವ ತಳಮಳಗಳೇನೋ, ಭೂಕಂಪಗಳೇನೋ? ನಮಗೇನು ಕಾಣುತ್ತೆ? ನಮಗೆ ಕಾಣುವುದು ಚಂದ ಮೇಲ್ಮೈ ಅಷ್ಟೇ. ಅದನ್ನೇ ನೋಡಿ ಏನೇನೋ ಕಲ್ಪಿಸಿಕೊಂಡು ಆಡುತ್ತೇವೆ..."</p> <p class="tsik_bodytext">ಮಿನುಗು ಕವಿಯಂತೆ, ದಾರ್ಶನಿಕಳಂತೆ ಮಾತಾಡುತ್ತಿದ್ದಳು. ನಾನು ನಿರ್ಧರಿಸಿದೆ: ವಾಪಸು ಹೋಗುವಾಗ ಅಪ್ಪನನ್ನೂ ಕರೆದುಕೊಂಡು ಹೊರಡಬೇಕು. ಮುಂದಿನ ತಿಂಗಳು ಬೆಂಗಳೂರಿನಲ್ಲಿ ಚಿತ್ರಕಲಾ ಪರಿಷತ್ ಆಯೋಜಿಸಿರುವ ನನ್ನ ಚಿತ್ರಗಳ ಪ್ರದರ್ಶನದಲ್ಲಿ ಅಪ್ಪ ಇರಬೇಕು. ಹೊಸ ಪಂಚೆ, ಗರಿ ಗರಿ ಜುಬ್ಬಾ ಧರಿಸಿದ ಅಪ್ಪ ಒಂದು ಶಲ್ಯ ಹೊದ್ದು ಹಾಲಿನಲ್ಲಿ ಓಡಾಡುತ್ತಾ ನನ್ನ ಚಿತ್ರಗಳನ್ನೆಲ್ಲಾ ಮೆಚ್ಚುಗೆಯ ಕಣ್ಣಲ್ಲಿ ನೋಡಬೇಕು. ಪ್ರದರ್ಶನ ಉದ್ಘಾಟಿಸಲು, ವೀಕ್ಷಿಸಲು ಬರುವ ಗಣ್ಯರಿಗೆ ಅಪ್ಪನನ್ನು ಪರಿಚಯಿಸಿಕೊಡಬೇಕು. ಅವರು ಚಿತ್ರ ನೋಡಿ ನನ್ನ ಹೆಗಲು ತಟ್ಟುವಾಗ ಅಪ್ಪ ಸೆರೆಯುಬ್ಬಿ ಬಂದ ಕೊರಳಲ್ಲಿ ಬೀಗಬೇಕು. ಹೌದು, ಅಪ್ಪನಿಗೆ ಅವೆಲ್ಲ ಇಷ್ಟ. ಮತ್ತು ಅಪ್ಪ ಅವಕ್ಕೆಲ್ಲ ಅರ್ಹ.</p> <p class="tsik_bodytext">ಡ್ರೈವರ್ ಹತ್ತಿ ಹಾರ್ನ್ ಮಾಡಿದ. ಕಂಡಕ್ಟರ್ ಒಮ್ಮೆ ಕೊನೆಯ ಸೀಟಿನವರೆಗೂ ಹೋಗಿ ಎಲ್ಲರೂ ಬಂದಿದ್ದಾರಾ ನೋಡಿಕೊಂಡು ಬಂದ. ಬಸ್ ಸ್ಟಾರ್ಟ್ ಆಯಿತು. ಹೆಡ್‌ಲೈಟ್ ಬೆಳಕಿನಲ್ಲಿ ಎದುರಿನ ದಾರಿ ಕೋರೈಸತೊಡಗಿತು. ಹೊಸ ಹುರುಪಿನೊಂದಿಗೆ ಓಡತೊಡಗಿತು ಬಸ್ಸು.<br /></p><p class="tsik_bodytext"><br /></p><p class="tsik_bodytext"><span style="color: rgb(102, 0, 0);">[</span><span style="font-style: italic; color: rgb(102, 0, 0);">'ದ ಸಂಡೇ ಇಂಡಿಯನ್' ವಾರಪತ್ರಿಕೆಯಲ್ಲಿ ಪ್ರಕಟವಾದ ನನ್ನ ಕತೆ.</span><span style="color: rgb(102, 0, 0);">]</span><br /></p><div class="blogger-post-footer">@ Sushrutha Dodderi<img width='1' height='1' src='https://blogger.googleusercontent.com/tracker/27009232-461926918890192793?l=hisushrutha.blogspot.com'/></div>ಸುಶ್ರುತ ದೊಡ್ಡೇರಿhttp://www.blogger.com/profile/02746636622217120028hisushrutha@gmail.com27